Homeಮುಖಪುಟಸಂದೇಶಖಾಲಿ ಪ್ರಕರಣ: ಬಿಜೆಪಿ ಗುರಿಯಾಗಿಸಿಕೊಂಡಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಯಾರು?

ಸಂದೇಶಖಾಲಿ ಪ್ರಕರಣ: ಬಿಜೆಪಿ ಗುರಿಯಾಗಿಸಿಕೊಂಡಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಯಾರು?

- Advertisement -
- Advertisement -

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾದ ಸಂದೇಶಖಾಲಿಯಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರಿಂದ ಕಿರುಕುಳ ಮತ್ತು ಶೋಷಣೆಯ ಆರೋಪದ ಮೇಲೆ ಉದ್ವಿಗ್ನತೆ ಮುಂದುವರಿದಿದೆ. ನಿಷೇಧಾಜ್ಞೆ ನಡುವೆಯೂ ಹಲವು ಬಿಜೆಪಿ ನಾಯಕರು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯ ಹಗರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಟಿಎಂಸಿ ನಾಯಕ ಶೇಖ್ ಷಹಜಹಾನ್ ಅವರ ಮನೆ ಮೇಲೆ ದಾಳಿ ಮಾಡಲು ಆಗಮಿಸಿದ ಜಾರಿ ನಿರ್ದೇಶನಾಲಯ (ಇಡಿ) ತಂಡದ ಮೇಲೆ ಜನವರಿ 7ರಂದು ಸ್ಥಳೀಯ ದಾಳಿ ನಡೆಸಿದ್ದರು.

ಶೇಖ್ ಷಹಜಹಾನ್ ಬಂಧನವನ್ನು ತಪ್ಪಿಸಿದ್ದರೂ ಸಹ, ಫೆಬ್ರವರಿ 7 ರಿಂದ, ಸ್ಥಳೀಯ ಮಹಿಳೆಯರ ನೇತೃತ್ವದಲ್ಲಿ ಗ್ರಾಮಸ್ಥರು ಸ್ಥಳೀಯ ಟಿಎಂಸಿ ನಾಯಕರ ಕಿರುಕುಳ ಮತ್ತು ಶೋಷಣೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

ಷಹಜಹಾನ್ ಮೇಲೆ ಹಣ ವರ್ಗಾವಣೆಯಿಂದ ಹಿಡಿದು ಕಿರುಕುಳದವರೆಗೆ ಹಲವಾರು ಅಪರಾಧಗಳ ಆರೋಪವಿದ್ದು, ಪ್ರಸ್ತುತ ಆತ ತಲೆಮರೆಸಿಕೊಂಡಿದ್ದಾನೆ. ಪಕ್ಷದಿಂದ ಆತನನ್ನು ಉಚ್ಛಾಟಿಸಲಾಗಿದೆ.

ಆಡಳಿತಾರೂಢ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಉದ್ವಿಗ್ನತೆಗೆ ಕಾರಣವೆಂದು ಆರೋಪಿಸಿದರೆ, ಬಿಜೆಪಿ ಮತ್ತು ಕಾಂಗ್ರೆಸ್ ಟಿಎಂಸಿ ಮುಖ್ಯಸ್ಥರು ಲೈಂಗಿಕ ಶೋಷಣೆಯ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಶೇಖ್ ಷಹಜಹಾನ್ ಮತ್ತು ಅವರ ತಂಡ ‘ಭಯೋತ್ಪಾದನೆಯ ಆಳ್ವಿಕೆ’ ಸ್ಥಾಪಿಸಿದರು, ಅಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಮಹಿಳೆಯರ ಘನತೆ ಮತ್ತು ಮರ್ಯಾದೆ ಪದೇ ಪದೇ ಉಲ್ಲಂಘನೆಯಾಗಿದೆ” ಎಂದು ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ, ಬಿಜೆಪಿ ನಂದಿಗ್ರಾಮ್ ಶಾಸಕ ಸುವೆಂದು ಅಧೀಕಾರಿ ಫೆಬ್ರವರಿ 11 ರಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿ, ಸಂದೇಖ್‌ಖಾಲಿಯಲ್ಲಿ ಯುವ ಹಿಂದೂ ವಿವಾಹಿತ ಮಹಿಳೆಯರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಶುಕ್ರವಾರ, ಬಿಜೆಪಿ ಮತ್ತು ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಶುಕ್ರವಾರ ಸಂದೇಶಖಾಲಿಗೆ ಭೇಟಿ ಮಾಡದಂತೆ ಪೊಲೀಸರು ತಡೆದರು, ಇದು ರಾಜ್ಯದಲ್ಲಿ ರಾಜಕೀಯ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಶೇಖ್ ಷಹಜಹಾನ್ ಯಾರು?

