Homeಮುಖಪುಟಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’

- Advertisement -
- Advertisement -

ದಶಕಗಳ ಹಿಂದೆ ಅಮ್ಮ ನ ಪಾತ್ರಕ್ಕೆ ಸಾಕಷ್ಟು ಸ್ಕೋಪ್ ಇರುವಂತಹ ಸಿನಿಮಾಗಳು ತಯಾರಾಗುತ್ತಿದ್ದವು. ಅಂತಹ ಪಾತ್ರಗಳು ಇಂದಿಗೂ ನಮಗೆ ನೆನಪಾಗುತ್ತವೆ. ಇದೀಗ ಗ್ಲಾಮರ್ ಮಧ್ಯೆ ಅಮ್ಮನ ಪಾತ್ರಗಳು ಕಣ್ಮರೆ ಆಗುತ್ತಿವೆ. ಅಮ್ಮನ (10) ದಿನದ ನಿಮಿತ್ತ ಒಂದು ವಿಶೇಷ ಲೇಖನ.

ಮೊನ್ನೆಯವರೆಗೂ ಸ್ಯಾಂಡಲ್‍ವುಡ್‍ನಲ್ಲಿ ಮಚ್ಚು ಮತ್ತು ಮದರ್ ಸೆಂಟಿಮೆಂಟ್ ಚಿತ್ರಗಳು ಚಾಲ್ತಿಯಲ್ಲಿದ್ದವು. ಬಾಲಿವುಡ್‍ಗೆ ಹೋಲಿಸಿದಲ್ಲಿ ಇಲ್ಲಿ ಅಮ್ಮನ ಪಾತ್ರಕ್ಕೆ ಹೆಚ್ಚಿನ ನಷ್ಟವಾಗಿಲ್ಲ ನಿಜ. ಆದರೆ ಪಾತ್ರದ ಚಿತ್ರಣಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ನಿರಾಸೆಯಾಗುವುದು ಹೌದು. ವರ್ಷದಲ್ಲಿ ತೆರೆಕಾಣುವ ನೂರಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಮ್ಮ ಕಾಣಿಸುವುದು ಬೆರಳೆಣಿಕೆಯ ಪಾತ್ರಗಳಲ್ಲಿ ಮಾತ್ರ. ಅವೂ ಕೂಡ ಬಹುಕಾಲ ನೆನಪಿನಲ್ಲುಳಿಯುವುದಿಲ್ಲ ಎನ್ನುವುದು ವಿಪರ್ಯಾಸ.

ದಕ್ಷಿಣ ಭಾರತದ ಇತರೆ ಪ್ರಾದೇಶಿಕ ಭಾಷಾ ಚಿತ್ರಗಳೂ ಇದಕ್ಕೆ ಹೊರತಲ್ಲ. ದೊಡ್ಡ ಸದ್ದು ಮಾಡಿದ ‘ಕೆಜಿಎಫ್’ನಲ್ಲಿ ಅಮ್ಮನ ಕುರಿತಾದ ಸುಂದರ ಗೀತೆ, ಚಿತ್ರಣವಿದ್ದರೂ ಪಾತ್ರ ಬಹುಕಾಲ ನೆನಪಿನಲ್ಲುಳಿಯದು. ಆದರೆ ಕಳೆದ ದಶಕದಿಂದೀಚಿನ ಕೆಲವು ತಮಿಳು, ಮಲಯಾಳಂ ಸಿನಿಮಾಗಳಲ್ಲಿ ‘ತಾಯಿ’ಗೆ ಮಹತ್ವದ ಪಾತ್ರಗಳಿದ್ದವು. ಗಟ್ಟಿಗಿತ್ತಿಯಾಗಿ ನೆಲದ ಗುಣದ ಜೊತೆ ಬೆಸೆದುಕೊಂಡಂತಹ ಚಿತ್ರಣಗಳು ಅಲ್ಲಿ ಕಾಣಿಸಿದವು.

