Homeಮುಖಪುಟಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’

- Advertisement -
- Advertisement -

ದಶಕಗಳ ಹಿಂದೆ ಅಮ್ಮ ನ ಪಾತ್ರಕ್ಕೆ ಸಾಕಷ್ಟು ಸ್ಕೋಪ್ ಇರುವಂತಹ ಸಿನಿಮಾಗಳು ತಯಾರಾಗುತ್ತಿದ್ದವು. ಅಂತಹ ಪಾತ್ರಗಳು ಇಂದಿಗೂ ನಮಗೆ ನೆನಪಾಗುತ್ತವೆ. ಇದೀಗ ಗ್ಲಾಮರ್ ಮಧ್ಯೆ ಅಮ್ಮನ ಪಾತ್ರಗಳು ಕಣ್ಮರೆ ಆಗುತ್ತಿವೆ. ಅಮ್ಮನ (10) ದಿನದ ನಿಮಿತ್ತ ಒಂದು ವಿಶೇಷ ಲೇಖನ.

ಮೊನ್ನೆಯವರೆಗೂ ಸ್ಯಾಂಡಲ್‍ವುಡ್‍ನಲ್ಲಿ ಮಚ್ಚು ಮತ್ತು ಮದರ್ ಸೆಂಟಿಮೆಂಟ್ ಚಿತ್ರಗಳು ಚಾಲ್ತಿಯಲ್ಲಿದ್ದವು. ಬಾಲಿವುಡ್‍ಗೆ ಹೋಲಿಸಿದಲ್ಲಿ ಇಲ್ಲಿ ಅಮ್ಮನ ಪಾತ್ರಕ್ಕೆ ಹೆಚ್ಚಿನ ನಷ್ಟವಾಗಿಲ್ಲ ನಿಜ. ಆದರೆ ಪಾತ್ರದ ಚಿತ್ರಣಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ನಿರಾಸೆಯಾಗುವುದು ಹೌದು. ವರ್ಷದಲ್ಲಿ ತೆರೆಕಾಣುವ ನೂರಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಮ್ಮ ಕಾಣಿಸುವುದು ಬೆರಳೆಣಿಕೆಯ ಪಾತ್ರಗಳಲ್ಲಿ ಮಾತ್ರ. ಅವೂ ಕೂಡ ಬಹುಕಾಲ ನೆನಪಿನಲ್ಲುಳಿಯುವುದಿಲ್ಲ ಎನ್ನುವುದು ವಿಪರ್ಯಾಸ.

ದಕ್ಷಿಣ ಭಾರತದ ಇತರೆ ಪ್ರಾದೇಶಿಕ ಭಾಷಾ ಚಿತ್ರಗಳೂ ಇದಕ್ಕೆ ಹೊರತಲ್ಲ. ದೊಡ್ಡ ಸದ್ದು ಮಾಡಿದ ‘ಕೆಜಿಎಫ್’ನಲ್ಲಿ ಅಮ್ಮನ ಕುರಿತಾದ ಸುಂದರ ಗೀತೆ, ಚಿತ್ರಣವಿದ್ದರೂ ಪಾತ್ರ ಬಹುಕಾಲ ನೆನಪಿನಲ್ಲುಳಿಯದು. ಆದರೆ ಕಳೆದ ದಶಕದಿಂದೀಚಿನ ಕೆಲವು ತಮಿಳು, ಮಲಯಾಳಂ ಸಿನಿಮಾಗಳಲ್ಲಿ ‘ತಾಯಿ’ಗೆ ಮಹತ್ವದ ಪಾತ್ರಗಳಿದ್ದವು. ಗಟ್ಟಿಗಿತ್ತಿಯಾಗಿ ನೆಲದ ಗುಣದ ಜೊತೆ ಬೆಸೆದುಕೊಂಡಂತಹ ಚಿತ್ರಣಗಳು ಅಲ್ಲಿ ಕಾಣಿಸಿದವು.