ಟಿಎಂಸಿ ನಾಯಕರಾಗಿರುವ 42 ವರ್ಷದ ಷಹಜಹಾನ್ ಶೇಖ್ ಅವರು, ಸ್ಥಳೀಯವಾಗಿ ‘ಭಾಯ್’ ಎಂದು ಜನಪ್ರಿಯರಾಗಿದ್ದಾರೆ. ಅವರು ಬಾಂಗ್ಲಾದೇಶದ ಗಡಿಯ ಸಮೀಪವಿರುವ ಉತ್ತರ 24 ಪರಗಣಗಳಲ್ಲಿ ಸಂದೇಶಖಾಲಿ ಬ್ಲಾಕ್‌ನ ಮೀನುಗಾರಿಕೆಯಲ್ಲಿ ಕೆಲಸಗಾರರಾಗಿ ವೃತ್ತಿ ಪ್ರಾರಂಭಿಸಿದರು.

ಶೇಖ್ ಅವರು ಸಂದೇಶಖಾಲಿಯಲ್ಲಿ ಮೀನುಗಾರಿಕೆ ಮತ್ತು ಇಟ್ಟಿಗೆ ಗೂಡುಗಳಲ್ಲಿ ಕೆಲಸಗಾರರಾಗಿ ಕೆಲಸ ಪ್ರಾರಂಭಿಸಿದ್ದು, ನಾಲ್ಕು  ಜನಒಡಹುಟ್ಟಿದವರಲ್ಲಿ ಇವರು ಹಿರಿಯರು. ಶೇಖ್ 2004ರಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಒಕ್ಕೂಟದ ನಾಯಕರಾಗಿ ರಾಜಕೀಯ ಪ್ರವೇಶಿಸಿದ್ದರು. ನಂತರ ಅವರು ಸ್ಥಳೀಯ ಸಿಪಿಐ(ಎಂ) ಘಟಕಕ್ಕೆ ಸೇರಿದರು, ಪಶ್ಚಿಮ ಬಂಗಾಳದಲ್ಲಿ ಬದಲಾಗುತ್ತಿರುವ ರಾಜಕೀಯ ಸನ್ನಿವೇಶಗಳ ಹೊರತಾಗಿಯೂ ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಂಡರು.

ಉರಿಯುವ ಭಾಷಣಗಳು ಮತ್ತು ಸಂಘಟನಾ ಕೌಶಲ್ಯಗಳಿಗೆ ಹೆಸರುವಾಸಿಯಾದ ಶೇಖ್ 2012 ರಲ್ಲಿ ತೃಣಮೂಲ ಕಾಂಗ್ರೆಸ್ ನಾಯಕತ್ವದ ಗಮನ ಸೆಳೆದರು. 42 ವರ್ಷದ ಅವರು ಆಗಿನ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್ ಮತ್ತು ಉತ್ತರ 24 ಪರಗಣಗಳ ಟಿಎಂಸಿ ಜಿಲ್ಲಾಧ್ಯಕ್ಷ ಜ್ಯೋತಿಪ್ರಿಯೊ ಮುಲ್ಲಿಕ್ ಅವರ ನೇತೃತ್ವದಲ್ಲಿ ಕೆಲಸ ಮಾಡಿದರು. ಅವರು ಶೀಘ್ರವಾಗಿ ಅಧಿಕಾರಕ್ಕೆ ಏರಿದರು, ಮಲ್ಲಿಕ್ ಅವರ ನಿಕಟ ಸಹವರ್ತಿಯಾದರು.

