Homeಮುಖಪುಟನಟ ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಖಡಕ್ ಎಚ್ಚರಿಕೆ ನೀಡಿದ ಸ್ಯಾಂಡಲ್‌ವುಡ್

ನಟ ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಖಡಕ್ ಎಚ್ಚರಿಕೆ ನೀಡಿದ ಸ್ಯಾಂಡಲ್‌ವುಡ್

ಕಲೆಗೆ, ಕಲಾವಿದರಿಗೆ ಗೌರವಿಸೋದು ನಮ್ಮ ಕರ್ತವ್ಯ “ಮೊದಲು ಮಾನವನಾಗು”- ಪುನೀತ್ ರಾಜ್‌ಕುಮಾರ್‌

- Advertisement -
- Advertisement -

ಕನ್ನಡ ಚಿತ್ರರಂಗದ ಹಿರಿಯ ನಟ, ದಿವಂಗತ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಬಗ್ಗೆ ತೆಲುಗು ಚಿತ್ರರಂಗದ ಖಳನಟ ವಿಜಯ ರಂಗರಾಜು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ರಂಗರಾಜು ಹೇಳಿಕೆಗೆ ಇಡೀ ಕನ್ನಡ ಚಿತ್ರರಂಗ, ವಿಷ್ಣುವರ್ಧನ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ್ದ ತೆಲುಗು ಖಳನಟ ವಿಜಯ ರಂಗರಾಜು, ನಟ ವಿಷ್ಣುವರ್ಧನ್ ಅವರಿಗೆ ಹೆಣ್ಣಿನ ವೀಕ್‌ನೆಸ್ ಇತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸ್ಯಾಂಡಲ್‌ವುಡ್ ನಾಯಕ ನಟರಾದ ಜಗ್ಗೇಶ್, ಸುದೀಪ್, ಪುನೀತ್ ರಾಜಕುಮಾರ್‌, ಚೇತನ್, ಗಣೇಶ್,   ಅನಿರುದ್ಧ್, ನಿರ್ದೇಶಕರಾದ ರಿಷಬ್ ಶೆಟ್ಟಿ, ಪವನ್ ಒಡೆಯರ್‌ ಸೇರಿದಂತೆ ಅನೇಕ ಮಂದಿ ತೆಲುಗು ಖಳನಟ ರಂಗರಾಜು ವಿರುದ್ಧ ಕಿಡಿಕಾರಿದ್ದಾರೆ. ವಿಷ್ಣುವರ್ಧನ್ ಅವರ ಬಗ್ಗೆ ಮಾತನಾಡುವ ಮುನ್ನ ಎಚ್ಚರಿಕೆ ಇರಲಿ. ಕಲೆಗೆ, ಕಲಾವಿದರಿಗೆ ಗೌರವ ನೀಡುವುದನ್ನು ಕಲಿಯಿರಿ ಎಂದು ಕಿಡಿಕಾರಿದ್ದಾರೆ.

ಈಗಾಗಲೇ ದಿವಂಗತ ನಟ ವಿಷ್ಣುವರ್ಧನ್ ಅವರ ಅಭಿಮಾನಿಗಳು ಚಲನಚಿತ್ರ ವಾಣಿಜ್ಯಮಂಡಳಿಗೆ ದೂರು ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಶೇರ್‌ ಮಾಡಿಕೊಂಡಿರುವ ನಟರು, ಅಭಿಮಾನಿಗಳು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ ಎಫೆಕ್ಟ್: ಆಹಾರಕ್ಕಾಗಿ ಸಾಲ ಮಾಡಿದ 11 ರಾಜ್ಯಗಳ 45% ಜನ!

