Homeಮುಖಪುಟಒಂದು ವರ್ಷ ನಿರಂತರವಾಗಿ ರೈತ ಹೋರಾಟದ ಗ್ರೌಂಡ್ ರಿಪೋರ್ಟ್ ನೀಡಿದ ಸಂದೀಪ್ ಸಿಂಗ್ ನಿಮಗೆ ಗೊತ್ತೆ?

ಒಂದು ವರ್ಷ ನಿರಂತರವಾಗಿ ರೈತ ಹೋರಾಟದ ಗ್ರೌಂಡ್ ರಿಪೋರ್ಟ್ ನೀಡಿದ ಸಂದೀಪ್ ಸಿಂಗ್ ನಿಮಗೆ ಗೊತ್ತೆ?

ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ದೋಷ ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಕಡಿಮೆ ಸಮಯದಲ್ಲಿ ಹೇಳಲು ಬಹಳಷ್ಟು ವಿಷಯಗಳಿವೆ ಎನ್ನುತ್ತಾರೆ ಸಂದೀಫ್ ಸಿಂಗ್

- Advertisement -
- Advertisement -

“ನಾನು ಕೂಡ ಎಲ್ಲ ರೈತರಂತೆ ಹೊಲ ಮತ್ತು ದನಗಳ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಆದರೆ ರೈತರು ದೆಹಲಿ ಚಲೋಗೆ ಕರೆ ನೀಡಿದರು. ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ”.. ಇವು ಕಳೆದ ಒಂದು ವರ್ಷಕ್ಕೂ ಹೆಚ್ಚು ದಿನಗಳಿಂದ ಹಗಲು ರಾತ್ರಿ ಎನ್ನದೆ, ದೆಹಲಿ ಗಡಿಗಳಲ್ಲಿನ ಮತ್ತು ದೇಶದ ರೈತ ಹೋರಾಟದ ಕ್ಷಣ ಕ್ಷಣದ ಅಧಿಕೃತ ಮಾಹಿತಿ ನೀಡುವ ಸಂದೀಪ್ ಸಿಂಗ್ ಎಂಬ ಯುವಕ/ಪತ್ರಕರ್ತ/ಹೋರಾಟಗಾರನ ಮಾತುಗಳು…

ದೆಹಲಿಯ ಗಡಿಗಳಲ್ಲಿ ಭದ್ರವಾಗಿ ಕೂತಿದ್ದ ಐತಿಹಾಸಿಕ ರೈತ ಹೋರಾಟ ಜಯಗಳಿಸಿದೆ. ಸಂಯುಕ್ತ ಕಿಸಾನ್ ಮೋರ್ಚಾದ ಎಲ್ಲಾ ಹಕ್ಕೊತ್ತಾಗಳನ್ನು ಒಕ್ಕೂಟ ಸರ್ಕಾರ ಒಪ್ಪಿಕೊಂಡಿದೆ. ತಾತ್ಕಾಲಿಕವಾಗಿ ಹೋರಾಟ ನಿಲ್ಲಿಸಿರುವ ರೈತರು ಸಂಭ್ರಮದ ವಿಜಯೀ ಮೆರವಣಿಗೆ ಮೂಲಕ ತಮ್ಮ ಸ್ವಗ್ರಾಮಗಳನ್ನು ತಲುಪುತ್ತಿದ್ದಾರೆ. ಈ ವಿಜಯಕ್ಕೆ ಲಕ್ಷಾಂತರ ಜನರ ಕೊಡುಗೆಯಿದೆ. ಅಂತಯೇ ಸಂದೀಪ್ ಸಿಂಗ್ ತಮ್ಮ ವೇಗವಾದ, ವಸ್ತುನಿಷ್ಠ ವರದಿಗಾರಿಗೆ ಮೂಲಕ ರೈತ ಹೋರಾಟದ ಅಸಲಿ ವಿಷಯಗಳು ಪ್ರಪಂಚ ತಲುಪವಂತೆ ಮಾಡುವ ಮೂಲಕ ಹೋರಾಟದ ಭಾಗವಾಗಿದ್ದರು.

