Homeಕರ್ನಾಟಕಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾ: ನಟಿ ರಾಗಿಣಿ ಇನ್ನೂ 5 ದಿನ ಸಿಸಿಬಿ ಕಸ್ಟಡಿಗೆ!

ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾ: ನಟಿ ರಾಗಿಣಿ ಇನ್ನೂ 5 ದಿನ ಸಿಸಿಬಿ ಕಸ್ಟಡಿಗೆ!

ನ್ಯಾಯಾಲಯ ಸಿಸಿಬಿಗೆ 5 ದಿನಗಳ ಕಸ್ಟಡಿ ನೀಡಿದೆ. ಇತ್ತ ಪೊಲೀಸ್ ಕಸ್ಟಡಿ ವಿಸ್ತರಣೆ ಆದೇಶ ಕೇಳಿ ನಟಿ ರಾಗಿಣಿ ಭಾವುಕರಾಗಿದ್ದಾರೆ ಎಂದು ಹೇಳಲಾಗಿದೆ. 

- Advertisement -
- Advertisement -

ಡ್ರಗ್ಸ್ ಮಾಫಿಯಾ ಜೊತೆಗೆ ನಂಟು ಹೊಂದಿದ್ದಾರೆ ಎಂಬ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಮತ್ತೆ 5 ದಿನಗಳ ಕಾಲ ಸಿಸಿಬಿ ವಿಚಾರಣೆ ಎದುರಿಸಲಿದ್ದಾರೆ. ವಿಚಾರಣೆ ವೇಳೆ ಮಾಹಿತಿ ನೀಡಿಲ್ಲ ಎಂದು ಸಿಸಿಬಿ ಪೊಲೀಸರು ನ್ಯಾಯಾಲಯದ ಮುಂದೆ ಹೇಳಿ 10 ದಿನಗಳ ಕಸ್ಟಡಿಗೆ ಮನವಿಯಿಟ್ಟಿದ್ದರು.

ಆದರೆ 1ನೇ ಎಸಿಎಂಎಂ ನ್ಯಾಯಾಲಯ ಸಿಸಿಬಿಗೆ 5 ದಿನಗಳ ಕಸ್ಟಡಿ ನೀಡಿದೆ. ಇತ್ತ ಪೊಲೀಸ್ ಕಸ್ಟಡಿ ವಿಸ್ತರಣೆಯ ಆದೇಶ ಕೇಳಿ ನಟಿ ರಾಗಿಣಿ ಭಾವುಕರಾಗಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ’ರಾಗಿಣಿ ಬಿಜೆಪಿ ಸದಸ್ಯರಲ್ಲ; ಅವರ ಕಾರ್ಯಚಟುವಟಿಕೆಗಳಿಗೆ ಪಕ್ಷ ಹೊಣೆಯಾಗದು: ಬಿಜೆಪಿ

ಇತ್ತ ವಿಪಕ್ಷ ನಾಯಕ ಸಿದ್ದರಾಮಯ್ಯ “ಮಾದಕ ವಸ್ತುಗಳ ಮಾರಾಟ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಸಿ, ಸೂಕ್ತ ಸಾಕ್ಷ್ಯಗಳಿದ್ದಲ್ಲಿ ಯಾರೇ ಆದರೂ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಿ. ಡ್ರಗ್ಸ್ ಮಾರಾಟ, ಉತ್ಪಾದನೆ, ಸೇವನೆ ಎಲ್ಲವೂ ಶಿಕ್ಷಾರ್ಹವೇ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅದು ಅಪರಾಧ ಎಂಬುದರಲ್ಲಿ ಎರಡು ಮಾತಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಡ್ರಗ್ ಮಾಫಿಯಾ ವಿರುದ್ಧ ತೀವ್ರ ತನಿಖೆ ನಡೆಸುತ್ತಿರುವ ಪೊಲೀಸರು ಇಂದು 2 ಕಡೆ ಲಕ್ಷಾಂತರ ಮೌಲ್ಯದ ಡ್ರಗ್ಸ್ ಮತ್ತು 30ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಎರಡು ಟ್ವೀಟ್‌ಗಳನ್ನು ಮಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್  “ಡಾರ್ಕ್ ವೆಬ್ ಮುಖಾಂತರ ಖರೀದಿ, ಬೈಕ್ ನಲ್ಲಿ ಡೆಲಿವರಿ, ಫ್ಲ್ಯಾಟ್ ನಲ್ಲಿ ಡ್ರಗ್ಸ್ ದಾಸ್ತಾನು ಮುಂತಾದ ರೀತಿಯಲ್ಲಿ ಡ್ರಗ್ಸ್ ಸಾಗಣೆ, ಮಾರಾಟ ಮಾಡುತ್ತಿದ್ದ 11 ಆರೋಪಿಗಳನ್ನು ಬಂಧಿಸಿ, 90ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿರುವ ಪೂರ್ವ ವಿಭಾಗದ ಪೊಲೀಸರ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಾ 50,000 ರೂ. ಬಹುಮಾನವನ್ನು ನೀಡಲಾಗಿದೆ.” ಎಂದಿದ್ದಾರೆ.

ಇನ್ನೋಂದು ಟ್ವೀಟ್‌ನಲ್ಲಿ, “ಪೊಲೀಸ್ ಇಲಾಖೆ ಮಾದಕ ವಸ್ತುಗಳ ಜಟಿಲ ಜಾಲವನ್ನು ಭೇದಿಸಿ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುತ್ತದೆ. 1 ಕೋಟಿ 20 ಲಕ್ಷದ 40 ಸಾವಿರಕ್ಕೂ ಹೆಚ್ಚು ಮೊತ್ತದ ಡ್ರಗ್ಸ್ ಜಾಲವನ್ನು ಭೇದಿಸಿ, 20 ಆರೋಪಿಗಳನ್ನು ಬಂಧಿಸಿ, 10 ಪ್ರಕರಣಗಳನ್ನು ದಾಖಲಿಸಿರುವ ಆಗ್ನೇಯ ವಿಭಾಗದ ಪೊಲೀಸರ ಕಾರ್ಯಾಚರಣೆಯನ್ನು ಪ್ರಶಂಸಿಸುತ್ತಾ 50,000 ರೂ. ಬಹುಮಾನ ನೀಡಲಾಗಿದೆ ಎಂದಿದ್ದಾರೆ.

 

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಮಾಫಿಯಾ ಇದೆ ಎಂಬ ವಿಷಯ ಹೊರಬಂದಾಗಿನಿಂದ ಪೊಲೀಸರ ಕಾರ್ಯ ಜೋರಾಗಿದ್ದು, ನಗರದಲ್ಲೂ ಇರುವ ಡ್ರಗ್ಸ್ ಜಾಲ ಬಯಲಿಗೆ ಬರುತ್ತಿದೆ.


ಇದನ್ನೂ ಓದಿ:  ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...