Homeಮುಖಪುಟಒಂದು ವರ್ಷ ನಿರಂತರವಾಗಿ ರೈತ ಹೋರಾಟದ ಗ್ರೌಂಡ್ ರಿಪೋರ್ಟ್ ನೀಡಿದ ಸಂದೀಪ್ ಸಿಂಗ್ ನಿಮಗೆ ಗೊತ್ತೆ?

ಒಂದು ವರ್ಷ ನಿರಂತರವಾಗಿ ರೈತ ಹೋರಾಟದ ಗ್ರೌಂಡ್ ರಿಪೋರ್ಟ್ ನೀಡಿದ ಸಂದೀಪ್ ಸಿಂಗ್ ನಿಮಗೆ ಗೊತ್ತೆ?

ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ದೋಷ ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಕಡಿಮೆ ಸಮಯದಲ್ಲಿ ಹೇಳಲು ಬಹಳಷ್ಟು ವಿಷಯಗಳಿವೆ ಎನ್ನುತ್ತಾರೆ ಸಂದೀಫ್ ಸಿಂಗ್

- Advertisement -
- Advertisement -

“ನಾನು ಕೂಡ ಎಲ್ಲ ರೈತರಂತೆ ಹೊಲ ಮತ್ತು ದನಗಳ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಆದರೆ ರೈತರು ದೆಹಲಿ ಚಲೋಗೆ ಕರೆ ನೀಡಿದರು. ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ”.. ಇವು ಕಳೆದ ಒಂದು ವರ್ಷಕ್ಕೂ ಹೆಚ್ಚು ದಿನಗಳಿಂದ ಹಗಲು ರಾತ್ರಿ ಎನ್ನದೆ, ದೆಹಲಿ ಗಡಿಗಳಲ್ಲಿನ ಮತ್ತು ದೇಶದ ರೈತ ಹೋರಾಟದ ಕ್ಷಣ ಕ್ಷಣದ ಅಧಿಕೃತ ಮಾಹಿತಿ ನೀಡುವ ಸಂದೀಪ್ ಸಿಂಗ್ ಎಂಬ ಯುವಕ/ಪತ್ರಕರ್ತ/ಹೋರಾಟಗಾರನ ಮಾತುಗಳು…

ದೆಹಲಿಯ ಗಡಿಗಳಲ್ಲಿ ಭದ್ರವಾಗಿ ಕೂತಿದ್ದ ಐತಿಹಾಸಿಕ ರೈತ ಹೋರಾಟ ಜಯಗಳಿಸಿದೆ. ಸಂಯುಕ್ತ ಕಿಸಾನ್ ಮೋರ್ಚಾದ ಎಲ್ಲಾ ಹಕ್ಕೊತ್ತಾಗಳನ್ನು ಒಕ್ಕೂಟ ಸರ್ಕಾರ ಒಪ್ಪಿಕೊಂಡಿದೆ. ತಾತ್ಕಾಲಿಕವಾಗಿ ಹೋರಾಟ ನಿಲ್ಲಿಸಿರುವ ರೈತರು ಸಂಭ್ರಮದ ವಿಜಯೀ ಮೆರವಣಿಗೆ ಮೂಲಕ ತಮ್ಮ ಸ್ವಗ್ರಾಮಗಳನ್ನು ತಲುಪುತ್ತಿದ್ದಾರೆ. ಈ ವಿಜಯಕ್ಕೆ ಲಕ್ಷಾಂತರ ಜನರ ಕೊಡುಗೆಯಿದೆ. ಅಂತಯೇ ಸಂದೀಪ್ ಸಿಂಗ್ ತಮ್ಮ ವೇಗವಾದ, ವಸ್ತುನಿಷ್ಠ ವರದಿಗಾರಿಗೆ ಮೂಲಕ ರೈತ ಹೋರಾಟದ ಅಸಲಿ ವಿಷಯಗಳು ಪ್ರಪಂಚ ತಲುಪವಂತೆ ಮಾಡುವ ಮೂಲಕ ಹೋರಾಟದ ಭಾಗವಾಗಿದ್ದರು.

