Homeಕರ್ನಾಟಕನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

ನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಗುರುತಿಸಿಕೊಂಡಿರುವ ನಟ ಧನಂಜಯಗೆ ಇಂದು (ಆಗಸ್ಟ್ 23) ಹುಟ್ಟುಹಬ್ಬದ ಸಂಭ್ರಮ. ಕನ್ನಡ, ತೆಲುಗು ಚಿತ್ರಗಳಲ್ಲಿ ತನ್ನ ಛಾಪು ಮೂಡಿಸಿರುವ ನಟ, ಟಗರು ಬಳಿಕ ಡಾಲಿ ಎಂದೇ ಚಿರಪರಿಚಿತರಾಗಿದ್ದಾರೆ.

ನಾಯಕ ನಟನಾಗಿ, ಖಳನಾಯಕನಾಗಿ ಕನ್ನಡ, ತೆಲುಗು, ತಮಿಳು ಮತ್ತು ಮಲೆಯಾಳಂ ಚಿತ್ರೋದ್ಯಮದಲ್ಲಿ ಮಿಂಚುತ್ತಿರುವ ಕಲಾವಿದನಿಗೆ ಎಲ್ಲಾ ಚಿತ್ರರಂಗದ ಕಲಾವಿದರು, ಚಿತ್ರ ಕರ್ಮಿಗಳು ಸೇರಿದಂತೆ ಅಭಿಮಾನಿಗಳು ಶುಭಾಶಯದ ಮಹಾಪೂರವನ್ನೇ ಹರಿಸಿದ್ದಾರೆ. ಕೊರೊನಾ ಕಾರಣದಿಂದ ಈ ಬಾರಿ ನಟ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎನ್ನಲಾಗಿದೆ.

ಧನಂಜಯ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಸಾಲು ಸಾಲು ಚಿತ್ರಗಳ ಘೋಷಣೆಯಾಗಿದೆ. ಮೂರು ದಿನಗಳ ಹಿಂದೆಯೇ ’ರತ್ನನ್ ಪ್ರಪಂಚ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಡಾಲಿ ನಿರ್ಮಾಣದ ಮೊದಲ ಚಿತ್ರ ಹೆಡ್‌ ಬುಷ್‌’ ಸಿನಿಮಾದ ಟೀಸರ್‌ ಕೂಡ ಬಿಡುಗಡೆಯಾಗಿದೆ.

ಇದನ್ನೂ ಓದಿ: ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಹೆಡ್ ಬುಷ್ ಚಿತ್ರದ ಕಥೆಯನ್ನು ಅಗ್ನಿ ಶ್ರೀಧರ್‌ ಬರೆದಿದ್ದಾರೆ. ಚಿತ್ರದಲ್ಲಿ ಡಾನ್ ಎಂಪಿ ಜಯರಾಜ್ ಅವರ ಪಾತ್ರದಲ್ಲಿ ಧನಂಜಯ ಕಾಣಿಸಿಕೊಳ್ಳಲಿದ್ದಾರೆ.

ಬಡವ ರಾಸ್ಕಲ್, ಮಾನ್ಸೂನ್ ರಾಗ, ರತ್ನನ್ ಪ್ರಪಂಚ, ಮಲಯಾಳಂನ 21 ಅವರ್ಸ್, ಹೆಡ್ ಬುಷ್, ಬೈರಾಗಿ, ತೋತಾಪುರಿ, ಕಾಲಾಪತ್ಥರ್‌ ಸೇರಿದಂತೆ ಹಲವು ಚಿತ್ರಗಳಲ್ಲಿ ಡಾಲಿ ಧನಂಜಯ ಸಕ್ರಿಯರಾಗಿದ್ದಾರೆ. ನಟ ವಿಜಯ್ ನಟನೆಯ ಸಲಗದಲ್ಲಿ ಧನಂಜಯ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಬಿಡುಗಡೆಗೆ ಸಿದ್ಧವಾಗಿದೆ.

ಈ ಹಿಂದೆ ಕೊರೊನಾ ವಿಚಾರವಾಗಿ ಧರ್ಮವನ್ನ ಎಳೆ ತಂದು ಟ್ವೀಟ್ ಮಾಡಿದ ಚಕ್ರವರ್ತಿ ಸೂಲಿಬೆಲೆಗೆ ಡಾಲಿ ಧನಂಜಯ “ಏನಾದರು ಆಗು‌ ಮೊದಲು ಮಾನವನಾಗು” ಎಂಬ ಕುವೆಂಪು ಅವರ ಸಾಲಿನ ಮೂಲಕ ಪಾಠ ಮಾಡಿದ್ದರು.

ಕರ್ನಾಟಕದ ಮಹತ್ವದ ಕವಿ, ಚಿಂತಕ, ಲೇಖಕ ರಾಷ್ಟ್ರಕವಿ ಕುವೆಂಪುರವರ ಹೇಳಿಕೆಯನ್ನು ಬರೆಯುವ ಮೂಲಕ ಮಾನವ ಧರ್ಮಕ್ಕಿಂತ ಮಿಗಲಾದ ಧರ್ಮವಿಲ್ಲ ಎಂದು ಧನಂಜಯ ಪ್ರತಿಕ್ರಿಯಿಸಿದ್ದರು. ಇತರ ಧರ್ಮಗಳನ್ನು ತೆಗಳುವುದನ್ನು ಬಿಟ್ಟು ಮಾನವರಾಗೋಣ ಎಂದು ಸಾರಿದ್ದರು. ಈ ಮೂಲಕ ಕೋಟ್ಯಾಂತರ ಜನರ ಮನಗೆದ್ದಿದ್ದರು.


ಇದನ್ನೂ ಓದಿ: ಏನಾದರು ಆಗು‌ ಮೊದಲು ಮಾನವನಾಗು : ಸೂಲಿಬೆಲೆಗೆ ಡಾಲಿ ಧನಂಜಯ್‌ ಪಾಠ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...

ಕರ್ನಾಟಕ ಎಸ್‌ಐಆರ್: ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಬೆಂಗಳೂರು ನಗರದಲ್ಲೇ ಭಾರೀ ಬೇಡಿಕೆ: ಕಂದಾಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಡುವೆಯೇ, ಕಂದಾಯ ಇಲಾಖೆಗೆ ಸಲ್ಲಿಕೆಯಾಗುತ್ತಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಅರ್ಜಿಗಳ ಸಂಖ್ಯೆಯಲ್ಲಿ ಬೆಂಗಳೂರು ನಗರ ಜಿಲ್ಲೆಯು...

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...