Homeಕರ್ನಾಟಕನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

ನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಗುರುತಿಸಿಕೊಂಡಿರುವ ನಟ ಧನಂಜಯಗೆ ಇಂದು (ಆಗಸ್ಟ್ 23) ಹುಟ್ಟುಹಬ್ಬದ ಸಂಭ್ರಮ. ಕನ್ನಡ, ತೆಲುಗು ಚಿತ್ರಗಳಲ್ಲಿ ತನ್ನ ಛಾಪು ಮೂಡಿಸಿರುವ ನಟ, ಟಗರು ಬಳಿಕ ಡಾಲಿ ಎಂದೇ ಚಿರಪರಿಚಿತರಾಗಿದ್ದಾರೆ.

ನಾಯಕ ನಟನಾಗಿ, ಖಳನಾಯಕನಾಗಿ ಕನ್ನಡ, ತೆಲುಗು, ತಮಿಳು ಮತ್ತು ಮಲೆಯಾಳಂ ಚಿತ್ರೋದ್ಯಮದಲ್ಲಿ ಮಿಂಚುತ್ತಿರುವ ಕಲಾವಿದನಿಗೆ ಎಲ್ಲಾ ಚಿತ್ರರಂಗದ ಕಲಾವಿದರು, ಚಿತ್ರ ಕರ್ಮಿಗಳು ಸೇರಿದಂತೆ ಅಭಿಮಾನಿಗಳು ಶುಭಾಶಯದ ಮಹಾಪೂರವನ್ನೇ ಹರಿಸಿದ್ದಾರೆ. ಕೊರೊನಾ ಕಾರಣದಿಂದ ಈ ಬಾರಿ ನಟ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎನ್ನಲಾಗಿದೆ.

ಧನಂಜಯ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಸಾಲು ಸಾಲು ಚಿತ್ರಗಳ ಘೋಷಣೆಯಾಗಿದೆ. ಮೂರು ದಿನಗಳ ಹಿಂದೆಯೇ ’ರತ್ನನ್ ಪ್ರಪಂಚ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಡಾಲಿ ನಿರ್ಮಾಣದ ಮೊದಲ ಚಿತ್ರ ಹೆಡ್‌ ಬುಷ್‌’ ಸಿನಿಮಾದ ಟೀಸರ್‌ ಕೂಡ ಬಿಡುಗಡೆಯಾಗಿದೆ.

ಇದನ್ನೂ ಓದಿ: ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಹೆಡ್ ಬುಷ್ ಚಿತ್ರದ ಕಥೆಯನ್ನು ಅಗ್ನಿ ಶ್ರೀಧರ್‌ ಬರೆದಿದ್ದಾರೆ. ಚಿತ್ರದಲ್ಲಿ ಡಾನ್ ಎಂಪಿ ಜಯರಾಜ್ ಅವರ ಪಾತ್ರದಲ್ಲಿ ಧನಂಜಯ ಕಾಣಿಸಿಕೊಳ್ಳಲಿದ್ದಾರೆ.

ಬಡವ ರಾಸ್ಕಲ್, ಮಾನ್ಸೂನ್ ರಾಗ, ರತ್ನನ್ ಪ್ರಪಂಚ, ಮಲಯಾಳಂನ 21 ಅವರ್ಸ್, ಹೆಡ್ ಬುಷ್, ಬೈರಾಗಿ, ತೋತಾಪುರಿ, ಕಾಲಾಪತ್ಥರ್‌ ಸೇರಿದಂತೆ ಹಲವು ಚಿತ್ರಗಳಲ್ಲಿ ಡಾಲಿ ಧನಂಜಯ ಸಕ್ರಿಯರಾಗಿದ್ದಾರೆ. ನಟ ವಿಜಯ್ ನಟನೆಯ ಸಲಗದಲ್ಲಿ ಧನಂಜಯ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಬಿಡುಗಡೆಗೆ ಸಿದ್ಧವಾಗಿದೆ.

ಈ ಹಿಂದೆ ಕೊರೊನಾ ವಿಚಾರವಾಗಿ ಧರ್ಮವನ್ನ ಎಳೆ ತಂದು ಟ್ವೀಟ್ ಮಾಡಿದ ಚಕ್ರವರ್ತಿ ಸೂಲಿಬೆಲೆಗೆ ಡಾಲಿ ಧನಂಜಯ “ಏನಾದರು ಆಗು‌ ಮೊದಲು ಮಾನವನಾಗು” ಎಂಬ ಕುವೆಂಪು ಅವರ ಸಾಲಿನ ಮೂಲಕ ಪಾಠ ಮಾಡಿದ್ದರು.

ಕರ್ನಾಟಕದ ಮಹತ್ವದ ಕವಿ, ಚಿಂತಕ, ಲೇಖಕ ರಾಷ್ಟ್ರಕವಿ ಕುವೆಂಪುರವರ ಹೇಳಿಕೆಯನ್ನು ಬರೆಯುವ ಮೂಲಕ ಮಾನವ ಧರ್ಮಕ್ಕಿಂತ ಮಿಗಲಾದ ಧರ್ಮವಿಲ್ಲ ಎಂದು ಧನಂಜಯ ಪ್ರತಿಕ್ರಿಯಿಸಿದ್ದರು. ಇತರ ಧರ್ಮಗಳನ್ನು ತೆಗಳುವುದನ್ನು ಬಿಟ್ಟು ಮಾನವರಾಗೋಣ ಎಂದು ಸಾರಿದ್ದರು. ಈ ಮೂಲಕ ಕೋಟ್ಯಾಂತರ ಜನರ ಮನಗೆದ್ದಿದ್ದರು.


ಇದನ್ನೂ ಓದಿ: ಏನಾದರು ಆಗು‌ ಮೊದಲು ಮಾನವನಾಗು : ಸೂಲಿಬೆಲೆಗೆ ಡಾಲಿ ಧನಂಜಯ್‌ ಪಾಠ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...