Homeಮುಖಪುಟಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’

- Advertisement -
- Advertisement -

ದಶಕಗಳ ಹಿಂದೆ ಅಮ್ಮ ನ ಪಾತ್ರಕ್ಕೆ ಸಾಕಷ್ಟು ಸ್ಕೋಪ್ ಇರುವಂತಹ ಸಿನಿಮಾಗಳು ತಯಾರಾಗುತ್ತಿದ್ದವು. ಅಂತಹ ಪಾತ್ರಗಳು ಇಂದಿಗೂ ನಮಗೆ ನೆನಪಾಗುತ್ತವೆ. ಇದೀಗ ಗ್ಲಾಮರ್ ಮಧ್ಯೆ ಅಮ್ಮನ ಪಾತ್ರಗಳು ಕಣ್ಮರೆ ಆಗುತ್ತಿವೆ. ಅಮ್ಮನ (10) ದಿನದ ನಿಮಿತ್ತ ಒಂದು ವಿಶೇಷ ಲೇಖನ.

ಮೊನ್ನೆಯವರೆಗೂ ಸ್ಯಾಂಡಲ್‍ವುಡ್‍ನಲ್ಲಿ ಮಚ್ಚು ಮತ್ತು ಮದರ್ ಸೆಂಟಿಮೆಂಟ್ ಚಿತ್ರಗಳು ಚಾಲ್ತಿಯಲ್ಲಿದ್ದವು. ಬಾಲಿವುಡ್‍ಗೆ ಹೋಲಿಸಿದಲ್ಲಿ ಇಲ್ಲಿ ಅಮ್ಮನ ಪಾತ್ರಕ್ಕೆ ಹೆಚ್ಚಿನ ನಷ್ಟವಾಗಿಲ್ಲ ನಿಜ. ಆದರೆ ಪಾತ್ರದ ಚಿತ್ರಣಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ನಿರಾಸೆಯಾಗುವುದು ಹೌದು. ವರ್ಷದಲ್ಲಿ ತೆರೆಕಾಣುವ ನೂರಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಮ್ಮ ಕಾಣಿಸುವುದು ಬೆರಳೆಣಿಕೆಯ ಪಾತ್ರಗಳಲ್ಲಿ ಮಾತ್ರ. ಅವೂ ಕೂಡ ಬಹುಕಾಲ ನೆನಪಿನಲ್ಲುಳಿಯುವುದಿಲ್ಲ ಎನ್ನುವುದು ವಿಪರ್ಯಾಸ.

ದಕ್ಷಿಣ ಭಾರತದ ಇತರೆ ಪ್ರಾದೇಶಿಕ ಭಾಷಾ ಚಿತ್ರಗಳೂ ಇದಕ್ಕೆ ಹೊರತಲ್ಲ. ದೊಡ್ಡ ಸದ್ದು ಮಾಡಿದ ‘ಕೆಜಿಎಫ್’ನಲ್ಲಿ ಅಮ್ಮನ ಕುರಿತಾದ ಸುಂದರ ಗೀತೆ, ಚಿತ್ರಣವಿದ್ದರೂ ಪಾತ್ರ ಬಹುಕಾಲ ನೆನಪಿನಲ್ಲುಳಿಯದು. ಆದರೆ ಕಳೆದ ದಶಕದಿಂದೀಚಿನ ಕೆಲವು ತಮಿಳು, ಮಲಯಾಳಂ ಸಿನಿಮಾಗಳಲ್ಲಿ ‘ತಾಯಿ’ಗೆ ಮಹತ್ವದ ಪಾತ್ರಗಳಿದ್ದವು. ಗಟ್ಟಿಗಿತ್ತಿಯಾಗಿ ನೆಲದ ಗುಣದ ಜೊತೆ ಬೆಸೆದುಕೊಂಡಂತಹ ಚಿತ್ರಣಗಳು ಅಲ್ಲಿ ಕಾಣಿಸಿದವು.