ಗ್ಲ್ಯಾಮರ್ ಅಮ್ಮ

ಮಚ್ಚಿನ ಚಿತ್ರಗಳಿಗೆ ಮದರ್ ಸೆಂಟಿಮೆಂಟ್ ಜೋಡಿಸಿದ ಕೀರ್ತಿ, ನಿರ್ದೇಶಕ ಪ್ರೇಮ್‍ಗೆ ಸಲ್ಲುತ್ತದೆ. ಅವರ ಸೂಪರ್‌‌‌ಹಿಟ್ `ಜೋಗಿ’ ಚಿತ್ರದಲ್ಲಿ ಅಮ್ಮನ (ಆರುಂಧತಿ ನಾಗ್) ಪಾತ್ರಕ್ಕೆ ಹೆಚ್ಚಿನ ಸ್ಕೋಪ್ ಇತ್ತು. ಅಮ್ಮನ ಪ್ರೀತಿಯ ಜೊತೆಗೆ ಮಚ್ಚಿನ ಆರ್ಭಟಕ್ಕೂ ಅಲ್ಲಿ ಸಮಪಾಲು. ಅಮ್ಮನನ್ನು ನೆನಪಿಸುವಲ್ಲಿ ಪ್ರೇಮ್ ಯಶಸ್ವಿಯಾದರೂ, ಪ್ರೇಕ್ಷಕರು ಮಚ್ಚಿನ ಕಥೆಯೆಂದೇ ಮಾತನಾಡಿಕೊಂಡರು. ಇದಕ್ಕೂ ಮುನ್ನ ಅವರೇ ನಿರ್ದೇಶಿಸಿದ್ದ `ಎಸ್‌ಕ್ಯೂಸ್ ಮಿ’ ಚಿತ್ರದಲ್ಲೂ ಅಮ್ಮ (ಸುಮಲತಾ) ಇದ್ದಳು. ಮಾತೃಭಾವಕ್ಕಿಂತ ಮಿಗಿಲಾಗಿ ಅಲ್ಲಿ ನಟಿಯ ಲಿಪ್‍ಸ್ಟಿಕ್ ಮಿರುಗಿದ್ದು ಬದಲಾದ ಚಿತ್ರಣಕ್ಕೆ ಕೈಗನ್ನಿಡಿ!

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಸುಮಲತ

`ಜೋಗಿ’ ಚಿತ್ರದ ಯಶಸ್ಸಿನೊಂದಿಗೆ `ಮಚ್ಚು ಮತ್ತು ಮದರ್ ಸೆಂಟಿಮೆಂಟ್’ ಕಾಂಬಿನೇಷನ್‍ನಲ್ಲಿ ಸಾಕಷ್ಟು ಚಿತ್ರಗಳು ತೆರೆಕಂಡವು. ಮಚ್ಚು ಬೀಸುವ ಭರದಲ್ಲಿ ನಿರ್ದೇಶಕರು ಅಮ್ಮನ ಪಾತ್ರಗಳನ್ನು ಜೋಕರ್‌ಗಳಂತೆ ಚಿತ್ರಿಸಿ ಪ್ರೇಕ್ಷಕರಿಗೆ ಬೇಸರ ಉಂಟುಮಾಡಿದ್ದೂ ಇದೆ. ನಾಯಕನ ಇಮೇಜು ಹೆಚ್ಚಿಸಲು ಅಮ್ಮನನ್ನು ಅತಿ ಭಾವುಕತನ, ಕಣ್ಣೀರಧಾರೆಯಲ್ಲಿ ತೋರಿಸುವ ಪರಿಪಾಠ ಜಾರಿಗೆ ಬಂತು.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಅರುಂದತಿ ನಾಗ್

