Homeಕರ್ನಾಟಕನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

ನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಗುರುತಿಸಿಕೊಂಡಿರುವ ನಟ ಧನಂಜಯಗೆ ಇಂದು (ಆಗಸ್ಟ್ 23) ಹುಟ್ಟುಹಬ್ಬದ ಸಂಭ್ರಮ. ಕನ್ನಡ, ತೆಲುಗು ಚಿತ್ರಗಳಲ್ಲಿ ತನ್ನ ಛಾಪು ಮೂಡಿಸಿರುವ ನಟ, ಟಗರು ಬಳಿಕ ಡಾಲಿ ಎಂದೇ ಚಿರಪರಿಚಿತರಾಗಿದ್ದಾರೆ.

ನಾಯಕ ನಟನಾಗಿ, ಖಳನಾಯಕನಾಗಿ ಕನ್ನಡ, ತೆಲುಗು, ತಮಿಳು ಮತ್ತು ಮಲೆಯಾಳಂ ಚಿತ್ರೋದ್ಯಮದಲ್ಲಿ ಮಿಂಚುತ್ತಿರುವ ಕಲಾವಿದನಿಗೆ ಎಲ್ಲಾ ಚಿತ್ರರಂಗದ ಕಲಾವಿದರು, ಚಿತ್ರ ಕರ್ಮಿಗಳು ಸೇರಿದಂತೆ ಅಭಿಮಾನಿಗಳು ಶುಭಾಶಯದ ಮಹಾಪೂರವನ್ನೇ ಹರಿಸಿದ್ದಾರೆ. ಕೊರೊನಾ ಕಾರಣದಿಂದ ಈ ಬಾರಿ ನಟ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎನ್ನಲಾಗಿದೆ.

ಧನಂಜಯ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಸಾಲು ಸಾಲು ಚಿತ್ರಗಳ ಘೋಷಣೆಯಾಗಿದೆ. ಮೂರು ದಿನಗಳ ಹಿಂದೆಯೇ ’ರತ್ನನ್ ಪ್ರಪಂಚ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಡಾಲಿ ನಿರ್ಮಾಣದ ಮೊದಲ ಚಿತ್ರ ಹೆಡ್‌ ಬುಷ್‌’ ಸಿನಿಮಾದ ಟೀಸರ್‌ ಕೂಡ ಬಿಡುಗಡೆಯಾಗಿದೆ.

ಇದನ್ನೂ ಓದಿ: ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಹೆಡ್ ಬುಷ್ ಚಿತ್ರದ ಕಥೆಯನ್ನು ಅಗ್ನಿ ಶ್ರೀಧರ್‌ ಬರೆದಿದ್ದಾರೆ. ಚಿತ್ರದಲ್ಲಿ ಡಾನ್ ಎಂಪಿ ಜಯರಾಜ್ ಅವರ ಪಾತ್ರದಲ್ಲಿ ಧನಂಜಯ ಕಾಣಿಸಿಕೊಳ್ಳಲಿದ್ದಾರೆ.

ಬಡವ ರಾಸ್ಕಲ್, ಮಾನ್ಸೂನ್ ರಾಗ, ರತ್ನನ್ ಪ್ರಪಂಚ, ಮಲಯಾಳಂನ 21 ಅವರ್ಸ್, ಹೆಡ್ ಬುಷ್, ಬೈರಾಗಿ, ತೋತಾಪುರಿ, ಕಾಲಾಪತ್ಥರ್‌ ಸೇರಿದಂತೆ ಹಲವು ಚಿತ್ರಗಳಲ್ಲಿ ಡಾಲಿ ಧನಂಜಯ ಸಕ್ರಿಯರಾಗಿದ್ದಾರೆ. ನಟ ವಿಜಯ್ ನಟನೆಯ ಸಲಗದಲ್ಲಿ ಧನಂಜಯ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಬಿಡುಗಡೆಗೆ ಸಿದ್ಧವಾಗಿದೆ.

ಈ ಹಿಂದೆ ಕೊರೊನಾ ವಿಚಾರವಾಗಿ ಧರ್ಮವನ್ನ ಎಳೆ ತಂದು ಟ್ವೀಟ್ ಮಾಡಿದ ಚಕ್ರವರ್ತಿ ಸೂಲಿಬೆಲೆಗೆ ಡಾಲಿ ಧನಂಜಯ “ಏನಾದರು ಆಗು‌ ಮೊದಲು ಮಾನವನಾಗು” ಎಂಬ ಕುವೆಂಪು ಅವರ ಸಾಲಿನ ಮೂಲಕ ಪಾಠ ಮಾಡಿದ್ದರು.

ಕರ್ನಾಟಕದ ಮಹತ್ವದ ಕವಿ, ಚಿಂತಕ, ಲೇಖಕ ರಾಷ್ಟ್ರಕವಿ ಕುವೆಂಪುರವರ ಹೇಳಿಕೆಯನ್ನು ಬರೆಯುವ ಮೂಲಕ ಮಾನವ ಧರ್ಮಕ್ಕಿಂತ ಮಿಗಲಾದ ಧರ್ಮವಿಲ್ಲ ಎಂದು ಧನಂಜಯ ಪ್ರತಿಕ್ರಿಯಿಸಿದ್ದರು. ಇತರ ಧರ್ಮಗಳನ್ನು ತೆಗಳುವುದನ್ನು ಬಿಟ್ಟು ಮಾನವರಾಗೋಣ ಎಂದು ಸಾರಿದ್ದರು. ಈ ಮೂಲಕ ಕೋಟ್ಯಾಂತರ ಜನರ ಮನಗೆದ್ದಿದ್ದರು.


ಇದನ್ನೂ ಓದಿ: ಏನಾದರು ಆಗು‌ ಮೊದಲು ಮಾನವನಾಗು : ಸೂಲಿಬೆಲೆಗೆ ಡಾಲಿ ಧನಂಜಯ್‌ ಪಾಠ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...