Homeಕರ್ನಾಟಕದೇವನಹಳ್ಳಿ ಭೂಮಿ ಹೋರಾಟಕ್ಕೆ 'ಸಂಯುಕ್ತ ಕಿಸಾನ್ ಮೋರ್ಚಾ' ಬೆಂಬಲವಿದೆ: ಡಾ. ದರ್ಶನ್‌ ಪಾಲ್‌

ದೇವನಹಳ್ಳಿ ಭೂಮಿ ಹೋರಾಟಕ್ಕೆ ‘ಸಂಯುಕ್ತ ಕಿಸಾನ್ ಮೋರ್ಚಾ’ ಬೆಂಬಲವಿದೆ: ಡಾ. ದರ್ಶನ್‌ ಪಾಲ್‌

ಸರ್ಕಾರ ಬಿಜಿನೆಸ್‌ ಮಾಡುವುದಿದ್ದರೆ ಬೇರೆ ಕಡೆ ಮಾಡಲಿ: ಟಿಕಾಯತ್

- Advertisement -
- Advertisement -

ಚನ್ನರಾಯಪಟ್ಟಣ 13 ಹಳ್ಳಿಗಳ ಬಲವಂತದ ಭೂಸ್ವಾಧೀನ ವಿರೋಧಿಸಿ ನಡೆಯುತ್ತಿರುವ ದೇವನಹಳ್ಳಿ ಭೂಮಿ ಹೋರಾಟಕ್ಕೆ ‘ಸಂಯುಕ್ತ ಕಿಸಾನ್ ಮೋರ್ಚಾ’ ಬೆಂಬಲವಿದೆ ಎಂದು ಸಮಿತಿ ಮುಖಂಡರಾದ ಡಾ. ದರ್ಶನ್‌ ಪಾಲ್‌ ಘೋಷಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕಿನ ಭೂಮಿ ಸತ್ಯಾಗ್ರಹ ವೇದಿಕೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬೆಂಗಳೂರು ನಗರಕ್ಕೆ ಇಷ್ಟು ಹತ್ತಿರವಿದ್ದೂ ತಮ್ಮ ಭೂಮಿಯನ್ನು ಬಿಡುವುದಿಲ್ಲವೆಂದು ಸುಮಾರು ಮೂರೂವರೆ ವರ್ಷಗಳಿಂದ ಹೋರಾಟ ನಡೆಸುತ್ತಿರುವ ರೈತರಿಗೆ ಅಭಿನಂದನೆಗಳು. ಈ ಹೋರಾಟ ಮಾದರಿಯಾದದ್ದು. ಈಚೆಗೆ ಎಸ್‌.ಕೆ.ಎಂ ಸಭೆ ನಡೆಸಲಾಗಿದ್ದು, ಎರಡು ವಿಚಾರಗಳಿಗೆ ಬೆಂಬಲವನ್ನು ನೀಡಬೇಕೆಂದು ನಿರ್ಧಾರವಾಗಿದೆ. ಮೊದಲನೇಯದ್ದು, ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೀಡಿರುವ ‘ಅಖಿಲ ಭಾರತ ಮುಷ್ಕರ’ಕ್ಕೆ ಬೆಂಬಲ ನೀಡಬೇಕೆಂಬುದು. ಹಾಗೆಯೇ, ಭೂಸ್ವಾಧೀನಗಳ ವಿರುದ್ಧದ ರೈತರ ಹೋರಾಟವನ್ನು ಬೆಂಬಲಿಸಲು ನಿರ್ಧರಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ದೆಹಲಿಯಲ್ಲಿ ಕೇಂದ್ರ ಸರ್ಕಾರದ ಕರಾಳ ಕಾಯ್ದೆಗಳ ವಿರುದ್ಧ ಹದಿಮೂರು ತಿಂಗಳು ನಿರಂತರ ಹೋರಾಟ ನಡೆಸಿ ಗೆಲುವು ಸಾಧಿಸಿದೆವು. ಆದರೆ, ಇಲ್ಲಿನ ರೈತರು ಮೂರೂವರೆ ವರ್ಷ ಹೋರಾಡಿದ್ದಾರೆ. ದೇಶದಾದ್ಯಂತ ಭೂಸ್ವಾಧೀನ ನಡೆಯುವಾಗ ಪ್ಯಾಕೇಜ್‌ ಬಗ್ಗೆ ಚರ್ಚೆಯಾಗುತ್ತದೆ; ಆದರೆ ಇಲ್ಲಿನ ರೈತರು ಜಮೀನು ಕೊಡುವುದಿಲ್ಲ ಎಂದು ನಿರ್ಧರಿಸಿ, ಇಂದಿಗೂ ಆ ನಿಲುವಿಗೆ ಬದ್ಧರಾಗಿದ್ದಾರೆ. ಆ ಕಾರಣಕ್ಕೆ ಇದು ವಿಶಿಷ್ಟವಾದ ಹೋರಾಟ” ಎಂದು ಅವರು ಹೋರಾಟನಿರತ ರೈತರನ್ನು ಅಭಿನಂದಿಸಿದರು.