ಸ್ನೇಹಿತೆಯಂಥ ಅಮ್ಮ

`ಮುಂಗಾರುಮಳೆ’ ಸ್ಯಾಂಡಲ್‍ವುಡ್‍ನ ಟ್ರೆಂಡ್ ಸೆಟರ್ ಸಿನೆಮಾ. ಇಲ್ಲಿ ನಿರ್ದೇಶಕ ಯೋಗರಾಜ್ ಭಟ್, ಅಮ್ಮನ ಪಾತ್ರವನ್ನು ವಾಸ್ತವಕ್ಕೆ ಕರೆತಂದಿದ್ದರು. ಬೇರೊಬ್ಬನನ್ನು ಮದುವೆಯಾಗುತ್ತಿರುವ ಹುಡುಗಿಯನ್ನು ಪ್ರೀತಿಸುವ ಮಗನ ಕೆನ್ನೆಗೆ ಹೊಡೆದು ಬುದ್ಧಿ ಹೇಳುವ ಅಮ್ಮನ ಪಾತ್ರವದು. ಆಧುನಿಕ ಮನೋಭಾವದ ಸ್ನೇಹಿತೆಯಂಥ ಅಮ್ಮನನ್ನು ಪ್ರೇಕ್ಷಕರೂ ಪ್ರೀತಿಯಿಂದ ಒಪ್ಪಿಕೊಂಡರು. ಆದರೆ `ಮಳೆ’ ಸ್ಪೂರ್ತಿಯಿಂದ ನಂತರದಲ್ಲಿ ತಯಾರಾದ ಹಲವಾರು ಚಿತ್ರಗಳಲ್ಲಿ ಅಮ್ಮನ ಪಾತ್ರಗಳು ಸೊರಗಿದವು.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ 'ಅಮ್ಮ'
ಸುಧಾ ಬೆಳವಾಡಿ

 

`ವಂಶಿ’ (ಅಮ್ಮನಾಗಿ ಲಕ್ಷ್ಮಿ ನಟಿಸಿದ್ದರು) ಸೇರಿದಂತೆ ಒಂದೆರಡು ಚಿತ್ರಗಳನ್ನು ಹೊರತುಪಡಿಸಿದರೆ ಇತ್ತೀಚಿನ ಚಿತ್ರಗಳಲ್ಲಿ ಅಮ್ಮ ಪ್ರೇಕ್ಷಕರನ್ನು ತಲುಪಲೇ ಇಲ್ಲ. ನಂತರ ಒಂದಷ್ಟು ವರ್ಷ ನಿರ್ದೇಶಕ ಅಪ್ಪ-ಮಗನ ಸೆಂಟಿಮೆಂಟಿಗೆ ಹೊರಳಿದ್ದರು! `ಮುಂಗಾರುಮಳೆ’ಯ ಅಮ್ಮ ಸುಧಾ ಬೆಳವಾಡಿ ಬದಲಾದ ಟ್ರೆಂಡ್ ಬಗ್ಗೆ ಬೇಸರದಿಂದಲೇ ಮಾತನಾಡುತ್ತಾರೆ.

`ಯೋಗರಾಜ್ ಭಟ್ಟರ ಚಿತ್ರದಲ್ಲಿ ಅಮ್ಮನ ಪಾತ್ರಕ್ಕೊಂದು ಭದ್ರ ನೆಲೆಯಿತ್ತು. ಇಲ್ಲಿಯವರೆಗೂ ನನಗೆ ಅಂಥ ಮತ್ತೊಂದು ಪಾತ್ರ ಸಿಕ್ಕಿಲ್ಲ. ಈಗಿನವರು ಸೃಷ್ಟಿಸುವ ಅಮ್ಮನ ಪಾತ್ರಕ್ಕೆ ಸ್ವಂತ ನಿಲುವು, ವ್ಯಕ್ತಿತ್ವವೇ ಇರೋಲ್ಲ. ಹೊಸ ಟ್ರೆಂಡ್‍ನ ಪ್ರೇಕ್ಷಕರಿಗೆ ಇಷ್ಟವಾಗುವಂಥ ಸತ್ವಯುತ ಅಮ್ಮನ ಪಾತ್ರ ಸೃಷ್ಟಿಸುವಲ್ಲಿ ನಮ್ಮವರು ವಿಫಲರಾಗುತ್ತಿದ್ದಾರೆ’ ಎನ್ನುತ್ತಾರೆ ಅವರು.

