Homeಮುಖಪುಟಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

ಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

- Advertisement -
- Advertisement -

ರೈತ ಪರ ಸಂಘಟನೆಗಳ ಒಕ್ಕೂಟ ಸಂಯುಕ್ತ ಹೋರಾಟ ಕರ್ನಾಟಕವು ಎಲ್ಲಾ ಸಂಸತ್ ಸದಸ್ಯರಿಗೆ ಮತದಾರರ ವಿಪ್ ಎಂಬ ಅಭಿಯಾನ ದೇಶಾದ್ಯಂತ ಹಮ್ಮಿಕೊಂಡಿದೆ. ಒಕ್ಕೂಟ ಸರಕಾರ ಪಾರ್ಲಿಮೆಂಟ್ ಮೂಲಕ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕಾನೂನುಗಳ ವಿರುದ್ಧ ಸಂಸದರು ಲೋಕಸಭೆಯಲ್ಲಿ ಧ್ವನಿ ಎತ್ತಬೇಕೆಂದು ಈ ವಿಪ್ ಆಗ್ರಹಿಸುತ್ತಿದೆ. ರೈತ ವಿರೋಧಿ ಕಾನೂನುಗಳ ಪರ ನಿಮ್ಮ ಪಕ್ಷ ಕೊಡುವ ವಿಪ್ ಕಡೆಗಣಿಸಿದರೆ ಅಪಚಾರವೇನಾಗದು; ಆದರೆ ರೈತರ ವಿಪ್ ಧಿಕ್ಕರಿಸಿದರೆ ನಿಮ್ಮ ಎಲ್ಲ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾರತದ ರೈತ ಸಮೂಹದ ತೀವ್ರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಆಳುವ ಕೂಟದ ಸಂಸತ್ ಸದಸ್ಯರಿಗೆ ರೈತ ಸಂಘಟನಗಳು ಎಚ್ಚರಿಸಿವೆ.

ಉತ್ತರ ಕನ್ನಡದ ಸಂಯುಕ್ತ ಕಿಸಾನ್ ಮೋರ್ಚಾವು ಸ್ಥಳೀಯ ಸಂಸದ ಅನಂತಕುಮಾರ್ ಹೆಗಡೆಗೆ ಮತದಾರರ ವಿಪ್ ಜಾರಿ ಮಾಡಿದೆ. ಸಿದ್ದಾಪುರ ರೈತ ಸಂಘದ ಅಧ್ಯಕ್ಷ ವೀರಭದ್ರ ನಾಯ್ಕ್ ಹೆಗಡೆಗೆ ವಿಪ್ ಕಳಿಸಿದ್ದಾರೆ.

PC : The Economic Times

ಪ್ರಿಯ ಸಂಸತ್ ಸದಸ್ಯರೆ ಕೇಂದ್ರ ಸರಕಾರ ಸೆಪ್ಟೆಂಬರ್ 2020ರಲ್ಲಿ ಜಾರಿಗೊಳಿಸಿರುವ ಮೂರು ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೇಶದ ರೈತರು ಪ್ರತಿಭಟಿಸುತ್ತಿರುವುದು ತಮಗೆ ತಿಳಿದಿರುವ ಸಂಗತಿ. ಈ ಮೂರು ರೈತ ವಿರೋಧಿ ಕಾನೂನುಗಳನ್ನು ರದ್ದುಮಾಡಬೇಕು; ಎನ್‌ಸಿಆರ್ ವಾಯು ಮಾಲಿನ್ಯ ಕಾಯ್ದೆಯಲ್ಲಿನ ರೈತ ವಿರೋಧಿ ಅಂಶಗಳನ್ನು ಮತ್ತು ಕರಡು ವಿದ್ಯುತ್ ಮಸೂದೆಯನ್ನು ವಾಪಸ್ ಪಡೆಯಬೇಕೆಂದು ರೈತರು ಆಗ್ರಹಿಸುತ್ತಿದ್ಧಾರೆ. ದೇಶದ ಎಲ್ಲ ರೈತರ ಕೃಷಿ ಉತ್ಪನ್ನಗಳನ್ನು ಕನಿಷ್ಟ ಬೆಂಬಲ ಬೆಲೆಯಲ್ಲಿ ಖರೀದಿಸುವುದನ್ನು ಖಾತರಿಪಡಿಸುವ ಶಾಸನವನ್ನು ಕೇಂದ್ರ ಸರಕಾರ ತರಬೇಕೆಂಬುದು ರೈತರ ಬೇಡಿಕೆಯಾಗಿದೆ. ಆದ್ದರಿಂದ ಮತದಾರರಾದ ನಾವು ನಮ್ಮ ಸಾರ್ವಭೌಮತ್ವ ಅಧಿಕಾರವನ್ನು ಚಲಾಯಿಸಿ ಈ ಕೆಳಗಿನಂತೆ ನಿರ್ದೆಶಿಸುತ್ತಿದ್ದೆವೆ.