ಪ್ರತಿಭಟನಾನಿರತ ರೈತರ ಮಧ್ಯೆ ಗ್ರೌಂಡ್ ರಿಪೋರ್ಟ್ ಮಾಡುತ್ತ ಅತ್ಯಂತ ವಸ್ತುನಿಷ್ಟ ಪತ್ರಕರ್ತರಲ್ಲಿ ಒಬ್ಬರಾಗಿ ಹೊರಹೊಮ್ಮಿರುವ ಸಂದೀಪ್ ಸಿಂಗ್ “ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ತಪ್ಪುಗಳನ್ನು ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಕಡಿಮೆ ಸಮಯದಲ್ಲಿ ಹೇಳಲು ಬಹಳಷ್ಟು ವಿಷಯಗಳಿವೆ” ಎನ್ನುತ್ತಾರೆ.

ಸಂದೀಪ್‌ ಸಿಂಗ್‌ರವರ ಟ್ವಿಟರ್ ಟೈಮ್‌ಲೈನ್‌ ಅನ್ನು ನೀವು ಗಮನಿಸಿದರೆ ತಿಳಿಯುತ್ತದೆ ಅವರೆಷ್ಟು ಆಳವಾಗಿ ರೈತ ಹೋರಾಟವನ್ನು ವರದಿ ಮಾಡುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು. ಪ್ರತಿ ಗಂಟೆಗೂ ಮೂರು-ನಾಲ್ಕು ವಿಷಯಗಳ ಕುರಿತು ವರದಿ ನೀಡಿರುತ್ತಾರೆ. ಅವೆಲ್ಲವೂ ಬ್ರೇಕಿಂಗ್ ನ್ಯೂಸ್‌ಗಳ ರೂಪದಲ್ಲಿರುತ್ತವೆ. ಅದರೊಂದಿಗೆ ಫೋಟೊ, ವಿಡಿಯೋಗಳು ಇದ್ದು ರೈತ ಹೋರಾಟದ ಸಮರ್ಪಕ ಮಾಹಿತಿ ನೋಡುಗರಿಗೆ ದೊರೆಯುತ್ತದೆ.

ಕಳೆದ ಒಂದು ವರ್ಷದಿಂದಲೂ ರೈತ ಹೋರಾಟದ ಪ್ರತಿ ಮಾಹಿತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ತಲುಪಿಸಲು ಶ್ರಮಿಸುತ್ತಿರುವ ಸಂದೀಪ್ ಸಾವಿರಾರು ಟ್ವೀಟ್‌ಗಳನ್ನು ಮಾಡಿದ್ದಾರೆ. “ಈ ಮೊದಲು ಸಹ ಪಂಜಾಬಿ ಮಾಧ್ಯಮಗಳು ರೈತ ಹೋರಾಟದ ಪ್ರತಿಯೊಂದನ್ನು ವರದಿ ಮಾಡುತ್ತಿದ್ದವು. ಆದರೆ ಅದನ್ನು ದೇಶಕ್ಕೆ ಮತ್ತು ಪ್ರಪಂಚಕ್ಕೆ ತಿಳಿಸಬೇಕಾಗಿತ್ತು. ಅದಕ್ಕಾಗಿ ನಾನು ಪ್ರತಿಯೊಂದನ್ನು ವಿಡಿಯೋ ಮಾಡಿ, ಇಂಗ್ಲಿಷ್‌ನಲ್ಲಿ ಟ್ವೀಟ್ ಮಾಡಲು ಆರಂಭಿಸಿದೆ. ಇದು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ತಲುಪಲು ಸಾಧ್ಯವಾಯಿತು. ಹಾಗಾಗಿ ಮತ್ತಷ್ಟು ತನ್ಮಯತೆಯೊಂದಿಗೆ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ” ಎನ್ನುತ್ತಾರೆ.

“2020ರ ನವೆಂಬರ್ 24 ರಂದು ನಾನು ಪಂಜಾಬ್‌ನ ಹಳ್ಳಿಯಿಂದ ಇಲ್ಲಿಗೆ ಬಂದೆ. ನನ್ನ ಕೆಲವು ವಿಡಿಯೋಗಳು ವೈರಲ್ ಆಗಿವೆ. ನನ್ನ ಟ್ವಿಟರ್ ಫಾಲೋವರ್ಸ್‌ಗಳ ಸಂಖ್ಯೆ ದ್ವಿಗುಣವಾಗಿದೆ. ಮೊದಲು ನಾಲ್ಕು ತಿಂಗಳು ಒಮ್ಮೆಯೂ ರಜೆ ತೆಗೆದುಕೊಳ್ಳಲಿಲ್ಲ. ದೆಹಲಿಯ ಗಡಿಗಳಲ್ಲಿಯೂ ತಿರುಗಾಡುತ್ತ ವರದಿ ಮಾಡುತ್ತಿದ್ದೇನೆ” ಎಂದು ಸಂದೀಪ್ ಸಿಂಗ್ ಹೇಳಿದ್ದಾರೆ.

