Homeಮುಖಪುಟ"ಸನಾತನವನ್ನು ನಿರ್ಮೂಲನೆ ಮಾಡಬೇಕು…"; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

- Advertisement -
- Advertisement -

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ.

ಸದನದಲ್ಲಿ ಮಾತನಾಡಿದ ಅವರು, “ಜನರನ್ನು ವಿಭಜಿಸುವ ಸನಾತನವನ್ನು ನಿರ್ಮೂಲನೆ ಮಾಡಬೇಕು” ಎಂದು ಹೇಳಿದರು. ಈ ಹೇಳಿಕೆಗೆ ತಕ್ಷಣವೇ ವಿರೋಧ ಪಕ್ಷದ ಸದಸ್ಯರಿಂದ ತೀವ್ರ ಪ್ರತಿಕ್ರಿಯೆಗಳು ಬಂದವು. ರಾಜ್ಯದಲ್ಲಿ ನಡೆಯುತ್ತಿರುವ ಸೈದ್ಧಾಂತಿಕ ಚರ್ಚೆಯನ್ನು ತೀವ್ರಗೊಳಿಸಲಾಯಿತು.

ಉದಯನಿಧಿ ಸ್ಟಾಲಿನ್ ಇಂತಹ ಹೇಳಿಕೆಗಳನ್ನು ನೀಡಿದ್ದು ಇದೇ ಮೊದಲಲ್ಲ. ಇದಕ್ಕೂ ಮೊದಲು, ಅವರ ಇದೇ ರೀತಿಯ ಹೇಳಿಕೆಯು ರಾಷ್ಟ್ರವ್ಯಾಪಿ ಆಕ್ರೋಶ ಮತ್ತು ಕಾನೂನು ಪರಿಶೀಲನೆಗೆ ಕಾರಣವಾಗಿತ್ತು. ಸ್ಟಾಲಿನ್ ಧಾರ್ಮಿಕ ಭಾವನೆಗಳನ್ನು ಅವಮಾನಿಸಿದ್ದಾರೆ ಎಂದು ಹಿಂದುತ್ವವಾದಿಗಳು ಆರೋಪಿಸಿದರು.

ತಮ್ಮ ಭಾಷಣದ ಸಮಯದಲ್ಲಿ, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ರಾಜಕೀಯ ಸಹಕಾರಕ್ಕಾಗಿ ಮನವಿ ಉದಯನಿಧಿ ಸ್ಟಾಲಿನ್ ಮಾಡಿದರು. ಸದನದಲ್ಲಿ ಬೇರೆಬೇರೆ ಜಾಗದಲ್ಲಿ ಕುಳಿತಿದ್ದರೂ ಸಹ, ಎಲ್ಲಾ ನಾಯಕರು ತಮಿಳುನಾಡಿನ ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಹೇಳಿದರು.

“ನಾವು ಆಡಳಿತ ಸರ್ಕಾರ ಮತ್ತು ವಿರೋಧ ಪಕ್ಷವಾಗಿ ಬೇರೆ ಬೇರೆ ಸಾಲುಗಳಲ್ಲಿ ಕುಳಿತರೂ ಸಹ, ತಮಿಳುನಾಡಿನ ಅಭಿವೃದ್ಧಿಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು” ಎಂದು ಅವರು ಹೇಳಿದರು

ಚರ್ಚೆಗೆ ಕಾರಣವಾದ ರಾಜ್ಯ ಗೀತೆ ಮತ್ತು ರಾಷ್ಟ್ರಗೀತೆ ಕುರಿತಾದ ಹೇಳಿಕೆಗಳು

ಉದಯನಿಧಿ ಸ್ಟಾಲಿನ್ ವಿಧಾನಸಭೆಯಲ್ಲಿ, ಸಾಂಸ್ಕೃತಿಕ ಮತ್ತು ರಾಜಕೀಯ ಸಂಕೇತಗಳ ಬಗ್ಗೆಯೂ ಕಳವಳ ವ್ಯಕ್ತಪಡಿಸಿದರು. ತಮಿಳುನಾಡು ರಾಜ್ಯ ಗೀತೆಗೆ ಇತರ ರಾಷ್ಟ್ರೀಯ ಗೀತೆಗಳಿಗಿಂತ ಕಡಿಮೆ ಪ್ರಾಮುಖ್ಯತೆ ನೀಡಬಾರದು ಎಂದು ಅವರು ಹೇಳಿದರು.

“ವಂದೇ ಮಾತರಂ ನಂತರ ತಮಿಳುನಾಡು ರಾಜ್ಯ ಗೀತೆಯನ್ನು ನುಡಿಸಿದ ನಂತರ ವಿರೋಧ ಪಕ್ಷವು ಕಳವಳ ವ್ಯಕ್ತಪಡಿಸಿದೆ. ನಮ್ಮ ರಾಜ್ಯ ಗೀತೆಯನ್ನು ಎಂದಿಗೂ ಎರಡನೇ ಸ್ಥಾನಕ್ಕೆ ತಳ್ಳಬಾರದು” ಎಂದು ಅವರು ಹೇಳಿದರು.

ವಿವಿಧ ರಾಜ್ಯಗಳಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಚಿಹ್ನೆಗಳ ಬಳಕೆಯಲ್ಲಿನ ಅಸಂಗತತೆಯನ್ನು ಅವರು ಎತ್ತಿ ತೋರಿಸಿದರು. ದೇಶದ ಬೇರೆಡೆ ತೆಗೆದುಕೊಂಡ ರಾಜಕೀಯ ನಿರ್ಧಾರಗಳನ್ನು ಪರೋಕ್ಷವಾಗಿ ಟೀಕಿಸಿದರು.