2021ರ ಜುಲೈ 19ರಿಂದ ಆರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ತಪ್ಪದೆ ಹಾಜರಿರಬೇಕು. ನೀವು ಮತ್ತು ನಿಮ್ಮ ಪಕ್ಷ ನಿರಂತರವಾಗಿ ರೈತರ ವಿಷಯಗಳ ಪರ ದನಿ ಎತ್ತಬೇಕು; ಮೇಲೆ ತಿಳಿಸಿದ ರೈತ ಚಳುವಳಿ ಬೇಡಿಕೆಗಳನ್ನು ಸದನದಲ್ಲಿ ಬೆಂಬಲಿಸಬೇಕು. ಕೇಂದ್ರ ಸರಕಾರ ರೈತರ ಬೇಡಿಕೆಗಳನ್ನು ಈಡೇರಿಸುವ ತನಕ ಯಾವುದೆ ಕಲಾಪಗಳಿಗೆ ಅವಕಾಶ ಕೊಡಬಾರದು; ರೈತರ ಬೇಡಿಕೆಗಳ ಪರವಾದ ಯಾವುದೇ ನಿರ್ಣಯಗಳು ಸದನದಲ್ಲಿ ಮಂಡಿಸಿದಾಗ ನೀವಾಗಲಿ ಅಥವಾ ನಿಮ್ಮ ಪಕ್ಷದ ಬೇರೆ ಸದಸ್ಯರಾಗಲಿ ವಿರೊಧಿಸಬಾರದು; ಮತದಾನದಿಂದ ದೂರ ಉಳಿಯಬಾರದು. ಇದನ್ನು ತಾವು ಮತದಾರರ ವಿಪ್ ಎಂದು ಪರಿಗಣಿಸಿ ನಿಮ್ಮ ಪಕ್ಷ ಜಾರಿ ಮಾಡುವ ವಿಪ್ ಕಡೆಗಣಿಸಬಹುದು. ನೀವೇನಾದರು ಮತದಾರರ ಈ ವಿಪ್ ಉಲ್ಲಂಘಿಸಿದರೆ, ನಿಮ್ಮ ಎಲ್ಲ ಸಾರ್ವಜನಿಕ ವೇದಿಕೆಗಳಲ್ಲೂ ಭಾರತೀಯ ರೈತರ ತೀವ್ರವಾದ ಪ್ರತಿಭಟನೆ ಎದುರಿಸುವುದು ಅನಿವಾರ್ಯವಾಗಲಿದೆ. ನಿಮ್ಮ ಮತದಾರರು, ದೇಶದ ಸಮಸ್ತ ರೈತ ಬಾಂಧವರು, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ತಾಲೂಕು ರೈತ ಸಂಘಗಳ ಪರವಾಗಿ ಹಸಿರು ಸೇನೆಯ ಅಧ್ಯಕ್ಷನ ವಿನಂತಿ ಎಂದು ವಿಪ್‌ನಲ್ಲಿ ಬರೆಯಲಾಗಿದೆ.

ದೇಶದ ಎಲ್ಲಾ ಸಂಸತ್‌ ಸದಸ್ಯರಿಗೆ ಇಂಥದೊಂದು ವಿಪ್ ರೈತ ಸಂಘಟನೆಗಳು ಕಳಿಸಿವೆ; ಕರ್ನಾಟಕ ಪ್ರಾಂತ ರೈತ ಸಂಘ ಕೂಡ ರಾಜ್ಯದ ಹಲವು ಸಂಸದರಿಗೆ ಈ ವಿಪ್ ಜಾರಿಗೊಳಿಸಿದೆ.


ಇದನ್ನೂ ಓದಿ: ಮಾನ್ಸೂನ್ ಅಧಿವೇಶನ: ಇಂದಿನಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...