Homeಮುಖಪುಟಒಂದು ವರ್ಷ ನಿರಂತರವಾಗಿ ರೈತ ಹೋರಾಟದ ಗ್ರೌಂಡ್ ರಿಪೋರ್ಟ್ ನೀಡಿದ ಸಂದೀಪ್ ಸಿಂಗ್ ನಿಮಗೆ ಗೊತ್ತೆ?

ಒಂದು ವರ್ಷ ನಿರಂತರವಾಗಿ ರೈತ ಹೋರಾಟದ ಗ್ರೌಂಡ್ ರಿಪೋರ್ಟ್ ನೀಡಿದ ಸಂದೀಪ್ ಸಿಂಗ್ ನಿಮಗೆ ಗೊತ್ತೆ?

ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ದೋಷ ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಕಡಿಮೆ ಸಮಯದಲ್ಲಿ ಹೇಳಲು ಬಹಳಷ್ಟು ವಿಷಯಗಳಿವೆ ಎನ್ನುತ್ತಾರೆ ಸಂದೀಫ್ ಸಿಂಗ್

- Advertisement -
- Advertisement -

“ನಾನು ಕೂಡ ಎಲ್ಲ ರೈತರಂತೆ ಹೊಲ ಮತ್ತು ದನಗಳ ಬಗ್ಗೆ ಕಾಳಜಿ ವಹಿಸುತ್ತಿದ್ದೆ. ಆದರೆ ರೈತರು ದೆಹಲಿ ಚಲೋಗೆ ಕರೆ ನೀಡಿದರು. ಈ ಪ್ರತಿಭಟನೆ ಪ್ರಾರಂಭವಾದಾಗ ಇದು ಐತಿಹಾಸಿಕವಾಗಲಿದೆ ಎಂದು ಭಾವಿಸಿದೆ ಮತ್ತು ನಾನು ಅಲ್ಲಿರಬೇಕು ಎಂದು ನಿರ್ಧರಿಸಿದೆ”.. ಇವು ಕಳೆದ ಒಂದು ವರ್ಷಕ್ಕೂ ಹೆಚ್ಚು ದಿನಗಳಿಂದ ಹಗಲು ರಾತ್ರಿ ಎನ್ನದೆ, ದೆಹಲಿ ಗಡಿಗಳಲ್ಲಿನ ಮತ್ತು ದೇಶದ ರೈತ ಹೋರಾಟದ ಕ್ಷಣ ಕ್ಷಣದ ಅಧಿಕೃತ ಮಾಹಿತಿ ನೀಡುವ ಸಂದೀಪ್ ಸಿಂಗ್ ಎಂಬ ಯುವಕ/ಪತ್ರಕರ್ತ/ಹೋರಾಟಗಾರನ ಮಾತುಗಳು…

ದೆಹಲಿಯ ಗಡಿಗಳಲ್ಲಿ ಭದ್ರವಾಗಿ ಕೂತಿದ್ದ ಐತಿಹಾಸಿಕ ರೈತ ಹೋರಾಟ ಜಯಗಳಿಸಿದೆ. ಸಂಯುಕ್ತ ಕಿಸಾನ್ ಮೋರ್ಚಾದ ಎಲ್ಲಾ ಹಕ್ಕೊತ್ತಾಗಳನ್ನು ಒಕ್ಕೂಟ ಸರ್ಕಾರ ಒಪ್ಪಿಕೊಂಡಿದೆ. ತಾತ್ಕಾಲಿಕವಾಗಿ ಹೋರಾಟ ನಿಲ್ಲಿಸಿರುವ ರೈತರು ಸಂಭ್ರಮದ ವಿಜಯೀ ಮೆರವಣಿಗೆ ಮೂಲಕ ತಮ್ಮ ಸ್ವಗ್ರಾಮಗಳನ್ನು ತಲುಪುತ್ತಿದ್ದಾರೆ. ಈ ವಿಜಯಕ್ಕೆ ಲಕ್ಷಾಂತರ ಜನರ ಕೊಡುಗೆಯಿದೆ. ಅಂತಯೇ ಸಂದೀಪ್ ಸಿಂಗ್ ತಮ್ಮ ವೇಗವಾದ, ವಸ್ತುನಿಷ್ಠ ವರದಿಗಾರಿಗೆ ಮೂಲಕ ರೈತ ಹೋರಾಟದ ಅಸಲಿ ವಿಷಯಗಳು ಪ್ರಪಂಚ ತಲುಪವಂತೆ ಮಾಡುವ ಮೂಲಕ ಹೋರಾಟದ ಭಾಗವಾಗಿದ್ದರು.