ಗ್ಲ್ಯಾಮರ್ ಅಮ್ಮ

ಮಚ್ಚಿನ ಚಿತ್ರಗಳಿಗೆ ಮದರ್ ಸೆಂಟಿಮೆಂಟ್ ಜೋಡಿಸಿದ ಕೀರ್ತಿ, ನಿರ್ದೇಶಕ ಪ್ರೇಮ್‍ಗೆ ಸಲ್ಲುತ್ತದೆ. ಅವರ ಸೂಪರ್‌‌‌ಹಿಟ್ `ಜೋಗಿ’ ಚಿತ್ರದಲ್ಲಿ ಅಮ್ಮನ (ಆರುಂಧತಿ ನಾಗ್) ಪಾತ್ರಕ್ಕೆ ಹೆಚ್ಚಿನ ಸ್ಕೋಪ್ ಇತ್ತು. ಅಮ್ಮನ ಪ್ರೀತಿಯ ಜೊತೆಗೆ ಮಚ್ಚಿನ ಆರ್ಭಟಕ್ಕೂ ಅಲ್ಲಿ ಸಮಪಾಲು. ಅಮ್ಮನನ್ನು ನೆನಪಿಸುವಲ್ಲಿ ಪ್ರೇಮ್ ಯಶಸ್ವಿಯಾದರೂ, ಪ್ರೇಕ್ಷಕರು ಮಚ್ಚಿನ ಕಥೆಯೆಂದೇ ಮಾತನಾಡಿಕೊಂಡರು. ಇದಕ್ಕೂ ಮುನ್ನ ಅವರೇ ನಿರ್ದೇಶಿಸಿದ್ದ `ಎಸ್‌ಕ್ಯೂಸ್ ಮಿ’ ಚಿತ್ರದಲ್ಲೂ ಅಮ್ಮ (ಸುಮಲತಾ) ಇದ್ದಳು. ಮಾತೃಭಾವಕ್ಕಿಂತ ಮಿಗಿಲಾಗಿ ಅಲ್ಲಿ ನಟಿಯ ಲಿಪ್‍ಸ್ಟಿಕ್ ಮಿರುಗಿದ್ದು ಬದಲಾದ ಚಿತ್ರಣಕ್ಕೆ ಕೈಗನ್ನಿಡಿ!

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಸುಮಲತ

`ಜೋಗಿ’ ಚಿತ್ರದ ಯಶಸ್ಸಿನೊಂದಿಗೆ `ಮಚ್ಚು ಮತ್ತು ಮದರ್ ಸೆಂಟಿಮೆಂಟ್’ ಕಾಂಬಿನೇಷನ್‍ನಲ್ಲಿ ಸಾಕಷ್ಟು ಚಿತ್ರಗಳು ತೆರೆಕಂಡವು. ಮಚ್ಚು ಬೀಸುವ ಭರದಲ್ಲಿ ನಿರ್ದೇಶಕರು ಅಮ್ಮನ ಪಾತ್ರಗಳನ್ನು ಜೋಕರ್‌ಗಳಂತೆ ಚಿತ್ರಿಸಿ ಪ್ರೇಕ್ಷಕರಿಗೆ ಬೇಸರ ಉಂಟುಮಾಡಿದ್ದೂ ಇದೆ. ನಾಯಕನ ಇಮೇಜು ಹೆಚ್ಚಿಸಲು ಅಮ್ಮನನ್ನು ಅತಿ ಭಾವುಕತನ, ಕಣ್ಣೀರಧಾರೆಯಲ್ಲಿ ತೋರಿಸುವ ಪರಿಪಾಠ ಜಾರಿಗೆ ಬಂತು.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಅರುಂದತಿ ನಾಗ್

