Homeಮುಖಪುಟಪ.ಬಂಗಾಳ: 'ನನ್ನ ಮೇಲೆ ದೌರ್ಜನ್ಯ ನಡೆದಿಲ್ಲ..'; ಅತ್ಯಾಚಾರ ಆರೋಪ ಹಿಂತೆಗೆದುಕೊಂಡ ಸಂದೇಶಖಾಲಿ ಮಹಿಳೆ

ಪ.ಬಂಗಾಳ: ‘ನನ್ನ ಮೇಲೆ ದೌರ್ಜನ್ಯ ನಡೆದಿಲ್ಲ..’; ಅತ್ಯಾಚಾರ ಆರೋಪ ಹಿಂತೆಗೆದುಕೊಂಡ ಸಂದೇಶಖಾಲಿ ಮಹಿಳೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ಅತ್ಯಾಚಾರದ ದೂರುಗಳು ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿ ಅಶಾಂತಿಯನ್ನು ಉಂಟುಮಾಡಿತ್ತು. ದೂರು ನೀಡಿದ್ದ ಮೂವರು ಮಹಿಳೆಯರಲ್ಲಿ ಒಬ್ಬರು ಬುಧವಾರ ತಮ್ಮ ಆರೋಪವನ್ನು ಹಿಂಪಡೆದಿದ್ದು, ತನ್ನ ಮೇಲೆ ಹಲ್ಲೆ ನಡೆಸಿಲ್ಲ ಎಂದು ಮಹಿಳೆ ಹೇಳಿಕೊಂಡಿದ್ದಾರೆ. “ಬಿಜೆಪಿಯ ಸ್ಥಳೀಯ ಮುಖಂಡರು ಖಾಲಿ ಕಾಗದಕ್ಕೆ ಸಹಿ ಹಾಕುವಂತೆ ಒತ್ತಾಯಿಸಿ, ಪೊಲೀಸರಿಗೆ ದೂರು ನೀಡಿದ್ದಾರೆ” ಎಂದು ರಾಷ್ಟ್ರೀಯ ಮಾಧ್ಯಮಗಳು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿವೆ.

ಸುಳ್ಳು ಅತ್ಯಾಚಾರ ಆರೋಪವನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ಪರಿಣಾಮವಾಗಿ ಬೆದರಿಕೆಗಳು ಮತ್ತು ಸಾಮಾಜಿಕ ಬಹಿಷ್ಕಾರವನ್ನು ಉಲ್ಲೇಖಿಸಿ ಮಹಿಳೆಯು ಸಂದೇಶಖಾಲಿ ಪೊಲೀಸ್ ಠಾಣೆಯಲ್ಲಿ ಹೊಸ ದೂರು ದಾಖಲಿಸಿದ್ದಾರೆ.

ಸ್ಥಳೀಯ ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಮತ್ತು ಪಕ್ಷದ ಇತರ ಸದಸ್ಯರು ತನ್ನ ಮನೆಗೆ ಭೇಟಿ ನೀಡಿ ಕಾಲ್ಪನಿಕ ದೂರಿಗೆ ಸಹಿ ಹಾಕುವಂತೆ ಕೇಳಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

“ಪಿಎಂಎವೈಗೆ ನನ್ನ ಹೆಸರನ್ನು ಸೇರಿಸುವ ನೆಪದಲ್ಲಿ ಅವರು ನನ್ನ ಸಹಿಯನ್ನು ಕೇಳಿದರು. ನಂತರ, ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಲು ಅವರು ನನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ದರು. ತೃಣಮೂಲ ಕಚೇರಿಯೊಳಗೆ ನನ್ನ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ. ನನ್ನನ್ನು ಎಂದಿಗೂ ಬಲವಂತ ಮಾಡಿಲ್ಲ” ಎಂದು ಮಹಿಳೆ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಅತ್ಯಾಚಾರದ ಸುಳ್ಳು ಆರೋಪವನ್ನು ಹಿಂತೆಗೆದುಕೊಳ್ಳಲು ಹೋದ ಮಹಿಳೆಯರಿಗೆ ಸ್ಥಳೀಯ ಬಿಜೆಪಿ ನಾಯಕರು ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ವೆದರಿಕೆ ಹಾಕಿದ್ದಾರೆ ಎಂದ್ಉ ಬಂಗಾಳದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ ಸಚಿವ ಶಶಿ ಪಂಜಾ ಆರೋಪಿಸಿದ್ದಾರೆ.