ಗ್ಲ್ಯಾಮರ್ ಅಮ್ಮ

ಮಚ್ಚಿನ ಚಿತ್ರಗಳಿಗೆ ಮದರ್ ಸೆಂಟಿಮೆಂಟ್ ಜೋಡಿಸಿದ ಕೀರ್ತಿ, ನಿರ್ದೇಶಕ ಪ್ರೇಮ್‍ಗೆ ಸಲ್ಲುತ್ತದೆ. ಅವರ ಸೂಪರ್‌‌‌ಹಿಟ್ `ಜೋಗಿ’ ಚಿತ್ರದಲ್ಲಿ ಅಮ್ಮನ (ಆರುಂಧತಿ ನಾಗ್) ಪಾತ್ರಕ್ಕೆ ಹೆಚ್ಚಿನ ಸ್ಕೋಪ್ ಇತ್ತು. ಅಮ್ಮನ ಪ್ರೀತಿಯ ಜೊತೆಗೆ ಮಚ್ಚಿನ ಆರ್ಭಟಕ್ಕೂ ಅಲ್ಲಿ ಸಮಪಾಲು. ಅಮ್ಮನನ್ನು ನೆನಪಿಸುವಲ್ಲಿ ಪ್ರೇಮ್ ಯಶಸ್ವಿಯಾದರೂ, ಪ್ರೇಕ್ಷಕರು ಮಚ್ಚಿನ ಕಥೆಯೆಂದೇ ಮಾತನಾಡಿಕೊಂಡರು. ಇದಕ್ಕೂ ಮುನ್ನ ಅವರೇ ನಿರ್ದೇಶಿಸಿದ್ದ `ಎಸ್‌ಕ್ಯೂಸ್ ಮಿ’ ಚಿತ್ರದಲ್ಲೂ ಅಮ್ಮ (ಸುಮಲತಾ) ಇದ್ದಳು. ಮಾತೃಭಾವಕ್ಕಿಂತ ಮಿಗಿಲಾಗಿ ಅಲ್ಲಿ ನಟಿಯ ಲಿಪ್‍ಸ್ಟಿಕ್ ಮಿರುಗಿದ್ದು ಬದಲಾದ ಚಿತ್ರಣಕ್ಕೆ ಕೈಗನ್ನಿಡಿ!

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಸುಮಲತ

`ಜೋಗಿ’ ಚಿತ್ರದ ಯಶಸ್ಸಿನೊಂದಿಗೆ `ಮಚ್ಚು ಮತ್ತು ಮದರ್ ಸೆಂಟಿಮೆಂಟ್’ ಕಾಂಬಿನೇಷನ್‍ನಲ್ಲಿ ಸಾಕಷ್ಟು ಚಿತ್ರಗಳು ತೆರೆಕಂಡವು. ಮಚ್ಚು ಬೀಸುವ ಭರದಲ್ಲಿ ನಿರ್ದೇಶಕರು ಅಮ್ಮನ ಪಾತ್ರಗಳನ್ನು ಜೋಕರ್‌ಗಳಂತೆ ಚಿತ್ರಿಸಿ ಪ್ರೇಕ್ಷಕರಿಗೆ ಬೇಸರ ಉಂಟುಮಾಡಿದ್ದೂ ಇದೆ. ನಾಯಕನ ಇಮೇಜು ಹೆಚ್ಚಿಸಲು ಅಮ್ಮನನ್ನು ಅತಿ ಭಾವುಕತನ, ಕಣ್ಣೀರಧಾರೆಯಲ್ಲಿ ತೋರಿಸುವ ಪರಿಪಾಠ ಜಾರಿಗೆ ಬಂತು.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಅರುಂದತಿ ನಾಗ್

