Homeಕರ್ನಾಟಕನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

ನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಗುರುತಿಸಿಕೊಂಡಿರುವ ನಟ ಧನಂಜಯಗೆ ಇಂದು (ಆಗಸ್ಟ್ 23) ಹುಟ್ಟುಹಬ್ಬದ ಸಂಭ್ರಮ. ಕನ್ನಡ, ತೆಲುಗು ಚಿತ್ರಗಳಲ್ಲಿ ತನ್ನ ಛಾಪು ಮೂಡಿಸಿರುವ ನಟ, ಟಗರು ಬಳಿಕ ಡಾಲಿ ಎಂದೇ ಚಿರಪರಿಚಿತರಾಗಿದ್ದಾರೆ.

ನಾಯಕ ನಟನಾಗಿ, ಖಳನಾಯಕನಾಗಿ ಕನ್ನಡ, ತೆಲುಗು, ತಮಿಳು ಮತ್ತು ಮಲೆಯಾಳಂ ಚಿತ್ರೋದ್ಯಮದಲ್ಲಿ ಮಿಂಚುತ್ತಿರುವ ಕಲಾವಿದನಿಗೆ ಎಲ್ಲಾ ಚಿತ್ರರಂಗದ ಕಲಾವಿದರು, ಚಿತ್ರ ಕರ್ಮಿಗಳು ಸೇರಿದಂತೆ ಅಭಿಮಾನಿಗಳು ಶುಭಾಶಯದ ಮಹಾಪೂರವನ್ನೇ ಹರಿಸಿದ್ದಾರೆ. ಕೊರೊನಾ ಕಾರಣದಿಂದ ಈ ಬಾರಿ ನಟ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎನ್ನಲಾಗಿದೆ.

ಧನಂಜಯ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಸಾಲು ಸಾಲು ಚಿತ್ರಗಳ ಘೋಷಣೆಯಾಗಿದೆ. ಮೂರು ದಿನಗಳ ಹಿಂದೆಯೇ ’ರತ್ನನ್ ಪ್ರಪಂಚ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಡಾಲಿ ನಿರ್ಮಾಣದ ಮೊದಲ ಚಿತ್ರ ಹೆಡ್‌ ಬುಷ್‌’ ಸಿನಿಮಾದ ಟೀಸರ್‌ ಕೂಡ ಬಿಡುಗಡೆಯಾಗಿದೆ.

ಇದನ್ನೂ ಓದಿ: ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಹೆಡ್ ಬುಷ್ ಚಿತ್ರದ ಕಥೆಯನ್ನು ಅಗ್ನಿ ಶ್ರೀಧರ್‌ ಬರೆದಿದ್ದಾರೆ. ಚಿತ್ರದಲ್ಲಿ ಡಾನ್ ಎಂಪಿ ಜಯರಾಜ್ ಅವರ ಪಾತ್ರದಲ್ಲಿ ಧನಂಜಯ ಕಾಣಿಸಿಕೊಳ್ಳಲಿದ್ದಾರೆ.

ಬಡವ ರಾಸ್ಕಲ್, ಮಾನ್ಸೂನ್ ರಾಗ, ರತ್ನನ್ ಪ್ರಪಂಚ, ಮಲಯಾಳಂನ 21 ಅವರ್ಸ್, ಹೆಡ್ ಬುಷ್, ಬೈರಾಗಿ, ತೋತಾಪುರಿ, ಕಾಲಾಪತ್ಥರ್‌ ಸೇರಿದಂತೆ ಹಲವು ಚಿತ್ರಗಳಲ್ಲಿ ಡಾಲಿ ಧನಂಜಯ ಸಕ್ರಿಯರಾಗಿದ್ದಾರೆ. ನಟ ವಿಜಯ್ ನಟನೆಯ ಸಲಗದಲ್ಲಿ ಧನಂಜಯ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಬಿಡುಗಡೆಗೆ ಸಿದ್ಧವಾಗಿದೆ.

ಈ ಹಿಂದೆ ಕೊರೊನಾ ವಿಚಾರವಾಗಿ ಧರ್ಮವನ್ನ ಎಳೆ ತಂದು ಟ್ವೀಟ್ ಮಾಡಿದ ಚಕ್ರವರ್ತಿ ಸೂಲಿಬೆಲೆಗೆ ಡಾಲಿ ಧನಂಜಯ “ಏನಾದರು ಆಗು‌ ಮೊದಲು ಮಾನವನಾಗು” ಎಂಬ ಕುವೆಂಪು ಅವರ ಸಾಲಿನ ಮೂಲಕ ಪಾಠ ಮಾಡಿದ್ದರು.

ಕರ್ನಾಟಕದ ಮಹತ್ವದ ಕವಿ, ಚಿಂತಕ, ಲೇಖಕ ರಾಷ್ಟ್ರಕವಿ ಕುವೆಂಪುರವರ ಹೇಳಿಕೆಯನ್ನು ಬರೆಯುವ ಮೂಲಕ ಮಾನವ ಧರ್ಮಕ್ಕಿಂತ ಮಿಗಲಾದ ಧರ್ಮವಿಲ್ಲ ಎಂದು ಧನಂಜಯ ಪ್ರತಿಕ್ರಿಯಿಸಿದ್ದರು. ಇತರ ಧರ್ಮಗಳನ್ನು ತೆಗಳುವುದನ್ನು ಬಿಟ್ಟು ಮಾನವರಾಗೋಣ ಎಂದು ಸಾರಿದ್ದರು. ಈ ಮೂಲಕ ಕೋಟ್ಯಾಂತರ ಜನರ ಮನಗೆದ್ದಿದ್ದರು.


ಇದನ್ನೂ ಓದಿ: ಏನಾದರು ಆಗು‌ ಮೊದಲು ಮಾನವನಾಗು : ಸೂಲಿಬೆಲೆಗೆ ಡಾಲಿ ಧನಂಜಯ್‌ ಪಾಠ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...