2018 ರಲ್ಲಿ, ಶೇಖ್ ಸರ್ಬೇರಿಯಾ ಅಗರಹಟಿ ಗ್ರಾಮ ಪಂಚಾಯತ್‌ನ ಉಪ ಮುಖ್ಯಸ್ಥರಾಗಿ ಪ್ರಾಮುಖ್ಯತೆಯನ್ನು ಪಡೆದರು. ಅವರ ಕಿರಿಯ ಸಹೋದರರೂ ಸಕ್ರಿಯ ಟಿಎಂಸಿ ಕಾರ್ಯಕರ್ತರಾಗಿದ್ದು, ಅವರು ಭೂ ವ್ಯವಹಾರ ಸೇರಿದಂತೆ ಅವರ ವ್ಯವಹಾರವನ್ನು ಸಹ ನಿರ್ವಹಿಸುತ್ತಾರೆ. ಶೇಖ್ ಅವರು ಈ ಪ್ರದೇಶದಲ್ಲಿ ಸಂಘರ್ಷ ಪರಿಹಾರ, ಕೌಟುಂಬಿಕ ವಿವಾದಗಳು ಮತ್ತು ಭೂಮಿ ಭಿನ್ನಾಭಿಪ್ರಾಯಗಳನ್ನು ಮಧ್ಯಸ್ಥಿಕೆ ವಹಿಸುವ ವ್ಯಕ್ತಿಯಾಗಿದ್ದಾರೆ.

ಸ್ಥಳೀಯ ಟಿಎಂಸಿ ನಾಯಕರ ಪ್ರಕಾರ, ಶೇಖ್ ಅವರು ಈ ಪ್ರದೇಶದಲ್ಲಿ ಗೌರವ ಮತ್ತು ಭಯವನ್ನು ಹೊಂದಿದ್ದಾರೆ. ‘ಕೆಲವು ವಿರೋಧಿಗಳಿಗೆ ಅವರು ಭಯೋತ್ಪಾದಕರಾದರೆ. ಇನ್ನೂ ಕೆಲವರಿಗೆ ಆತನ ರಾಬಿನ್ ಹುಡ್ ರೀತಿ’ ಎಂದು ಹೇಳಿದ್ದಾರೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದರೂ, ಮಕ್ಕಳ ಕಳ್ಳಸಾಗಣೆ ತಡೆಯುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. 2019 ರಲ್ಲಿ ಸರ್ಬೇರಿಯಾ ಅಗರಹಟಿ ಗ್ರಾಮ ಪಂಚಾಯಿತಿಯನ್ನು ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್’ ಮಾಡುವಲ್ಲಿ ಅವರು ಮಾಡಿದ ಪ್ರಯತ್ನಗಳಿಗೆ ಮನ್ನಣೆ ಗಳಿಸಿದ್ದಾರೆ ಎಂದು ಸುದ್ದಿಯಾಗಿದೆ.

ಜೂನ್ 2019ರಲ್ಲಿ ಸಂದೇಶಖಾಲಿ ನಂತರದ ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವಿನ ಹಿಂಸಾತ್ಮಕ ಘರ್ಷಣೆಯ ನಂತರ, ಎರಡೂ ಕಡೆಗಳಲ್ಲಿ ಸಾವು ಸಂಭವಿಸಿದ ನಂತರ, ಘಟನೆಗೆ ಸಂಬಂಧಿಸಿದಂತೆ ದಾಖಲಾದ ಕೊಲೆ ಎಫ್‌ಐಆರ್‌ನಲ್ಲಿ ಶೇಖ್ ಅವರು ಹೆಸರಿದೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಹಗರಣ: ವಿಶ್ವಾಸ ಮತಕ್ಕೂ ಮುನ್ನ ನ್ಯಾಯಾಲಯದ ಮುಂದೆ ಹಾಜರಾದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...