Homeಮುಖಪುಟಸನಾತನ ಧರ್ಮ ಹೇಳಿಕೆ ವಿವಾದ: ಪವನ್‌ ಕಲ್ಯಾಣ್ ಟೀಕೆಗೆ ತಣ್ಣಗೆ ಪ್ರತಿಕ್ರಿಯಿಸಿದ ಉದಯನಿಧಿ ಸ್ಟಾಲಿನ್

ಸನಾತನ ಧರ್ಮ ಹೇಳಿಕೆ ವಿವಾದ: ಪವನ್‌ ಕಲ್ಯಾಣ್ ಟೀಕೆಗೆ ತಣ್ಣಗೆ ಪ್ರತಿಕ್ರಿಯಿಸಿದ ಉದಯನಿಧಿ ಸ್ಟಾಲಿನ್

- Advertisement -
- Advertisement -

ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಕೆಲವು ತಿಂಗಳುಗಳ ಹಿಂದೆ ನೀಡಿದ್ದ “ಸನಾತನ ಧರ್ಮದ ನಿರ್ಮೂಲನೆ” ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಕೆ. ಪವನ್ ಕಲ್ಯಾಣ್, ಭವಿಷ್ಯದಲ್ಲಿ ಅಂತಹ ಮಾತುಗಳನ್ನು ಆಡದಂತೆ ಎಚ್ಚರಿಕೆ ನೀಡಿದ್ದರು.

ಹಿಂದೂ ಧರ್ಮದಲ್ಲಿರುವ ಅಸಮಾನತೆ ಮತ್ತು ಅಸ್ಪೃಶ್ಯತೆ ಕುರಿತು ಮಾತನಾಡಿದ್ದ ಉದಯನಿಧಿ, ಸನಾತನ ಧರ್ಮವನ್ನು ಕರೋನ ವೈರಸ್, ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸಿ, ಅದನ್ನು ವಿರೋಧಿಸಲಾವಾರದು, ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

ಅಕ್ಟೋಬರ್ 3 ರಂದು (ಗುರುವಾರ) ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಜನರಿಗೆ ‘ವರಾಹಿ ಘೋಷಣೆ’ಯನ್ನು ನೀಡುವಾಗ ಮಾತನಾಡಿದ ಪವನ್ ಕಲ್ಯಾಣ್, ತಮಿಳಿನಲ್ಲಿ ಮಾತನಾಡಲು ಪ್ರಯತ್ನಿಸಿದರು.

“ರಾಜಕಾರಣಿಗಳ ಇಂತಹ ಪ್ರಚೋದನಕಾರಿ ಹೇಳಿಕೆಗಳು ಪುರಾತನ ನಂಬಿಕೆಗೆ ಹಾನಿ ಮಾಡುವಲ್ಲಿ ಎಂದಿಗೂ ಯಶಸ್ವಿಯಾಗುವುದಿಲ್ಲ. ನಿಮ್ಮಂತಹವರು ಬಂದು ಹೋಗಿದ್ದಾರೆ, ಆದರೆ ಸನಾತನ ಧರ್ಮವು ಇಲ್ಲಿ ಉಳಿಯುತ್ತದೆ” ಎಂದು ಅವರು ಉದಯನಿಧಿ ಹೆಸರು ಹೇಳದೆಯೇ ವಾಗ್ದಾಳಿ ನಡೆಸಿದ್ದರು.

ಕಾದು ನೋಡೋಣ ಎಂದ ಸ್ಟಾಲಿನ್

ಪವನ್ ಕಲ್ಯಾಣ್ ಅವರ ‘ಸನಾತನ ಧರ್ಮವನ್ನು ಅಳಿಸಲು ಸಾಧ್ಯವಿಲ್ಲ’ ಎಂಬ ಹೇಳಿಕೆಗೆ ತಣ್ಣಗೆ ಪ್ರತಿಕ್ರಿಯಿಸಿರುವ ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್, “ಕಾದು ನೋಡೋಣ” ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ವಕ್ತಾರ ಸೈಯದ್ ಹಫೀಜುಲ್ಲಾ ಸ್ಪಷ್ಟನೆ ನೀಡಿದ್ದಾರೆ. “ಡಿಎಂಕೆ ಹಿಂದೂ ಧರ್ಮ ಸೇರಿದಂತೆ ಯಾವುದೇ ಧರ್ಮವನ್ನು ಗುರಿಯಾಗಿಸಿಕೊಂಡಿಲ್ಲ. ಆದರೆ, ಜಾತಿ ಆಧಾರಿತ ದೌರ್ಜನ್ಯಗಳು, ಅಸ್ಪೃಶ್ಯತೆ ಮತ್ತು ಜಾತಿ ಶ್ರೇಣಿಗಳ ವಿರುದ್ಧ ಹೋರಾಡಲು ಬದ್ಧವಾಗಿದೆ” ಎಂದು ಅವರು ಒತ್ತಿ ಹೇಳಿದರು.

ಉದಯನಿಧಿ ಸ್ಟಾಲಿನ್ ಅವರ ಹಿಂದಿನ ಹೇಳಿಕೆಗಳ ಬಗ್ಗೆ ಕಲ್ಯಾಣ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಹಫೀಜುಲ್ಲಾ, “ನಮ್ಮ ಪಕ್ಷವು ಯಾವುದೇ ಧರ್ಮದ ಬಗ್ಗೆ ಮಾತನಾಡುವುದಿಲ್ಲ. ಆದರೆ, ನಾವು ಜಾತಿ ಅನ್ಯಾಯದ ವಿರುದ್ಧ ಮಾತನಾಡುವುದನ್ನು ಮುಂದುವರಿಸುತ್ತೇವೆ” ಎಂದು ಹೇಳಿದರು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯು ವ್ಯಾಪಕ ವಿವಾದವನ್ನು ಹುಟ್ಟುಹಾಕಿತ್ತು. ಸನಾತನ ಧರ್ಮವು ಮೂಲಭೂತವಾಗಿ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಮತ್ತು ಅದನ್ನು ಮಲೇರಿಯಾ ಮತ್ತು ಡೆಂಗ್ಯೂ ಮುಂತಾದ ಕಾಯಿಲೆಗಳಿಗೆ ಹೋಲಿಸಿ, ಅದನ್ನು ನಿರ್ಮೂಲನೆ ಮಾಡಬೇಕು ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ; ಮೀಸಲಾತಿ ಮೇಲಿನ 50% ಮಿತಿ ತೆಗೆದುಹಾಕಿ: ಕೇಂದ್ರ ಸರ್ಕಾರಕ್ಕೆ ಶರದ್ ಪವಾರ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...