Homeಮುಖಪುಟಒಂದು ವರ್ಷ ನಿರಂತರವಾಗಿ ರೈತ ಹೋರಾಟದ ಗ್ರೌಂಡ್ ರಿಪೋರ್ಟ್ ನೀಡಿದ ಸಂದೀಪ್ ಸಿಂಗ್ ನಿಮಗೆ ಗೊತ್ತೆ?

ಒಂದು ವರ್ಷ ನಿರಂತರವಾಗಿ ರೈತ ಹೋರಾಟದ ಗ್ರೌಂಡ್ ರಿಪೋರ್ಟ್ ನೀಡಿದ ಸಂದೀಪ್ ಸಿಂಗ್ ನಿಮಗೆ ಗೊತ್ತೆ?

ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ದೋಷ ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಕಡಿಮೆ ಸಮಯದಲ್ಲಿ ಹೇಳಲು ಬಹಳಷ್ಟು ವಿಷಯಗಳಿವೆ ಎನ್ನುತ್ತಾರೆ ಸಂದೀಫ್ ಸಿಂಗ್

- Advertisement -
- Advertisement -

“ನಾನು ಕೂಡ ಎಲ್ಲ ರೈತರಂತೆ ಹೊಲ ಮತ್ತು ದನಗಳ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಆದರೆ ರೈತರು ದೆಹಲಿ ಚಲೋಗೆ ಕರೆ ನೀಡಿದರು. ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ”.. ಇವು ಕಳೆದ ಒಂದು ವರ್ಷಕ್ಕೂ ಹೆಚ್ಚು ದಿನಗಳಿಂದ ಹಗಲು ರಾತ್ರಿ ಎನ್ನದೆ, ದೆಹಲಿ ಗಡಿಗಳಲ್ಲಿನ ಮತ್ತು ದೇಶದ ರೈತ ಹೋರಾಟದ ಕ್ಷಣ ಕ್ಷಣದ ಅಧಿಕೃತ ಮಾಹಿತಿ ನೀಡುವ ಸಂದೀಪ್ ಸಿಂಗ್ ಎಂಬ ಯುವಕ/ಪತ್ರಕರ್ತ/ಹೋರಾಟಗಾರನ ಮಾತುಗಳು…

ದೆಹಲಿಯ ಗಡಿಗಳಲ್ಲಿ ಭದ್ರವಾಗಿ ಕೂತಿದ್ದ ಐತಿಹಾಸಿಕ ರೈತ ಹೋರಾಟ ಜಯಗಳಿಸಿದೆ. ಸಂಯುಕ್ತ ಕಿಸಾನ್ ಮೋರ್ಚಾದ ಎಲ್ಲಾ ಹಕ್ಕೊತ್ತಾಗಳನ್ನು ಒಕ್ಕೂಟ ಸರ್ಕಾರ ಒಪ್ಪಿಕೊಂಡಿದೆ. ತಾತ್ಕಾಲಿಕವಾಗಿ ಹೋರಾಟ ನಿಲ್ಲಿಸಿರುವ ರೈತರು ಸಂಭ್ರಮದ ವಿಜಯೀ ಮೆರವಣಿಗೆ ಮೂಲಕ ತಮ್ಮ ಸ್ವಗ್ರಾಮಗಳನ್ನು ತಲುಪುತ್ತಿದ್ದಾರೆ. ಈ ವಿಜಯಕ್ಕೆ ಲಕ್ಷಾಂತರ ಜನರ ಕೊಡುಗೆಯಿದೆ. ಅಂತಯೇ ಸಂದೀಪ್ ಸಿಂಗ್ ತಮ್ಮ ವೇಗವಾದ, ವಸ್ತುನಿಷ್ಠ ವರದಿಗಾರಿಗೆ ಮೂಲಕ ರೈತ ಹೋರಾಟದ ಅಸಲಿ ವಿಷಯಗಳು ಪ್ರಪಂಚ ತಲುಪವಂತೆ ಮಾಡುವ ಮೂಲಕ ಹೋರಾಟದ ಭಾಗವಾಗಿದ್ದರು.