ಪ್ರತಿಭಟನಾನಿರತ ರೈತರ ಮಧ್ಯೆ ಗ್ರೌಂಡ್ ರಿಪೋರ್ಟ್ ಮಾಡುತ್ತ ಅತ್ಯಂತ ವಸ್ತುನಿಷ್ಟ ಪತ್ರಕರ್ತರಲ್ಲಿ ಒಬ್ಬರಾಗಿ ಹೊರಹೊಮ್ಮಿರುವ ಸಂದೀಪ್ ಸಿಂಗ್ “ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ತಪ್ಪುಗಳನ್ನು ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಕಡಿಮೆ ಸಮಯದಲ್ಲಿ ಹೇಳಲು ಬಹಳಷ್ಟು ವಿಷಯಗಳಿವೆ” ಎನ್ನುತ್ತಾರೆ.

ಸಂದೀಪ್‌ ಸಿಂಗ್‌ರವರ ಟ್ವಿಟರ್ ಟೈಮ್‌ಲೈನ್‌ ಅನ್ನು ನೀವು ಗಮನಿಸಿದರೆ ತಿಳಿಯುತ್ತದೆ ಅವರೆಷ್ಟು ಆಳವಾಗಿ ರೈತ ಹೋರಾಟವನ್ನು ವರದಿ ಮಾಡುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು. ಪ್ರತಿ ಗಂಟೆಗೂ ಮೂರು-ನಾಲ್ಕು ವಿಷಯಗಳ ಕುರಿತು ವರದಿ ನೀಡಿರುತ್ತಾರೆ. ಅವೆಲ್ಲವೂ ಬ್ರೇಕಿಂಗ್ ನ್ಯೂಸ್‌ಗಳ ರೂಪದಲ್ಲಿರುತ್ತವೆ. ಅದರೊಂದಿಗೆ ಫೋಟೊ, ವಿಡಿಯೋಗಳು ಇದ್ದು ರೈತ ಹೋರಾಟದ ಸಮರ್ಪಕ ಮಾಹಿತಿ ನೋಡುಗರಿಗೆ ದೊರೆಯುತ್ತದೆ.

ಕಳೆದ ಒಂದು ವರ್ಷದಿಂದಲೂ ರೈತ ಹೋರಾಟದ ಪ್ರತಿ ಮಾಹಿತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ತಲುಪಿಸಲು ಶ್ರಮಿಸುತ್ತಿರುವ ಸಂದೀಪ್ ಸಾವಿರಾರು ಟ್ವೀಟ್‌ಗಳನ್ನು ಮಾಡಿದ್ದಾರೆ. “ಈ ಮೊದಲು ಸಹ ಪಂಜಾಬಿ ಮಾಧ್ಯಮಗಳು ರೈತ ಹೋರಾಟದ ಪ್ರತಿಯೊಂದನ್ನು ವರದಿ ಮಾಡುತ್ತಿದ್ದವು. ಆದರೆ ಅದನ್ನು ದೇಶಕ್ಕೆ ಮತ್ತು ಪ್ರಪಂಚಕ್ಕೆ ತಿಳಿಸಬೇಕಾಗಿತ್ತು. ಅದಕ್ಕಾಗಿ ನಾನು ಪ್ರತಿಯೊಂದನ್ನು ವಿಡಿಯೋ ಮಾಡಿ, ಇಂಗ್ಲಿಷ್‌ನಲ್ಲಿ ಟ್ವೀಟ್ ಮಾಡಲು ಆರಂಭಿಸಿದೆ. ಇದು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ತಲುಪಲು ಸಾಧ್ಯವಾಯಿತು. ಹಾಗಾಗಿ ಮತ್ತಷ್ಟು ತನ್ಮಯತೆಯೊಂದಿಗೆ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ” ಎನ್ನುತ್ತಾರೆ.

“2020ರ ನವೆಂಬರ್ 24 ರಂದು ನಾನು ಪಂಜಾಬ್‌ನ ಹಳ್ಳಿಯಿಂದ ಇಲ್ಲಿಗೆ ಬಂದೆ. ನನ್ನ ಕೆಲವು ವಿಡಿಯೋಗಳು ವೈರಲ್ ಆಗಿವೆ. ನನ್ನ ಟ್ವಿಟರ್ ಫಾಲೋವರ್ಸ್‌ಗಳ ಸಂಖ್ಯೆ ದ್ವಿಗುಣವಾಗಿದೆ. ಮೊದಲು ನಾಲ್ಕು ತಿಂಗಳು ಒಮ್ಮೆಯೂ ರಜೆ ತೆಗೆದುಕೊಳ್ಳಲಿಲ್ಲ. ದೆಹಲಿಯ ಗಡಿಗಳಲ್ಲಿಯೂ ತಿರುಗಾಡುತ್ತ ವರದಿ ಮಾಡುತ್ತಿದ್ದೇನೆ” ಎಂದು ಸಂದೀಪ್ ಸಿಂಗ್ ಹೇಳಿದ್ದಾರೆ.

