Homeಮುಖಪುಟಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

ಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

- Advertisement -
- Advertisement -

ರೈತ ಪರ ಸಂಘಟನೆಗಳ ಒಕ್ಕೂಟ ಸಂಯುಕ್ತ ಹೋರಾಟ ಕರ್ನಾಟಕವು ಎಲ್ಲಾ ಸಂಸತ್ ಸದಸ್ಯರಿಗೆ ಮತದಾರರ ವಿಪ್ ಎಂಬ ಅಭಿಯಾನ ದೇಶಾದ್ಯಂತ ಹಮ್ಮಿಕೊಂಡಿದೆ. ಒಕ್ಕೂಟ ಸರಕಾರ ಪಾರ್ಲಿಮೆಂಟ್ ಮೂಲಕ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕಾನೂನುಗಳ ವಿರುದ್ಧ ಸಂಸದರು ಲೋಕಸಭೆಯಲ್ಲಿ ಧ್ವನಿ ಎತ್ತಬೇಕೆಂದು ಈ ವಿಪ್ ಆಗ್ರಹಿಸುತ್ತಿದೆ. ರೈತ ವಿರೋಧಿ ಕಾನೂನುಗಳ ಪರ ನಿಮ್ಮ ಪಕ್ಷ ಕೊಡುವ ವಿಪ್ ಕಡೆಗಣಿಸಿದರೆ ಅಪಚಾರವೇನಾಗದು; ಆದರೆ ರೈತರ ವಿಪ್ ಧಿಕ್ಕರಿಸಿದರೆ ನಿಮ್ಮ ಎಲ್ಲ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾರತದ ರೈತ ಸಮೂಹದ ತೀವ್ರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಆಳುವ ಕೂಟದ ಸಂಸತ್ ಸದಸ್ಯರಿಗೆ ರೈತ ಸಂಘಟನಗಳು ಎಚ್ಚರಿಸಿವೆ.

ಉತ್ತರ ಕನ್ನಡದ ಸಂಯುಕ್ತ ಕಿಸಾನ್ ಮೋರ್ಚಾವು ಸ್ಥಳೀಯ ಸಂಸದ ಅನಂತಕುಮಾರ್ ಹೆಗಡೆಗೆ ಮತದಾರರ ವಿಪ್ ಜಾರಿ ಮಾಡಿದೆ. ಸಿದ್ದಾಪುರ ರೈತ ಸಂಘದ ಅಧ್ಯಕ್ಷ ವೀರಭದ್ರ ನಾಯ್ಕ್ ಹೆಗಡೆಗೆ ವಿಪ್ ಕಳಿಸಿದ್ದಾರೆ.

PC : The Economic Times

ಪ್ರಿಯ ಸಂಸತ್ ಸದಸ್ಯರೆ ಕೇಂದ್ರ ಸರಕಾರ ಸೆಪ್ಟೆಂಬರ್ 2020ರಲ್ಲಿ ಜಾರಿಗೊಳಿಸಿರುವ ಮೂರು ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೇಶದ ರೈತರು ಪ್ರತಿಭಟಿಸುತ್ತಿರುವುದು ತಮಗೆ ತಿಳಿದಿರುವ ಸಂಗತಿ. ಈ ಮೂರು ರೈತ ವಿರೋಧಿ ಕಾನೂನುಗಳನ್ನು ರದ್ದುಮಾಡಬೇಕು; ಎನ್‌ಸಿಆರ್ ವಾಯು ಮಾಲಿನ್ಯ ಕಾಯ್ದೆಯಲ್ಲಿನ ರೈತ ವಿರೋಧಿ ಅಂಶಗಳನ್ನು ಮತ್ತು ಕರಡು ವಿದ್ಯುತ್ ಮಸೂದೆಯನ್ನು ವಾಪಸ್ ಪಡೆಯಬೇಕೆಂದು ರೈತರು ಆಗ್ರಹಿಸುತ್ತಿದ್ಧಾರೆ. ದೇಶದ ಎಲ್ಲ ರೈತರ ಕೃಷಿ ಉತ್ಪನ್ನಗಳನ್ನು ಕನಿಷ್ಟ ಬೆಂಬಲ ಬೆಲೆಯಲ್ಲಿ ಖರೀದಿಸುವುದನ್ನು ಖಾತರಿಪಡಿಸುವ ಶಾಸನವನ್ನು ಕೇಂದ್ರ ಸರಕಾರ ತರಬೇಕೆಂಬುದು ರೈತರ ಬೇಡಿಕೆಯಾಗಿದೆ. ಆದ್ದರಿಂದ ಮತದಾರರಾದ ನಾವು ನಮ್ಮ ಸಾರ್ವಭೌಮತ್ವ ಅಧಿಕಾರವನ್ನು ಚಲಾಯಿಸಿ ಈ ಕೆಳಗಿನಂತೆ ನಿರ್ದೆಶಿಸುತ್ತಿದ್ದೆವೆ.

