Homeಕರ್ನಾಟಕಸನಾತನ ಧರ್ಮದ ವಿವಾದ: ಬಸವಣ್ಣನ ವಚನದ ಮೂಲಕ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಸನಾತನ ಧರ್ಮದ ವಿವಾದ: ಬಸವಣ್ಣನ ವಚನದ ಮೂಲಕ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

- Advertisement -
- Advertisement -

‘ಸನಾತನ ಧರ್ಮ ಕೊನೆಗಾಣಿಸುವ’ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಪ್ರಿಯಾಂಕ್ ಖರ್ಗೆ ಬೆಂಬಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಅವರು ”ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕಿದ್ದರೆ,  ಅವರ ತಲೆ ಕತ್ತರಿಸುತ್ತೀರಾ?” ಎಂದು ಕೇಳಿದ್ದಾರೆ.

ಸಂತೋಷ್ ಟ್ರೇಟ್‌ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆ, ”ದಯವಿಲ್ಲದ ಧರ್ಮವಾವುದಯ್ಯಾ ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ” ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ್ದಾರೆ.

”ಬಿ.ಎಲ್.ಸಂತೋಷ್ ಅವರೇ, ಸೋಂಕಿಗೆ ಚಿಕಿತ್ಸೆ ಬೇಕು ಎಂಬ ನಿಮ್ಮ ವಾದವನ್ನು ನಾನು ಒಪ್ಪುತ್ತೇನೆ, ಆದರೆ ಸಾವಿರಾರು ವರ್ಷಗಳಿಂದ ಬಹಳಷ್ಟು ಸೋಂಕುಗಳು ಈ ಸಮಾಜವನ್ನು ಕಾಡುತ್ತಿವೆ. ಆ ಸೋಂಕುಗಳು ಈಗಲೂ ಮುಂದುವರಿದಿದ್ದು, ಮನುಷ್ಯರ ನಡುವೆ ತಾರತಮ್ಯ ಸೃಷ್ಟಿಸಿವೆ. ಮನುಷ್ಯರು ಎಂಬ ಘನತೆಯನ್ನು ನೀಡಲು ಕೆಲವರಿಗೆ ನಿರಾಕರಿಸಿವೆ” ಎಂದಿದ್ದಾರೆ.

”ನಾನು ನಿಮ್ಮನ್ನು ಬುದ್ಧವಂತನಲ್ಲ. ನೀವು ದಯವಿಟ್ಟು ನನಗೂ ಮಾರ್ಗದರ್ಶನ ಮಾಡಿ. ಇಂಥ ಸಮಾಜವನ್ನು ಸೃಷ್ಟಿಸಿದವರು ಯಾರು? ಒಬ್ಬರು ಮತ್ತೊಬ್ಬರಿಗಿಂತ ನೀತಿವಂತರು ಎಂದು ಮಾಡಿದವರು ಯಾರು? ಜಾತಿ ಆಧಾರದಲ್ಲಿ ಸಮಾಜವನ್ನು ವಿಭಜಿಸಿದವರು ಯಾರು? ಒಂದಷ್ಟು ಜನ ಮತ್ತಷ್ಟು ಜನರಿಗೆ ಏಕೆ ಆಸ್ಪೃಶ್ಯರು? ಈಗಲೂ ಕೆಲ ದೇವಾಲಯಗಳಿಗೆ ಕೆಲವರಿಗೆ ಏಕೆ ಪ್ರವೇಶವಿಲ್ಲ? ಮಹಿಳೆಯರು ಕೀಳುಭಾವದಲ್ಲೇ ಬದುಕುವಂತೆ ಪದ್ಧತಿಯನ್ನು ಜಾರಿಗೆ ತಂದವರು ಯಾರು? ಅಸಮಾನತೆ ಹಾಗೂ ದಬ್ಬಾಳಿಕೆಯ ಇರುವ ಜಾತಿ ಆಧಾರಿತ ಸಾಮಾಜಿಕ ರಚನೆಯನ್ನು ತಂದವರು ಯಾರು” ಎಂದು ಸಾಲು ಸಾಲು ಪ್ರಶ್ನೆಗಳನ್ನು ಖರ್ಗೆ ಕೇಳಿದ್ದಾರೆ.

”ಯಾರೂ ಯಾರ ತಲೆಯನ್ನೇ ಕಡಿಯಬೇಕು ಎಂಬ ಉದ್ದೇಶ ಹೊಂದಿಲ್ಲ. ಆದರೆ ಸಮಾನ ಹಕ್ಕು ಮತ್ತು ಘನತೆಯ ಬದುಕನ್ನು ಪ್ರತಿಯೊಬ್ಬ ಮನುಷ್ಕರಿಗೂ ನೀಡುವ ಮೂಲಕ ಸೋಂಕನ್ನು ಗುಣಪಡಿಸಬೇಕಿದೆ. ಇವೆಲ್ಲದಕ್ಕೂ ಔಷದ ನಮ್ಮ ಸಂವಿಧಾನದಲ್ಲಿದೆ. ಆದರೆ ನೀವುಗಳು ಅದನ್ನು ವಿರೋಧಿಸುತ್ತಿದ್ದೀರಿ. ನೀವೂ ಕರ್ನಾಟಕದವರೇ, ಬಸವಣ್ಣನವರು ಸಾರಿದ ಮಾನವತೆಯ ಸಾರವನ್ನು ಎಲ್ಲೆಡೆ ಹರಡಿ. ಅದರಿಂದ ಸಮ ಸಮಾಜದ ನಿರ್ಮಾಣ ಸಾಧ್ಯವಾಗಲಿದೆ” ಎಂದು ಖರ್ಗೆ ಹೇಳಿದ್ದಾರೆ.

ಕೊನೆಯದಾಗಿ, ”ಇವನಾರವ ಇವನಾರವ ಇವನಾರವ ನೆಂದೆನಿಸದಿರಯ್ಯಾ, ಇವ ನಮ್ಮವ, ಇವ ನಮ್ಮವ, ಇವ ನಮ್ಮವ ನಂದೆನಿಸಯ್ಯಾ ಕೂಡಲ ಸಂಗಮದೇವ ನಿಮ್ಮ ಮಹಾ ಮನೆಯ ಮಗನೆಂದೆನಿಸಯ್ಯಾ” ಎಂಬ ಬಸವಣ್ಣನವರ ವಚನದ ಸಾಲುಗಳೊದಿಗೆ ಟೈಟ್ ಮುಗಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಸ್ವಾಮೀಜಿಯ ಜೀವ ಬೆದರಿಕೆಗೆ ನಾನು ಹೆದರಲ್ಲ: ಉದಯ್‌ ನಿಧಿ ಸ್ಟಾಲಿನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...