Homeಮುಖಪುಟಸನಾತನ ಧರ್ಮ ಹೇಳಿಕೆ ವಿವಾದ: ಪವನ್‌ ಕಲ್ಯಾಣ್ ಟೀಕೆಗೆ ತಣ್ಣಗೆ ಪ್ರತಿಕ್ರಿಯಿಸಿದ ಉದಯನಿಧಿ ಸ್ಟಾಲಿನ್

ಸನಾತನ ಧರ್ಮ ಹೇಳಿಕೆ ವಿವಾದ: ಪವನ್‌ ಕಲ್ಯಾಣ್ ಟೀಕೆಗೆ ತಣ್ಣಗೆ ಪ್ರತಿಕ್ರಿಯಿಸಿದ ಉದಯನಿಧಿ ಸ್ಟಾಲಿನ್

- Advertisement -
- Advertisement -

ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಕೆಲವು ತಿಂಗಳುಗಳ ಹಿಂದೆ ನೀಡಿದ್ದ “ಸನಾತನ ಧರ್ಮದ ನಿರ್ಮೂಲನೆ” ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಕೆ. ಪವನ್ ಕಲ್ಯಾಣ್, ಭವಿಷ್ಯದಲ್ಲಿ ಅಂತಹ ಮಾತುಗಳನ್ನು ಆಡದಂತೆ ಎಚ್ಚರಿಕೆ ನೀಡಿದ್ದರು.

ಹಿಂದೂ ಧರ್ಮದಲ್ಲಿರುವ ಅಸಮಾನತೆ ಮತ್ತು ಅಸ್ಪೃಶ್ಯತೆ ಕುರಿತು ಮಾತನಾಡಿದ್ದ ಉದಯನಿಧಿ, ಸನಾತನ ಧರ್ಮವನ್ನು ಕರೋನ ವೈರಸ್, ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸಿ, ಅದನ್ನು ವಿರೋಧಿಸಲಾವಾರದು, ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

ಅಕ್ಟೋಬರ್ 3 ರಂದು (ಗುರುವಾರ) ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಜನರಿಗೆ ‘ವರಾಹಿ ಘೋಷಣೆ’ಯನ್ನು ನೀಡುವಾಗ ಮಾತನಾಡಿದ ಪವನ್ ಕಲ್ಯಾಣ್, ತಮಿಳಿನಲ್ಲಿ ಮಾತನಾಡಲು ಪ್ರಯತ್ನಿಸಿದರು.

“ರಾಜಕಾರಣಿಗಳ ಇಂತಹ ಪ್ರಚೋದನಕಾರಿ ಹೇಳಿಕೆಗಳು ಪುರಾತನ ನಂಬಿಕೆಗೆ ಹಾನಿ ಮಾಡುವಲ್ಲಿ ಎಂದಿಗೂ ಯಶಸ್ವಿಯಾಗುವುದಿಲ್ಲ. ನಿಮ್ಮಂತಹವರು ಬಂದು ಹೋಗಿದ್ದಾರೆ, ಆದರೆ ಸನಾತನ ಧರ್ಮವು ಇಲ್ಲಿ ಉಳಿಯುತ್ತದೆ” ಎಂದು ಅವರು ಉದಯನಿಧಿ ಹೆಸರು ಹೇಳದೆಯೇ ವಾಗ್ದಾಳಿ ನಡೆಸಿದ್ದರು.

ಕಾದು ನೋಡೋಣ ಎಂದ ಸ್ಟಾಲಿನ್

ಪವನ್ ಕಲ್ಯಾಣ್ ಅವರ ‘ಸನಾತನ ಧರ್ಮವನ್ನು ಅಳಿಸಲು ಸಾಧ್ಯವಿಲ್ಲ’ ಎಂಬ ಹೇಳಿಕೆಗೆ ತಣ್ಣಗೆ ಪ್ರತಿಕ್ರಿಯಿಸಿರುವ ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್, “ಕಾದು ನೋಡೋಣ” ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ವಕ್ತಾರ ಸೈಯದ್ ಹಫೀಜುಲ್ಲಾ ಸ್ಪಷ್ಟನೆ ನೀಡಿದ್ದಾರೆ. “ಡಿಎಂಕೆ ಹಿಂದೂ ಧರ್ಮ ಸೇರಿದಂತೆ ಯಾವುದೇ ಧರ್ಮವನ್ನು ಗುರಿಯಾಗಿಸಿಕೊಂಡಿಲ್ಲ. ಆದರೆ, ಜಾತಿ ಆಧಾರಿತ ದೌರ್ಜನ್ಯಗಳು, ಅಸ್ಪೃಶ್ಯತೆ ಮತ್ತು ಜಾತಿ ಶ್ರೇಣಿಗಳ ವಿರುದ್ಧ ಹೋರಾಡಲು ಬದ್ಧವಾಗಿದೆ” ಎಂದು ಅವರು ಒತ್ತಿ ಹೇಳಿದರು.

ಉದಯನಿಧಿ ಸ್ಟಾಲಿನ್ ಅವರ ಹಿಂದಿನ ಹೇಳಿಕೆಗಳ ಬಗ್ಗೆ ಕಲ್ಯಾಣ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ಹಫೀಜುಲ್ಲಾ, “ನಮ್ಮ ಪಕ್ಷವು ಯಾವುದೇ ಧರ್ಮದ ಬಗ್ಗೆ ಮಾತನಾಡುವುದಿಲ್ಲ. ಆದರೆ, ನಾವು ಜಾತಿ ಅನ್ಯಾಯದ ವಿರುದ್ಧ ಮಾತನಾಡುವುದನ್ನು ಮುಂದುವರಿಸುತ್ತೇವೆ” ಎಂದು ಹೇಳಿದರು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯು ವ್ಯಾಪಕ ವಿವಾದವನ್ನು ಹುಟ್ಟುಹಾಕಿತ್ತು. ಸನಾತನ ಧರ್ಮವು ಮೂಲಭೂತವಾಗಿ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಮತ್ತು ಅದನ್ನು ಮಲೇರಿಯಾ ಮತ್ತು ಡೆಂಗ್ಯೂ ಮುಂತಾದ ಕಾಯಿಲೆಗಳಿಗೆ ಹೋಲಿಸಿ, ಅದನ್ನು ನಿರ್ಮೂಲನೆ ಮಾಡಬೇಕು ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ; ಮೀಸಲಾತಿ ಮೇಲಿನ 50% ಮಿತಿ ತೆಗೆದುಹಾಕಿ: ಕೇಂದ್ರ ಸರ್ಕಾರಕ್ಕೆ ಶರದ್ ಪವಾರ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...