Homeಕರ್ನಾಟಕನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

ನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಗುರುತಿಸಿಕೊಂಡಿರುವ ನಟ ಧನಂಜಯಗೆ ಇಂದು (ಆಗಸ್ಟ್ 23) ಹುಟ್ಟುಹಬ್ಬದ ಸಂಭ್ರಮ. ಕನ್ನಡ, ತೆಲುಗು ಚಿತ್ರಗಳಲ್ಲಿ ತನ್ನ ಛಾಪು ಮೂಡಿಸಿರುವ ನಟ, ಟಗರು ಬಳಿಕ ಡಾಲಿ ಎಂದೇ ಚಿರಪರಿಚಿತರಾಗಿದ್ದಾರೆ.

ನಾಯಕ ನಟನಾಗಿ, ಖಳನಾಯಕನಾಗಿ ಕನ್ನಡ, ತೆಲುಗು, ತಮಿಳು ಮತ್ತು ಮಲೆಯಾಳಂ ಚಿತ್ರೋದ್ಯಮದಲ್ಲಿ ಮಿಂಚುತ್ತಿರುವ ಕಲಾವಿದನಿಗೆ ಎಲ್ಲಾ ಚಿತ್ರರಂಗದ ಕಲಾವಿದರು, ಚಿತ್ರ ಕರ್ಮಿಗಳು ಸೇರಿದಂತೆ ಅಭಿಮಾನಿಗಳು ಶುಭಾಶಯದ ಮಹಾಪೂರವನ್ನೇ ಹರಿಸಿದ್ದಾರೆ. ಕೊರೊನಾ ಕಾರಣದಿಂದ ಈ ಬಾರಿ ನಟ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎನ್ನಲಾಗಿದೆ.

ಧನಂಜಯ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಸಾಲು ಸಾಲು ಚಿತ್ರಗಳ ಘೋಷಣೆಯಾಗಿದೆ. ಮೂರು ದಿನಗಳ ಹಿಂದೆಯೇ ’ರತ್ನನ್ ಪ್ರಪಂಚ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಡಾಲಿ ನಿರ್ಮಾಣದ ಮೊದಲ ಚಿತ್ರ ಹೆಡ್‌ ಬುಷ್‌’ ಸಿನಿಮಾದ ಟೀಸರ್‌ ಕೂಡ ಬಿಡುಗಡೆಯಾಗಿದೆ.

ಇದನ್ನೂ ಓದಿ: ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಹೆಡ್ ಬುಷ್ ಚಿತ್ರದ ಕಥೆಯನ್ನು ಅಗ್ನಿ ಶ್ರೀಧರ್‌ ಬರೆದಿದ್ದಾರೆ. ಚಿತ್ರದಲ್ಲಿ ಡಾನ್ ಎಂಪಿ ಜಯರಾಜ್ ಅವರ ಪಾತ್ರದಲ್ಲಿ ಧನಂಜಯ ಕಾಣಿಸಿಕೊಳ್ಳಲಿದ್ದಾರೆ.

ಬಡವ ರಾಸ್ಕಲ್, ಮಾನ್ಸೂನ್ ರಾಗ, ರತ್ನನ್ ಪ್ರಪಂಚ, ಮಲಯಾಳಂನ 21 ಅವರ್ಸ್, ಹೆಡ್ ಬುಷ್, ಬೈರಾಗಿ, ತೋತಾಪುರಿ, ಕಾಲಾಪತ್ಥರ್‌ ಸೇರಿದಂತೆ ಹಲವು ಚಿತ್ರಗಳಲ್ಲಿ ಡಾಲಿ ಧನಂಜಯ ಸಕ್ರಿಯರಾಗಿದ್ದಾರೆ. ನಟ ವಿಜಯ್ ನಟನೆಯ ಸಲಗದಲ್ಲಿ ಧನಂಜಯ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಬಿಡುಗಡೆಗೆ ಸಿದ್ಧವಾಗಿದೆ.

ಈ ಹಿಂದೆ ಕೊರೊನಾ ವಿಚಾರವಾಗಿ ಧರ್ಮವನ್ನ ಎಳೆ ತಂದು ಟ್ವೀಟ್ ಮಾಡಿದ ಚಕ್ರವರ್ತಿ ಸೂಲಿಬೆಲೆಗೆ ಡಾಲಿ ಧನಂಜಯ “ಏನಾದರು ಆಗು‌ ಮೊದಲು ಮಾನವನಾಗು” ಎಂಬ ಕುವೆಂಪು ಅವರ ಸಾಲಿನ ಮೂಲಕ ಪಾಠ ಮಾಡಿದ್ದರು.

ಕರ್ನಾಟಕದ ಮಹತ್ವದ ಕವಿ, ಚಿಂತಕ, ಲೇಖಕ ರಾಷ್ಟ್ರಕವಿ ಕುವೆಂಪುರವರ ಹೇಳಿಕೆಯನ್ನು ಬರೆಯುವ ಮೂಲಕ ಮಾನವ ಧರ್ಮಕ್ಕಿಂತ ಮಿಗಲಾದ ಧರ್ಮವಿಲ್ಲ ಎಂದು ಧನಂಜಯ ಪ್ರತಿಕ್ರಿಯಿಸಿದ್ದರು. ಇತರ ಧರ್ಮಗಳನ್ನು ತೆಗಳುವುದನ್ನು ಬಿಟ್ಟು ಮಾನವರಾಗೋಣ ಎಂದು ಸಾರಿದ್ದರು. ಈ ಮೂಲಕ ಕೋಟ್ಯಾಂತರ ಜನರ ಮನಗೆದ್ದಿದ್ದರು.


ಇದನ್ನೂ ಓದಿ: ಏನಾದರು ಆಗು‌ ಮೊದಲು ಮಾನವನಾಗು : ಸೂಲಿಬೆಲೆಗೆ ಡಾಲಿ ಧನಂಜಯ್‌ ಪಾಠ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇಂದೆತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...