ಸ್ನೇಹಿತೆಯಂಥ ಅಮ್ಮ

`ಮುಂಗಾರುಮಳೆ’ ಸ್ಯಾಂಡಲ್‍ವುಡ್‍ನ ಟ್ರೆಂಡ್ ಸೆಟರ್ ಸಿನೆಮಾ. ಇಲ್ಲಿ ನಿರ್ದೇಶಕ ಯೋಗರಾಜ್ ಭಟ್, ಅಮ್ಮನ ಪಾತ್ರವನ್ನು ವಾಸ್ತವಕ್ಕೆ ಕರೆತಂದಿದ್ದರು. ಬೇರೊಬ್ಬನನ್ನು ಮದುವೆಯಾಗುತ್ತಿರುವ ಹುಡುಗಿಯನ್ನು ಪ್ರೀತಿಸುವ ಮಗನ ಕೆನ್ನೆಗೆ ಹೊಡೆದು ಬುದ್ಧಿ ಹೇಳುವ ಅಮ್ಮನ ಪಾತ್ರವದು. ಆಧುನಿಕ ಮನೋಭಾವದ ಸ್ನೇಹಿತೆಯಂಥ ಅಮ್ಮನನ್ನು ಪ್ರೇಕ್ಷಕರೂ ಪ್ರೀತಿಯಿಂದ ಒಪ್ಪಿಕೊಂಡರು. ಆದರೆ `ಮಳೆ’ ಸ್ಪೂರ್ತಿಯಿಂದ ನಂತರದಲ್ಲಿ ತಯಾರಾದ ಹಲವಾರು ಚಿತ್ರಗಳಲ್ಲಿ ಅಮ್ಮನ ಪಾತ್ರಗಳು ಸೊರಗಿದವು.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಸುಧಾ ಬೆಳವಾಡಿ

 

`ವಂಶಿ’ (ಅಮ್ಮನಾಗಿ ಲಕ್ಷ್ಮಿ ನಟಿಸಿದ್ದರು) ಸೇರಿದಂತೆ ಒಂದೆರಡು ಚಿತ್ರಗಳನ್ನು ಹೊರತುಪಡಿಸಿದರೆ ಇತ್ತೀಚಿನ ಚಿತ್ರಗಳಲ್ಲಿ ಅಮ್ಮ ಪ್ರೇಕ್ಷಕರನ್ನು ತಲುಪಲೇ ಇಲ್ಲ. ನಂತರ ಒಂದಷ್ಟು ವರ್ಷ ನಿರ್ದೇಶಕ ಅಪ್ಪ-ಮಗನ ಸೆಂಟಿಮೆಂಟಿಗೆ ಹೊರಳಿದ್ದರು! `ಮುಂಗಾರುಮಳೆ’ಯ ಅಮ್ಮ ಸುಧಾ ಬೆಳವಾಡಿ ಬದಲಾದ ಟ್ರೆಂಡ್ ಬಗ್ಗೆ ಬೇಸರದಿಂದಲೇ ಮಾತನಾಡುತ್ತಾರೆ.

`ಯೋಗರಾಜ್ ಭಟ್ಟರ ಚಿತ್ರದಲ್ಲಿ ಅಮ್ಮನ ಪಾತ್ರಕ್ಕೊಂದು ಭದ್ರ ನೆಲೆಯಿತ್ತು. ಇಲ್ಲಿಯವರೆಗೂ ನನಗೆ ಅಂಥ ಮತ್ತೊಂದು ಪಾತ್ರ ಸಿಕ್ಕಿಲ್ಲ. ಈಗಿನವರು ಸೃಷ್ಟಿಸುವ ಅಮ್ಮನ ಪಾತ್ರಕ್ಕೆ ಸ್ವಂತ ನಿಲುವು, ವ್ಯಕ್ತಿತ್ವವೇ ಇರೋಲ್ಲ. ಹೊಸ ಟ್ರೆಂಡ್‍ನ ಪ್ರೇಕ್ಷಕರಿಗೆ ಇಷ್ಟವಾಗುವಂಥ ಸತ್ವಯುತ ಅಮ್ಮನ ಪಾತ್ರ ಸೃಷ್ಟಿಸುವಲ್ಲಿ ನಮ್ಮವರು ವಿಫಲರಾಗುತ್ತಿದ್ದಾರೆ’ ಎನ್ನುತ್ತಾರೆ ಅವರು.

