Homeಮುಖಪುಟಪಕ್ಷದ ಪಾವಿತ್ರ್ಯ ಕಾಪಾಡಿಕೊಳ್ಳಲು, ಹರಿಯಾಣ ಬಿಜೆಪಿ ಅಧ್ಯಕ್ಷ ಬಡೋಲಿ ರಾಜೀನಾಮೆ ನೀಡಲಿ: ಸಚಿವ ಅನಿಲ್ ವಿಜ್

ಪಕ್ಷದ ಪಾವಿತ್ರ್ಯ ಕಾಪಾಡಿಕೊಳ್ಳಲು, ಹರಿಯಾಣ ಬಿಜೆಪಿ ಅಧ್ಯಕ್ಷ ಬಡೋಲಿ ರಾಜೀನಾಮೆ ನೀಡಲಿ: ಸಚಿವ ಅನಿಲ್ ವಿಜ್

- Advertisement -
- Advertisement -

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ದಾಖಲಾಗಿರುವ ಮೋಹನ್ ಲಾಲ್ ಬಡೋಲಿ ಅವರು ನಿರಪರಾಧಿ ಎಂದು ಸಾಬೀತಾಗುವವರೆಗೆ ಪಕ್ಷದ “ಪಾವಿತ್ರ್ಯತೆ”ಯನ್ನು ಕಾಪಾಡಿಕೊಳ್ಳಲು ರಾಜ್ಯ ಬಿಜೆಪಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಹರಿಯಾಣ ಸಚಿವ ಅನಿಲ್ ವಿಜ್ ಶನಿವಾರ ಆಗ್ರಹಿಸಿದ್ದಾರೆ. ಜನವರಿ 15ರಂದು ಸಚಿವ ವಿಜ್ ಅವರು, ”ಬಡೋಲಿ ವಿರುದ್ಧದ ಸಾಮೂಹಿಕ ಅತ್ಯಾಚಾರದ ಆರೋಪ ವ್ಯಕ್ತವಾಗಿದ್ದು, ಇದು ತುಂಬಾ ಗಂಭೀರವಾಗಿದೆ ಮತ್ತು ಪಕ್ಷದ ಹೈಕಮಾಂಡ್ ಇದನ್ನು ಗಮನಿಸುತ್ತದೆ” ಎಂದು ಹೇಳಿದ್ದರು. ಪಕ್ಷದ ಪಾವಿತ್ರ್ಯ ಕಾಪಾಡಿಕೊಳ್ಳಲು

ಹಿಮಾಚಲ ಪ್ರದೇಶದ ಕಸೌಲಿಯ ಹೋಟೆಲ್‌ನಲ್ಲಿ ಹರಿಯಾಣ ಬಿಜೆಪಿ ಅಧ್ಯಕ್ಷ ಬಡೋಲಿ ಮತ್ತು ಗಾಯಕ ರಾಕಿ ಮಿತ್ತಲ್ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ ನಂತರ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಅದಾಗ್ಯೂ, ಈ ಆರೋಪವನ್ನು ಬಡೋಲಿ ಅವರು ನಿರಾಕರಿಸಿದ್ದು, ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಹಿಮಾಚಲ ಪ್ರದೇಶ ಪೊಲೀಸ್ ತನಿಖೆಯಲ್ಲಿ ಅವರು ನಿರಪರಾಧಿ ಎಂದು ತನ್ನನ್ನು ತಾನು ಸಾಬೀತುಪಡಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ. ಆದರೆ ಹಿಮಾಚಲ ಪೊಲೀಸರು ಅವರನ್ನು ನಿರಪರಾಧಿ ಎಂದು ಸಾಬೀತುಪಡಿಸುವವರೆಗೆ, ಪಕ್ಷದ ಪಾವಿತ್ರ್ಯತೆ ಕಾಪಾಡಿಕೊಳ್ಳಲು ಅವರು ಈ (ಹರಿಯಾಣ ಬಿಜೆಪಿ ಮುಖ್ಯಸ್ಥ) ಹುದ್ದೆಗೆ ರಾಜೀನಾಮೆ ನೀಡಬೇಕು” ಎಂದು ಸಚಿವ ವಿಜ್ ಅಂಬಾಲದಲ್ಲಿ ವರದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ. ಬಡೋಲಿ ಕಳೆದ ವರ್ಷ ಜುಲೈನಲ್ಲಿ ಹರಿಯಾಣ ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಧಿಕಾರಕ್ಕೇರಿದ್ದರು. ಪಕ್ಷದ ಪಾವಿತ್ರ್ಯ ಕಾಪಾಡಿಕೊಳ್ಳಲು

