Homeಕರ್ನಾಟಕನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

ನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಗುರುತಿಸಿಕೊಂಡಿರುವ ನಟ ಧನಂಜಯಗೆ ಇಂದು (ಆಗಸ್ಟ್ 23) ಹುಟ್ಟುಹಬ್ಬದ ಸಂಭ್ರಮ. ಕನ್ನಡ, ತೆಲುಗು ಚಿತ್ರಗಳಲ್ಲಿ ತನ್ನ ಛಾಪು ಮೂಡಿಸಿರುವ ನಟ, ಟಗರು ಬಳಿಕ ಡಾಲಿ ಎಂದೇ ಚಿರಪರಿಚಿತರಾಗಿದ್ದಾರೆ.

ನಾಯಕ ನಟನಾಗಿ, ಖಳನಾಯಕನಾಗಿ ಕನ್ನಡ, ತೆಲುಗು, ತಮಿಳು ಮತ್ತು ಮಲೆಯಾಳಂ ಚಿತ್ರೋದ್ಯಮದಲ್ಲಿ ಮಿಂಚುತ್ತಿರುವ ಕಲಾವಿದನಿಗೆ ಎಲ್ಲಾ ಚಿತ್ರರಂಗದ ಕಲಾವಿದರು, ಚಿತ್ರ ಕರ್ಮಿಗಳು ಸೇರಿದಂತೆ ಅಭಿಮಾನಿಗಳು ಶುಭಾಶಯದ ಮಹಾಪೂರವನ್ನೇ ಹರಿಸಿದ್ದಾರೆ. ಕೊರೊನಾ ಕಾರಣದಿಂದ ಈ ಬಾರಿ ನಟ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎನ್ನಲಾಗಿದೆ.

ಧನಂಜಯ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಸಾಲು ಸಾಲು ಚಿತ್ರಗಳ ಘೋಷಣೆಯಾಗಿದೆ. ಮೂರು ದಿನಗಳ ಹಿಂದೆಯೇ ’ರತ್ನನ್ ಪ್ರಪಂಚ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಡಾಲಿ ನಿರ್ಮಾಣದ ಮೊದಲ ಚಿತ್ರ ಹೆಡ್‌ ಬುಷ್‌’ ಸಿನಿಮಾದ ಟೀಸರ್‌ ಕೂಡ ಬಿಡುಗಡೆಯಾಗಿದೆ.

ಇದನ್ನೂ ಓದಿ: ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಹೆಡ್ ಬುಷ್ ಚಿತ್ರದ ಕಥೆಯನ್ನು ಅಗ್ನಿ ಶ್ರೀಧರ್‌ ಬರೆದಿದ್ದಾರೆ. ಚಿತ್ರದಲ್ಲಿ ಡಾನ್ ಎಂಪಿ ಜಯರಾಜ್ ಅವರ ಪಾತ್ರದಲ್ಲಿ ಧನಂಜಯ ಕಾಣಿಸಿಕೊಳ್ಳಲಿದ್ದಾರೆ.

ಬಡವ ರಾಸ್ಕಲ್, ಮಾನ್ಸೂನ್ ರಾಗ, ರತ್ನನ್ ಪ್ರಪಂಚ, ಮಲಯಾಳಂನ 21 ಅವರ್ಸ್, ಹೆಡ್ ಬುಷ್, ಬೈರಾಗಿ, ತೋತಾಪುರಿ, ಕಾಲಾಪತ್ಥರ್‌ ಸೇರಿದಂತೆ ಹಲವು ಚಿತ್ರಗಳಲ್ಲಿ ಡಾಲಿ ಧನಂಜಯ ಸಕ್ರಿಯರಾಗಿದ್ದಾರೆ. ನಟ ವಿಜಯ್ ನಟನೆಯ ಸಲಗದಲ್ಲಿ ಧನಂಜಯ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಬಿಡುಗಡೆಗೆ ಸಿದ್ಧವಾಗಿದೆ.

ಈ ಹಿಂದೆ ಕೊರೊನಾ ವಿಚಾರವಾಗಿ ಧರ್ಮವನ್ನ ಎಳೆ ತಂದು ಟ್ವೀಟ್ ಮಾಡಿದ ಚಕ್ರವರ್ತಿ ಸೂಲಿಬೆಲೆಗೆ ಡಾಲಿ ಧನಂಜಯ “ಏನಾದರು ಆಗು‌ ಮೊದಲು ಮಾನವನಾಗು” ಎಂಬ ಕುವೆಂಪು ಅವರ ಸಾಲಿನ ಮೂಲಕ ಪಾಠ ಮಾಡಿದ್ದರು.

ಕರ್ನಾಟಕದ ಮಹತ್ವದ ಕವಿ, ಚಿಂತಕ, ಲೇಖಕ ರಾಷ್ಟ್ರಕವಿ ಕುವೆಂಪುರವರ ಹೇಳಿಕೆಯನ್ನು ಬರೆಯುವ ಮೂಲಕ ಮಾನವ ಧರ್ಮಕ್ಕಿಂತ ಮಿಗಲಾದ ಧರ್ಮವಿಲ್ಲ ಎಂದು ಧನಂಜಯ ಪ್ರತಿಕ್ರಿಯಿಸಿದ್ದರು. ಇತರ ಧರ್ಮಗಳನ್ನು ತೆಗಳುವುದನ್ನು ಬಿಟ್ಟು ಮಾನವರಾಗೋಣ ಎಂದು ಸಾರಿದ್ದರು. ಈ ಮೂಲಕ ಕೋಟ್ಯಾಂತರ ಜನರ ಮನಗೆದ್ದಿದ್ದರು.


ಇದನ್ನೂ ಓದಿ: ಏನಾದರು ಆಗು‌ ಮೊದಲು ಮಾನವನಾಗು : ಸೂಲಿಬೆಲೆಗೆ ಡಾಲಿ ಧನಂಜಯ್‌ ಪಾಠ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...