Homeಮುಖಪುಟಸನಾತನಾ ಸಂಸ್ಥೆಯ ವಿರೇಂದ್ರಸಿನ್ಹ ತಾವ್ಡೆ ಸಮಾಜಕ್ಕೆ ಅಪಾಯಕಾರಿ: ಜಾಮೀನು ನೀಡದಂತೆ ಸಿಬಿಐ ಒತ್ತಾಯ

ಸನಾತನಾ ಸಂಸ್ಥೆಯ ವಿರೇಂದ್ರಸಿನ್ಹ ತಾವ್ಡೆ ಸಮಾಜಕ್ಕೆ ಅಪಾಯಕಾರಿ: ಜಾಮೀನು ನೀಡದಂತೆ ಸಿಬಿಐ ಒತ್ತಾಯ

- Advertisement -
- Advertisement -

ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್‌ರವರ ಹತ್ಯೆಯ ಮುಖ್ಯ ರುವಾರಿಯಾದ ಸನಾತನಾ ಸಂಸ್ಥೆಯ ವಿರೇಂದ್ರಸಿನ್ಹ ತಾವ್ಡೆ ಸಮಾಜಕ್ಕೆ ಅಪಾಯಕಾರಿ ವ್ಯಕ್ತಿಯಾಗಿದ್ದು, ಆತನಿಗೆ ಜಾಮೀನು ನೀಡಬಾರದು ಎಂದು ಸಿಬಿಐ ಬಾಂಬೆ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಸೈದ್ಧಾಂತಿಕ ಭಿನ್ನಾಭಿಪ್ರಾಯದ ಕಾರಣಕ್ಕೆ ಪಿತೂರಿ ಮಾಡಿ, ಶಾರ್ಪ್ ಶೂಟರ್‌ಗಳನ್ನು ನೇಮಕ ಮಾಡಿಕೊಂಡು 2013ರಲ್ಲಿ ನರೇಂದ್ರ ದಾಭೋಲ್ಕರ್‌ರವರನ್ನು ಹತ್ಯೆ ಮಾಡಲಾಗಿತ್ತು. ಸನಾತನಾ ಸಂಸ್ಥೆಯ ನಂಬಿಕೆ ಮತ್ತು ಆಚರಣೆಗಳ ವಿರುದ್ಧವಿದ್ದವರನ್ನು ಹಿಂದೂ ವಿರೋಧಿಗಳೆಂಬ ಹಣೆಪಟ್ಟಿ ಕಟ್ಟಿ ಕೊಲೆಗೈಯುವುದು ವಿರೇಂದ್ರಸಿನ್ಹ ತಾವ್ಡೆಯ ಉದ್ದೇಶವಾಗಿತ್ತು ಎಂದು ಸಿಬಿಐ ಹೇಳಿದೆ.

ಸನಾತನಾ ಸಂಸ್ಥೆಯ ಕ್ಷಾತ್ರ ಧರ್ಮ ಸಾಧನದ ಬೋಧನೆಗಳನ್ನು ತಾವ್ಡೆ ಮತ್ತವನ ಅನುಯಾಯಿಗಳು ಅನುಸರಿಸುತ್ತಿದ್ದರು. ಸನಾತನ ಸಂಸ್ಥೆ / ಹಿಂದೂ ಜನ ಜಾಗೃತಿ ಸಮಿತಿಯು ತಮಗೆ ಇಷ್ಟವಿಲ್ಲದೆ ಅಥವಾ ಸಹಿಸದ ಯಾವುದೇ ಕೃತ್ಯವನ್ನು ಮಾಡುವವರನ್ನು ಕ್ರೂರ ರೀತಿಯಲ್ಲಿ ವ್ಯವಹರಿಸಲಾಗುವುದು ಎಂಬ ಭಾವನೆಯನ್ನು ಅಪರಾಧಿಗಳಿಗೆ ನೀಡಿತು. ಅಂತಹ ಭಾವನೆಯು ಬೆದರಿಕೆಗೆ ಸಮಾನವಾಗಿದೆ. ಜನರು ಮತ್ತು ರಾಷ್ಟ್ರದ ಭದ್ರತೆಯ ದೃಷ್ಟಿಯಿಂದ ಇದು ಸಮಾಜದ ಮೇಲೆ ಭಯೋತ್ಪಾದಕ ಪರಿಣಾಮವನ್ನು ಬೀರಿದೆ” ಎಂದು ಸಿಬಿಐ ಅಫಿಡವಿಟ್ ನಲ್ಲಿ ತಿಳಿಸಿದೆ.

ಅಂಧಶ್ರದ್ಧಾ ನಿರ್ಮೂಲನಾ ಸಮಿತಿಯ ಮೂಲಕ ಮೌಢ್ಯಾಚರಣೆಗ ವಿರುದ್ಧ ಹೋರಾಡುತ್ತಿದ್ದ ನರೇಂದ್ರ ದಾಭೋಲ್ಕರ್‌ರವರನ್ನು ಪುಣೆಯಲ್ಲಿ ಅವರು ಬೆಳಗಿನ ವಾಕಿಂಗ್ ಮಾಡುತ್ತಿದ್ದಾಗ ಆಗಸ್ಟ್ 20, 2013ರಂದು ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಅವರನ್ನು ಹತ್ಯೆಗೈದವರೆ ಗೋವಿಂದ ಪಾನ್ಸಾರೆ, ಎಂ.ಎಂ ಕಲಬುರ್ಗಿ ಮತ್ತು ಗೌರಿ ಲಂಕೇಶ್‌ರವರನ್ನು ಸಹ ಹತ್ಯೆಗೈದಿದ್ದಾರೆ ಎಂದು ನಂತರದ ತನಿಖೆಯಿಂದ ಬಹಿರಂಗವಾಗಿದೆ.

ಮೂರು ವರ್ಷಗಳ ನಂತರ, ಜೂನ್ 10, 2016 ರಂದು ಸಿಬಿಐ ತಾವ್ಡೆಯನ್ನು ಬಂಧಿಸಿತು ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿಯಲ್ಲಿ (UAPA) ಕೊಲೆ, ಪಿತೂರಿ ಮತ್ತು ಭಯೋತ್ಪಾದನೆ ಸಂಬಂಧಿತ ಅಪರಾಧಗಳಿಗೆ ಇತರ ಮೂವರ ಜೊತೆಗೆ ಆರೋಪ ಹೊರಿಸಿತು. ಐದನೇ ಆರೋಪಿ ವಕೀಲ ಸಂಜೀವ್ ಪುನಾಲೇಕರ್ ವಿರುದ್ಧ ಸಾಕ್ಷ್ಯ ನಾಶಪಡಿಸಿದ ಆರೋಪ ಹೊರಿಸಲಾಗಿತ್ತು.


ಇದನ್ನೂ ಓದಿ: ಶಾಲೆ ತೆರೆಯಲು ಹೈಕೋರ್ಟ್ ಮೌಖಿಕ ಆದೇಶ; ಹಿಜಾಬ್‌‌, ಕೇಸರಿ ವಿಚಾರಣೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...