Homeಮುಖಪುಟನಟ ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಖಡಕ್ ಎಚ್ಚರಿಕೆ ನೀಡಿದ ಸ್ಯಾಂಡಲ್‌ವುಡ್

ನಟ ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಖಡಕ್ ಎಚ್ಚರಿಕೆ ನೀಡಿದ ಸ್ಯಾಂಡಲ್‌ವುಡ್

ಕಲೆಗೆ, ಕಲಾವಿದರಿಗೆ ಗೌರವಿಸೋದು ನಮ್ಮ ಕರ್ತವ್ಯ “ಮೊದಲು ಮಾನವನಾಗು”- ಪುನೀತ್ ರಾಜ್‌ಕುಮಾರ್‌

- Advertisement -
- Advertisement -

ಕನ್ನಡ ಚಿತ್ರರಂಗದ ಹಿರಿಯ ನಟ, ದಿವಂಗತ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಬಗ್ಗೆ ತೆಲುಗು ಚಿತ್ರರಂಗದ ಖಳನಟ ವಿಜಯ ರಂಗರಾಜು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ರಂಗರಾಜು ಹೇಳಿಕೆಗೆ ಇಡೀ ಕನ್ನಡ ಚಿತ್ರರಂಗ, ವಿಷ್ಣುವರ್ಧನ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ್ದ ತೆಲುಗು ಖಳನಟ ವಿಜಯ ರಂಗರಾಜು, ನಟ ವಿಷ್ಣುವರ್ಧನ್ ಅವರಿಗೆ ಹೆಣ್ಣಿನ ವೀಕ್‌ನೆಸ್ ಇತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸ್ಯಾಂಡಲ್‌ವುಡ್ ನಾಯಕ ನಟರಾದ ಜಗ್ಗೇಶ್, ಸುದೀಪ್, ಪುನೀತ್ ರಾಜಕುಮಾರ್‌, ಚೇತನ್, ಗಣೇಶ್,   ಅನಿರುದ್ಧ್, ನಿರ್ದೇಶಕರಾದ ರಿಷಬ್ ಶೆಟ್ಟಿ, ಪವನ್ ಒಡೆಯರ್‌ ಸೇರಿದಂತೆ ಅನೇಕ ಮಂದಿ ತೆಲುಗು ಖಳನಟ ರಂಗರಾಜು ವಿರುದ್ಧ ಕಿಡಿಕಾರಿದ್ದಾರೆ. ವಿಷ್ಣುವರ್ಧನ್ ಅವರ ಬಗ್ಗೆ ಮಾತನಾಡುವ ಮುನ್ನ ಎಚ್ಚರಿಕೆ ಇರಲಿ. ಕಲೆಗೆ, ಕಲಾವಿದರಿಗೆ ಗೌರವ ನೀಡುವುದನ್ನು ಕಲಿಯಿರಿ ಎಂದು ಕಿಡಿಕಾರಿದ್ದಾರೆ.

ಈಗಾಗಲೇ ದಿವಂಗತ ನಟ ವಿಷ್ಣುವರ್ಧನ್ ಅವರ ಅಭಿಮಾನಿಗಳು ಚಲನಚಿತ್ರ ವಾಣಿಜ್ಯಮಂಡಳಿಗೆ ದೂರು ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಶೇರ್‌ ಮಾಡಿಕೊಂಡಿರುವ ನಟರು, ಅಭಿಮಾನಿಗಳು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್ ಎಫೆಕ್ಟ್: ಆಹಾರಕ್ಕಾಗಿ ಸಾಲ ಮಾಡಿದ 11 ರಾಜ್ಯಗಳ 45% ಜನ!