ಅದೊಂದು ಕಾಲವಿತ್ತು…

ಈ ಕ್ಷಣವೂ ಅಮ್ಮನ ಪಾತ್ರವೆಂದರೆ ಕನ್ನಡಿಗರ ಕಣ್ತುಂಬುವುದು ಪಂಡರೀಭಾಯಿ. ಸುಂದರ, ಸೌಮ್ಯ ಮುಖದ ಕರುಣಾಮಯಿ ಭಾವದ ಕಲಾವಿದೆ ಅಮ್ಮನ ಪಾತ್ರಕ್ಕೆ ವಿಶೇಷ ಮೆರುಗು ತಂದುಕೊಟ್ಟರು. ಸ್ವಭಾವತಃ ಮಾತೃಹೃದಯಿ ಪಂಡರೀಭಾಯಿ ತೆರೆಯ ಮೇಲೆ ಕೂಡ ಹಾಗೆಯೇ ಕಾಣಿಸಿದರು ಎಂದು ಅವರನ್ನು ಬಲ್ಲ ಕಲಾವಿದರು, ತಂತ್ರಜ್ಞರು `ಅಮ್ಮ’ನನ್ನು ನೆನಪುಮಾಡಿಕೊಳ್ಳುತ್ತಾರೆ. ಆದವಾನಿ ಲಕ್ಷ್ಮಿದೇವಿ, ಸಾವಿತ್ರಿ, ಎಂ.ವಿ.ರಾಜಮ್ಮ, ಸಾಹುಕಾರ ಜಾನಕಿ ಇತರರು ಅಮ್ಮನ ಪಾತ್ರಗಳಿಗೆ ಜೀವ ತುಂಬಿದ ಅಂದಿನ ಶ್ರೇಷ್ಠ ಕಲಾವಿದೆಯರು. ನಟಿ ಲೀಲಾವತಿ ವೈವಿಧ್ಯಮಯ ತಾಯಿ ಪಾತ್ರಗಳನ್ನು ಪೊರೆದವರು. ಕೆಲವು ಚಿತ್ರಗಳಲ್ಲಿ ಗಯ್ಯಾಳಿ, ಹಠಮಾರಿ ಅಮ್ಮನಾಗಿ ಪ್ರೇಕ್ಷಕರ ನೆನಪಿನಲ್ಲುಳಿದಿದ್ದಾರೆ.

ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ಅಮ್ಮ
ಪಂಡರಿ ಭಾಯಿ

80ರ ದಶಕದ ಅಂತ್ಯಕ್ಕೆ ಕನ್ನಡ ಚಿತ್ರಗಳಲ್ಲಿ ಹಲವಾರು ಮಾರ್ಪಾಡುಗಳಾಗಿದ್ದವು. ಕೌಟುಂಬಿಕ ಕಥೆಗಳ ಜೊತೆಗೆ ಆಗ ರಾಜಕೀಯ ಸಿನೆಮಾಗಳೂ ತಯಾರಾಗುತ್ತಿದ್ದವು. ಚಿತ್ರದ ನಾಯಕನನ್ನು ಮಣಿಸುವ ಸಲುವಾಗಿ ಖಳನಾಯಕರು ಅಮ್ಮನನ್ನು ಬಂಧನದಲ್ಲಿಟ್ಟು ಹಿಂಸಿಸುತ್ತಿದ್ದರು. ಕಾಂಚನ, ಲೀಲಾವತಿ, ಸರೋಜಾದೇವಿ, ಜಯಂತಿ, ಆರತಿ ಇತರರು ಈ ಪಾತ್ರಗಳಿಗೆ ಜೀವ ತುಂಬಿದರು. ರಮಾದೇವಿ, ಉಮಾಶಿವಶಂಕರ್, ಸತ್ಯಭಾಮಾ, ಕಮಿನಿಧರನ್, ಆಶಾಲತಾ, ಶೋಭಾ ಶಿವಶಂಕರ್, ಹೇಮಾಚೌಧರಿ ಗಯ್ಯಾಳಿ ಅಮ್ಮಂದಿರಾಗಿ ಪ್ರೇಕ್ಷಕರ ಹುಸಿಕೋಪಕ್ಕೆ ಗುರಿಯಾಗುತ್ತಿದ್ದರು.