ತಮ್ಮ ಮೊಬೈಲ್‌ನಲ್ಲಿಯೇ ಪ್ರತಿಭಟನೆಗಳ ಸಣ್ಣ ಸಣ್ಣ ವಿಡಿಯೋಗಳನ್ನು ಮಾಡಿ ಟ್ವೀಟ್ ಮಾಡುವ ಸಂದೀಪ್ ಸಿಂಗ್‌ರವರ ಕೆಲಸಕ್ಕೆ ಹಲವಾರು ಪತ್ರಕರ್ತರು, ಹೋರಾಟಗಾರರು ಬೆಂಬಲ ಸೂಚಿಸಿದ್ದಾರೆ. ಅಲ್‌ಜಜೀರಾ ಟಿವಿ ಸಹ ಅವರ ಬಗ್ಗೆ ವರದಿ ಮಾಡಿದೆ. ಅವರ ಟ್ವೀಟ್‌ಗಳನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ. ಬಹಳಷ್ಟು ಮಾಧ್ಯಮಗಳು ರೈತ ಹೋರಾಟದ ವರದಿ ಮಾಡಲು ಸಂದೀಪ್ ಸಿಂಗ್‌ರವರನ್ನು ಸಂಪನ್ಮೂಲವನ್ನಾಗಿ ನೋಡುತ್ತಾರೆ.

ಒಟ್ಟಿನಲ್ಲಿ ಹವ್ಯಾಸಿ ಪತ್ರಕರ್ತರಾಗಿದ್ದ ಸಂದೀಪ್ ಸಿಂಗ್ ರೈತ ಹೋರಾಟವನ್ನು ಸವಿವರವಾಗಿ ವರದಿ ಮಾಡಿದ ನಂತರ ಖ್ಯಾತರಾಗಿದ್ದಾರೆ. ಗೋದಿ ಮಾಧ್ಯಮಗಳಿಂದ ಬೇಸತ್ತಿರುವ ಸಾವಿರಾರು ರೈತರು ಸಂದೀಪ್‌ರನ್ನು ಅಭಿಮಾನದಿಂದ ನೋಡುತ್ತಾರೆ. ಹಲವಾರು ಪತ್ರಿಕೆಗಳು ಅವರಿಂದ ವರದಿ ಬಯಸಿವೆ ಅಷ್ಟೇ ಅಲ್ಲದೆ ಉದ್ಯೋಗದ ಆಫರ್ ಕೂಡ ನೀಡಿವೆ. ಅವರು ಶ್ರದ್ಧೆಯಿಂದ ಮಾಡಿದ ಕೆಲಸ ದೇಶದ ಹಲವರಿಗೆ ಮಾಹಿತಿ ನೀಡಿದ್ದಲ್ಲದೆ ಅವರಿಗೂ ಖ್ಯಾತಿ ತಂದುಕೊಟ್ಟಿದೆ.

ಇಂದು ಸಹ ಸಂದೀಪ್ ಸಿಂಗ್ ರೈತರ ಫತೇ ಮಾರ್ಚ್ ಅನ್ನು ವರದಿ ಮಾಡಿದ್ದಾರೆ. ಅದಕ್ಕಾಗಿ ಪಂಜಾಬಿನ ಅವರ ಸ್ನೇಹಿತರೊಬ್ಬರು ರೈತರು ಮನೆಗೆ ಬರುತ್ತಿದ್ದಾರೆ. ನೀನು ಯಾವಾಗ ಬರುತ್ತೀ ಸಂದೀಪ್ ಎಂದು ಪ್ರಶ್ನಿಸಿದ್ದಾರೆ. ಒಟ್ಟಿನಲ್ಲಿ ಸಂದೀಪ್‌ರವರ ಈ ಒಂದು ವರ್ಷದ ಶ್ರಮಕ್ಕೆ ಅಭಿನಂದನೆ ಸಲ್ಲಿಸಲೇಬೇಕು.

ಸಂದೀಪ್ ಸಿಂಗ್‌ರವರ ಟ್ವಿಟರ್ ಫಾಲೋ ಮಾಡಲು ಇಲ್ಲಿ ಮತ್ತು ಯೂಟ್ಯೂಬ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ರೈತರ ವಿಜಯೀ ಮೆರವಣಿಗೆ ಆರಂಭ: ವಿಡಿಯೋ – ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...