2021ರ ಜುಲೈ 19ರಿಂದ ಆರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ತಪ್ಪದೆ ಹಾಜರಿರಬೇಕು. ನೀವು ಮತ್ತು ನಿಮ್ಮ ಪಕ್ಷ ನಿರಂತರವಾಗಿ ರೈತರ ವಿಷಯಗಳ ಪರ ದನಿ ಎತ್ತಬೇಕು; ಮೇಲೆ ತಿಳಿಸಿದ ರೈತ ಚಳುವಳಿ ಬೇಡಿಕೆಗಳನ್ನು ಸದನದಲ್ಲಿ ಬೆಂಬಲಿಸಬೇಕು. ಕೇಂದ್ರ ಸರಕಾರ ರೈತರ ಬೇಡಿಕೆಗಳನ್ನು ಈಡೇರಿಸುವ ತನಕ ಯಾವುದೆ ಕಲಾಪಗಳಿಗೆ ಅವಕಾಶ ಕೊಡಬಾರದು; ರೈತರ ಬೇಡಿಕೆಗಳ ಪರವಾದ ಯಾವುದೇ ನಿರ್ಣಯಗಳು ಸದನದಲ್ಲಿ ಮಂಡಿಸಿದಾಗ ನೀವಾಗಲಿ ಅಥವಾ ನಿಮ್ಮ ಪಕ್ಷದ ಬೇರೆ ಸದಸ್ಯರಾಗಲಿ ವಿರೊಧಿಸಬಾರದು; ಮತದಾನದಿಂದ ದೂರ ಉಳಿಯಬಾರದು. ಇದನ್ನು ತಾವು ಮತದಾರರ ವಿಪ್ ಎಂದು ಪರಿಗಣಿಸಿ ನಿಮ್ಮ ಪಕ್ಷ ಜಾರಿ ಮಾಡುವ ವಿಪ್ ಕಡೆಗಣಿಸಬಹುದು. ನೀವೇನಾದರು ಮತದಾರರ ಈ ವಿಪ್ ಉಲ್ಲಂಘಿಸಿದರೆ, ನಿಮ್ಮ ಎಲ್ಲ ಸಾರ್ವಜನಿಕ ವೇದಿಕೆಗಳಲ್ಲೂ ಭಾರತೀಯ ರೈತರ ತೀವ್ರವಾದ ಪ್ರತಿಭಟನೆ ಎದುರಿಸುವುದು ಅನಿವಾರ್ಯವಾಗಲಿದೆ. ನಿಮ್ಮ ಮತದಾರರು, ದೇಶದ ಸಮಸ್ತ ರೈತ ಬಾಂಧವರು, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ತಾಲೂಕು ರೈತ ಸಂಘಗಳ ಪರವಾಗಿ ಹಸಿರು ಸೇನೆಯ ಅಧ್ಯಕ್ಷನ ವಿನಂತಿ ಎಂದು ವಿಪ್‌ನಲ್ಲಿ ಬರೆಯಲಾಗಿದೆ.

ದೇಶದ ಎಲ್ಲಾ ಸಂಸತ್‌ ಸದಸ್ಯರಿಗೆ ಇಂಥದೊಂದು ವಿಪ್ ರೈತ ಸಂಘಟನೆಗಳು ಕಳಿಸಿವೆ; ಕರ್ನಾಟಕ ಪ್ರಾಂತ ರೈತ ಸಂಘ ಕೂಡ ರಾಜ್ಯದ ಹಲವು ಸಂಸದರಿಗೆ ಈ ವಿಪ್ ಜಾರಿಗೊಳಿಸಿದೆ.


ಇದನ್ನೂ ಓದಿ: ಮಾನ್ಸೂನ್ ಅಧಿವೇಶನ: ಇಂದಿನಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...