ಅದೊಂದು ಕಾಲವಿತ್ತು…

ಈ ಕ್ಷಣವೂ ಅಮ್ಮನ ಪಾತ್ರವೆಂದರೆ ಕನ್ನಡಿಗರ ಕಣ್ತುಂಬುವುದು ಪಂಡರೀಭಾಯಿ. ಸುಂದರ, ಸೌಮ್ಯ ಮುಖದ ಕರುಣಾಮಯಿ ಭಾವದ ಕಲಾವಿದೆ ಅಮ್ಮನ ಪಾತ್ರಕ್ಕೆ ವಿಶೇಷ ಮೆರುಗು ತಂದುಕೊಟ್ಟರು. ಸ್ವಭಾವತಃ ಮಾತೃಹೃದಯಿ ಪಂಡರೀಭಾಯಿ ತೆರೆಯ ಮೇಲೆ ಕೂಡ ಹಾಗೆಯೇ ಕಾಣಿಸಿದರು ಎಂದು ಅವರನ್ನು ಬಲ್ಲ ಕಲಾವಿದರು, ತಂತ್ರಜ್ಞರು `ಅಮ್ಮ’ನನ್ನು ನೆನಪುಮಾಡಿಕೊಳ್ಳುತ್ತಾರೆ. ಆದವಾನಿ ಲಕ್ಷ್ಮಿದೇವಿ, ಸಾವಿತ್ರಿ, ಎಂ.ವಿ.ರಾಜಮ್ಮ, ಸಾಹುಕಾರ ಜಾನಕಿ ಇತರರು ಅಮ್ಮನ ಪಾತ್ರಗಳಿಗೆ ಜೀವ ತುಂಬಿದ ಅಂದಿನ ಶ್ರೇಷ್ಠ ಕಲಾವಿದೆಯರು. ನಟಿ ಲೀಲಾವತಿ ವೈವಿಧ್ಯಮಯ ತಾಯಿ ಪಾತ್ರಗಳನ್ನು ಪೊರೆದವರು. ಕೆಲವು ಚಿತ್ರಗಳಲ್ಲಿ ಗಯ್ಯಾಳಿ, ಹಠಮಾರಿ ಅಮ್ಮನಾಗಿ ಪ್ರೇಕ್ಷಕರ ನೆನಪಿನಲ್ಲುಳಿದಿದ್ದಾರೆ.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ಅಮ್ಮ
ಪಂಡರಿ ಭಾಯಿ

80ರ ದಶಕದ ಅಂತ್ಯಕ್ಕೆ ಕನ್ನಡ ಚಿತ್ರಗಳಲ್ಲಿ ಹಲವಾರು ಮಾರ್ಪಾಡುಗಳಾಗಿದ್ದವು. ಕೌಟುಂಬಿಕ ಕಥೆಗಳ ಜೊತೆಗೆ ಆಗ ರಾಜಕೀಯ ಸಿನೆಮಾಗಳೂ ತಯಾರಾಗುತ್ತಿದ್ದವು. ಚಿತ್ರದ ನಾಯಕನನ್ನು ಮಣಿಸುವ ಸಲುವಾಗಿ ಖಳನಾಯಕರು ಅಮ್ಮನನ್ನು ಬಂಧನದಲ್ಲಿಟ್ಟು ಹಿಂಸಿಸುತ್ತಿದ್ದರು. ಕಾಂಚನ, ಲೀಲಾವತಿ, ಸರೋಜಾದೇವಿ, ಜಯಂತಿ, ಆರತಿ ಇತರರು ಈ ಪಾತ್ರಗಳಿಗೆ ಜೀವ ತುಂಬಿದರು. ರಮಾದೇವಿ, ಉಮಾಶಿವಶಂಕರ್, ಸತ್ಯಭಾಮಾ, ಕಮಿನಿಧರನ್, ಆಶಾಲತಾ, ಶೋಭಾ ಶಿವಶಂಕರ್, ಹೇಮಾಚೌಧರಿ ಗಯ್ಯಾಳಿ ಅಮ್ಮಂದಿರಾಗಿ ಪ್ರೇಕ್ಷಕರ ಹುಸಿಕೋಪಕ್ಕೆ ಗುರಿಯಾಗುತ್ತಿದ್ದರು.