ಉದಯನಿಧಿ ಸ್ಟಾಲಿನ್ ಹೇಳಿಕೆಗಳನ್ನು ಟೀಕಿಸಿದ ಬಿಜೆಪಿ

ಉಯನಿಧಿ ಹೇಳಿಕೆಗಳು ಬಿಜೆಪಿಯಿಂದ ಬಲವಾದ ಪ್ರತಿಕ್ರಿಯೆಯನ್ನು ಉಂಟುಮಾಡಿದೆ. ಡಿಎಂಕೆ ನಾಯಕ ಧಾರ್ಮಿಕ ಭಾವನೆಗಳನ್ನು ಪದೇ ಪದೇ ನೋಯಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ವಕ್ತಾರ ಸಿ.ಆರ್. ಕೇಶವನ್ ಮಾತನಾಡಿ, “ಈ ಪುನರಾವರ್ತಿತ ಅಪರಾಧಿಗಳು ತಮಿಳುನಾಡು ರಾಜ್ಯದ ಲಾಂಛನದಲ್ಲಿ ದೇವಾಲಯ ಗೋಪುರವಿದೆ ಎಂಬುದನ್ನು ನೆನಪಿನಲ್ಲಿಡಬೇಕು. ತಮಿಳುನಾಡಿನ ಜನರು ತಮ್ಮ ನಂಬಿಕೆಗೆ ಮಾಡುವ ಇಂತಹ ಅವಮಾನಗಳನ್ನು ಕ್ಷಮಿಸುವುದಿಲ್ಲ” ಎಂದು ಹೇಳಿದರು.

ಉದಯನಿಧಿ ಸ್ಟಾಲಿನ್ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹೋಲಿಸಿದರು. “ಅವರು ತಮಿಳುನಾಡಿನ ರಾಹುಲ್ ಗಾಂಧಿ, ವಿಭಜಕ ರಾಜಕೀಯವನ್ನು ಉತ್ತೇಜಿಸುತ್ತಿದ್ದಾರೆ” ಎಂದು ಹೇಳಿದರು.

ಮತ್ತೆ ವಿವಾದಕ್ಕೆ ಕಾರಣವಾದ “ಸನಾತನ ನಿರ್ಮೂಲನೆ” ಹೇಳಿಕೆ

ಉದಯನಿಧಿ ಸ್ಟಾಲಿನ್ ಅವರ ಇತ್ತೀಚಿನ ಹೇಳಿಕೆಯು ಸುಮಾರು ಮೂರು ವರ್ಷಗಳ ಹಿಂದೆ ಸನಾತನ ಧರ್ಮದ ಬಗ್ಗೆ ಇದೇ ರೀತಿಯ ಹೇಳಿಕೆಗಳನ್ನು ನೀಡಿದಾಗ ಮೊದಲು ಭುಗಿಲೆದ್ದ ಪ್ರಮುಖ ವಿವಾದವನ್ನು ಮುನ್ನೆಲೆಗೆ ತಂದಿದೆ. ಅವರು ಸನಾತನವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳಿಗೆ ಹೋಲಿಸಿದ್ದರು. ಅದನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

ಈ ಹೇಳಿಕೆಯು ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಮತ್ತು ಕಾನೂನು ದೂರುಗಳಿಗೆ ಕಾರಣವಾಯಿತು. ದ್ವೇಷ ಭಾಷಣವನ್ನು ಉತ್ತೇಜಿಸುತ್ತಿದ್ದಾರೆ ಎಂದು ಹಿಂದುತ್ವವಾದಿಗಳು ಆರೋಪಿಸಿದರು. ನಂತರ ಮದ್ರಾಸ್ ಹೈಕೋರ್ಟ್ ಅವರ ಹೇಳಿಕೆಗಳು ದ್ವೇಷ ಭಾಷಣಕ್ಕೆ ಸಮನಾಗಿದ್ದು, ರಾಜಕೀಯ ಪ್ರತಿಕ್ರಿಯೆಯನ್ನು ತೀವ್ರಗೊಳಿಸಿತು ಎಂದು ಗಮನಿಸಿತು.

ಟೀಕೆಗಳ ಹೊರತಾಗಿಯೂ, ಉದಯನಿಧಿ ಈ ಹಿಂದೆ ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡಿದ್ದಾರೆ. ನನ್ನ ಉದ್ದೇಶ ಜಾತಿ ತಾರತಮ್ಯ ಮತ್ತು ಅಸಮಾನತೆಯನ್ನು ವಿರೋಧಿಸುವ ಗುರಿಯನ್ನು ಹೊಂದಿವೆ ಎಂದು ಹೇಳಿದ್ದಾರೆ.

ನೂತನ ಮುಖ್ಯಮಂತ್ರಿ ಒಡನಾಟ ನೆನೆದ ಉದಯ್

ಹೊಸದಾಗಿ ಆಯ್ಕೆಯಾದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರೊಂದಿಗಿನ ತಮ್ಮ ವೈಯಕ್ತಿಕ ಸಂಪರ್ಕವನ್ನು ಉದಯನಿಧಿ ಸ್ಟಾಲಿನ್ ನೆನಪಿಸಿಕೊಂಡರು. ನಾವು ಒಂದೇ ಕಾಲೇಜಿನಲ್ಲಿ ಓದಿದ್ದೇವೆ ಎಂದು ಹೇಳಿದರು. “ನಾವು ನಮ್ಮ ಅನುಭವ ಮತ್ತು ಜ್ಞಾನವನ್ನು ಹಂಚಿಕೊಳ್ಳಲು ಬಯಸುತ್ತೇವೆ. ಮುಖ್ಯಮಂತ್ರಿಗಳು ನಮ್ಮ ಸಲಹೆಗಳನ್ನು ಸಹ ಸ್ವೀಕರಿಸಬೇಕು” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...