ಪ್ರತಿಭಟನಾನಿರತ ರೈತರ ಮಧ್ಯೆ ಗ್ರೌಂಡ್ ರಿಪೋರ್ಟ್ ಮಾಡುತ್ತ ಅತ್ಯಂತ ವಸ್ತುನಿಷ್ಟ ಪತ್ರಕರ್ತರಲ್ಲಿ ಒಬ್ಬರಾಗಿ ಹೊರಹೊಮ್ಮಿರುವ ಸಂದೀಪ್ ಸಿಂಗ್ “ದಯವಿಟ್ಟು ನನ್ನ ವರದಿಗಳಲ್ಲಿನ ಕಾಗುಣಿತ ತಪ್ಪುಗಳನ್ನು ಮರೆತುಬಿಡಿ, ಅದರ ಸಾರವನ್ನಷ್ಟೇ ಗಮನಿಸಿ. ಏಕೆಂದರೆ ಕಡಿಮೆ ಸಮಯದಲ್ಲಿ ಹೇಳಲು ಬಹಳಷ್ಟು ವಿಷಯಗಳಿವೆ” ಎನ್ನುತ್ತಾರೆ.

ಸಂದೀಪ್‌ ಸಿಂಗ್‌ರವರ ಟ್ವಿಟರ್ ಟೈಮ್‌ಲೈನ್‌ ಅನ್ನು ನೀವು ಗಮನಿಸಿದರೆ ತಿಳಿಯುತ್ತದೆ ಅವರೆಷ್ಟು ಆಳವಾಗಿ ರೈತ ಹೋರಾಟವನ್ನು ವರದಿ ಮಾಡುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು. ಪ್ರತಿ ಗಂಟೆಗೂ ಮೂರು-ನಾಲ್ಕು ವಿಷಯಗಳ ಕುರಿತು ವರದಿ ನೀಡಿರುತ್ತಾರೆ. ಅವೆಲ್ಲವೂ ಬ್ರೇಕಿಂಗ್ ನ್ಯೂಸ್‌ಗಳ ರೂಪದಲ್ಲಿರುತ್ತವೆ. ಅದರೊಂದಿಗೆ ಫೋಟೊ, ವಿಡಿಯೋಗಳು ಇದ್ದು ರೈತ ಹೋರಾಟದ ಸಮರ್ಪಕ ಮಾಹಿತಿ ನೋಡುಗರಿಗೆ ದೊರೆಯುತ್ತದೆ.

ಕಳೆದ ಒಂದು ವರ್ಷದಿಂದಲೂ ರೈತ ಹೋರಾಟದ ಪ್ರತಿ ಮಾಹಿತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ತಲುಪಿಸಲು ಶ್ರಮಿಸುತ್ತಿರುವ ಸಂದೀಪ್ ಸಾವಿರಾರು ಟ್ವೀಟ್‌ಗಳನ್ನು ಮಾಡಿದ್ದಾರೆ. “ಈ ಮೊದಲು ಸಹ ಪಂಜಾಬಿ ಮಾಧ್ಯಮಗಳು ರೈತ ಹೋರಾಟದ ಪ್ರತಿಯೊಂದನ್ನು ವರದಿ ಮಾಡುತ್ತಿದ್ದವು. ಆದರೆ ಅದನ್ನು ದೇಶಕ್ಕೆ ಮತ್ತು ಪ್ರಪಂಚಕ್ಕೆ ತಿಳಿಸಬೇಕಾಗಿತ್ತು. ಅದಕ್ಕಾಗಿ ನಾನು ಪ್ರತಿಯೊಂದನ್ನು ವಿಡಿಯೋ ಮಾಡಿ, ಇಂಗ್ಲಿಷ್‌ನಲ್ಲಿ ಟ್ವೀಟ್ ಮಾಡಲು ಆರಂಭಿಸಿದೆ. ಇದು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ತಲುಪಲು ಸಾಧ್ಯವಾಯಿತು. ಹಾಗಾಗಿ ಮತ್ತಷ್ಟು ತನ್ಮಯತೆಯೊಂದಿಗೆ ಈ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ” ಎನ್ನುತ್ತಾರೆ.

“2020ರ ನವೆಂಬರ್ 24 ರಂದು ನಾನು ಪಂಜಾಬ್‌ನ ಹಳ್ಳಿಯಿಂದ ಇಲ್ಲಿಗೆ ಬಂದೆ. ನನ್ನ ಕೆಲವು ವಿಡಿಯೋಗಳು ವೈರಲ್ ಆಗಿವೆ. ನನ್ನ ಟ್ವಿಟರ್ ಫಾಲೋವರ್ಸ್‌ಗಳ ಸಂಖ್ಯೆ ದ್ವಿಗುಣವಾಗಿದೆ. ಮೊದಲು ನಾಲ್ಕು ತಿಂಗಳು ಒಮ್ಮೆಯೂ ರಜೆ ತೆಗೆದುಕೊಳ್ಳಲಿಲ್ಲ. ದೆಹಲಿಯ ಗಡಿಗಳಲ್ಲಿಯೂ ತಿರುಗಾಡುತ್ತ ವರದಿ ಮಾಡುತ್ತಿದ್ದೇನೆ” ಎಂದು ಸಂದೀಪ್ ಸಿಂಗ್ ಹೇಳಿದ್ದಾರೆ.