ಸ್ನೇಹಿತೆಯಂಥ ಅಮ್ಮ

`ಮುಂಗಾರುಮಳೆ’ ಸ್ಯಾಂಡಲ್‍ವುಡ್‍ನ ಟ್ರೆಂಡ್ ಸೆಟರ್ ಸಿನೆಮಾ. ಇಲ್ಲಿ ನಿರ್ದೇಶಕ ಯೋಗರಾಜ್ ಭಟ್, ಅಮ್ಮನ ಪಾತ್ರವನ್ನು ವಾಸ್ತವಕ್ಕೆ ಕರೆತಂದಿದ್ದರು. ಬೇರೊಬ್ಬನನ್ನು ಮದುವೆಯಾಗುತ್ತಿರುವ ಹುಡುಗಿಯನ್ನು ಪ್ರೀತಿಸುವ ಮಗನ ಕೆನ್ನೆಗೆ ಹೊಡೆದು ಬುದ್ಧಿ ಹೇಳುವ ಅಮ್ಮನ ಪಾತ್ರವದು. ಆಧುನಿಕ ಮನೋಭಾವದ ಸ್ನೇಹಿತೆಯಂಥ ಅಮ್ಮನನ್ನು ಪ್ರೇಕ್ಷಕರೂ ಪ್ರೀತಿಯಿಂದ ಒಪ್ಪಿಕೊಂಡರು. ಆದರೆ `ಮಳೆ’ ಸ್ಪೂರ್ತಿಯಿಂದ ನಂತರದಲ್ಲಿ ತಯಾರಾದ ಹಲವಾರು ಚಿತ್ರಗಳಲ್ಲಿ ಅಮ್ಮನ ಪಾತ್ರಗಳು ಸೊರಗಿದವು.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಸುಧಾ ಬೆಳವಾಡಿ

 

`ವಂಶಿ’ (ಅಮ್ಮನಾಗಿ ಲಕ್ಷ್ಮಿ ನಟಿಸಿದ್ದರು) ಸೇರಿದಂತೆ ಒಂದೆರಡು ಚಿತ್ರಗಳನ್ನು ಹೊರತುಪಡಿಸಿದರೆ ಇತ್ತೀಚಿನ ಚಿತ್ರಗಳಲ್ಲಿ ಅಮ್ಮ ಪ್ರೇಕ್ಷಕರನ್ನು ತಲುಪಲೇ ಇಲ್ಲ. ನಂತರ ಒಂದಷ್ಟು ವರ್ಷ ನಿರ್ದೇಶಕ ಅಪ್ಪ-ಮಗನ ಸೆಂಟಿಮೆಂಟಿಗೆ ಹೊರಳಿದ್ದರು! `ಮುಂಗಾರುಮಳೆ’ಯ ಅಮ್ಮ ಸುಧಾ ಬೆಳವಾಡಿ ಬದಲಾದ ಟ್ರೆಂಡ್ ಬಗ್ಗೆ ಬೇಸರದಿಂದಲೇ ಮಾತನಾಡುತ್ತಾರೆ.

`ಯೋಗರಾಜ್ ಭಟ್ಟರ ಚಿತ್ರದಲ್ಲಿ ಅಮ್ಮನ ಪಾತ್ರಕ್ಕೊಂದು ಭದ್ರ ನೆಲೆಯಿತ್ತು. ಇಲ್ಲಿಯವರೆಗೂ ನನಗೆ ಅಂಥ ಮತ್ತೊಂದು ಪಾತ್ರ ಸಿಕ್ಕಿಲ್ಲ. ಈಗಿನವರು ಸೃಷ್ಟಿಸುವ ಅಮ್ಮನ ಪಾತ್ರಕ್ಕೆ ಸ್ವಂತ ನಿಲುವು, ವ್ಯಕ್ತಿತ್ವವೇ ಇರೋಲ್ಲ. ಹೊಸ ಟ್ರೆಂಡ್‍ನ ಪ್ರೇಕ್ಷಕರಿಗೆ ಇಷ್ಟವಾಗುವಂಥ ಸತ್ವಯುತ ಅಮ್ಮನ ಪಾತ್ರ ಸೃಷ್ಟಿಸುವಲ್ಲಿ ನಮ್ಮವರು ವಿಫಲರಾಗುತ್ತಿದ್ದಾರೆ’ ಎನ್ನುತ್ತಾರೆ ಅವರು.