“ಬಿಜೆಪಿ ನಾಟಕವನ್ನು ಆಯೋಜಿಸಿತ್ತು ಮತ್ತು ಈಗ ಅವರು ಸುಳ್ಳು ದೂರುಗಳನ್ನು ಹಿಂಪಡೆಯಲು ಹೋದ ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ. ಟಿಎಂಸಿ ಪರಿಸ್ಥಿತಿಯ ಮೇಲೆ ನಿಗಾ ಇಡುತ್ತಿದೆ” ಎಂದು ಅವರು ಹೇಳಿದರು.

ಟಿಎಂಸಿ ಸಂಸದೆ ಸಾಗರಿಕಾ ಘೋಷ್ ಮಾತನಾಡಿ, “ಸುಳ್ಳು ಅತ್ಯಾಚಾರದ ದೂರುಗಳನ್ನು ದಾಖಲಿಸಲು ಒತ್ತಾಯಿಸಿದ ರೀತಿಯ ಬಗ್ಗೆ ಸತ್ಯ ಹೇಳಿದ ಸಂದೇಶಖಾಲಿಯ ಮಹಿಳೆಯರಿಗೆ ಬಿಜೆಪಿ ಬೆದರಿಕೆ ಹಾಕುತ್ತಿರುವುದು ಅಸಹ್ಯಕರವಾಗಿದೆ. ಸಂದೇಶಖಾಲಿಯ ಪಿತೂರಿ ತೋರಿಸುವ ವೈರಲ್ ವೀಡಿಯೊ ಹೊರಬಂದ ನಂತರ, ಈಗ ಕೆಲವು ಮಹಿಳೆಯರು ಸುಳ್ಳು ಪ್ರಕರಣಗಳನ್ನು ದಾಖಲಿಸಲು ಒತ್ತಡ ಹೇರಿದ್ದಾರೆ” ಎಂದು ಹೇಳಿದ್ದಾರೆ.

ಈ ನಡುವೆ, ಸಂದೇಶಖಾಲಿ ಘಟನೆಯಲ್ಲಿನ ಅತ್ಯಾಚಾರದ ಆರೋಪಗಳನ್ನು ರಚಿಸಲಾಗಿದೆ ಎಂದು ಕೇಸರಿ ಪಕ್ಷದ ನಾಯಕರೊಬ್ಬರು ಕ್ಯಾಮೆರಾದಲ್ಲಿ “ತಪ್ಪೊಪ್ಪಿಕೊಂಡಿದ್ದಾರೆ” ಎಂದು ಆರೋಪಿಸಿ, ಬಿಜೆಪಿಯ ಸುವೇಂದು ಅಧಿಕಾರಿ ಮತ್ತು ಇತರರ ವಿರುದ್ಧ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದೆ ಎಂದು ಅವರು ಹೇಳಿದರು. ಪಕ್ಷದ ಮೂಲಗಳು ಅವರ ದೂರು ಹೇಳಲಾದ ವೀಡಿಯೊವನ್ನು ಆಧರಿಸಿದೆ, ಇದರಲ್ಲಿ ಸಂದೇಶಖಾಲಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಗಂಗಾಧರ ಕಯಲ್ ಎಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬರು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಇಡೀ ಪಿತೂರಿಯ ಹಿಂದೆ ಇದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ; ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆದರೆ ಬಿಜೆಪಿಗೆ ಅಧಿಕಾರ ಉಳಿಸಿಕೊಳ್ಳುವುದು ಕಷ್ಟ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...