ಎಸ್‌ಕೆಎಂ ಮುಖಂಡರಾದ ಡಾ. ಸುನಿಲಮ್‌ ಮಾತನಾಡಿ, “ಈ ರೈತ ಆಂದೋಲನದ ಸಮಯದಲ್ಲಿ ನಡೆದ ಪೊಲೀಸ್‌ ದೌರ್ಜನ್ಯ ಖಂಡನೀಯ, ದಬ್ಬಾಳಿಕೆ ನಡೆಸಿದ ಪೊಲೀಸರ ಮೇಲೆ ಕಾನೂನು ಕ್ರಮ ಆಗಬೇಕೆಂದು ಎಸ್‌.ಕೆ.ಎಂ ಒತ್ತಾಯಿಸುತ್ತದೆ. ದರ್ಶನ್‌ ಪಾಲ್‌ ಅವರು ಹೇಳಿದಂತೆ ಇದು ವಿಶಿಷ್ಟ ಹೋರಾಟ, ಈ ಹೋರಾಟದ ಪ್ರತಿನಿಧಿಗಳೊಂದಿಗೆ ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರೆದಿರುವ ಸಭೆ ಇದೆ. ಅದು ಯಶಸ್ವಿಯಾಗುತ್ತದೆಂದು ನಾವು ಭರವಸೆ ಇಟ್ಟಿದ್ದೇವೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರು ಇಡೀ ದೇಶಾದ್ಯಂತ ಸುತ್ತಾಡಿ ಎನ್‌ಡಿಎ ಸರ್ಕಾರದ ಕರಾಳ ಕಾನೂನುಗಳ ವಿರುದ್ಧ ಮಾತನಾಡುವವರು, ತಮ್ಮದೇ ಪಕ್ಷದ ಸರ್ಕಾರ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಅವರು ರೈತರಿಗೆ ನ್ಯಾಯ ಸಿಗುವುದನ್ನು ಖಾತ್ರಿ ಪಡಿಸಬೇಕಲ್ಲವೇ? ಹಾಗೆಯೇ ʼಜನಚಳವಳಿಗಳ ರಾಷ್ಟೀಯ ವೇದಿಕೆʼ (ಎನ್‌ಎಪಿಎಂ) ಮುಖಂಡರಾದ ಮೇಧಾ ಪಾಟ್ಕರ್‌ ಅವರೂ ಕೂಡಾ ಮುಖ್ಯಮಂತ್ರಿಯವರಿಗೆ ಒಂದು ಪತ್ರ ಬರೆದು ದೇವನಹಳ್ಳಿಯ ರೈತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿದ್ಧರಾಮಯ್ಯನವರಿಗೆ ನೆನಪಿಸಲು ಬಯಸುತ್ತೇನೆ, ಅವರ ಸರ್ಕಾರ ಅಧಿಕಾರಕ್ಕೆ ಬರಲು ದಾರಿಮಾಡಿಕೊಟ್ಟ ಎಲ್ಲ ಚಳುವಳಿಗಾರರೂ ಇಂದು ದೇವನಹಳ್ಳಿಯ ಹೋರಾಟದ ಜೊತೆಗಿದ್ದಾರೆ. ಇದನ್ನು ಅವರು ಗಂಭೀರವಾಗಿ ಪರಿಗಣಿಸುತ್ತಾರೆಂದು ನಂಬಿದ್ದೇನೆ” ಎಂದು ಹೇಳಿದರು.