`ಪುಟ್ನಂಜಿ’ ಚಿತ್ರದ ಉಮಾಶ್ರೀ ಪಾತ್ರಕ್ಕೆ `ಒಡಲಾಳ’ ನಾಟಕದ ಸಾಕವ್ವ ಪ್ರೇರಣೆ. ಇಲ್ಲಿ ಅಮ್ಮನ ಪಾತ್ರಕ್ಕೆ ಮತ್ತೊಂದು ಆಯಾಮ ಸಿಕ್ಕಿದ್ದು ಹೌದು. `ಅಣ್ಣಯ್ಯ’ ಸಿನೆಮಾದಲ್ಲಿ ಹಿಂದಿ ನಟಿ ಅರುಣಾ ಇರಾನಿ ನೆಗೆಟಿವ್ ಶೇಡ್‍ನಲ್ಲಿ ಗಮನ ಸೆಳೆದಿದ್ದರು. ಈ ಮಧ್ಯೆ ತಾಯಿಯ ಆಂತರ್ಯದ ಹೋರಾಟದ ಕಥಾವಸ್ತುವಿನ ಕೆಲವು ಭಿನ್ನ ಅಲೆಯ ಚಿತ್ರಗಳು ತಯಾರಾದವು. `ತಾಯಿಸಾಹೇಬ’, `ತಾಯಿ’, `ಅವ್ವ’ ಕೆಲವು ಉದಾಹರಣೆ. ಎಂದಿನಂತೆ ಈ ಚಿತ್ರಗಳು ಕಲೆಯ ಚೌಕಟ್ಟನ್ನು ದಾಟಲಿಲ್ಲ. ಒಟ್ಟಾರೆಯಾಗಿ ಹೇಳಬೇಕೆಂದರೆ ಕನ್ನಡ ಚಿತ್ರಗಳಲ್ಲಿ `ಅಮ್ಮ’ ಸೊರಗುತ್ತಿದ್ದಾಳೆ. ಕಾಲದ ತಿರುಗಣೆಯಲ್ಲಿ ಮತ್ತೆ ಅಮ್ಮ ನಗೆ ಬೀರುವಳೇ?

ಸ್ಯಾಂಡಲ್‍ವುಡ್‍ನ ಜನಪ್ರಿಯ ಅಮ್ಮಂದಿರು

ಪಂಡರೀಭಾಯಿ (ಪುರಂದರದಾಸ, ಸತ್ಯಹರಿಶ್ಚಂದ್ರ, ಅನುರಾಗ ಅರಳಿತು), ಆದವಾನಿ ಲಕ್ಷ್ಮಿದೇವಿ (ಗಂಧದ ಗುಡಿ), ಎಂ.ವಿ.ರಾಜಮ್ಮ (ಬಂಗಾರದ ಪಂಜರ), ಲೀಲಾವತಿ (ತಾಯಿಯ ಮಡಿಲಲ್ಲಿ, ನಾಗರಹಾವು, ಯಾರದು), ಕಾಂಚನ (ಶಂಕರ್‍ಗುರು, ದಾರಿ ತಪ್ಪಿದ ಮಗ), ಸರೋಜಾದೇವಿ (ಭಾಗ್ಯವಂತರು), ಆರತಿ (ಕಲಿಯುಗ), ಅರುಣಾ ಇರಾನಿ (ಅಣ್ಣಯ್ಯ), ಉಮಾಶ್ರೀ (ಪುಟ್ನಂಜಿ), ಭಾರತಿ (ದೊರೆ), ಸುಮಿತ್ರಾ (ರಾಮಾಚಾರಿ), ಸುಮಲತಾ (ಎಕ್ಸ್‍ಕ್ಯೂಸ್ ಮಿ), ಅರುಂಧತಿ ನಾಗ್ (ಜೋಗಿ), ಲಕ್ಷ್ಮಿ (ಅಮ್ಮ, ಹೂವು-ಹಣ್ಣು, ವಂಶಿ), ಸುಧಾ ಬೆಳವಾಡಿ (ಮುಂಗಾರು ಮಳೆ), ತಾರಾ (ಡೆಡ್ಲಿ ಸೋಮ), ರ‍್ಚನಾ ಜೋಯಿಸ್ (ಕೆಜಿಎಫ್)


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್


ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...