ಹಿರಿಯ ನಟ ನವರಸ ನಾಯಕ ಜಗ್ಗೇಶ್ ತಮ್ಮ ಟ್ವಿಟರ್‌ ಖಾತೆಯಲ್ಲಿ ರಂಗರೆಡ್ಡಿ ಅವರಿಗೆ ಕ್ಷಮೆಯಿಲ್ಲ, ನತದೃಷ್ಟ ಶಿಕಾಮಣಿ, ಇವರ ಮಾತಿನಿಂದ ದುಃಖವಾಯಿತು ಎಂದಿದ್ದಾರೆ.

“ಕಾಲವಾದ ಸಾಧಕರ ಬಗ್ಗೆ ಕುಚೇಷ್ಟೆ ಮಾತಾಡುವ ಗುಣದವ ಎಲ್ಲಿಯು ಸಲ್ಲದವ. ಅದರಲ್ಲು ಇವ ಕಲಾವಿದನಂತೆ ಈ ದರಿದ್ರ ಮುಖ ಯಾವ ಚಿತ್ರದಲ್ಲು ನೋಡಿದ ನೆನಪಿಲ್ಲಾ. ಕನ್ನಡದ ಹೃದಯಗಳೆ ಇವನ ಅನಿಷ್ಟ ಸೊಲ್ಲು ಅಡುಗುವಂತೆ ಕನ್ನಡಿಗರ ದೂಷಣೆಗೆ ಹಿಂಜರಿಯುವಂತೆ ಉತ್ತರಿಸಿ. ಇವನ ಉದ್ದಟತನ ಮಾತಿಗೆ ಕ್ಷಮೆಯಿಲ್ಲಾ. ಸತ್ತವರು ದೇವರ ಸಮ. ದುಃಖವಾಯಿತು” ಎಂದಿದ್ದಾರೆ.

ಇನ್ನು ನಟ ಪುನೀತ್ ರಾಜ್‌ಕುಮಾರ್‌ ಟ್ವೀಟ್ ಮಾಡಿ, “ನಮ್ಮ ನಾಡಿನ ಮೇರು ನಟರಲ್ಲಿ ಒಬ್ಬರಾದ ವಿಷ್ಣು ಸರ್ ಬಗ್ಗೆ ಅವಹೇಳನ ವಾಗಿ ಮಾತನಾಡಿರುವ ಆ ಕಲಾವಿದ ಕ್ಷಮೆ ಕೇಳಿ ತನ್ನ ಮಾತುಗಳನ್ನ ಹಿಂಪಡಿಬೇಕು. ಭಾರತೀಯ ಚಿತ್ರರಂಗ ನಮ್ಮ ಮನೆ ಎಲ್ಲ ಕಲಾವಿದರು ಒಂದು ಕುಟುಂಬ. ಕಲೆಗೆ, ಕಲಾವಿದರಿಗೆ ಗೌರವಿಸೋದು ನಮ್ಮ ಕರ್ತವ್ಯ. ಮೊದಲು ಮಾನವನಾಗು” ಎಂದು ಕಿವಿ ಹಿಂಡಿದ್ದಾರೆ.

“ಒಬ್ಬ ಕಲಾವಿದನಾಗಬೇಕಾದರೆ ಅವನಿಗಿರಬೇಕಾದ ಮೊದಲ ಅರ್ಹತೆ ತನ್ನ ಸಹದ್ಯೋಗಿ ಕಲಾವಿದರ ಬಗ್ಗೆ ಗೌರವ ಹಾಗು ಪ್ರೀತಿಯನ್ನು ತೋರುವುದು. ಯಾವುದೇ ಭಾಷೆಯ ನಟರಾದರು ಗೌರವ ಮೊದಲು” ಎಂದಿದ್ದಾರೆ.