ಉತ್ತರಪ್ರದೇಶದಿಂದ ಬಂದಿರುವ ಎಸ್‌.ಕೆ.ಎಂನ ರಾಷ್ಟ್ರೀಯ ನಾಯಕರಾದ ಯುಧ್‌ವೀರ್‌ ಸಿಂಗ್‌ ಅವರು ಮಾತನಾಡುತ್ತಾ, “ರೈತರು ಹೆಚ್ಚೂಕಡಿಮೆ 1200 ದಿನಗಳ ಕಾಲ ಹೋರಾಟ ನಡೆಸಿದ್ದಾರೆ ಎಂದರೆ ಅದೇನೂ ಕಡಿಮೆ ವಿಚಾರವಲ್ಲ; ಸ್ವತಃ ಸಿದ್ಧರಾಮಯ್ಯ ಅವರು ಈ ರೈತರಿಗೆ ಭೂಸ್ವಾಧೀನವನ್ನು ರದ್ದುಪಡಿಸುವ ಭರವಸೆಯನ್ನು ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ನೀಡಿದ್ದಾರೆ, ಆ ಮಾತನ್ನು ಅವರು ಉಳಿಸಿಕೊಳ್ಳಬೇಕಿದೆ. ಸಿದ್ಧರಾಮಯ್ಯ ಅವರನ್ನು ಮಾತನಾಡಿಸುವಾಗ, ಅವರು ನಮ್ಮಲ್ಲೇ ಒಬ್ಬರೇನೋ ಎಂದು ಅನಿಸುತ್ತದೆ. ಹಾಗೆಯೇ, ರೈತರ ನಡುವಿನಿಂದ ಹೋದವರೊಬ್ಬರು ಮುಖ್ಯಮಂತ್ರಿಗಳಾದಾಗ ಅವರ ಮೇಲೆ ರೈತರ ನಿರೀಕ್ಷೆ ಬಹಳ ಹೆಚ್ಚಿದೆ, ಇಂತಹ ರಾಜ್ಯದಲ್ಲಿ ರೈತರಿಗೆ ಈ ಸ್ಥಿತಿ ಬರಲೇಬಾರದಿತ್ತು” ಎಂದು ಬೇಸರ ವ್ಯಕ್ತಪಡಿಸಿದರು.