ಪ್ರತಿಭಟನಾನಿರತ ರೈತರ ಮಧ್ಯೆ ಗ್ರೌಂಡ್ ರಿಪೋರ್ಟ್ ಮಾಡುತ್ತ ಅತ್ಯಂತ ವಸ್ತುನಿಷ್ಟ ಪತ್ರಕರ್ತರಲ್ಲಿ ಒಬ್ಬರಾಗಿ ಹೊರಹೊಮ್ಮಿರುವ ಸಂದೀಪ್ ಸಿಂಗ್ “ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ತಪ್ಪುಗಳನ್ನು ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಕಡಿಮೆ ಸಮಯದಲ್ಲಿ ಹೇಳಲು ಬಹಳಷ್ಟು ವಿಷಯಗಳಿವೆ” ಎನ್ನುತ್ತಾರೆ.

ಸಂದೀಪ್‌ ಸಿಂಗ್‌ರವರ ಟ್ವಿಟರ್ ಟೈಮ್‌ಲೈನ್‌ ಅನ್ನು ನೀವು ಗಮನಿಸಿದರೆ ತಿಳಿಯುತ್ತದೆ ಅವರೆಷ್ಟು ಆಳವಾಗಿ ರೈತ ಹೋರಾಟವನ್ನು ವರದಿ ಮಾಡುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು. ಪ್ರತಿ ಗಂಟೆಗೂ ಮೂರು-ನಾಲ್ಕು ವಿಷಯಗಳ ಕುರಿತು ವರದಿ ನೀಡಿರುತ್ತಾರೆ. ಅವೆಲ್ಲವೂ ಬ್ರೇಕಿಂಗ್ ನ್ಯೂಸ್‌ಗಳ ರೂಪದಲ್ಲಿರುತ್ತವೆ. ಅದರೊಂದಿಗೆ ಫೋಟೊ, ವಿಡಿಯೋಗಳು ಇದ್ದು ರೈತ ಹೋರಾಟದ ಸಮರ್ಪಕ ಮಾಹಿತಿ ನೋಡುಗರಿಗೆ ದೊರೆಯುತ್ತದೆ.

ಕಳೆದ ಒಂದು ವರ್ಷದಿಂದಲೂ ರೈತ ಹೋರಾಟದ ಪ್ರತಿ ಮಾಹಿತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ತಲುಪಿಸಲು ಶ್ರಮಿಸುತ್ತಿರುವ ಸಂದೀಪ್ ಸಾವಿರಾರು ಟ್ವೀಟ್‌ಗಳನ್ನು ಮಾಡಿದ್ದಾರೆ. “ಈ ಮೊದಲು ಸಹ ಪಂಜಾಬಿ ಮಾಧ್ಯಮಗಳು ರೈತ ಹೋರಾಟದ ಪ್ರತಿಯೊಂದನ್ನು ವರದಿ ಮಾಡುತ್ತಿದ್ದವು. ಆದರೆ ಅದನ್ನು ದೇಶಕ್ಕೆ ಮತ್ತು ಪ್ರಪಂಚಕ್ಕೆ ತಿಳಿಸಬೇಕಾಗಿತ್ತು. ಅದಕ್ಕಾಗಿ ನಾನು ಪ್ರತಿಯೊಂದನ್ನು ವಿಡಿಯೋ ಮಾಡಿ, ಇಂಗ್ಲಿಷ್‌ನಲ್ಲಿ ಟ್ವೀಟ್ ಮಾಡಲು ಆರಂಭಿಸಿದೆ. ಇದು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ತಲುಪಲು ಸಾಧ್ಯವಾಯಿತು. ಹಾಗಾಗಿ ಮತ್ತಷ್ಟು ತನ್ಮಯತೆಯೊಂದಿಗೆ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ” ಎನ್ನುತ್ತಾರೆ.

“2020ರ ನವೆಂಬರ್ 24 ರಂದು ನಾನು ಪಂಜಾಬ್‌ನ ಹಳ್ಳಿಯಿಂದ ಇಲ್ಲಿಗೆ ಬಂದೆ. ನನ್ನ ಕೆಲವು ವಿಡಿಯೋಗಳು ವೈರಲ್ ಆಗಿವೆ. ನನ್ನ ಟ್ವಿಟರ್ ಫಾಲೋವರ್ಸ್‌ಗಳ ಸಂಖ್ಯೆ ದ್ವಿಗುಣವಾಗಿದೆ. ಮೊದಲು ನಾಲ್ಕು ತಿಂಗಳು ಒಮ್ಮೆಯೂ ರಜೆ ತೆಗೆದುಕೊಳ್ಳಲಿಲ್ಲ. ದೆಹಲಿಯ ಗಡಿಗಳಲ್ಲಿಯೂ ತಿರುಗಾಡುತ್ತ ವರದಿ ಮಾಡುತ್ತಿದ್ದೇನೆ” ಎಂದು ಸಂದೀಪ್ ಸಿಂಗ್ ಹೇಳಿದ್ದಾರೆ.