ಹಿರಿಯ ನಟ ನವರಸ ನಾಯಕ ಜಗ್ಗೇಶ್ ತಮ್ಮ ಟ್ವಿಟರ್‌ ಖಾತೆಯಲ್ಲಿ ರಂಗರೆಡ್ಡಿ ಅವರಿಗೆ ಕ್ಷಮೆಯಿಲ್ಲ, ನತದೃಷ್ಟ ಶಿಕಾಮಣಿ, ಇವರ ಮಾತಿನಿಂದ ದುಃಖವಾಯಿತು ಎಂದಿದ್ದಾರೆ.

“ಕಾಲವಾದ ಸಾಧಕರ ಬಗ್ಗೆ ಕುಚೇಷ್ಟೆ ಮಾತಾಡುವ ಗುಣದವ ಎಲ್ಲಿಯು ಸಲ್ಲದವ. ಅದರಲ್ಲು ಇವ ಕಲಾವಿದನಂತೆ ಈ ದರಿದ್ರ ಮುಖ ಯಾವ ಚಿತ್ರದಲ್ಲು ನೋಡಿದ ನೆನಪಿಲ್ಲಾ. ಕನ್ನಡದ ಹೃದಯಗಳೆ ಇವನ ಅನಿಷ್ಟ ಸೊಲ್ಲು ಅಡುಗುವಂತೆ ಕನ್ನಡಿಗರ ದೂಷಣೆಗೆ ಹಿಂಜರಿಯುವಂತೆ ಉತ್ತರಿಸಿ. ಇವನ ಉದ್ದಟತನ ಮಾತಿಗೆ ಕ್ಷಮೆಯಿಲ್ಲಾ. ಸತ್ತವರು ದೇವರ ಸಮ. ದುಃಖವಾಯಿತು” ಎಂದಿದ್ದಾರೆ.

ಇನ್ನು ನಟ ಪುನೀತ್ ರಾಜ್‌ಕುಮಾರ್‌ ಟ್ವೀಟ್ ಮಾಡಿ, “ನಮ್ಮ ನಾಡಿನ ಮೇರು ನಟರಲ್ಲಿ ಒಬ್ಬರಾದ ವಿಷ್ಣು ಸರ್ ಬಗ್ಗೆ ಅವಹೇಳನ ವಾಗಿ ಮಾತನಾಡಿರುವ ಆ ಕಲಾವಿದ ಕ್ಷಮೆ ಕೇಳಿ ತನ್ನ ಮಾತುಗಳನ್ನ ಹಿಂಪಡಿಬೇಕು. ಭಾರತೀಯ ಚಿತ್ರರಂಗ ನಮ್ಮ ಮನೆ ಎಲ್ಲ ಕಲಾವಿದರು ಒಂದು ಕುಟುಂಬ. ಕಲೆಗೆ, ಕಲಾವಿದರಿಗೆ ಗೌರವಿಸೋದು ನಮ್ಮ ಕರ್ತವ್ಯ. ಮೊದಲು ಮಾನವನಾಗು” ಎಂದು ಕಿವಿ ಹಿಂಡಿದ್ದಾರೆ.

“ಒಬ್ಬ ಕಲಾವಿದನಾಗಬೇಕಾದರೆ ಅವನಿಗಿರಬೇಕಾದ ಮೊದಲ ಅರ್ಹತೆ ತನ್ನ ಸಹದ್ಯೋಗಿ ಕಲಾವಿದರ ಬಗ್ಗೆ ಗೌರವ ಹಾಗು ಪ್ರೀತಿಯನ್ನು ತೋರುವುದು. ಯಾವುದೇ ಭಾಷೆಯ ನಟರಾದರು ಗೌರವ ಮೊದಲು” ಎಂದಿದ್ದಾರೆ.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