`ಪುಟ್ನಂಜಿ’ ಚಿತ್ರದ ಉಮಾಶ್ರೀ ಪಾತ್ರಕ್ಕೆ `ಒಡಲಾಳ’ ನಾಟಕದ ಸಾಕವ್ವ ಪ್ರೇರಣೆ. ಇಲ್ಲಿ ಅಮ್ಮನ ಪಾತ್ರಕ್ಕೆ ಮತ್ತೊಂದು ಆಯಾಮ ಸಿಕ್ಕಿದ್ದು ಹೌದು. `ಅಣ್ಣಯ್ಯ’ ಸಿನೆಮಾದಲ್ಲಿ ಹಿಂದಿ ನಟಿ ಅರುಣಾ ಇರಾನಿ ನೆಗೆಟಿವ್ ಶೇಡ್‍ನಲ್ಲಿ ಗಮನ ಸೆಳೆದಿದ್ದರು. ಈ ಮಧ್ಯೆ ತಾಯಿಯ ಆಂತರ್ಯದ ಹೋರಾಟದ ಕಥಾವಸ್ತುವಿನ ಕೆಲವು ಭಿನ್ನ ಅಲೆಯ ಚಿತ್ರಗಳು ತಯಾರಾದವು. `ತಾಯಿಸಾಹೇಬ’, `ತಾಯಿ’, `ಅವ್ವ’ ಕೆಲವು ಉದಾಹರಣೆ. ಎಂದಿನಂತೆ ಈ ಚಿತ್ರಗಳು ಕಲೆಯ ಚೌಕಟ್ಟನ್ನು ದಾಟಲಿಲ್ಲ. ಒಟ್ಟಾರೆಯಾಗಿ ಹೇಳಬೇಕೆಂದರೆ ಕನ್ನಡ ಚಿತ್ರಗಳಲ್ಲಿ `ಅಮ್ಮ’ ಸೊರಗುತ್ತಿದ್ದಾಳೆ. ಕಾಲದ ತಿರುಗಣೆಯಲ್ಲಿ ಮತ್ತೆ ಅಮ್ಮ ನಗೆ ಬೀರುವಳೇ?

ಸ್ಯಾಂಡಲ್‍ವುಡ್‍ನ ಜನಪ್ರಿಯ ಅಮ್ಮಂದಿರು

ಪಂಡರೀಭಾಯಿ (ಪುರಂದರದಾಸ, ಸತ್ಯಹರಿಶ್ಚಂದ್ರ, ಅನುರಾಗ ಅರಳಿತು), ಆದವಾನಿ ಲಕ್ಷ್ಮಿದೇವಿ (ಗಂಧದ ಗುಡಿ), ಎಂ.ವಿ.ರಾಜಮ್ಮ (ಬಂಗಾರದ ಪಂಜರ), ಲೀಲಾವತಿ (ತಾಯಿಯ ಮಡಿಲಲ್ಲಿ, ನಾಗರಹಾವು, ಯಾರದು), ಕಾಂಚನ (ಶಂಕರ್‍ಗುರು, ದಾರಿ ತಪ್ಪಿದ ಮಗ), ಸರೋಜಾದೇವಿ (ಭಾಗ್ಯವಂತರು), ಆರತಿ (ಕಲಿಯುಗ), ಅರುಣಾ ಇರಾನಿ (ಅಣ್ಣಯ್ಯ), ಉಮಾಶ್ರೀ (ಪುಟ್ನಂಜಿ), ಭಾರತಿ (ದೊರೆ), ಸುಮಿತ್ರಾ (ರಾಮಾಚಾರಿ), ಸುಮಲತಾ (ಎಕ್ಸ್‍ಕ್ಯೂಸ್ ಮಿ), ಅರುಂಧತಿ ನಾಗ್ (ಜೋಗಿ), ಲಕ್ಷ್ಮಿ (ಅಮ್ಮ, ಹೂವು-ಹಣ್ಣು, ವಂಶಿ), ಸುಧಾ ಬೆಳವಾಡಿ (ಮುಂಗಾರು ಮಳೆ), ತಾರಾ (ಡೆಡ್ಲಿ ಸೋಮ), ರ‍್ಚನಾ ಜೋಯಿಸ್ (ಕೆಜಿಎಫ್)


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್


ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...