ಅದೊಂದು ಕಾಲವಿತ್ತು…

ಈ ಕ್ಷಣವೂ ಅಮ್ಮನ ಪಾತ್ರವೆಂದರೆ ಕನ್ನಡಿಗರ ಕಣ್ತುಂಬುವುದು ಪಂಡರೀಭಾಯಿ. ಸುಂದರ, ಸೌಮ್ಯ ಮುಖದ ಕರುಣಾಮಯಿ ಭಾವದ ಕಲಾವಿದೆ ಅಮ್ಮನ ಪಾತ್ರಕ್ಕೆ ವಿಶೇಷ ಮೆರುಗು ತಂದುಕೊಟ್ಟರು. ಸ್ವಭಾವತಃ ಮಾತೃಹೃದಯಿ ಪಂಡರೀಭಾಯಿ ತೆರೆಯ ಮೇಲೆ ಕೂಡ ಹಾಗೆಯೇ ಕಾಣಿಸಿದರು ಎಂದು ಅವರನ್ನು ಬಲ್ಲ ಕಲಾವಿದರು, ತಂತ್ರಜ್ಞರು `ಅಮ್ಮ’ನನ್ನು ನೆನಪುಮಾಡಿಕೊಳ್ಳುತ್ತಾರೆ. ಆದವಾನಿ ಲಕ್ಷ್ಮಿದೇವಿ, ಸಾವಿತ್ರಿ, ಎಂ.ವಿ.ರಾಜಮ್ಮ, ಸಾಹುಕಾರ ಜಾನಕಿ ಇತರರು ಅಮ್ಮನ ಪಾತ್ರಗಳಿಗೆ ಜೀವ ತುಂಬಿದ ಅಂದಿನ ಶ್ರೇಷ್ಠ ಕಲಾವಿದೆಯರು. ನಟಿ ಲೀಲಾವತಿ ವೈವಿಧ್ಯಮಯ ತಾಯಿ ಪಾತ್ರಗಳನ್ನು ಪೊರೆದವರು. ಕೆಲವು ಚಿತ್ರಗಳಲ್ಲಿ ಗಯ್ಯಾಳಿ, ಹಠಮಾರಿ ಅಮ್ಮನಾಗಿ ಪ್ರೇಕ್ಷಕರ ನೆನಪಿನಲ್ಲುಳಿದಿದ್ದಾರೆ.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ಅಮ್ಮ
ಪಂಡರಿ ಭಾಯಿ

80ರ ದಶಕದ ಅಂತ್ಯಕ್ಕೆ ಕನ್ನಡ ಚಿತ್ರಗಳಲ್ಲಿ ಹಲವಾರು ಮಾರ್ಪಾಡುಗಳಾಗಿದ್ದವು. ಕೌಟುಂಬಿಕ ಕಥೆಗಳ ಜೊತೆಗೆ ಆಗ ರಾಜಕೀಯ ಸಿನೆಮಾಗಳೂ ತಯಾರಾಗುತ್ತಿದ್ದವು. ಚಿತ್ರದ ನಾಯಕನನ್ನು ಮಣಿಸುವ ಸಲುವಾಗಿ ಖಳನಾಯಕರು ಅಮ್ಮನನ್ನು ಬಂಧನದಲ್ಲಿಟ್ಟು ಹಿಂಸಿಸುತ್ತಿದ್ದರು. ಕಾಂಚನ, ಲೀಲಾವತಿ, ಸರೋಜಾದೇವಿ, ಜಯಂತಿ, ಆರತಿ ಇತರರು ಈ ಪಾತ್ರಗಳಿಗೆ ಜೀವ ತುಂಬಿದರು. ರಮಾದೇವಿ, ಉಮಾಶಿವಶಂಕರ್, ಸತ್ಯಭಾಮಾ, ಕಮಿನಿಧರನ್, ಆಶಾಲತಾ, ಶೋಭಾ ಶಿವಶಂಕರ್, ಹೇಮಾಚೌಧರಿ ಗಯ್ಯಾಳಿ ಅಮ್ಮಂದಿರಾಗಿ ಪ್ರೇಕ್ಷಕರ ಹುಸಿಕೋಪಕ್ಕೆ ಗುರಿಯಾಗುತ್ತಿದ್ದರು.