ಡಾ. ವಿಷ್ಣುವರ್ಧನ್​ ಅವರ ಅಪ್ಪಟ ಅಭಿಮಾನಿಯಾದ, ನಟ ಸುದೀಪ್​ ಕೂಡ ತಮ್ಮ ಆಕ್ರೋಶ ಹೊರಹಾಕಿದ್ದಾರೆ. “ಒಬ್ಬ ವ್ಯಕ್ತಿ ಬದುಕಿರುವಾಗ ಮಾತಾಡಿದರೆ ಗಂಡಸ್ತನ ಇರುತ್ತದೆ ಎನ್ನುವ ನಂಬಿಕೆ ನನ್ನದು ನೀವು ಅವರಿಗೆ ವಾರ್ನ್ ಮಾಡಿದೆ ಎಂದಿದ್ದೀರಿ. ಆ ಮಟ್ಟಕ್ಕೆ ಹೋಗಬೇಡಿ ಎಂದಿದ್ದಾರೆ. ’ಕೆಲವು ಜನರ ಈ ಥರದ ಮಾತುಗಳಿಂದ ಇಂಡಸ್ಟ್ರಿಗಳ ಮಧ್ಯೆ ಮತ್ತೆ ಬಿರುಕಾಗುತ್ತದೆ. ನಿಮ್ಮ ಮಾತುಗಳನ್ನು ತೆಲುಗು ಇಂಡಸ್ಟ್ರಿಯವರು ಕೂಡ ಒಪ್ಪಲ್ಲ. ನೀವು ಆಡಿರುವ ಮಾತುಗಳನ್ನು ವಾಪಸ್ಸು ಪಡೆಯಿರಿ” ಎಂದು ವಾರ್ನಿಂಗ್ ನೀಡಿದ್ದಾರೆ.

ನಟ, ಸಾಮಾಜಿಕ ಹೋರಾಟಗಾರ ಚೇತನ್ ಕೂಡ, “ವಿಷ್ಣುವರ್ಧನ್ ವಿರುದ್ಧ ವಿಜಯ್ ರಂಗರಾಜ್ ಮಾತನಾಡಿದ ಹೇಳಿಕೆಯನ್ನು ನಾನು ನೋಡಿದೆ. ರಂಗರಾಜ್ ಅವರ ಮಾತುಗಳು ಅಸಹ್ಯ ಮತ್ತು ಸೂಕ್ತವಲ್ಲ. ಹೌದು, ಜನರು ಒಟ್ಟಿಗೆ ಕೆಲಸ ಮಾಡುವಾಗ ಪರಸ್ಪರ ಘರ್ಷಣೆಗಳು ಸಂಭವಿಸಬಹುದು. ಮತ್ತು ವೈಯಕ್ತಿಕ ಸ್ಮರಣೆಗೆ ಅನುಗುಣವಾಗಿ ಸತ್ಯವು ಭಿನ್ನವಾಗಿರುತ್ತದೆ. ಆದರೆ ನಾಲಿಗೆಯ ಸಭ್ಯತೆ ಅತ್ಯಗತ್ಯ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

ವಿಷ್ಣುವರ್ಧನ್ ‘ಕಲೆ ಮತ್ತು ಕಲಾವಿದನಿಗೆ ಗಡಿ ರೇಖೆಗಳಿಲ್ಲ. ವಿಷ್ಣು ದಾದಾರಂತಹ ಮೇರು ನಟರ ಬಗ್ಗೆ ಕೀಳು ಅಭಿರುಚಿಯಿಂದ ಮಾತನಾಡಿರುವುದನ್ನ ನಾನು ಖಂಡಿಸುತ್ತೇನೆ. ಯಾವುದೇ ಚಿತ್ರರಂಗಕ್ಕೆ ಸಂಬಂಧ ಪಟ್ಟವನಾಗಿದ್ದರೂ, ದುರಹಂಕಾರವನ್ನು ಪಕ್ಕಕ್ಕೆ ಇಟ್ಟು, ತಕ್ಷಣವೇ ಪತ್ರಿಕಾಗೋಷ್ಠಿಯನ್ನ ನಡೆಸಿ ವಿಷ್ಣು ದಾದಾರ ಅಸಂಖ್ಯ ಅಭಿಮಾನಿಗಳಲ್ಲಿ ಈ ಕೂಡಲೇ ಕ್ಷಮೆ ಯಾಚಿಸಬೇಕೆಂದು, ನಾನೂ ಒಬ್ಬ ಅಭಿಮಾನಿಯಾಗಿ ಆಗ್ರಹಿಸುತ್ತೇನೆ’ ಎಂದು ಗೋಲ್ಡನ್​ ಸ್ಟಾರ್​ ಗಣೇಶ್​ ಆಗ್ರಹಿಸಿದ್ದಾರೆ.

