Homeಕರ್ನಾಟಕಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

- Advertisement -
- Advertisement -

ಕನ್ನಡದ ಭರಾಟೆ, ಕಿಸ್, ತೆಲುಗಿನ ಪೆಳ್ಳಿ ಸಂದಡಿ ಚಿತ್ರಗಳ ಮೂಲಕ ಭರವಸೆ ಮೂಡಿಸಿರುವ ಯುವ ನಟಿ ಶ್ರೀಲೀಲಾ ಈಗ ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆಯುವ ಮಾನವೀಯ ಕಾರ್ಯದ ಮೂಲಕ ಜನಸಾಮಾನ್ಯರಿಗೂ ಮಾದರಿಯಾಗಿದ್ದಾರೆ.

ನಟಿ ಶ್ರೀಲೀಲಾ ಬೆಂಗಳೂರಿನ ಮಾತೃಶ್ರೀ‌ ಮನೋವಿಕಾಸ ಕೇಂದ್ರದ ಇಬ್ಬರು ದಿವ್ಯಾಂಗ ಮಕ್ಕಳನ್ನ ದತ್ತು ಪಡೆದು ಅಮ್ಮನಾಗಿದ್ದಾರೆ. ಬುದ್ದಿಮಾಂದ್ಯ ಮಕ್ಕಳ ವಸತಿಯುತ ವಿಶೇಷ ಶಾಲೆಗೆ ಭೇಟಿ ನೀಡಿದ್ದ ನಟಿ,  8 ತಿಂಗಳ ಕೂಸು ‘ಗುರು’ ಮತ್ತು ಶೋಭಿತ ಅನ್ನೋ ಹೆಣ್ಣು ಮಗುವನ್ನು ದತ್ತು ಪಡೆದು, ಅವರ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಈ ವೇಳೆ “ಬೈ ಟು ಲವ್” ಚಿತ್ರದ ನಿರ್ದೇಶಕ‌ ಹರಿ ಸಂತೋಷ್ ಶ್ರೀಲೀಲಾ ಅವ್ರಿಗೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ಇವರು ಅಭಿನಯದ ಬಿಡುಗಡೆಗೆ ಸಿದ್ಧವಾಗಿರುವ ’ಬೈ ಟು ಲವ್’ ಚಿತ್ರದಲ್ಲಿ ಮಗುವಿನ ಜೊತೆ ನಟಿಸಿದ್ದು, ಚಿತ್ರಕ್ಕೂ ಮಕ್ಕಳಿಗೂ ವಿಶೇಷ ನಂಟಿದೆ. ಚಿತ್ರದಲ್ಲಿ ಆ ಮಗುವಿನೊಂದಿಗೆ ಬೆಸೆದಿದ್ದ ಬಂಧ ಮಕ್ಕಳನ್ನು ದತ್ತು ಪಡೆಯುವವರೆಗೂ ಕಡೆದುಕೊಂಡು ಬಂದಿದೆ. ’ಬೈ ಟು ಲವ್’ ಸಿನಿಮಾ ಇವತ್ತಿನ ಪೀಳಿಗೆಗೆ ಬದುಕಿನ ಪಾಠ ಮಾಡಲಿದೆ. ಅಂಥ ವಿಶೇಷ ವಿಚಾರಗಳು ಚಿತ್ರದಲ್ಲಿವೆ ಎನ್ನುತ್ತಾರೆ ಶ್ರೀಲೀಲಾ.

“ಹೀಗೇಲ್ಲಾ ಇರುತ್ತೆ ಅಂತ ಗೊತ್ತಿತ್ತು. ಆದ್ರೆ ಹತ್ತಿರದಿಂದ ನೋಡಿರಲಿಲ್ಲ. ಈ ಜಾಗಕ್ಕೆ ಬಂದಿದ್ದು ನನಗೆ ಹೊಸ ಲೋಕಕ್ಕೆ ಬಂದಂತೆ ಆಗಿದೆ. ಈ ಬಗ್ಗೆ ನಮ್ಮ ಕೈಯಲ್ಲಿ ಆಗುವಷ್ಟು ಜವಾಬ್ದಾರಿ ತೆಗೆದುಕೊಳ್ಳಬೇಕು. ಅಂಗವಿಕಲತೆ ಅಥವಾ ಮೆಡಿಕಲ್ ಕಂಡಿಷನ್‌ ಕಾರಣದಿಂದ ಈ ಮುಗ್ಧ ಮಕ್ಕಳನ್ನು ರೈಲ್ವೇ ಸ್ಟೇಷನ್, ಬಸ್ ಸ್ಟಾಪ್‌, ರಸ್ತೆ ಬದಿಯಲ್ಲಿ ಬಿಟ್ಟು ಹೋಗಿಬಿಡುತ್ತಾರೆ. ಇಂತಹ ಕೆಲಸ ಮಾಡಬಾರದು. ಅಷ್ಟು ಚಿಕ್ಕ ಮಕ್ಕಳಿಗೆ ಹೇಗೆ ಏನಾಗಿದೆ ಅಂತ ತಿಳಿಯುತ್ತದೆ..? ಯಾರು ಎತ್ತಿಕೊಂಡರು ಅವರೇ ಅಮ್ಮ ಎಂದುಕೊಳ್ಳುತ್ತಾರೆ ಅಷ್ಟು ಮುಗ್ಧರು ಇವರು. ಮಕ್ಕಳನ್ನು ನೋಡಿಕೊಳ್ಳುವ ತುಂಬಾ ಜಾಗಗಳಿವೆ. ನಮ್ಮ ಕೈಯಲ್ಲಿ ಆಗುವಷ್ಟು ಸಹಾಯ ಮಾಡಬೇಕು. ಇದಕ್ಕೆ ಲಕ್ಷವೂ, ಸಾವಿರಾರು ರೂಪಾಯಿ ಬೇಕಿಲ್ಲ” ಎಂದಿದ್ದಾರೆ.

“ಇಂತಹ ವಿಷಯ ಇಟ್ಟುಕೊಂಡು ಮಾಡಿರುವ ಚಿತ್ರದಲ್ಲಿ ನಟಿಸಿರುವುದಕ್ಕೆ ನನಗೆ ಹೆಮ್ಮೆಯಿದೆ. ಈಗ ನನಗೆ ನನ್ನ ಜೀವನದ ಗುರಿ ಏನು ಎಂಬುದು ಇಲ್ಲಿ ಅರ್ಥವಾಗಿದೆ. ತಂದೆ ತಾಯಿ ಈ ಮಕ್ಕಳನ್ನು ಬಿಟ್ಟು ಹೋದರೂ ನಾವೆಲ್ಲರೂ ಸೇರಿ ಈ ಮಕ್ಕಳ ಕುಟುಂಬವಾಗೋಣ. ಇನ್ಮುಂದೆ ಗುರು, ಶೋಭು ಇಬ್ಬರು ನನ್ನ ಮಕ್ಕಳು. ಅವರ ಪೂರ್ತಿ ಜವಾಬ್ದಾರಿ ನನ್ನದು” ಎಂದಿದ್ದಾರೆ ನಟಿ ಶ್ರೀಲೀಲಾ.

ನಟ ಧನ್ವೀರ್‌, ಶ್ರೀಲೀಲಾ ನಟನೆಯ ’ಬೈ ಟು ಲವ್’ ಚಿತ್ರ ಇದೇ ಫೆ. 18ಕ್ಕೆ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ.


ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...