Homeಮುಖಪುಟಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

ಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

- Advertisement -
- Advertisement -

ರೈತ ಪರ ಸಂಘಟನೆಗಳ ಒಕ್ಕೂಟ ಸಂಯುಕ್ತ ಹೋರಾಟ ಕರ್ನಾಟಕವು ಎಲ್ಲಾ ಸಂಸತ್ ಸದಸ್ಯರಿಗೆ ಮತದಾರರ ವಿಪ್ ಎಂಬ ಅಭಿಯಾನ ದೇಶಾದ್ಯಂತ ಹಮ್ಮಿಕೊಂಡಿದೆ. ಒಕ್ಕೂಟ ಸರಕಾರ ಪಾರ್ಲಿಮೆಂಟ್ ಮೂಲಕ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕಾನೂನುಗಳ ವಿರುದ್ಧ ಸಂಸದರು ಲೋಕಸಭೆಯಲ್ಲಿ ಧ್ವನಿ ಎತ್ತಬೇಕೆಂದು ಈ ವಿಪ್ ಆಗ್ರಹಿಸುತ್ತಿದೆ. ರೈತ ವಿರೋಧಿ ಕಾನೂನುಗಳ ಪರ ನಿಮ್ಮ ಪಕ್ಷ ಕೊಡುವ ವಿಪ್ ಕಡೆಗಣಿಸಿದರೆ ಅಪಚಾರವೇನಾಗದು; ಆದರೆ ರೈತರ ವಿಪ್ ಧಿಕ್ಕರಿಸಿದರೆ ನಿಮ್ಮ ಎಲ್ಲ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾರತದ ರೈತ ಸಮೂಹದ ತೀವ್ರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಆಳುವ ಕೂಟದ ಸಂಸತ್ ಸದಸ್ಯರಿಗೆ ರೈತ ಸಂಘಟನಗಳು ಎಚ್ಚರಿಸಿವೆ.

ಉತ್ತರ ಕನ್ನಡದ ಸಂಯುಕ್ತ ಕಿಸಾನ್ ಮೋರ್ಚಾವು ಸ್ಥಳೀಯ ಸಂಸದ ಅನಂತಕುಮಾರ್ ಹೆಗಡೆಗೆ ಮತದಾರರ ವಿಪ್ ಜಾರಿ ಮಾಡಿದೆ. ಸಿದ್ದಾಪುರ ರೈತ ಸಂಘದ ಅಧ್ಯಕ್ಷ ವೀರಭದ್ರ ನಾಯ್ಕ್ ಹೆಗಡೆಗೆ ವಿಪ್ ಕಳಿಸಿದ್ದಾರೆ.

PC : The Economic Times

ಪ್ರಿಯ ಸಂಸತ್ ಸದಸ್ಯರೆ ಕೇಂದ್ರ ಸರಕಾರ ಸೆಪ್ಟೆಂಬರ್ 2020ರಲ್ಲಿ ಜಾರಿಗೊಳಿಸಿರುವ ಮೂರು ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೇಶದ ರೈತರು ಪ್ರತಿಭಟಿಸುತ್ತಿರುವುದು ತಮಗೆ ತಿಳಿದಿರುವ ಸಂಗತಿ. ಈ ಮೂರು ರೈತ ವಿರೋಧಿ ಕಾನೂನುಗಳನ್ನು ರದ್ದುಮಾಡಬೇಕು; ಎನ್‌ಸಿಆರ್ ವಾಯು ಮಾಲಿನ್ಯ ಕಾಯ್ದೆಯಲ್ಲಿನ ರೈತ ವಿರೋಧಿ ಅಂಶಗಳನ್ನು ಮತ್ತು ಕರಡು ವಿದ್ಯುತ್ ಮಸೂದೆಯನ್ನು ವಾಪಸ್ ಪಡೆಯಬೇಕೆಂದು ರೈತರು ಆಗ್ರಹಿಸುತ್ತಿದ್ಧಾರೆ. ದೇಶದ ಎಲ್ಲ ರೈತರ ಕೃಷಿ ಉತ್ಪನ್ನಗಳನ್ನು ಕನಿಷ್ಟ ಬೆಂಬಲ ಬೆಲೆಯಲ್ಲಿ ಖರೀದಿಸುವುದನ್ನು ಖಾತರಿಪಡಿಸುವ ಶಾಸನವನ್ನು ಕೇಂದ್ರ ಸರಕಾರ ತರಬೇಕೆಂಬುದು ರೈತರ ಬೇಡಿಕೆಯಾಗಿದೆ. ಆದ್ದರಿಂದ ಮತದಾರರಾದ ನಾವು ನಮ್ಮ ಸಾರ್ವಭೌಮತ್ವ ಅಧಿಕಾರವನ್ನು ಚಲಾಯಿಸಿ ಈ ಕೆಳಗಿನಂತೆ ನಿರ್ದೆಶಿಸುತ್ತಿದ್ದೆವೆ.

