Homeಕರ್ನಾಟಕಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

- Advertisement -
- Advertisement -

ಕನ್ನಡದ ಭರಾಟೆ, ಕಿಸ್, ತೆಲುಗಿನ ಪೆಳ್ಳಿ ಸಂದಡಿ ಚಿತ್ರಗಳ ಮೂಲಕ ಭರವಸೆ ಮೂಡಿಸಿರುವ ಯುವ ನಟಿ ಶ್ರೀಲೀಲಾ ಈಗ ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆಯುವ ಮಾನವೀಯ ಕಾರ್ಯದ ಮೂಲಕ ಜನಸಾಮಾನ್ಯರಿಗೂ ಮಾದರಿಯಾಗಿದ್ದಾರೆ.

ನಟಿ ಶ್ರೀಲೀಲಾ ಬೆಂಗಳೂರಿನ ಮಾತೃಶ್ರೀ‌ ಮನೋವಿಕಾಸ ಕೇಂದ್ರದ ಇಬ್ಬರು ದಿವ್ಯಾಂಗ ಮಕ್ಕಳನ್ನ ದತ್ತು ಪಡೆದು ಅಮ್ಮನಾಗಿದ್ದಾರೆ. ಬುದ್ದಿಮಾಂದ್ಯ ಮಕ್ಕಳ ವಸತಿಯುತ ವಿಶೇಷ ಶಾಲೆಗೆ ಭೇಟಿ ನೀಡಿದ್ದ ನಟಿ,  8 ತಿಂಗಳ ಕೂಸು ‘ಗುರು’ ಮತ್ತು ಶೋಭಿತ ಅನ್ನೋ ಹೆಣ್ಣು ಮಗುವನ್ನು ದತ್ತು ಪಡೆದು, ಅವರ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಈ ವೇಳೆ “ಬೈ ಟು ಲವ್” ಚಿತ್ರದ ನಿರ್ದೇಶಕ‌ ಹರಿ ಸಂತೋಷ್ ಶ್ರೀಲೀಲಾ ಅವ್ರಿಗೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ಇವರು ಅಭಿನಯದ ಬಿಡುಗಡೆಗೆ ಸಿದ್ಧವಾಗಿರುವ ’ಬೈ ಟು ಲವ್’ ಚಿತ್ರದಲ್ಲಿ ಮಗುವಿನ ಜೊತೆ ನಟಿಸಿದ್ದು, ಚಿತ್ರಕ್ಕೂ ಮಕ್ಕಳಿಗೂ ವಿಶೇಷ ನಂಟಿದೆ. ಚಿತ್ರದಲ್ಲಿ ಆ ಮಗುವಿನೊಂದಿಗೆ ಬೆಸೆದಿದ್ದ ಬಂಧ ಮಕ್ಕಳನ್ನು ದತ್ತು ಪಡೆಯುವವರೆಗೂ ಕಡೆದುಕೊಂಡು ಬಂದಿದೆ. ’ಬೈ ಟು ಲವ್’ ಸಿನಿಮಾ ಇವತ್ತಿನ ಪೀಳಿಗೆಗೆ ಬದುಕಿನ ಪಾಠ ಮಾಡಲಿದೆ. ಅಂಥ ವಿಶೇಷ ವಿಚಾರಗಳು ಚಿತ್ರದಲ್ಲಿವೆ ಎನ್ನುತ್ತಾರೆ ಶ್ರೀಲೀಲಾ.

“ಹೀಗೇಲ್ಲಾ ಇರುತ್ತೆ ಅಂತ ಗೊತ್ತಿತ್ತು. ಆದ್ರೆ ಹತ್ತಿರದಿಂದ ನೋಡಿರಲಿಲ್ಲ. ಈ ಜಾಗಕ್ಕೆ ಬಂದಿದ್ದು ನನಗೆ ಹೊಸ ಲೋಕಕ್ಕೆ ಬಂದಂತೆ ಆಗಿದೆ. ಈ ಬಗ್ಗೆ ನಮ್ಮ ಕೈಯಲ್ಲಿ ಆಗುವಷ್ಟು ಜವಾಬ್ದಾರಿ ತೆಗೆದುಕೊಳ್ಳಬೇಕು. ಅಂಗವಿಕಲತೆ ಅಥವಾ ಮೆಡಿಕಲ್ ಕಂಡಿಷನ್‌ ಕಾರಣದಿಂದ ಈ ಮುಗ್ಧ ಮಕ್ಕಳನ್ನು ರೈಲ್ವೇ ಸ್ಟೇಷನ್, ಬಸ್ ಸ್ಟಾಪ್‌, ರಸ್ತೆ ಬದಿಯಲ್ಲಿ ಬಿಟ್ಟು ಹೋಗಿಬಿಡುತ್ತಾರೆ. ಇಂತಹ ಕೆಲಸ ಮಾಡಬಾರದು. ಅಷ್ಟು ಚಿಕ್ಕ ಮಕ್ಕಳಿಗೆ ಹೇಗೆ ಏನಾಗಿದೆ ಅಂತ ತಿಳಿಯುತ್ತದೆ..? ಯಾರು ಎತ್ತಿಕೊಂಡರು ಅವರೇ ಅಮ್ಮ ಎಂದುಕೊಳ್ಳುತ್ತಾರೆ ಅಷ್ಟು ಮುಗ್ಧರು ಇವರು. ಮಕ್ಕಳನ್ನು ನೋಡಿಕೊಳ್ಳುವ ತುಂಬಾ ಜಾಗಗಳಿವೆ. ನಮ್ಮ ಕೈಯಲ್ಲಿ ಆಗುವಷ್ಟು ಸಹಾಯ ಮಾಡಬೇಕು. ಇದಕ್ಕೆ ಲಕ್ಷವೂ, ಸಾವಿರಾರು ರೂಪಾಯಿ ಬೇಕಿಲ್ಲ” ಎಂದಿದ್ದಾರೆ.

“ಇಂತಹ ವಿಷಯ ಇಟ್ಟುಕೊಂಡು ಮಾಡಿರುವ ಚಿತ್ರದಲ್ಲಿ ನಟಿಸಿರುವುದಕ್ಕೆ ನನಗೆ ಹೆಮ್ಮೆಯಿದೆ. ಈಗ ನನಗೆ ನನ್ನ ಜೀವನದ ಗುರಿ ಏನು ಎಂಬುದು ಇಲ್ಲಿ ಅರ್ಥವಾಗಿದೆ. ತಂದೆ ತಾಯಿ ಈ ಮಕ್ಕಳನ್ನು ಬಿಟ್ಟು ಹೋದರೂ ನಾವೆಲ್ಲರೂ ಸೇರಿ ಈ ಮಕ್ಕಳ ಕುಟುಂಬವಾಗೋಣ. ಇನ್ಮುಂದೆ ಗುರು, ಶೋಭು ಇಬ್ಬರು ನನ್ನ ಮಕ್ಕಳು. ಅವರ ಪೂರ್ತಿ ಜವಾಬ್ದಾರಿ ನನ್ನದು” ಎಂದಿದ್ದಾರೆ ನಟಿ ಶ್ರೀಲೀಲಾ.

ನಟ ಧನ್ವೀರ್‌, ಶ್ರೀಲೀಲಾ ನಟನೆಯ ’ಬೈ ಟು ಲವ್’ ಚಿತ್ರ ಇದೇ ಫೆ. 18ಕ್ಕೆ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ.


ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...