ಉತ್ತರ ಪ್ರದೇಶದಿಂದ ಸಾವಿರಾರು ರೈತರನ್ನು ಕರೆದುಕೊಂಡು ಬರುತ್ತೇವೆ

“ನಾವು ಕರ್ನಾಟಕಕ್ಕೆ ಮೊದಲ ಬಾರಿಗೆ ಬರುತ್ತಿರುವುದಲ್ಲ, ಈ ಹಿಂದೆ 90ರ ದಶಕದಲ್ಲಿ ಮಹೇಂದ್ರ ಸಿಂಗ್‌ ಟಿಕಾಯತ್‌ ಅವರು ಬಂದಿದ್ದಾಗ 1500 ರೈತರನ್ನು ಕರೆದುಕೊಂಡು ನಾವು ಉತ್ತರ ಪ್ರದೇಶದಿಂದ ಕರ್ನಾಟಕದ ರೈತರಿಗೆ ಬೆಂಬಲ ನೀಡಲು ಬಂದಿದ್ದೆವು; ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಈ ಸಮಸ್ಯೆಯನ್ನು ಬಗೆಹರಿಸುತ್ತಾರೆಂಬ ನಿರೀಕ್ಷೆ ವ್ಯಕ್ತಪಡಿಸುತ್ತಿದ್ದೇನೆ. ಒಂದು ವೇಳೆ ಹಾಗಾಗದಿದ್ದರೆ, ಇಲ್ಲಿನ ಸಂಯುಕ್ತ ಹೋರಾಟ-ಕರ್ನಾಟಕ ದೇವನಹಳ್ಳಿಯ ರೈತರ ಜೊತೆಗೂಡಿ ಏನು ನಿರ್ಧಾರ ಕೈಗೊಳ್ಳುತ್ತದೋ ಮುಂದಿನ ಹೋರಾಟದ ಆ ಕಾರ್ಯತಂತ್ರಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾದ ಸಂಪೂರ್ಣ ಬೆಂಬಲ ಇರುತ್ತದೆ, ನಾವು ಸಾವಿರಾರು ರೈತರನ್ನು ಕರೆದುಕೊಂಡು ಇಲ್ಲಿಗೆ ಬಂದಿಳಿಯಬೇಕಾಗುತ್ತದೆ, ಇದನ್ನು ನಾನು ಭಾರವಾದ ಹೃದಯದಿಂದ ಹೇಳುತ್ತಿದ್ದೇನೆ, ಅಂತಹ ಸ್ಥಿತಿ ಬರದಿರಲಿ ಎಂದು ಆಶಿಸುತ್ತೇನೆ” ಎಂದರು.

ಸರ್ಕಾರ ಬಿಜಿನೆಸ್‌ ಮಾಡುವುದಿದ್ದರೆ ಬೇರೆ ಕಡೆ ಮಾಡಲಿ: ಟಿಕಾಯತ್

ರೈತ ಮುಖಂಡರಾದ ರಾಕೇಶ್‌ ಟಿಕಾಯತ್‌ ಮಾತನಾಡಿ, “ಈ ಚಳವಳಿ ನಡೆಯುತ್ತಿರುವುದು ಭೂಮಿಯ ರಕ್ಷಣೆಗಾಗಿ, ಇಡೀ ದೇಶದ ಕಣ್ಣು ಈ ಚಳವಳಿಯ ಮೇಲಿದೆ, ಪೂರ್ತಿ ಮೂರೂವರೆ ವರ್ಷ ನಡೆದಿದೆ. ಬಹಳಷ್ಟು ಚಳವಳಿಗಳಲ್ಲಿ ರೈತರು ಸರ್ಕಾರದ ಜೊತೆಗೆ ಮಾತುಕತೆಗೆ ಕೂರುತ್ತಾರೆ. ಆದರೆ, ಇಲ್ಲಿನ ರೈತರು, ‘ನಮಗೆ ಮಾತುಕತೆ ಬೇಕಾಗಿಯೇ ಇಲ್ಲ, ಭೂಮಿ ಕೊಡುವುದಿಲ್ಲ’ ಎಂದು ಹೇಳಿದ್ದಾರೆ; ಆ ಕಾರಣದಿಂದ ಇದು ಬಹಳ ವಿಶೇಷವಾದ ಹೋರಾಟ. ಇಡೀ ದೇಶದ ರೈತರು, ಹೋರಾಟಗಾರರು ರೈತರ ಜೊತೆಗಿದ್ದಾರೆ. ಸರ್ಕಾರ ಬಿಜಿನೆಸ್‌ ಮಾಡುವುದಿದ್ದರೆ ಬೇರೆ ಕಡೆ ಮಾಡಲಿ, ರೈತರು ಭೂಮಿ ಕೊಡುವುದಿಲ್ಲ ಎಂದ ಮೇಲೆ ರೈತರಿಗೆ ಅವರ ಭೂಮಿ ಕಸಿಯಲು ಯಾವುದೇ ಅಧಿಕಾರ ಇಲ್ಲ” ಎಂದು ಸರ್ಕಾರಕ್ಕೆ ಸಂದೇಶ ನೀಡಿದರು.