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

ಡಾ. ವಿಷ್ಣುವರ್ಧನ್​ ಅವರ ಅಪ್ಪಟ ಅಭಿಮಾನಿಯಾದ, ನಟ ಸುದೀಪ್​ ಕೂಡ ತಮ್ಮ ಆಕ್ರೋಶ ಹೊರಹಾಕಿದ್ದಾರೆ. “ಒಬ್ಬ ವ್ಯಕ್ತಿ ಬದುಕಿರುವಾಗ ಮಾತಾಡಿದರೆ ಗಂಡಸ್ತನ ಇರುತ್ತದೆ ಎನ್ನುವ ನಂಬಿಕೆ ನನ್ನದು ನೀವು ಅವರಿಗೆ ವಾರ್ನ್ ಮಾಡಿದೆ ಎಂದಿದ್ದೀರಿ. ಆ ಮಟ್ಟಕ್ಕೆ ಹೋಗಬೇಡಿ ಎಂದಿದ್ದಾರೆ. ’ಕೆಲವು ಜನರ ಈ ಥರದ ಮಾತುಗಳಿಂದ ಇಂಡಸ್ಟ್ರಿಗಳ ಮಧ್ಯೆ ಮತ್ತೆ ಬಿರುಕಾಗುತ್ತದೆ. ನಿಮ್ಮ ಮಾತುಗಳನ್ನು ತೆಲುಗು ಇಂಡಸ್ಟ್ರಿಯವರು ಕೂಡ ಒಪ್ಪಲ್ಲ. ನೀವು ಆಡಿರುವ ಮಾತುಗಳನ್ನು ವಾಪಸ್ಸು ಪಡೆಯಿರಿ” ಎಂದು ವಾರ್ನಿಂಗ್ ನೀಡಿದ್ದಾರೆ.

ನಟ, ಸಾಮಾಜಿಕ ಹೋರಾಟಗಾರ ಚೇತನ್ ಕೂಡ, “ವಿಷ್ಣುವರ್ಧನ್ ವಿರುದ್ಧ ವಿಜಯ್ ರಂಗರಾಜ್ ಮಾತನಾಡಿದ ಹೇಳಿಕೆಯನ್ನು ನಾನು ನೋಡಿದೆ. ರಂಗರಾಜ್ ಅವರ ಮಾತುಗಳು ಅಸಹ್ಯ ಮತ್ತು ಸೂಕ್ತವಲ್ಲ. ಹೌದು, ಜನರು ಒಟ್ಟಿಗೆ ಕೆಲಸ ಮಾಡುವಾಗ ಪರಸ್ಪರ ಘರ್ಷಣೆಗಳು ಸಂಭವಿಸಬಹುದು. ಮತ್ತು ವೈಯಕ್ತಿಕ ಸ್ಮರಣೆಗೆ ಅನುಗುಣವಾಗಿ ಸತ್ಯವು ಭಿನ್ನವಾಗಿರುತ್ತದೆ. ಆದರೆ ನಾಲಿಗೆಯ ಸಭ್ಯತೆ ಅತ್ಯಗತ್ಯ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

ವಿಷ್ಣುವರ್ಧನ್ ‘ಕಲೆ ಮತ್ತು ಕಲಾವಿದನಿಗೆ ಗಡಿ ರೇಖೆಗಳಿಲ್ಲ. ವಿಷ್ಣು ದಾದಾರಂತಹ ಮೇರು ನಟರ ಬಗ್ಗೆ ಕೀಳು ಅಭಿರುಚಿಯಿಂದ ಮಾತನಾಡಿರುವುದನ್ನ ನಾನು ಖಂಡಿಸುತ್ತೇನೆ. ಯಾವುದೇ ಚಿತ್ರರಂಗಕ್ಕೆ ಸಂಬಂಧ ಪಟ್ಟವನಾಗಿದ್ದರೂ, ದುರಹಂಕಾರವನ್ನು ಪಕ್ಕಕ್ಕೆ ಇಟ್ಟು, ತಕ್ಷಣವೇ ಪತ್ರಿಕಾಗೋಷ್ಠಿಯನ್ನ ನಡೆಸಿ ವಿಷ್ಣು ದಾದಾರ ಅಸಂಖ್ಯ ಅಭಿಮಾನಿಗಳಲ್ಲಿ ಈ ಕೂಡಲೇ ಕ್ಷಮೆ ಯಾಚಿಸಬೇಕೆಂದು, ನಾನೂ ಒಬ್ಬ ಅಭಿಮಾನಿಯಾಗಿ ಆಗ್ರಹಿಸುತ್ತೇನೆ’ ಎಂದು ಗೋಲ್ಡನ್​ ಸ್ಟಾರ್​ ಗಣೇಶ್​ ಆಗ್ರಹಿಸಿದ್ದಾರೆ.

