Homeಕರ್ನಾಟಕಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

- Advertisement -
- Advertisement -

ಕನ್ನಡದ ಭರಾಟೆ, ಕಿಸ್, ತೆಲುಗಿನ ಪೆಳ್ಳಿ ಸಂದಡಿ ಚಿತ್ರಗಳ ಮೂಲಕ ಭರವಸೆ ಮೂಡಿಸಿರುವ ಯುವ ನಟಿ ಶ್ರೀಲೀಲಾ ಈಗ ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆಯುವ ಮಾನವೀಯ ಕಾರ್ಯದ ಮೂಲಕ ಜನಸಾಮಾನ್ಯರಿಗೂ ಮಾದರಿಯಾಗಿದ್ದಾರೆ.

ನಟಿ ಶ್ರೀಲೀಲಾ ಬೆಂಗಳೂರಿನ ಮಾತೃಶ್ರೀ‌ ಮನೋವಿಕಾಸ ಕೇಂದ್ರದ ಇಬ್ಬರು ದಿವ್ಯಾಂಗ ಮಕ್ಕಳನ್ನ ದತ್ತು ಪಡೆದು ಅಮ್ಮನಾಗಿದ್ದಾರೆ. ಬುದ್ದಿಮಾಂದ್ಯ ಮಕ್ಕಳ ವಸತಿಯುತ ವಿಶೇಷ ಶಾಲೆಗೆ ಭೇಟಿ ನೀಡಿದ್ದ ನಟಿ,  8 ತಿಂಗಳ ಕೂಸು ‘ಗುರು’ ಮತ್ತು ಶೋಭಿತ ಅನ್ನೋ ಹೆಣ್ಣು ಮಗುವನ್ನು ದತ್ತು ಪಡೆದು, ಅವರ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಈ ವೇಳೆ “ಬೈ ಟು ಲವ್” ಚಿತ್ರದ ನಿರ್ದೇಶಕ‌ ಹರಿ ಸಂತೋಷ್ ಶ್ರೀಲೀಲಾ ಅವ್ರಿಗೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ಇವರು ಅಭಿನಯದ ಬಿಡುಗಡೆಗೆ ಸಿದ್ಧವಾಗಿರುವ ’ಬೈ ಟು ಲವ್’ ಚಿತ್ರದಲ್ಲಿ ಮಗುವಿನ ಜೊತೆ ನಟಿಸಿದ್ದು, ಚಿತ್ರಕ್ಕೂ ಮಕ್ಕಳಿಗೂ ವಿಶೇಷ ನಂಟಿದೆ. ಚಿತ್ರದಲ್ಲಿ ಆ ಮಗುವಿನೊಂದಿಗೆ ಬೆಸೆದಿದ್ದ ಬಂಧ ಮಕ್ಕಳನ್ನು ದತ್ತು ಪಡೆಯುವವರೆಗೂ ಕಡೆದುಕೊಂಡು ಬಂದಿದೆ. ’ಬೈ ಟು ಲವ್’ ಸಿನಿಮಾ ಇವತ್ತಿನ ಪೀಳಿಗೆಗೆ ಬದುಕಿನ ಪಾಠ ಮಾಡಲಿದೆ. ಅಂಥ ವಿಶೇಷ ವಿಚಾರಗಳು ಚಿತ್ರದಲ್ಲಿವೆ ಎನ್ನುತ್ತಾರೆ ಶ್ರೀಲೀಲಾ.

“ಹೀಗೇಲ್ಲಾ ಇರುತ್ತೆ ಅಂತ ಗೊತ್ತಿತ್ತು. ಆದ್ರೆ ಹತ್ತಿರದಿಂದ ನೋಡಿರಲಿಲ್ಲ. ಈ ಜಾಗಕ್ಕೆ ಬಂದಿದ್ದು ನನಗೆ ಹೊಸ ಲೋಕಕ್ಕೆ ಬಂದಂತೆ ಆಗಿದೆ. ಈ ಬಗ್ಗೆ ನಮ್ಮ ಕೈಯಲ್ಲಿ ಆಗುವಷ್ಟು ಜವಾಬ್ದಾರಿ ತೆಗೆದುಕೊಳ್ಳಬೇಕು. ಅಂಗವಿಕಲತೆ ಅಥವಾ ಮೆಡಿಕಲ್ ಕಂಡಿಷನ್‌ ಕಾರಣದಿಂದ ಈ ಮುಗ್ಧ ಮಕ್ಕಳನ್ನು ರೈಲ್ವೇ ಸ್ಟೇಷನ್, ಬಸ್ ಸ್ಟಾಪ್‌, ರಸ್ತೆ ಬದಿಯಲ್ಲಿ ಬಿಟ್ಟು ಹೋಗಿಬಿಡುತ್ತಾರೆ. ಇಂತಹ ಕೆಲಸ ಮಾಡಬಾರದು. ಅಷ್ಟು ಚಿಕ್ಕ ಮಕ್ಕಳಿಗೆ ಹೇಗೆ ಏನಾಗಿದೆ ಅಂತ ತಿಳಿಯುತ್ತದೆ..? ಯಾರು ಎತ್ತಿಕೊಂಡರು ಅವರೇ ಅಮ್ಮ ಎಂದುಕೊಳ್ಳುತ್ತಾರೆ ಅಷ್ಟು ಮುಗ್ಧರು ಇವರು. ಮಕ್ಕಳನ್ನು ನೋಡಿಕೊಳ್ಳುವ ತುಂಬಾ ಜಾಗಗಳಿವೆ. ನಮ್ಮ ಕೈಯಲ್ಲಿ ಆಗುವಷ್ಟು ಸಹಾಯ ಮಾಡಬೇಕು. ಇದಕ್ಕೆ ಲಕ್ಷವೂ, ಸಾವಿರಾರು ರೂಪಾಯಿ ಬೇಕಿಲ್ಲ” ಎಂದಿದ್ದಾರೆ.

“ಇಂತಹ ವಿಷಯ ಇಟ್ಟುಕೊಂಡು ಮಾಡಿರುವ ಚಿತ್ರದಲ್ಲಿ ನಟಿಸಿರುವುದಕ್ಕೆ ನನಗೆ ಹೆಮ್ಮೆಯಿದೆ. ಈಗ ನನಗೆ ನನ್ನ ಜೀವನದ ಗುರಿ ಏನು ಎಂಬುದು ಇಲ್ಲಿ ಅರ್ಥವಾಗಿದೆ. ತಂದೆ ತಾಯಿ ಈ ಮಕ್ಕಳನ್ನು ಬಿಟ್ಟು ಹೋದರೂ ನಾವೆಲ್ಲರೂ ಸೇರಿ ಈ ಮಕ್ಕಳ ಕುಟುಂಬವಾಗೋಣ. ಇನ್ಮುಂದೆ ಗುರು, ಶೋಭು ಇಬ್ಬರು ನನ್ನ ಮಕ್ಕಳು. ಅವರ ಪೂರ್ತಿ ಜವಾಬ್ದಾರಿ ನನ್ನದು” ಎಂದಿದ್ದಾರೆ ನಟಿ ಶ್ರೀಲೀಲಾ.

ನಟ ಧನ್ವೀರ್‌, ಶ್ರೀಲೀಲಾ ನಟನೆಯ ’ಬೈ ಟು ಲವ್’ ಚಿತ್ರ ಇದೇ ಫೆ. 18ಕ್ಕೆ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ.


ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...