ಇದನ್ನೂ ಓದಿ: BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

“ತಮ್ಮ ವ್ಯಕ್ತಿತ್ವದಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ ವಿಷ್ಣು ಸರ್ ನಡತೆ ಬಗ್ಗೆ ನಟನೊಬ್ಬ ತುಚ್ಛವಾಗಿ ಮಾತಾನಾಡಿದ್ದು ಖಂಡನೀಯ. ಆತ ಕೂಡಲೇ ತಪ್ಪೊಪ್ಪಿಕೊಂಡು ಕಲೆ, ಕಲಾವಿದರನ್ನು ಗೌರವಿಸುವುದು ಕಲಿಯಬೇಕು” ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಆಗ್ರಹಿಸಿದ್ದಾರೆ.

ಇನ್ನು ನಿರ್ದೇಶಕ ಪವನ್ ಒಡೆಯರ್‌ ಕೂಡ ಪುನೀತ್ ರಾಜ್‌ಕುಮಾರ್‌ ಮಾದರಿಯಲ್ಲಿ ಮೊದಲು ಮಾನವನಾಗು ಎಂದಿದ್ದಾರೆ.  “ನಮ್ಮ ನಾಡಿನ ಮೇರು ನಟರಲ್ಲಿ ಒಬ್ಬರಾದ ವಿಷ್ಣು ಸರ್ ಬಗ್ಗೆ ಅವಹೇಳನ ವಾಗಿ ಮಾತನಾಡಿರುವ ಆ ಕಲಾವಿದ ಕ್ಷಮೆ ಕೇಳಿ ತನ್ನ ಮಾತುಗಳನ್ನ ಹಿಂಪಡಿಬೇಕು ಭಾರತೀಯ ಚಿತ್ರರಂಗ ನಮ್ಮ ಮನೆ ಎಲ್ಲ ಕಲಾವಿದರು ಒಂದು ಕುಟುಂಬ ಕಲೆಗೆ ಕಲಾವಿದರಿಗೆ ಗೌರವಿಸೋದು ನಮ್ಮ ಕರ್ತವ್ಯ “ಮೊದಲು ಮಾನವನಾಗು” ಎಂದು ಟ್ವೀಟ್ ಮಾಡಿದ್ದಾರೆ.

ಚಿತ್ರರಂಗವಲ್ಲದೇ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳು ಖಳನಟನ ವಿರುದ್ಧ ದೂರು ದಾಖಲಿಸಿದ್ದು, ಅಲ್ಲದೇ ತಮ್ಮ ಖಾತೆಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲರೂ ತಮ್ಮ ಪೋಸ್ಟ್‌ಗಳಲ್ಲಿ #RespectArtAndArtist ಎನ್ನುವ ಹ್ಯಾಶ್‌ಟ್ಯಾಗ್ ಬಳಕೆ ಮಾಡಿದ್ದು, ಕಲಾವಿದರು ಮತ್ತು ಕಲೆಗೆ ಬೆಲೆ ನೀಡಿ ಎಂದಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿ ಹೆಬ್ಬಾಗಿಲು ಪೂರ್ತಿ ತೆರೆದಿಲ್ಲ, ಕಳ್ಳಕಿಂಡಿಗಳು ಇನ್ನೂ ಮುಚ್ಚಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...