Homeಮುಖಪುಟಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

ಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

- Advertisement -
- Advertisement -

ರೈತ ಪರ ಸಂಘಟನೆಗಳ ಒಕ್ಕೂಟ ಸಂಯುಕ್ತ ಹೋರಾಟ ಕರ್ನಾಟಕವು ಎಲ್ಲಾ ಸಂಸತ್ ಸದಸ್ಯರಿಗೆ ಮತದಾರರ ವಿಪ್ ಎಂಬ ಅಭಿಯಾನ ದೇಶಾದ್ಯಂತ ಹಮ್ಮಿಕೊಂಡಿದೆ. ಒಕ್ಕೂಟ ಸರಕಾರ ಪಾರ್ಲಿಮೆಂಟ್ ಮೂಲಕ ಜಾರಿಗೆ ತಂದಿರುವ ಮೂರು ರೈತ ವಿರೋಧಿ ಕಾನೂನುಗಳ ವಿರುದ್ಧ ಸಂಸದರು ಲೋಕಸಭೆಯಲ್ಲಿ ಧ್ವನಿ ಎತ್ತಬೇಕೆಂದು ಈ ವಿಪ್ ಆಗ್ರಹಿಸುತ್ತಿದೆ. ರೈತ ವಿರೋಧಿ ಕಾನೂನುಗಳ ಪರ ನಿಮ್ಮ ಪಕ್ಷ ಕೊಡುವ ವಿಪ್ ಕಡೆಗಣಿಸಿದರೆ ಅಪಚಾರವೇನಾಗದು; ಆದರೆ ರೈತರ ವಿಪ್ ಧಿಕ್ಕರಿಸಿದರೆ ನಿಮ್ಮ ಎಲ್ಲ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾರತದ ರೈತ ಸಮೂಹದ ತೀವ್ರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಆಳುವ ಕೂಟದ ಸಂಸತ್ ಸದಸ್ಯರಿಗೆ ರೈತ ಸಂಘಟನಗಳು ಎಚ್ಚರಿಸಿವೆ.

ಉತ್ತರ ಕನ್ನಡದ ಸಂಯುಕ್ತ ಕಿಸಾನ್ ಮೋರ್ಚಾವು ಸ್ಥಳೀಯ ಸಂಸದ ಅನಂತಕುಮಾರ್ ಹೆಗಡೆಗೆ ಮತದಾರರ ವಿಪ್ ಜಾರಿ ಮಾಡಿದೆ. ಸಿದ್ದಾಪುರ ರೈತ ಸಂಘದ ಅಧ್ಯಕ್ಷ ವೀರಭದ್ರ ನಾಯ್ಕ್ ಹೆಗಡೆಗೆ ವಿಪ್ ಕಳಿಸಿದ್ದಾರೆ.

PC : The Economic Times

ಪ್ರಿಯ ಸಂಸತ್ ಸದಸ್ಯರೆ ಕೇಂದ್ರ ಸರಕಾರ ಸೆಪ್ಟೆಂಬರ್ 2020ರಲ್ಲಿ ಜಾರಿಗೊಳಿಸಿರುವ ಮೂರು ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೇಶದ ರೈತರು ಪ್ರತಿಭಟಿಸುತ್ತಿರುವುದು ತಮಗೆ ತಿಳಿದಿರುವ ಸಂಗತಿ. ಈ ಮೂರು ರೈತ ವಿರೋಧಿ ಕಾನೂನುಗಳನ್ನು ರದ್ದುಮಾಡಬೇಕು; ಎನ್‌ಸಿಆರ್ ವಾಯು ಮಾಲಿನ್ಯ ಕಾಯ್ದೆಯಲ್ಲಿನ ರೈತ ವಿರೋಧಿ ಅಂಶಗಳನ್ನು ಮತ್ತು ಕರಡು ವಿದ್ಯುತ್ ಮಸೂದೆಯನ್ನು ವಾಪಸ್ ಪಡೆಯಬೇಕೆಂದು ರೈತರು ಆಗ್ರಹಿಸುತ್ತಿದ್ಧಾರೆ. ದೇಶದ ಎಲ್ಲ ರೈತರ ಕೃಷಿ ಉತ್ಪನ್ನಗಳನ್ನು ಕನಿಷ್ಟ ಬೆಂಬಲ ಬೆಲೆಯಲ್ಲಿ ಖರೀದಿಸುವುದನ್ನು ಖಾತರಿಪಡಿಸುವ ಶಾಸನವನ್ನು ಕೇಂದ್ರ ಸರಕಾರ ತರಬೇಕೆಂಬುದು ರೈತರ ಬೇಡಿಕೆಯಾಗಿದೆ. ಆದ್ದರಿಂದ ಮತದಾರರಾದ ನಾವು ನಮ್ಮ ಸಾರ್ವಭೌಮತ್ವ ಅಧಿಕಾರವನ್ನು ಚಲಾಯಿಸಿ ಈ ಕೆಳಗಿನಂತೆ ನಿರ್ದೆಶಿಸುತ್ತಿದ್ದೆವೆ.