2021ರ ಜುಲೈ 19ರಿಂದ ಆರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ತಪ್ಪದೆ ಹಾಜರಿರಬೇಕು. ನೀವು ಮತ್ತು ನಿಮ್ಮ ಪಕ್ಷ ನಿರಂತರವಾಗಿ ರೈತರ ವಿಷಯಗಳ ಪರ ದನಿ ಎತ್ತಬೇಕು; ಮೇಲೆ ತಿಳಿಸಿದ ರೈತ ಚಳುವಳಿ ಬೇಡಿಕೆಗಳನ್ನು ಸದನದಲ್ಲಿ ಬೆಂಬಲಿಸಬೇಕು. ಕೇಂದ್ರ ಸರಕಾರ ರೈತರ ಬೇಡಿಕೆಗಳನ್ನು ಈಡೇರಿಸುವ ತನಕ ಯಾವುದೆ ಕಲಾಪಗಳಿಗೆ ಅವಕಾಶ ಕೊಡಬಾರದು; ರೈತರ ಬೇಡಿಕೆಗಳ ಪರವಾದ ಯಾವುದೇ ನಿರ್ಣಯಗಳು ಸದನದಲ್ಲಿ ಮಂಡಿಸಿದಾಗ ನೀವಾಗಲಿ ಅಥವಾ ನಿಮ್ಮ ಪಕ್ಷದ ಬೇರೆ ಸದಸ್ಯರಾಗಲಿ ವಿರೊಧಿಸಬಾರದು; ಮತದಾನದಿಂದ ದೂರ ಉಳಿಯಬಾರದು. ಇದನ್ನು ತಾವು ಮತದಾರರ ವಿಪ್ ಎಂದು ಪರಿಗಣಿಸಿ ನಿಮ್ಮ ಪಕ್ಷ ಜಾರಿ ಮಾಡುವ ವಿಪ್ ಕಡೆಗಣಿಸಬಹುದು. ನೀವೇನಾದರು ಮತದಾರರ ಈ ವಿಪ್ ಉಲ್ಲಂಘಿಸಿದರೆ, ನಿಮ್ಮ ಎಲ್ಲ ಸಾರ್ವಜನಿಕ ವೇದಿಕೆಗಳಲ್ಲೂ ಭಾರತೀಯ ರೈತರ ತೀವ್ರವಾದ ಪ್ರತಿಭಟನೆ ಎದುರಿಸುವುದು ಅನಿವಾರ್ಯವಾಗಲಿದೆ. ನಿಮ್ಮ ಮತದಾರರು, ದೇಶದ ಸಮಸ್ತ ರೈತ ಬಾಂಧವರು, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ತಾಲೂಕು ರೈತ ಸಂಘಗಳ ಪರವಾಗಿ ಹಸಿರು ಸೇನೆಯ ಅಧ್ಯಕ್ಷನ ವಿನಂತಿ ಎಂದು ವಿಪ್‌ನಲ್ಲಿ ಬರೆಯಲಾಗಿದೆ.

ದೇಶದ ಎಲ್ಲಾ ಸಂಸತ್‌ ಸದಸ್ಯರಿಗೆ ಇಂಥದೊಂದು ವಿಪ್ ರೈತ ಸಂಘಟನೆಗಳು ಕಳಿಸಿವೆ; ಕರ್ನಾಟಕ ಪ್ರಾಂತ ರೈತ ಸಂಘ ಕೂಡ ರಾಜ್ಯದ ಹಲವು ಸಂಸದರಿಗೆ ಈ ವಿಪ್ ಜಾರಿಗೊಳಿಸಿದೆ.


ಇದನ್ನೂ ಓದಿ: ಮಾನ್ಸೂನ್ ಅಧಿವೇಶನ: ಇಂದಿನಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...