Homeಮುಖಪುಟಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

ಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

- Advertisement -
- Advertisement -

ರೈತ ಪರ ಸಂಘಟನೆಗಳ ಒಕ್ಕೂಟ ಸಂಯುಕ್ತ ಹೋರಾಟ ಕರ್ನಾಟಕವು ಎಲ್ಲಾ ಸಂಸತ್ ಸದಸ್ಯರಿಗೆ ಮತದಾರರ ವಿಪ್ ಎಂಬ ಅಭಿಯಾನ ದೇಶಾದ್ಯಂತ ಹಮ್ಮಿಕೊಂಡಿದೆ. ಒಕ್ಕೂಟ ಸರಕಾರ ಪಾರ್ಲಿಮೆಂಟ್ ಮೂಲಕ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕಾನೂನುಗಳ ವಿರುದ್ಧ ಸಂಸದರು ಲೋಕಸಭೆಯಲ್ಲಿ ಧ್ವನಿ ಎತ್ತಬೇಕೆಂದು ಈ ವಿಪ್ ಆಗ್ರಹಿಸುತ್ತಿದೆ. ರೈತ ವಿರೋಧಿ ಕಾನೂನುಗಳ ಪರ ನಿಮ್ಮ ಪಕ್ಷ ಕೊಡುವ ವಿಪ್ ಕಡೆಗಣಿಸಿದರೆ ಅಪಚಾರವೇನಾಗದು; ಆದರೆ ರೈತರ ವಿಪ್ ಧಿಕ್ಕರಿಸಿದರೆ ನಿಮ್ಮ ಎಲ್ಲ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾರತದ ರೈತ ಸಮೂಹದ ತೀವ್ರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಆಳುವ ಕೂಟದ ಸಂಸತ್ ಸದಸ್ಯರಿಗೆ ರೈತ ಸಂಘಟನಗಳು ಎಚ್ಚರಿಸಿವೆ.

ಉತ್ತರ ಕನ್ನಡದ ಸಂಯುಕ್ತ ಕಿಸಾನ್ ಮೋರ್ಚಾವು ಸ್ಥಳೀಯ ಸಂಸದ ಅನಂತಕುಮಾರ್ ಹೆಗಡೆಗೆ ಮತದಾರರ ವಿಪ್ ಜಾರಿ ಮಾಡಿದೆ. ಸಿದ್ದಾಪುರ ರೈತ ಸಂಘದ ಅಧ್ಯಕ್ಷ ವೀರಭದ್ರ ನಾಯ್ಕ್ ಹೆಗಡೆಗೆ ವಿಪ್ ಕಳಿಸಿದ್ದಾರೆ.

PC : The Economic Times

ಪ್ರಿಯ ಸಂಸತ್ ಸದಸ್ಯರೆ ಕೇಂದ್ರ ಸರಕಾರ ಸೆಪ್ಟೆಂಬರ್ 2020ರಲ್ಲಿ ಜಾರಿಗೊಳಿಸಿರುವ ಮೂರು ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೇಶದ ರೈತರು ಪ್ರತಿಭಟಿಸುತ್ತಿರುವುದು ತಮಗೆ ತಿಳಿದಿರುವ ಸಂಗತಿ. ಈ ಮೂರು ರೈತ ವಿರೋಧಿ ಕಾನೂನುಗಳನ್ನು ರದ್ದುಮಾಡಬೇಕು; ಎನ್‌ಸಿಆರ್ ವಾಯು ಮಾಲಿನ್ಯ ಕಾಯ್ದೆಯಲ್ಲಿನ ರೈತ ವಿರೋಧಿ ಅಂಶಗಳನ್ನು ಮತ್ತು ಕರಡು ವಿದ್ಯುತ್ ಮಸೂದೆಯನ್ನು ವಾಪಸ್ ಪಡೆಯಬೇಕೆಂದು ರೈತರು ಆಗ್ರಹಿಸುತ್ತಿದ್ಧಾರೆ. ದೇಶದ ಎಲ್ಲ ರೈತರ ಕೃಷಿ ಉತ್ಪನ್ನಗಳನ್ನು ಕನಿಷ್ಟ ಬೆಂಬಲ ಬೆಲೆಯಲ್ಲಿ ಖರೀದಿಸುವುದನ್ನು ಖಾತರಿಪಡಿಸುವ ಶಾಸನವನ್ನು ಕೇಂದ್ರ ಸರಕಾರ ತರಬೇಕೆಂಬುದು ರೈತರ ಬೇಡಿಕೆಯಾಗಿದೆ. ಆದ್ದರಿಂದ ಮತದಾರರಾದ ನಾವು ನಮ್ಮ ಸಾರ್ವಭೌಮತ್ವ ಅಧಿಕಾರವನ್ನು ಚಲಾಯಿಸಿ ಈ ಕೆಳಗಿನಂತೆ ನಿರ್ದೆಶಿಸುತ್ತಿದ್ದೆವೆ.

