Homeಮುಖಪುಟಸಂದೇಶಖಾಲಿ ಪ್ರಕರಣ: ಟಿಎಂಸಿ ನಾಯಕ ಶಹಜಹಾನ್ ಶೇಖ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ

ಸಂದೇಶಖಾಲಿ ಪ್ರಕರಣ: ಟಿಎಂಸಿ ನಾಯಕ ಶಹಜಹಾನ್ ಶೇಖ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ

- Advertisement -
- Advertisement -

ಜನವರಿ 5 ರಂದು ಸಂದೇಶಖಾಲಿಯಲ್ಲಿ ಜಾರಿ ನಿರ್ದೇಶನಾಲಯ ತಂಡದ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಟಿಎಂಸಿ ನಾಯಕ ಶಹಜಹಾನ್ ಶೇಖ್ ಮತ್ತು ಇತರ ಆರು ಮಂದಿ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಈ ಪ್ರಕರಣದಲ್ಲಿ ಸಂಸ್ಥೆ ತನ್ನ ಮೊದಲ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅವರು ಹೇಳಿದರು. ಪಶ್ಚಿಮ ಬಂಗಾಳದಲ್ಲಿ ನಡೆದ ಬಹುಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ಶೇಖ್‌ನ ಮನೆ ಮೇಲೆ ದಾಳಿ ನಡೆಸಲು ಇಡಿ ತಂಡ ತೆರಳಿದ್ದ ವೇಳೆ 1,000 ಜನರ ಗುಂಪೊಂದು ದಾಳಿ ನಡೆಸಿತ್ತು.

ಹಗರಣದಲ್ಲಿ ಬಂಧಿತರಾಗಿರುವ ರಾಜ್ಯದ ಮಾಜಿ ಆಹಾರ ಸಚಿವೆ ಜ್ಯೋತಿ ಪ್ರಿಯಾ ಮಲ್ಲಿಕ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಆರೋಪದ ಮೇರೆಗೆ ತಂಡವು ಶೇಖ್ ಅವರನ್ನು ಬಂಧಿಸಲು ಹೋಗಿತ್ತು ಎಂದು ಅವರು ಹೇಳಿದರು.

ಕೋಲ್ಕತ್ತಾದಿಂದ 80 ಕಿಮೀ ದೂರದಲ್ಲಿರುವ ಸಂದೇಶ್‌ಖಾಲಿ ಎಂಬ ನದಿತೀರದ ದ್ವೀಪವು ಮೀನು ಸಾಕಾಣಿಕೆ, ವ್ಯಾಪಾರದಲ್ಲಿ ತೊಡಗಿರುವ ಶೇಖ್ ಮತ್ತು ಬೆಂಬಲಿಗರು ಭೂಕಬಳಿಕೆ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸ್ಥಳೀಯ ಮಹಿಳೆಯರು ಆರೋಪಿಸಿದ ನಂತರ ದೇಶದಾದ್ಯಂತ ಸುದ್ದಿಯಾಗಿತ್ತು.

ಜನವರಿ 5 ರಂದು ನಡೆದ ಘಟನೆಗಳಿಗೆ ಸಂಬಂಧಿಸಿದ ಮೂರು ಪ್ರಕರಣಗಳ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಅವರು ಹೇಳಿದರು. ಫೆಬ್ರವರಿ 29 ರಂದು ರಾಜ್ಯ ಪೊಲೀಸರು ಶೇಖ್ ಅವರನ್ನು ಬಂಧಿಸಿದ್ದರು ಮತ್ತು ಮಾರ್ಚ್ 6 ರಂದು ಸಿಬಿಐ ಅವರನ್ನು ತನ್ನ ಕಸ್ಟಡಿಗೆ ತೆಗೆದುಕೊಂಡಿತು ಎಂದು ಅವರು ಹೇಳಿದರು.

ಬಿಜೆಪಿ ನಡೆಸಿದ ಷಡ್ಯಂತ್ರ ಎಂದ ಟಿಎಂಸಿ:

ಸಂದೇಶಖಾಲಿ ಪ್ರದೇಶದ ಬಿಜೆಪಿ ಮುಖಂಡರದ್ದು ಎನ್ನಲಾದ ಸ್ಟಿಂಗ್ ಆಪರೇಷನ್ ವಿಡಿಯೊ ಹಂಚಿಕೊಂಡಿರುವ ತೃಣಮೂಲ ಕಾಂಗ್ರೆಸ್, ಇದು ಬಿಜೆಪಿ ನಡೆಸಿದ ಷಡ್ಯಂತ್ರ ಎಂದು ಆರೋಪ ಮಾಡಿದೆ. ಮಹಿಳೆಯರಿಂದ ಖಾಲಿ ಪತ್ರಕ್ಕೆ ಸಹಿ ಮಾಡಿಸಿಕೊಂಡು ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ; ‘ಸಾವರ್ಕರ್‌ಗೆ ಮಾನಹಾನಿ ಮಾಡಿದ್ದಾರೆ ಎಂಬ ದೂರು ಮೇಲ್ನೋಟಕ್ಕೆ ಸತ್ಯ..’; ರಾಹುಲ್ ವಿರುದ್ಧ ತನಿಖಾ ವರದಿ ಸಲ್ಲಿಸಿದ ಪುಣೆ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...