Homeಕರ್ನಾಟಕಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

- Advertisement -
- Advertisement -

ಕನ್ನಡದ ಭರಾಟೆ, ಕಿಸ್, ತೆಲುಗಿನ ಪೆಳ್ಳಿ ಸಂದಡಿ ಚಿತ್ರಗಳ ಮೂಲಕ ಭರವಸೆ ಮೂಡಿಸಿರುವ ಯುವ ನಟಿ ಶ್ರೀಲೀಲಾ ಈಗ ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆಯುವ ಮಾನವೀಯ ಕಾರ್ಯದ ಮೂಲಕ ಜನಸಾಮಾನ್ಯರಿಗೂ ಮಾದರಿಯಾಗಿದ್ದಾರೆ.

ನಟಿ ಶ್ರೀಲೀಲಾ ಬೆಂಗಳೂರಿನ ಮಾತೃಶ್ರೀ‌ ಮನೋವಿಕಾಸ ಕೇಂದ್ರದ ಇಬ್ಬರು ದಿವ್ಯಾಂಗ ಮಕ್ಕಳನ್ನ ದತ್ತು ಪಡೆದು ಅಮ್ಮನಾಗಿದ್ದಾರೆ. ಬುದ್ದಿಮಾಂದ್ಯ ಮಕ್ಕಳ ವಸತಿಯುತ ವಿಶೇಷ ಶಾಲೆಗೆ ಭೇಟಿ ನೀಡಿದ್ದ ನಟಿ,  8 ತಿಂಗಳ ಕೂಸು ‘ಗುರು’ ಮತ್ತು ಶೋಭಿತ ಅನ್ನೋ ಹೆಣ್ಣು ಮಗುವನ್ನು ದತ್ತು ಪಡೆದು, ಅವರ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಈ ವೇಳೆ “ಬೈ ಟು ಲವ್” ಚಿತ್ರದ ನಿರ್ದೇಶಕ‌ ಹರಿ ಸಂತೋಷ್ ಶ್ರೀಲೀಲಾ ಅವ್ರಿಗೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ಇವರು ಅಭಿನಯದ ಬಿಡುಗಡೆಗೆ ಸಿದ್ಧವಾಗಿರುವ ’ಬೈ ಟು ಲವ್’ ಚಿತ್ರದಲ್ಲಿ ಮಗುವಿನ ಜೊತೆ ನಟಿಸಿದ್ದು, ಚಿತ್ರಕ್ಕೂ ಮಕ್ಕಳಿಗೂ ವಿಶೇಷ ನಂಟಿದೆ. ಚಿತ್ರದಲ್ಲಿ ಆ ಮಗುವಿನೊಂದಿಗೆ ಬೆಸೆದಿದ್ದ ಬಂಧ ಮಕ್ಕಳನ್ನು ದತ್ತು ಪಡೆಯುವವರೆಗೂ ಕಡೆದುಕೊಂಡು ಬಂದಿದೆ. ’ಬೈ ಟು ಲವ್’ ಸಿನಿಮಾ ಇವತ್ತಿನ ಪೀಳಿಗೆಗೆ ಬದುಕಿನ ಪಾಠ ಮಾಡಲಿದೆ. ಅಂಥ ವಿಶೇಷ ವಿಚಾರಗಳು ಚಿತ್ರದಲ್ಲಿವೆ ಎನ್ನುತ್ತಾರೆ ಶ್ರೀಲೀಲಾ.

“ಹೀಗೇಲ್ಲಾ ಇರುತ್ತೆ ಅಂತ ಗೊತ್ತಿತ್ತು. ಆದ್ರೆ ಹತ್ತಿರದಿಂದ ನೋಡಿರಲಿಲ್ಲ. ಈ ಜಾಗಕ್ಕೆ ಬಂದಿದ್ದು ನನಗೆ ಹೊಸ ಲೋಕಕ್ಕೆ ಬಂದಂತೆ ಆಗಿದೆ. ಈ ಬಗ್ಗೆ ನಮ್ಮ ಕೈಯಲ್ಲಿ ಆಗುವಷ್ಟು ಜವಾಬ್ದಾರಿ ತೆಗೆದುಕೊಳ್ಳಬೇಕು. ಅಂಗವಿಕಲತೆ ಅಥವಾ ಮೆಡಿಕಲ್ ಕಂಡಿಷನ್‌ ಕಾರಣದಿಂದ ಈ ಮುಗ್ಧ ಮಕ್ಕಳನ್ನು ರೈಲ್ವೇ ಸ್ಟೇಷನ್, ಬಸ್ ಸ್ಟಾಪ್‌, ರಸ್ತೆ ಬದಿಯಲ್ಲಿ ಬಿಟ್ಟು ಹೋಗಿಬಿಡುತ್ತಾರೆ. ಇಂತಹ ಕೆಲಸ ಮಾಡಬಾರದು. ಅಷ್ಟು ಚಿಕ್ಕ ಮಕ್ಕಳಿಗೆ ಹೇಗೆ ಏನಾಗಿದೆ ಅಂತ ತಿಳಿಯುತ್ತದೆ..? ಯಾರು ಎತ್ತಿಕೊಂಡರು ಅವರೇ ಅಮ್ಮ ಎಂದುಕೊಳ್ಳುತ್ತಾರೆ ಅಷ್ಟು ಮುಗ್ಧರು ಇವರು. ಮಕ್ಕಳನ್ನು ನೋಡಿಕೊಳ್ಳುವ ತುಂಬಾ ಜಾಗಗಳಿವೆ. ನಮ್ಮ ಕೈಯಲ್ಲಿ ಆಗುವಷ್ಟು ಸಹಾಯ ಮಾಡಬೇಕು. ಇದಕ್ಕೆ ಲಕ್ಷವೂ, ಸಾವಿರಾರು ರೂಪಾಯಿ ಬೇಕಿಲ್ಲ” ಎಂದಿದ್ದಾರೆ.

“ಇಂತಹ ವಿಷಯ ಇಟ್ಟುಕೊಂಡು ಮಾಡಿರುವ ಚಿತ್ರದಲ್ಲಿ ನಟಿಸಿರುವುದಕ್ಕೆ ನನಗೆ ಹೆಮ್ಮೆಯಿದೆ. ಈಗ ನನಗೆ ನನ್ನ ಜೀವನದ ಗುರಿ ಏನು ಎಂಬುದು ಇಲ್ಲಿ ಅರ್ಥವಾಗಿದೆ. ತಂದೆ ತಾಯಿ ಈ ಮಕ್ಕಳನ್ನು ಬಿಟ್ಟು ಹೋದರೂ ನಾವೆಲ್ಲರೂ ಸೇರಿ ಈ ಮಕ್ಕಳ ಕುಟುಂಬವಾಗೋಣ. ಇನ್ಮುಂದೆ ಗುರು, ಶೋಭು ಇಬ್ಬರು ನನ್ನ ಮಕ್ಕಳು. ಅವರ ಪೂರ್ತಿ ಜವಾಬ್ದಾರಿ ನನ್ನದು” ಎಂದಿದ್ದಾರೆ ನಟಿ ಶ್ರೀಲೀಲಾ.

ನಟ ಧನ್ವೀರ್‌, ಶ್ರೀಲೀಲಾ ನಟನೆಯ ’ಬೈ ಟು ಲವ್’ ಚಿತ್ರ ಇದೇ ಫೆ. 18ಕ್ಕೆ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ.


ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...