Homeಕರ್ನಾಟಕಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

- Advertisement -
- Advertisement -

ಕನ್ನಡದ ಭರಾಟೆ, ಕಿಸ್, ತೆಲುಗಿನ ಪೆಳ್ಳಿ ಸಂದಡಿ ಚಿತ್ರಗಳ ಮೂಲಕ ಭರವಸೆ ಮೂಡಿಸಿರುವ ಯುವ ನಟಿ ಶ್ರೀಲೀಲಾ ಈಗ ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆಯುವ ಮಾನವೀಯ ಕಾರ್ಯದ ಮೂಲಕ ಜನಸಾಮಾನ್ಯರಿಗೂ ಮಾದರಿಯಾಗಿದ್ದಾರೆ.

ನಟಿ ಶ್ರೀಲೀಲಾ ಬೆಂಗಳೂರಿನ ಮಾತೃಶ್ರೀ‌ ಮನೋವಿಕಾಸ ಕೇಂದ್ರದ ಇಬ್ಬರು ದಿವ್ಯಾಂಗ ಮಕ್ಕಳನ್ನ ದತ್ತು ಪಡೆದು ಅಮ್ಮನಾಗಿದ್ದಾರೆ. ಬುದ್ದಿಮಾಂದ್ಯ ಮಕ್ಕಳ ವಸತಿಯುತ ವಿಶೇಷ ಶಾಲೆಗೆ ಭೇಟಿ ನೀಡಿದ್ದ ನಟಿ,  8 ತಿಂಗಳ ಕೂಸು ‘ಗುರು’ ಮತ್ತು ಶೋಭಿತ ಅನ್ನೋ ಹೆಣ್ಣು ಮಗುವನ್ನು ದತ್ತು ಪಡೆದು, ಅವರ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಈ ವೇಳೆ “ಬೈ ಟು ಲವ್” ಚಿತ್ರದ ನಿರ್ದೇಶಕ‌ ಹರಿ ಸಂತೋಷ್ ಶ್ರೀಲೀಲಾ ಅವ್ರಿಗೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ಇವರು ಅಭಿನಯದ ಬಿಡುಗಡೆಗೆ ಸಿದ್ಧವಾಗಿರುವ ’ಬೈ ಟು ಲವ್’ ಚಿತ್ರದಲ್ಲಿ ಮಗುವಿನ ಜೊತೆ ನಟಿಸಿದ್ದು, ಚಿತ್ರಕ್ಕೂ ಮಕ್ಕಳಿಗೂ ವಿಶೇಷ ನಂಟಿದೆ. ಚಿತ್ರದಲ್ಲಿ ಆ ಮಗುವಿನೊಂದಿಗೆ ಬೆಸೆದಿದ್ದ ಬಂಧ ಮಕ್ಕಳನ್ನು ದತ್ತು ಪಡೆಯುವವರೆಗೂ ಕಡೆದುಕೊಂಡು ಬಂದಿದೆ. ’ಬೈ ಟು ಲವ್’ ಸಿನಿಮಾ ಇವತ್ತಿನ ಪೀಳಿಗೆಗೆ ಬದುಕಿನ ಪಾಠ ಮಾಡಲಿದೆ. ಅಂಥ ವಿಶೇಷ ವಿಚಾರಗಳು ಚಿತ್ರದಲ್ಲಿವೆ ಎನ್ನುತ್ತಾರೆ ಶ್ರೀಲೀಲಾ.

“ಹೀಗೇಲ್ಲಾ ಇರುತ್ತೆ ಅಂತ ಗೊತ್ತಿತ್ತು. ಆದ್ರೆ ಹತ್ತಿರದಿಂದ ನೋಡಿರಲಿಲ್ಲ. ಈ ಜಾಗಕ್ಕೆ ಬಂದಿದ್ದು ನನಗೆ ಹೊಸ ಲೋಕಕ್ಕೆ ಬಂದಂತೆ ಆಗಿದೆ. ಈ ಬಗ್ಗೆ ನಮ್ಮ ಕೈಯಲ್ಲಿ ಆಗುವಷ್ಟು ಜವಾಬ್ದಾರಿ ತೆಗೆದುಕೊಳ್ಳಬೇಕು. ಅಂಗವಿಕಲತೆ ಅಥವಾ ಮೆಡಿಕಲ್ ಕಂಡಿಷನ್‌ ಕಾರಣದಿಂದ ಈ ಮುಗ್ಧ ಮಕ್ಕಳನ್ನು ರೈಲ್ವೇ ಸ್ಟೇಷನ್, ಬಸ್ ಸ್ಟಾಪ್‌, ರಸ್ತೆ ಬದಿಯಲ್ಲಿ ಬಿಟ್ಟು ಹೋಗಿಬಿಡುತ್ತಾರೆ. ಇಂತಹ ಕೆಲಸ ಮಾಡಬಾರದು. ಅಷ್ಟು ಚಿಕ್ಕ ಮಕ್ಕಳಿಗೆ ಹೇಗೆ ಏನಾಗಿದೆ ಅಂತ ತಿಳಿಯುತ್ತದೆ..? ಯಾರು ಎತ್ತಿಕೊಂಡರು ಅವರೇ ಅಮ್ಮ ಎಂದುಕೊಳ್ಳುತ್ತಾರೆ ಅಷ್ಟು ಮುಗ್ಧರು ಇವರು. ಮಕ್ಕಳನ್ನು ನೋಡಿಕೊಳ್ಳುವ ತುಂಬಾ ಜಾಗಗಳಿವೆ. ನಮ್ಮ ಕೈಯಲ್ಲಿ ಆಗುವಷ್ಟು ಸಹಾಯ ಮಾಡಬೇಕು. ಇದಕ್ಕೆ ಲಕ್ಷವೂ, ಸಾವಿರಾರು ರೂಪಾಯಿ ಬೇಕಿಲ್ಲ” ಎಂದಿದ್ದಾರೆ.

“ಇಂತಹ ವಿಷಯ ಇಟ್ಟುಕೊಂಡು ಮಾಡಿರುವ ಚಿತ್ರದಲ್ಲಿ ನಟಿಸಿರುವುದಕ್ಕೆ ನನಗೆ ಹೆಮ್ಮೆಯಿದೆ. ಈಗ ನನಗೆ ನನ್ನ ಜೀವನದ ಗುರಿ ಏನು ಎಂಬುದು ಇಲ್ಲಿ ಅರ್ಥವಾಗಿದೆ. ತಂದೆ ತಾಯಿ ಈ ಮಕ್ಕಳನ್ನು ಬಿಟ್ಟು ಹೋದರೂ ನಾವೆಲ್ಲರೂ ಸೇರಿ ಈ ಮಕ್ಕಳ ಕುಟುಂಬವಾಗೋಣ. ಇನ್ಮುಂದೆ ಗುರು, ಶೋಭು ಇಬ್ಬರು ನನ್ನ ಮಕ್ಕಳು. ಅವರ ಪೂರ್ತಿ ಜವಾಬ್ದಾರಿ ನನ್ನದು” ಎಂದಿದ್ದಾರೆ ನಟಿ ಶ್ರೀಲೀಲಾ.

ನಟ ಧನ್ವೀರ್‌, ಶ್ರೀಲೀಲಾ ನಟನೆಯ ’ಬೈ ಟು ಲವ್’ ಚಿತ್ರ ಇದೇ ಫೆ. 18ಕ್ಕೆ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ.


ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...