ತಮ್ಮ ಮೊಬೈಲ್‌ನಲ್ಲಿಯೇ ಪ್ರತಿಭಟನೆಗಳ ಸಣ್ಣ ಸಣ್ಣ ವಿಡಿಯೋಗಳನ್ನು ಮಾಡಿ ಟ್ವೀಟ್ ಮಾಡುವ ಸಂದೀಪ್ ಸಿಂಗ್‌ರವರ ಕೆಲಸಕ್ಕೆ ಹಲವಾರು ಪತ್ರಕರ್ತರು, ಹೋರಾಟಗಾರರು ಬೆಂಬಲ ಸೂಚಿಸಿದ್ದಾರೆ. ಅಲ್‌ಜಜೀರಾ ಟಿವಿ ಸಹ ಅವರ ಬಗ್ಗೆ ವರದಿ ಮಾಡಿದೆ. ಅವರ ಟ್ವೀಟ್‌ಗಳನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ. ಬಹಳಷ್ಟು ಮಾಧ್ಯಮಗಳು ರೈತ ಹೋರಾಟದ ವರದಿ ಮಾಡಲು ಸಂದೀಪ್ ಸಿಂಗ್‌ರವರನ್ನು ಸಂಪನ್ಮೂಲವನ್ನಾಗಿ ನೋಡುತ್ತಾರೆ.

ಒಟ್ಟಿನಲ್ಲಿ ಹವ್ಯಾಸಿ ಪತ್ರಕರ್ತರಾಗಿದ್ದ ಸಂದೀಪ್ ಸಿಂಗ್ ರೈತ ಹೋರಾಟವನ್ನು ಸವಿವರವಾಗಿ ವರದಿ ಮಾಡಿದ ನಂತರ ಖ್ಯಾತರಾಗಿದ್ದಾರೆ. ಗೋದಿ ಮಾಧ್ಯಮಗಳಿಂದ ಬೇಸತ್ತಿರುವ ಸಾವಿರಾರು ರೈತರು ಸಂದೀಪ್‌ರನ್ನು ಅಭಿಮಾನದಿಂದ ನೋಡುತ್ತಾರೆ. ಹಲವಾರು ಪತ್ರಿಕೆಗಳು ಅವರಿಂದ ವರದಿ ಬಯಸಿವೆ ಅಷ್ಟೇ ಅಲ್ಲದೆ ಉದ್ಯೋಗದ ಆಫರ್ ಕೂಡ ನೀಡಿವೆ. ಅವರು ಶ್ರದ್ಧೆಯಿಂದ ಮಾಡಿದ ಕೆಲಸ ದೇಶದ ಹಲವರಿಗೆ ಮಾಹಿತಿ ನೀಡಿದ್ದಲ್ಲದೆ ಅವರಿಗೂ ಖ್ಯಾತಿ ತಂದುಕೊಟ್ಟಿದೆ.

ಇಂದು ಸಹ ಸಂದೀಪ್ ಸಿಂಗ್ ರೈತರ ಫತೇ ಮಾರ್ಚ್ ಅನ್ನು ವರದಿ ಮಾಡಿದ್ದಾರೆ. ಅದಕ್ಕಾಗಿ ಪಂಜಾಬಿನ ಅವರ ಸ್ನೇಹಿತರೊಬ್ಬರು ರೈತರು ಮನೆಗೆ ಬರುತ್ತಿದ್ದಾರೆ. ನೀನು ಯಾವಾಗ ಬರುತ್ತೀ ಸಂದೀಪ್ ಎಂದು ಪ್ರಶ್ನಿಸಿದ್ದಾರೆ. ಒಟ್ಟಿನಲ್ಲಿ ಸಂದೀಪ್‌ರವರ ಈ ಒಂದು ವರ್ಷದ ಶ್ರಮಕ್ಕೆ ಅಭಿನಂದನೆ ಸಲ್ಲಿಸಲೇಬೇಕು.

ಸಂದೀಪ್ ಸಿಂಗ್‌ರವರ ಟ್ವಿಟರ್ ಫಾಲೋ ಮಾಡಲು ಇಲ್ಲಿ ಮತ್ತು ಯೂಟ್ಯೂಬ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ರೈತರ ವಿಜಯೀ ಮೆರವಣಿಗೆ ಆರಂಭ: ವಿಡಿಯೋ – ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...