Homeಕರ್ನಾಟಕಸನಾತನ ಧರ್ಮದ ವಿವಾದ: ಬಸವಣ್ಣನ ವಚನದ ಮೂಲಕ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಸನಾತನ ಧರ್ಮದ ವಿವಾದ: ಬಸವಣ್ಣನ ವಚನದ ಮೂಲಕ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

- Advertisement -
- Advertisement -

‘ಸನಾತನ ಧರ್ಮ ಕೊನೆಗಾಣಿಸುವ’ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಪ್ರಿಯಾಂಕ್ ಖರ್ಗೆ ಬೆಂಬಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಅವರು ”ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕಿದ್ದರೆ,  ಅವರ ತಲೆ ಕತ್ತರಿಸುತ್ತೀರಾ?” ಎಂದು ಕೇಳಿದ್ದಾರೆ.

ಸಂತೋಷ್ ಟ್ರೇಟ್‌ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆ, ”ದಯವಿಲ್ಲದ ಧರ್ಮವಾವುದಯ್ಯಾ ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ” ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ್ದಾರೆ.

”ಬಿ.ಎಲ್.ಸಂತೋಷ್ ಅವರೇ, ಸೋಂಕಿಗೆ ಚಿಕಿತ್ಸೆ ಬೇಕು ಎಂಬ ನಿಮ್ಮ ವಾದವನ್ನು ನಾನು ಒಪ್ಪುತ್ತೇನೆ, ಆದರೆ ಸಾವಿರಾರು ವರ್ಷಗಳಿಂದ ಬಹಳಷ್ಟು ಸೋಂಕುಗಳು ಈ ಸಮಾಜವನ್ನು ಕಾಡುತ್ತಿವೆ. ಆ ಸೋಂಕುಗಳು ಈಗಲೂ ಮುಂದುವರಿದಿದ್ದು, ಮನುಷ್ಯರ ನಡುವೆ ತಾರತಮ್ಯ ಸೃಷ್ಟಿಸಿವೆ. ಮನುಷ್ಯರು ಎಂಬ ಘನತೆಯನ್ನು ನೀಡಲು ಕೆಲವರಿಗೆ ನಿರಾಕರಿಸಿವೆ” ಎಂದಿದ್ದಾರೆ.

”ನಾನು ನಿಮ್ಮನ್ನು ಬುದ್ಧವಂತನಲ್ಲ. ನೀವು ದಯವಿಟ್ಟು ನನಗೂ ಮಾರ್ಗದರ್ಶನ ಮಾಡಿ. ಇಂಥ ಸಮಾಜವನ್ನು ಸೃಷ್ಟಿಸಿದವರು ಯಾರು? ಒಬ್ಬರು ಮತ್ತೊಬ್ಬರಿಗಿಂತ ನೀತಿವಂತರು ಎಂದು ಮಾಡಿದವರು ಯಾರು? ಜಾತಿ ಆಧಾರದಲ್ಲಿ ಸಮಾಜವನ್ನು ವಿಭಜಿಸಿದವರು ಯಾರು? ಒಂದಷ್ಟು ಜನ ಮತ್ತಷ್ಟು ಜನರಿಗೆ ಏಕೆ ಆಸ್ಪೃಶ್ಯರು? ಈಗಲೂ ಕೆಲ ದೇವಾಲಯಗಳಿಗೆ ಕೆಲವರಿಗೆ ಏಕೆ ಪ್ರವೇಶವಿಲ್ಲ? ಮಹಿಳೆಯರು ಕೀಳುಭಾವದಲ್ಲೇ ಬದುಕುವಂತೆ ಪದ್ಧತಿಯನ್ನು ಜಾರಿಗೆ ತಂದವರು ಯಾರು? ಅಸಮಾನತೆ ಹಾಗೂ ದಬ್ಬಾಳಿಕೆಯ ಇರುವ ಜಾತಿ ಆಧಾರಿತ ಸಾಮಾಜಿಕ ರಚನೆಯನ್ನು ತಂದವರು ಯಾರು” ಎಂದು ಸಾಲು ಸಾಲು ಪ್ರಶ್ನೆಗಳನ್ನು ಖರ್ಗೆ ಕೇಳಿದ್ದಾರೆ.

”ಯಾರೂ ಯಾರ ತಲೆಯನ್ನೇ ಕಡಿಯಬೇಕು ಎಂಬ ಉದ್ದೇಶ ಹೊಂದಿಲ್ಲ. ಆದರೆ ಸಮಾನ ಹಕ್ಕು ಮತ್ತು ಘನತೆಯ ಬದುಕನ್ನು ಪ್ರತಿಯೊಬ್ಬ ಮನುಷ್ಕರಿಗೂ ನೀಡುವ ಮೂಲಕ ಸೋಂಕನ್ನು ಗುಣಪಡಿಸಬೇಕಿದೆ. ಇವೆಲ್ಲದಕ್ಕೂ ಔಷದ ನಮ್ಮ ಸಂವಿಧಾನದಲ್ಲಿದೆ. ಆದರೆ ನೀವುಗಳು ಅದನ್ನು ವಿರೋಧಿಸುತ್ತಿದ್ದೀರಿ. ನೀವೂ ಕರ್ನಾಟಕದವರೇ, ಬಸವಣ್ಣನವರು ಸಾರಿದ ಮಾನವತೆಯ ಸಾರವನ್ನು ಎಲ್ಲೆಡೆ ಹರಡಿ. ಅದರಿಂದ ಸಮ ಸಮಾಜದ ನಿರ್ಮಾಣ ಸಾಧ್ಯವಾಗಲಿದೆ” ಎಂದು ಖರ್ಗೆ ಹೇಳಿದ್ದಾರೆ.

ಕೊನೆಯದಾಗಿ, ”ಇವನಾರವ ಇವನಾರವ ಇವನಾರವ ನೆಂದೆನಿಸದಿರಯ್ಯಾ, ಇವ ನಮ್ಮವ, ಇವ ನಮ್ಮವ, ಇವ ನಮ್ಮವ ನಂದೆನಿಸಯ್ಯಾ ಕೂಡಲ ಸಂಗಮದೇವ ನಿಮ್ಮ ಮಹಾ ಮನೆಯ ಮಗನೆಂದೆನಿಸಯ್ಯಾ” ಎಂಬ ಬಸವಣ್ಣನವರ ವಚನದ ಸಾಲುಗಳೊದಿಗೆ ಟೈಟ್ ಮುಗಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಸ್ವಾಮೀಜಿಯ ಜೀವ ಬೆದರಿಕೆಗೆ ನಾನು ಹೆದರಲ್ಲ: ಉದಯ್‌ ನಿಧಿ ಸ್ಟಾಲಿನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...