ತಮ್ಮ ಮೊಬೈಲ್‌ನಲ್ಲಿಯೇ ಪ್ರತಿಭಟನೆಗಳ ಸಣ್ಣ ಸಣ್ಣ ವಿಡಿಯೋಗಳನ್ನು ಮಾಡಿ ಟ್ವೀಟ್ ಮಾಡುವ ಸಂದೀಪ್ ಸಿಂಗ್‌ರವರ ಕೆಲಸಕ್ಕೆ ಹಲವಾರು ಪತ್ರಕರ್ತರು, ಹೋರಾಟಗಾರರು ಬೆಂಬಲ ಸೂಚಿಸಿದ್ದಾರೆ. ಅಲ್‌ಜಜೀರಾ ಟಿವಿ ಸಹ ಅವರ ಬಗ್ಗೆ ವರದಿ ಮಾಡಿದೆ. ಅವರ ಟ್ವೀಟ್‌ಗಳನ್ನು ಸಾವಿರಾರು ಜನ ಹಂಚಿಕೊಂಡಿದ್ದಾರೆ. ಬಹಳಷ್ಟು ಮಾಧ್ಯಮಗಳು ರೈತ ಹೋರಾಟದ ವರದಿ ಮಾಡಲು ಸಂದೀಪ್ ಸಿಂಗ್‌ರವರನ್ನು ಸಂಪನ್ಮೂಲವನ್ನಾಗಿ ನೋಡುತ್ತಾರೆ.

ಒಟ್ಟಿನಲ್ಲಿ ಹವ್ಯಾಸಿ ಪತ್ರಕರ್ತರಾಗಿದ್ದ ಸಂದೀಪ್ ಸಿಂಗ್ ರೈತ ಹೋರಾಟವನ್ನು ಸವಿವರವಾಗಿ ವರದಿ ಮಾಡಿದ ನಂತರ ಖ್ಯಾತರಾಗಿದ್ದಾರೆ. ಗೋದಿ ಮಾಧ್ಯಮಗಳಿಂದ ಬೇಸತ್ತಿರುವ ಸಾವಿರಾರು ರೈತರು ಸಂದೀಪ್‌ರನ್ನು ಅಭಿಮಾನದಿಂದ ನೋಡುತ್ತಾರೆ. ಹಲವಾರು ಪತ್ರಿಕೆಗಳು ಅವರಿಂದ ವರದಿ ಬಯಸಿವೆ ಅಷ್ಟೇ ಅಲ್ಲದೆ ಉದ್ಯೋಗದ ಆಫರ್ ಕೂಡ ನೀಡಿವೆ. ಅವರು ಶ್ರದ್ಧೆಯಿಂದ ಮಾಡಿದ ಕೆಲಸ ದೇಶದ ಹಲವರಿಗೆ ಮಾಹಿತಿ ನೀಡಿದ್ದಲ್ಲದೆ ಅವರಿಗೂ ಖ್ಯಾತಿ ತಂದುಕೊಟ್ಟಿದೆ.

ಇಂದು ಸಹ ಸಂದೀಪ್ ಸಿಂಗ್ ರೈತರ ಫತೇ ಮಾರ್ಚ್ ಅನ್ನು ವರದಿ ಮಾಡಿದ್ದಾರೆ. ಅದಕ್ಕಾಗಿ ಪಂಜಾಬಿನ ಅವರ ಸ್ನೇಹಿತರೊಬ್ಬರು ರೈತರು ಮನೆಗೆ ಬರುತ್ತಿದ್ದಾರೆ. ನೀನು ಯಾವಾಗ ಬರುತ್ತೀ ಸಂದೀಪ್ ಎಂದು ಪ್ರಶ್ನಿಸಿದ್ದಾರೆ. ಒಟ್ಟಿನಲ್ಲಿ ಸಂದೀಪ್‌ರವರ ಈ ಒಂದು ವರ್ಷದ ಶ್ರಮಕ್ಕೆ ಅಭಿನಂದನೆ ಸಲ್ಲಿಸಲೇಬೇಕು.

ಸಂದೀಪ್ ಸಿಂಗ್‌ರವರ ಟ್ವಿಟರ್ ಫಾಲೋ ಮಾಡಲು ಇಲ್ಲಿ ಮತ್ತು ಯೂಟ್ಯೂಬ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ರೈತರ ವಿಜಯೀ ಮೆರವಣಿಗೆ ಆರಂಭ: ವಿಡಿಯೋ – ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...