“ದೆಹಲಿಯಲ್ಲಿ ಎಸ್‌ಕೆಎಂ ಸಭೆಯಲ್ಲಿ ಈಗಾಗಲೇ ಈ ಹೋರಾಟದ ವಿಚಾರ ಅಜೆಂಡಾದಲ್ಲಿದೆ, ಒಂದು ವೇಳೆ ನಾಳಿನ ಸಭೆಯಲ್ಲಿ ಒಳ್ಳೆಯ ನಿರ್ಧಾರದ ಜೊತೆಗೆ ಹೋರಾಟ ಮುಕ್ತಾಯ ಆಗದಿದ್ದರೆ, ಮುಂದೆಯೂ ಅದನ್ನು ಚರ್ಚೆಯಲ್ಲಿ ಸೇರಿಸಿಕೊಳ್ಳುತ್ತೇವೆ, ಎಸ್‌ಕೆಎಂ ಇಲ್ಲಿನ ರೈತರು ಮತ್ತು ಸಂಘಟನೆಗಳೂ ಏನು ನಿರ್ಧಾರ ಕೈಗೊಂಡರೂ ಅದರ ಜೊತೆಗಿರುತ್ತದೆ” ಎಂದರು.

ರಾಷ್ಟ್ರೀಯ ರೈತ ನಾಯಕರಾದ ವಿಜು ಕೃಷ್ಣನ್‌ ಮಾತನಾಡಿ, “ವಿರೋಧ ಪಕ್ಷದ ನಾಯಕರಾಗಿದ್ದಾಗ ಸಿದ್ಧರಾಮಯ್ಯ ಅವರು ರೈತರ ಪರವಾಗಿದ್ದರು, ಈಗ ಸರ್ಕಾರದಲ್ಲಿ ಇರುವಾಗಲೂ ಅವರು ರೈತರೊಂದಿಗೆ ಇರಬೇಕೆಂದು ನಾವು ಆಶಿಸುತ್ತೇವೆ. ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳು ರೈತಪರ ನಿಲುವನ್ನು ಕೈಗೊಳ್ಳುತ್ತಾರೆ ಎಂದು ಆಶಿಸುತ್ತೇವೆ. ಆದರೆ, ಒಂದು ವೇಳೆ ಹಾಗೆ ಆಗದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರವಾಗಿ ಮುಂದುವರೆಸುತ್ತೇವೆ, ಜುಲೈ 9ರಂದು ದೇಶಮಟ್ಟದ ಕಾರ್ಮಿಕರ ಸಾರ್ವತ್ರಿಕ ಮುಷ್ಕರ ಇದೆ, ಅದರಲ್ಲೂ ನಾವು ಈ ಹೋರಾಟವನ್ನು ಬೆಂಬಲಿಸುತ್ತೇವೆ” ಎಂದು ಹೇಳಿದರು.