2021ರ ಜುಲೈ 19ರಿಂದ ಆರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ತಪ್ಪದೆ ಹಾಜರಿರಬೇಕು. ನೀವು ಮತ್ತು ನಿಮ್ಮ ಪಕ್ಷ ನಿರಂತರವಾಗಿ ರೈತರ ವಿಷಯಗಳ ಪರ ದನಿ ಎತ್ತಬೇಕು; ಮೇಲೆ ತಿಳಿಸಿದ ರೈತ ಚಳುವಳಿ ಬೇಡಿಕೆಗಳನ್ನು ಸದನದಲ್ಲಿ ಬೆಂಬಲಿಸಬೇಕು. ಕೇಂದ್ರ ಸರಕಾರ ರೈತರ ಬೇಡಿಕೆಗಳನ್ನು ಈಡೇರಿಸುವ ತನಕ ಯಾವುದೆ ಕಲಾಪಗಳಿಗೆ ಅವಕಾಶ ಕೊಡಬಾರದು; ರೈತರ ಬೇಡಿಕೆಗಳ ಪರವಾದ ಯಾವುದೇ ನಿರ್ಣಯಗಳು ಸದನದಲ್ಲಿ ಮಂಡಿಸಿದಾಗ ನೀವಾಗಲಿ ಅಥವಾ ನಿಮ್ಮ ಪಕ್ಷದ ಬೇರೆ ಸದಸ್ಯರಾಗಲಿ ವಿರೊಧಿಸಬಾರದು; ಮತದಾನದಿಂದ ದೂರ ಉಳಿಯಬಾರದು. ಇದನ್ನು ತಾವು ಮತದಾರರ ವಿಪ್ ಎಂದು ಪರಿಗಣಿಸಿ ನಿಮ್ಮ ಪಕ್ಷ ಜಾರಿ ಮಾಡುವ ವಿಪ್ ಕಡೆಗಣಿಸಬಹುದು. ನೀವೇನಾದರು ಮತದಾರರ ಈ ವಿಪ್ ಉಲ್ಲಂಘಿಸಿದರೆ, ನಿಮ್ಮ ಎಲ್ಲ ಸಾರ್ವಜನಿಕ ವೇದಿಕೆಗಳಲ್ಲೂ ಭಾರತೀಯ ರೈತರ ತೀವ್ರವಾದ ಪ್ರತಿಭಟನೆ ಎದುರಿಸುವುದು ಅನಿವಾರ್ಯವಾಗಲಿದೆ. ನಿಮ್ಮ ಮತದಾರರು, ದೇಶದ ಸಮಸ್ತ ರೈತ ಬಾಂಧವರು, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ತಾಲೂಕು ರೈತ ಸಂಘಗಳ ಪರವಾಗಿ ಹಸಿರು ಸೇನೆಯ ಅಧ್ಯಕ್ಷನ ವಿನಂತಿ ಎಂದು ವಿಪ್‌ನಲ್ಲಿ ಬರೆಯಲಾಗಿದೆ.

ದೇಶದ ಎಲ್ಲಾ ಸಂಸತ್‌ ಸದಸ್ಯರಿಗೆ ಇಂಥದೊಂದು ವಿಪ್ ರೈತ ಸಂಘಟನೆಗಳು ಕಳಿಸಿವೆ; ಕರ್ನಾಟಕ ಪ್ರಾಂತ ರೈತ ಸಂಘ ಕೂಡ ರಾಜ್ಯದ ಹಲವು ಸಂಸದರಿಗೆ ಈ ವಿಪ್ ಜಾರಿಗೊಳಿಸಿದೆ.


ಇದನ್ನೂ ಓದಿ: ಮಾನ್ಸೂನ್ ಅಧಿವೇಶನ: ಇಂದಿನಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...