`ಪುಟ್ನಂಜಿ’ ಚಿತ್ರದ ಉಮಾಶ್ರೀ ಪಾತ್ರಕ್ಕೆ `ಒಡಲಾಳ’ ನಾಟಕದ ಸಾಕವ್ವ ಪ್ರೇರಣೆ. ಇಲ್ಲಿ ಅಮ್ಮನ ಪಾತ್ರಕ್ಕೆ ಮತ್ತೊಂದು ಆಯಾಮ ಸಿಕ್ಕಿದ್ದು ಹೌದು. `ಅಣ್ಣಯ್ಯ’ ಸಿನೆಮಾದಲ್ಲಿ ಹಿಂದಿ ನಟಿ ಅರುಣಾ ಇರಾನಿ ನೆಗೆಟಿವ್ ಶೇಡ್‍ನಲ್ಲಿ ಗಮನ ಸೆಳೆದಿದ್ದರು. ಈ ಮಧ್ಯೆ ತಾಯಿಯ ಆಂತರ್ಯದ ಹೋರಾಟದ ಕಥಾವಸ್ತುವಿನ ಕೆಲವು ಭಿನ್ನ ಅಲೆಯ ಚಿತ್ರಗಳು ತಯಾರಾದವು. `ತಾಯಿಸಾಹೇಬ’, `ತಾಯಿ’, `ಅವ್ವ’ ಕೆಲವು ಉದಾಹರಣೆ. ಎಂದಿನಂತೆ ಈ ಚಿತ್ರಗಳು ಕಲೆಯ ಚೌಕಟ್ಟನ್ನು ದಾಟಲಿಲ್ಲ. ಒಟ್ಟಾರೆಯಾಗಿ ಹೇಳಬೇಕೆಂದರೆ ಕನ್ನಡ ಚಿತ್ರಗಳಲ್ಲಿ `ಅಮ್ಮ’ ಸೊರಗುತ್ತಿದ್ದಾಳೆ. ಕಾಲದ ತಿರುಗಣೆಯಲ್ಲಿ ಮತ್ತೆ ಅಮ್ಮ ನಗೆ ಬೀರುವಳೇ?

ಸ್ಯಾಂಡಲ್‍ವುಡ್‍ನ ಜನಪ್ರಿಯ ಅಮ್ಮಂದಿರು

ಪಂಡರೀಭಾಯಿ (ಪುರಂದರದಾಸ, ಸತ್ಯಹರಿಶ್ಚಂದ್ರ, ಅನುರಾಗ ಅರಳಿತು), ಆದವಾನಿ ಲಕ್ಷ್ಮಿದೇವಿ (ಗಂಧದ ಗುಡಿ), ಎಂ.ವಿ.ರಾಜಮ್ಮ (ಬಂಗಾರದ ಪಂಜರ), ಲೀಲಾವತಿ (ತಾಯಿಯ ಮಡಿಲಲ್ಲಿ, ನಾಗರಹಾವು, ಯಾರದು), ಕಾಂಚನ (ಶಂಕರ್‍ಗುರು, ದಾರಿ ತಪ್ಪಿದ ಮಗ), ಸರೋಜಾದೇವಿ (ಭಾಗ್ಯವಂತರು), ಆರತಿ (ಕಲಿಯುಗ), ಅರುಣಾ ಇರಾನಿ (ಅಣ್ಣಯ್ಯ), ಉಮಾಶ್ರೀ (ಪುಟ್ನಂಜಿ), ಭಾರತಿ (ದೊರೆ), ಸುಮಿತ್ರಾ (ರಾಮಾಚಾರಿ), ಸುಮಲತಾ (ಎಕ್ಸ್‍ಕ್ಯೂಸ್ ಮಿ), ಅರುಂಧತಿ ನಾಗ್ (ಜೋಗಿ), ಲಕ್ಷ್ಮಿ (ಅಮ್ಮ, ಹೂವು-ಹಣ್ಣು, ವಂಶಿ), ಸುಧಾ ಬೆಳವಾಡಿ (ಮುಂಗಾರು ಮಳೆ), ತಾರಾ (ಡೆಡ್ಲಿ ಸೋಮ), ರ‍್ಚನಾ ಜೋಯಿಸ್ (ಕೆಜಿಎಫ್)


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್


ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...