ಅತ್ಯಾಚಾರ ಸಂತ್ರಸ್ತೆಯು, ಬಡೋಲಿ ಮತ್ತು ಮಿತ್ತಲ್ ಈ ಕೃತ್ಯದ ವಿಡಿಯೋಗಳನ್ನು ಮಾಡಿ, ಘಟನೆಯನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ದೂರಿದ್ದಾರೆ. ಡಿಸೆಂಬರ್ 13, 2024 ರಂದು ಸೋಲನ್ ಜಿಲ್ಲೆಯ ಕಸೌಲಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಬಡೋಲಿ ಮತ್ತು ಜೈ ಭಗವಾನ್ ಅಲಿಯಾಸ್ ರಾಕಿ ಎಂದು ಹೆಸರಿಸಲಾಗಿದೆ.

ಎಫ್‌ಐಆರ್ ಪ್ರಕಾರ, ಮಹಿಳೆ ತನ್ನ ಬಾಸ್ ಮತ್ತು ಸ್ನೇಹಿತನೊಂದಿಗೆ ಕಸೌಲಿಯ ಹೋಟೆಲ್‌ನಲ್ಲಿ ತಂಗಿದ್ದರು. ಅವರು ಜುಲೈ 3, 2023 ರಂದು ಈ ಇಬ್ಬರನ್ನು ಭೇಟಿಯಾದರು. ಬಡೋಲಿ ತನ್ನನ್ನು ರಾಜಕೀಯ ನಾಯಕ ಎಂದು ಪರಿಚಯಿಸಿಕೊಂಡರೆ, ರಾಕಿ ತನ್ನನ್ನು ಗಾಯಕ ಎಂದು ಪರಿಚಯಿಸಿಕೊಂಡರು. ನಂತರ, ಮಹಿಳೆ ಮತ್ತು ಆಕೆಯ ಸ್ನೇಹಿತ ಇಬ್ಬರೊಂದಿಗೆ ಕೋಣೆಗೆ ಹೋದರು, ಅವರು ಸರ್ಕಾರಿ ಕೆಲಸ ಮತ್ತು ಸಂಗೀತ ವೀಡಿಯೊದಲ್ಲಿ ಕಾಣಿಸಿಕೊಳ್ಳಲು ಅವಕಾಶವನ್ನು ಪಡೆಯಲು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಇದೇ ವೇಳೆ ಇಬ್ಬರು ಆರೋಪಿಗಳು ಮಹಿಳೆಗೆ ಮದ್ಯ ಕುಡಿಯುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಮಹಿಳೆಯು ಅದಕ್ಕೆ ನಿರಾಕರಿಸಿದಾಗ, ಅವರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ, ಬಡೋಲಿ ಮತ್ತು ರಾಕಿ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂಓದಿ:  ಇಡಿಯಿಂದ ಮುಡಾ ಸ್ಥಿರಾಸ್ತಿ ಮುಟ್ಟುಗೋಲು – ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ಇಡಿಯಿಂದ ಮುಡಾ ಸ್ಥಿರಾಸ್ತಿ ಮುಟ್ಟುಗೋಲು – ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...