2021ರ ಜುಲೈ 19ರಿಂದ ಆರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ತಪ್ಪದೆ ಹಾಜರಿರಬೇಕು. ನೀವು ಮತ್ತು ನಿಮ್ಮ ಪಕ್ಷ ನಿರಂತರವಾಗಿ ರೈತರ ವಿಷಯಗಳ ಪರ ದನಿ ಎತ್ತಬೇಕು; ಮೇಲೆ ತಿಳಿಸಿದ ರೈತ ಚಳುವಳಿ ಬೇಡಿಕೆಗಳನ್ನು ಸದನದಲ್ಲಿ ಬೆಂಬಲಿಸಬೇಕು. ಕೇಂದ್ರ ಸರಕಾರ ರೈತರ ಬೇಡಿಕೆಗಳನ್ನು ಈಡೇರಿಸುವ ತನಕ ಯಾವುದೆ ಕಲಾಪಗಳಿಗೆ ಅವಕಾಶ ಕೊಡಬಾರದು; ರೈತರ ಬೇಡಿಕೆಗಳ ಪರವಾದ ಯಾವುದೇ ನಿರ್ಣಯಗಳು ಸದನದಲ್ಲಿ ಮಂಡಿಸಿದಾಗ ನೀವಾಗಲಿ ಅಥವಾ ನಿಮ್ಮ ಪಕ್ಷದ ಬೇರೆ ಸದಸ್ಯರಾಗಲಿ ವಿರೊಧಿಸಬಾರದು; ಮತದಾನದಿಂದ ದೂರ ಉಳಿಯಬಾರದು. ಇದನ್ನು ತಾವು ಮತದಾರರ ವಿಪ್ ಎಂದು ಪರಿಗಣಿಸಿ ನಿಮ್ಮ ಪಕ್ಷ ಜಾರಿ ಮಾಡುವ ವಿಪ್ ಕಡೆಗಣಿಸಬಹುದು. ನೀವೇನಾದರು ಮತದಾರರ ಈ ವಿಪ್ ಉಲ್ಲಂಘಿಸಿದರೆ, ನಿಮ್ಮ ಎಲ್ಲ ಸಾರ್ವಜನಿಕ ವೇದಿಕೆಗಳಲ್ಲೂ ಭಾರತೀಯ ರೈತರ ತೀವ್ರವಾದ ಪ್ರತಿಭಟನೆ ಎದುರಿಸುವುದು ಅನಿವಾರ್ಯವಾಗಲಿದೆ. ನಿಮ್ಮ ಮತದಾರರು, ದೇಶದ ಸಮಸ್ತ ರೈತ ಬಾಂಧವರು, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ತಾಲೂಕು ರೈತ ಸಂಘಗಳ ಪರವಾಗಿ ಹಸಿರು ಸೇನೆಯ ಅಧ್ಯಕ್ಷನ ವಿನಂತಿ ಎಂದು ವಿಪ್‌ನಲ್ಲಿ ಬರೆಯಲಾಗಿದೆ.

ದೇಶದ ಎಲ್ಲಾ ಸಂಸತ್‌ ಸದಸ್ಯರಿಗೆ ಇಂಥದೊಂದು ವಿಪ್ ರೈತ ಸಂಘಟನೆಗಳು ಕಳಿಸಿವೆ; ಕರ್ನಾಟಕ ಪ್ರಾಂತ ರೈತ ಸಂಘ ಕೂಡ ರಾಜ್ಯದ ಹಲವು ಸಂಸದರಿಗೆ ಈ ವಿಪ್ ಜಾರಿಗೊಳಿಸಿದೆ.


ಇದನ್ನೂ ಓದಿ: ಮಾನ್ಸೂನ್ ಅಧಿವೇಶನ: ಇಂದಿನಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...