“ಈ ಹಿಂದೆ ಕೇಂದ್ರದಲ್ಲೂ ಒಬ್ಬರು ಪ್ರಧಾನ ಮಂತ್ರಿಗಳಿದ್ದರು, ರೈತರ ಹೋರಾಟವನ್ನು ಕಡೆಗಣಿಸಿದರು. ಆದರೆ, ನಿರಂತರವಾಗಿ 380 ದಿನಗಳ ಕಾಲ ಹೋರಾಟ ನಡೆಸಿದ ರೈತರು, ಚಳಿಗಾಲದಲ್ಲೂ ಬಿರುಗಾಳಿಯಲ್ಲೂ ಮಳೆಗಾಲದಲ್ಲೂ ಹೋರಾಟ ಮುಂದುವರೆಸಿದರು. 736 ರೈತರು ಪ್ರಾಣ ಕಳೆದುಕೊಂಡರೂ ಹೋರಾಟ ನಿಲ್ಲಲಿಲ್ಲ. ನಿಜವಾದ ರೈತ ಹೋರಾಟ ಅಂದರೆ ಹಾಗಿರುತ್ತದೆ. ಇಲ್ಲಿ ಈಗಾಗಲೇ ಸಾವಿರದಿನ್ನೂರು ದಿನ ಇಲ್ಲಿ ದೇವನಹಳ್ಳಿಯ ಹೋರಾಟ ನಡೆದಿದೆ, ಈಗ ಅವರಿಗೆ ಎಲ್ಲ ಸಂಘಟನೆಗಳ ಬೆಂಬಲವಿದೆ, ಎಷ್ಟು ದಿನಗಳಾದರೂ ಹೋರಾಟ ಗೆಲುವು ಸಾಧಿಸುವ ತನಕ ನಿಲ್ಲದು” ಎಂದು ವರದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ ಹೇಳಿದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಡಾ. ದರ್ಶನ್‌ ಪಾಲ್‌ ಮತ್ತು ಯುಧ್‌ವೀರ್‌ ಸಿಂಗ್‌, “ಪಾರ್ಲಿಮೆಂಟಿನಲ್ಲಿ ತೆಗೆದುಕೊಂಡ ಮೂರು ಕರಾಳ ಕಾಯ್ದೆಗಳನ್ನು ಪಾರ್ಲಿಮೆಂಟಿನಲ್ಲೇ ವಾಪಾಸ್‌ ಪಡೆದುಕೊಳ್ಳುವಂತಹ ಒತ್ತಡವನ್ನು ರೈತಾಂದೋಲನ ಹೇರಿತು. ಈಗ ಕೈಗಾರಿಕಾ ಸಚಿವರು ಒಂದು ನಿರ್ಧಾರ ಕೈಗೊಂಡಿದ್ದಾರೆಂದರೆ ಅವರು ಅದನ್ನು ವಾಪಾಸ್‌ ಪಡೆಯಬಾರದೆಂದೇನೂ ಇಲ್ಲ, ಅಲ್ಲಿಯವರೆಗೆ ಹೋರಾಟ ನಡೆದಾಗ ರಾಜ್ಯ ಸಚಿವ ಸಂಪುಟ ತನ್ನ ನಿರ್ಧಾರ ಬದಲಿಸಬೇಕಾಗುತ್ತದೆ” ಎಂದರು.

“2013ರ ಭೂಸ್ವಾಧೀನ ಕಾಯ್ದೆಯು ರೈತರ ಒಪ್ಪಿಗೆಯಿಲ್ಲದೆ ಭೂಮಿ ರೈತರಿಂದ ಕಸಿಯಲು ಸಾಧ್ಯವಿಲ್ಲ, 80% ರೈತರು ಒಪ್ಪಿದರೆ ಮಾತ್ರ ಮುಂದುವರೆಯಬಹುದು. ಆದರೆ, ಇಲ್ಲಿ ಪ್ರಶ್ನೆಯಿರುವುದು ಇದನ್ನು ಎಷ್ಟರಮಟ್ಟಿಗೆ ಪಾಲಿಸಲಾಗುತ್ತದೆ ಎಂಬುದು, ಕಾನೂನುಗಳೇನೂ ಕಲ್ಲಿನ ಮೇಲೆ ಬರೆಯಲ್ಪಟ್ಟಿಲ್ಲ ಬದಲಿಸಲು ಆಗುವುದಿಲ್ಲ ಎನ್ನಲು, ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾಗಿದ್ದರೆ ಬದಲಿಸಬೇಕು” ಎಂದರು.