ಇದನ್ನೂ ಓದಿ: BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

“ತಮ್ಮ ವ್ಯಕ್ತಿತ್ವದಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ ವಿಷ್ಣು ಸರ್ ನಡತೆ ಬಗ್ಗೆ ನಟನೊಬ್ಬ ತುಚ್ಛವಾಗಿ ಮಾತಾನಾಡಿದ್ದು ಖಂಡನೀಯ. ಆತ ಕೂಡಲೇ ತಪ್ಪೊಪ್ಪಿಕೊಂಡು ಕಲೆ, ಕಲಾವಿದರನ್ನು ಗೌರವಿಸುವುದು ಕಲಿಯಬೇಕು” ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಆಗ್ರಹಿಸಿದ್ದಾರೆ.

ಇನ್ನು ನಿರ್ದೇಶಕ ಪವನ್ ಒಡೆಯರ್‌ ಕೂಡ ಪುನೀತ್ ರಾಜ್‌ಕುಮಾರ್‌ ಮಾದರಿಯಲ್ಲಿ ಮೊದಲು ಮಾನವನಾಗು ಎಂದಿದ್ದಾರೆ.  “ನಮ್ಮ ನಾಡಿನ ಮೇರು ನಟರಲ್ಲಿ ಒಬ್ಬರಾದ ವಿಷ್ಣು ಸರ್ ಬಗ್ಗೆ ಅವಹೇಳನ ವಾಗಿ ಮಾತನಾಡಿರುವ ಆ ಕಲಾವಿದ ಕ್ಷಮೆ ಕೇಳಿ ತನ್ನ ಮಾತುಗಳನ್ನ ಹಿಂಪಡಿಬೇಕು ಭಾರತೀಯ ಚಿತ್ರರಂಗ ನಮ್ಮ ಮನೆ ಎಲ್ಲ ಕಲಾವಿದರು ಒಂದು ಕುಟುಂಬ ಕಲೆಗೆ ಕಲಾವಿದರಿಗೆ ಗೌರವಿಸೋದು ನಮ್ಮ ಕರ್ತವ್ಯ “ಮೊದಲು ಮಾನವನಾಗು” ಎಂದು ಟ್ವೀಟ್ ಮಾಡಿದ್ದಾರೆ.

ಚಿತ್ರರಂಗವಲ್ಲದೇ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳು ಖಳನಟನ ವಿರುದ್ಧ ದೂರು ದಾಖಲಿಸಿದ್ದು, ಅಲ್ಲದೇ ತಮ್ಮ ಖಾತೆಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲರೂ ತಮ್ಮ ಪೋಸ್ಟ್‌ಗಳಲ್ಲಿ #RespectArtAndArtist ಎನ್ನುವ ಹ್ಯಾಶ್‌ಟ್ಯಾಗ್ ಬಳಕೆ ಮಾಡಿದ್ದು, ಕಲಾವಿದರು ಮತ್ತು ಕಲೆಗೆ ಬೆಲೆ ನೀಡಿ ಎಂದಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿ ಹೆಬ್ಬಾಗಿಲು ಪೂರ್ತಿ ತೆರೆದಿಲ್ಲ, ಕಳ್ಳಕಿಂಡಿಗಳು ಇನ್ನೂ ಮುಚ್ಚಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...