ತಮ್ಮ ಮೊಬೈಲ್‌ನಲ್ಲಿಯೇ ಪ್ರತಿಭಟನೆಗಳ ಸಣ್ಣ ಸಣ್ಣ ವಿಡಿಯೋಗಳನ್ನು ಮಾಡಿ ಟ್ವೀಟ್ ಮಾಡುವ ಸಂದೀಪ್ ಸಿಂಗ್‌ರವರ ಕೆಲಸಕ್ಕೆ ಹಲವಾರು ಪತ್ರಕರ್ತರು, ಹೋರಾಟಗಾರರು ಬೆಂಬಲ ಸೂಚಿಸಿದ್ದಾರೆ. ಅಲ್‌ಜಜೀರಾ ಟಿವಿ ಸಹ ಅವರ ಬಗ್ಗೆ ವರದಿ ಮಾಡಿದೆ. ಅವರ ಟ್ವೀಟ್‌ಗಳನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ. ಬಹಳಷ್ಟು ಮಾಧ್ಯಮಗಳು ರೈತ ಹೋರಾಟದ ವರದಿ ಮಾಡಲು ಸಂದೀಪ್ ಸಿಂಗ್‌ರವರನ್ನು ಸಂಪನ್ಮೂಲವನ್ನಾಗಿ ನೋಡುತ್ತಾರೆ.

ಒಟ್ಟಿನಲ್ಲಿ ಹವ್ಯಾಸಿ ಪತ್ರಕರ್ತರಾಗಿದ್ದ ಸಂದೀಪ್ ಸಿಂಗ್ ರೈತ ಹೋರಾಟವನ್ನು ಸವಿವರವಾಗಿ ವರದಿ ಮಾಡಿದ ನಂತರ ಖ್ಯಾತರಾಗಿದ್ದಾರೆ. ಗೋದಿ ಮಾಧ್ಯಮಗಳಿಂದ ಬೇಸತ್ತಿರುವ ಸಾವಿರಾರು ರೈತರು ಸಂದೀಪ್‌ರನ್ನು ಅಭಿಮಾನದಿಂದ ನೋಡುತ್ತಾರೆ. ಹಲವಾರು ಪತ್ರಿಕೆಗಳು ಅವರಿಂದ ವರದಿ ಬಯಸಿವೆ ಅಷ್ಟೇ ಅಲ್ಲದೆ ಉದ್ಯೋಗದ ಆಫರ್ ಕೂಡ ನೀಡಿವೆ. ಅವರು ಶ್ರದ್ಧೆಯಿಂದ ಮಾಡಿದ ಕೆಲಸ ದೇಶದ ಹಲವರಿಗೆ ಮಾಹಿತಿ ನೀಡಿದ್ದಲ್ಲದೆ ಅವರಿಗೂ ಖ್ಯಾತಿ ತಂದುಕೊಟ್ಟಿದೆ.

ಇಂದು ಸಹ ಸಂದೀಪ್ ಸಿಂಗ್ ರೈತರ ಫತೇ ಮಾರ್ಚ್ ಅನ್ನು ವರದಿ ಮಾಡಿದ್ದಾರೆ. ಅದಕ್ಕಾಗಿ ಪಂಜಾಬಿನ ಅವರ ಸ್ನೇಹಿತರೊಬ್ಬರು ರೈತರು ಮನೆಗೆ ಬರುತ್ತಿದ್ದಾರೆ. ನೀನು ಯಾವಾಗ ಬರುತ್ತೀ ಸಂದೀಪ್ ಎಂದು ಪ್ರಶ್ನಿಸಿದ್ದಾರೆ. ಒಟ್ಟಿನಲ್ಲಿ ಸಂದೀಪ್‌ರವರ ಈ ಒಂದು ವರ್ಷದ ಶ್ರಮಕ್ಕೆ ಅಭಿನಂದನೆ ಸಲ್ಲಿಸಲೇಬೇಕು.

ಸಂದೀಪ್ ಸಿಂಗ್‌ರವರ ಟ್ವಿಟರ್ ಫಾಲೋ ಮಾಡಲು ಇಲ್ಲಿ ಮತ್ತು ಯೂಟ್ಯೂಬ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ರೈತರ ವಿಜಯೀ ಮೆರವಣಿಗೆ ಆರಂಭ: ವಿಡಿಯೋ – ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...