“ಮಧ್ಯಪ್ರದೇಶದ ರಾಯಗಢದಲ್ಲಿ ಎಸ್‌ಇಜಡ್‌ ಗೆ ಭೂಮಿ ಪಡೆಯುವ ಸಂಧರ್ಭದಲ್ಲಿ ಅಲ್ಲಿದ್ದ ಕಾಂಗ್ರೆಸ್‌ ಸರ್ಕಾರ ಜನಾಭಿಪ್ರಾಯ ಸಂಗ್ರಹ ಮಾಡಿತು, ಆಗ ಶೇ.90ರಷ್ಟು ರೈತರು ಭೂಮಿ ಕೊಡುವುದಿಲ್ಲ ಎಂದಾಗ ಆ ಯೋಜನೆ ರದ್ದಾಯಿತು. ಅದೇ ಮಾದರಿ ಇಲ್ಲಿಯೂ ಜಾರಿಯಾಗಲಿ, ಈ ಸರ್ಕಾರಗಳು ರೈತರ ಓಟಿನಿಂದ ರಚನೆಯಾಗಿವೆ, ಕಾರ್ಪೊರೇಟ್‌ಗಳ ಓಟಿನಿಂದಲ್ಲ, ಯಾವುದಾದರೂ ಸರ್ಕಾರಕ್ಕೆ ಧೈರ್ಯವಿದ್ದರೆ ಅವರು ಹೇಳಿಬಿಡಲಿ, ರೈತರ ಓಟು ನಮಗೆ ಬೇಕಾಗಿಲ್ಲ ಎಂದು” ಎಂದು ಡಾ. ಸುನಿಲಮ್‌ ಸವಾಲು ಹಾಕಿದರು.

ಪತ್ರಿಕಾ ಗೋಷ್ಟಿಯಲ್ಲಿ ಹಿರಿಯ ಹೋರಾಟಗಾರರಾದ ಎಸ್.ಆರ್.ಹಿರೇಮಠ್‌ ಮಾತನಾಡಿದರು. “ಬಹಳ ಗೌರವ ಮತ್ತು ನಂಬಿಕೆಯಿಂದ ಈ ಸಭೆಗೆ ಹೋಗುತ್ತಿದ್ದೇವೆ, ಇದು ಸಕಾರಾತ್ಮಕ ಫಲಿತ ಕಾಣಬೇಕು, ಇಲ್ಲದಿದ್ದರೆ ಇದರ ರಾಜಕೀಯ ಪರಿಣಾಮಗಳು ದೀರ್ಘಕಾಲಿಕವಾಗಿರುತ್ತವೆ” ಎಂದು ಸರ್ಕಾರಕ್ಕೆ ಸಂದೇಶ ನೀಡಿದರು.

ದೇವನಹಳ್ಳಿ ರೈತ ಹೋರಾಟದ ಪರಿಚಯ ನೀಡುವ ಉದ್ದೇಶದಿಂದ ಪತ್ರಕರ್ತ ರವಿಕುಮಾರ್‌ ಈಚಲಮರ ಅವರು ಬರೆದಿರುವ ʼಪ್ರಾಣ ಹೋದರೂ ಭೂಮಿ ಕೊಡೆವುʼ ಕಿರುಪುಸ್ತಕವನ್ನು ಸಾರ್ವಜನಿಕರ ಓದಿಗೆ ನೀಡಿದರು.

ಸಂಯುಕ್ತ ಕಿಸಾನ್‌ ಮೋರ್ಚಾದ ರಾಷ್ಟ್ರೀಯ ನಾಯಕರುಗಳಾದ ದರ್ಶನ್‌ ಪಾಲ್‌, ರಾಕೇಶ್‌ ಟಿಕಾಯತ್‌, ಯುಧ್‌ವೀರ್‌ ಸಿಂಗ್‌, ವಿಜು ಕೃಷ್ಣನ್‌, ಡಾ. ಸುನಿಲಮ್‌ ಮತ್ತು ಕರ್ನಾಟಕದ ಜನಚಳುವಳಿಗಳ ಐಕ್ಯ ವೇದಿಕೆಯಾದ ಸಂಯುಕ್ತ ಹೋರಾಟ ಕರ್ನಾಟಕದ ಪ್ರತಿನಿಧಿಗಳಾದ ಎಚ್ .ಎಂ.ಬಸವರಾಜಪ್ಪ, ಚುಕ್ಕಿ ನಂಜುಂಡಸ್ವಾಮಿ, ಟಿ. ಯಶವಂತ್‌ ಮತ್ತಯ ಸಾಮಾಜಿಕ ಹೋರಾಟಗಾರರರಾದ ಎಸ್‌.ಆರ್.ಹಿರೇಮಠ್‌ ಅವರುಗಳು ಪತ್ರಕರ್ತನ್ನು ಉದ್ದೇಶಿಸಿ ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...