Homeಮುಖಪುಟಸಂದೇಶಖಾಲಿ ಪ್ರಕರಣ: ಬಿಜೆಪಿ ಗುರಿಯಾಗಿಸಿಕೊಂಡಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಯಾರು?

ಸಂದೇಶಖಾಲಿ ಪ್ರಕರಣ: ಬಿಜೆಪಿ ಗುರಿಯಾಗಿಸಿಕೊಂಡಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಯಾರು?

- Advertisement -
- Advertisement -

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾದ ಸಂದೇಶಖಾಲಿಯಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರಿಂದ ಕಿರುಕುಳ ಮತ್ತು ಶೋಷಣೆಯ ಆರೋಪದ ಮೇಲೆ ಉದ್ವಿಗ್ನತೆ ಮುಂದುವರಿದಿದೆ. ನಿಷೇಧಾಜ್ಞೆ ನಡುವೆಯೂ ಹಲವು ಬಿಜೆಪಿ ನಾಯಕರು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯ ಹಗರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಟಿಎಂಸಿ ನಾಯಕ ಶೇಖ್ ಷಹಜಹಾನ್ ಅವರ ಮನೆ ಮೇಲೆ ದಾಳಿ ಮಾಡಲು ಆಗಮಿಸಿದ ಜಾರಿ ನಿರ್ದೇಶನಾಲಯ (ಇಡಿ) ತಂಡದ ಮೇಲೆ ಜನವರಿ 7ರಂದು ಸ್ಥಳೀಯ ದಾಳಿ ನಡೆಸಿದ್ದರು.

ಶೇಖ್ ಷಹಜಹಾನ್ ಬಂಧನವನ್ನು ತಪ್ಪಿಸಿದ್ದರೂ ಸಹ, ಫೆಬ್ರವರಿ 7 ರಿಂದ, ಸ್ಥಳೀಯ ಮಹಿಳೆಯರ ನೇತೃತ್ವದಲ್ಲಿ ಗ್ರಾಮಸ್ಥರು ಸ್ಥಳೀಯ ಟಿಎಂಸಿ ನಾಯಕರ ಕಿರುಕುಳ ಮತ್ತು ಶೋಷಣೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

ಷಹಜಹಾನ್ ಮೇಲೆ ಹಣ ವರ್ಗಾವಣೆಯಿಂದ ಹಿಡಿದು ಕಿರುಕುಳದವರೆಗೆ ಹಲವಾರು ಅಪರಾಧಗಳ ಆರೋಪವಿದ್ದು, ಪ್ರಸ್ತುತ ಆತ ತಲೆಮರೆಸಿಕೊಂಡಿದ್ದಾನೆ. ಪಕ್ಷದಿಂದ ಆತನನ್ನು ಉಚ್ಛಾಟಿಸಲಾಗಿದೆ.

ಆಡಳಿತಾರೂಢ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಉದ್ವಿಗ್ನತೆಗೆ ಕಾರಣವೆಂದು ಆರೋಪಿಸಿದರೆ, ಬಿಜೆಪಿ ಮತ್ತು ಕಾಂಗ್ರೆಸ್ ಟಿಎಂಸಿ ಮುಖ್ಯಸ್ಥರು ಲೈಂಗಿಕ ಶೋಷಣೆಯ ಆರೋಪಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಶೇಖ್ ಷಹಜಹಾನ್ ಮತ್ತು ಅವರ ತಂಡ ‘ಭಯೋತ್ಪಾದನೆಯ ಆಳ್ವಿಕೆ’ ಸ್ಥಾಪಿಸಿದರು, ಅಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಮಹಿಳೆಯರ ಘನತೆ ಮತ್ತು ಮರ್ಯಾದೆ ಪದೇ ಪದೇ ಉಲ್ಲಂಘನೆಯಾಗಿದೆ” ಎಂದು ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ, ಬಿಜೆಪಿ ನಂದಿಗ್ರಾಮ್ ಶಾಸಕ ಸುವೆಂದು ಅಧೀಕಾರಿ ಫೆಬ್ರವರಿ 11 ರಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿ, ಸಂದೇಖ್‌ಖಾಲಿಯಲ್ಲಿ ಯುವ ಹಿಂದೂ ವಿವಾಹಿತ ಮಹಿಳೆಯರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಶುಕ್ರವಾರ, ಬಿಜೆಪಿ ಮತ್ತು ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಶುಕ್ರವಾರ ಸಂದೇಶಖಾಲಿಗೆ ಭೇಟಿ ಮಾಡದಂತೆ ಪೊಲೀಸರು ತಡೆದರು, ಇದು ರಾಜ್ಯದಲ್ಲಿ ರಾಜಕೀಯ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಶೇಖ್ ಷಹಜಹಾನ್ ಯಾರು?

ಟಿಎಂಸಿ ನಾಯಕರಾಗಿರುವ 42 ವರ್ಷದ ಷಹಜಹಾನ್ ಶೇಖ್ ಅವರು, ಸ್ಥಳೀಯವಾಗಿ ‘ಭಾಯ್’ ಎಂದು ಜನಪ್ರಿಯರಾಗಿದ್ದಾರೆ. ಅವರು ಬಾಂಗ್ಲಾದೇಶದ ಗಡಿಯ ಸಮೀಪವಿರುವ ಉತ್ತರ 24 ಪರಗಣಗಳಲ್ಲಿ ಸಂದೇಶಖಾಲಿ ಬ್ಲಾಕ್‌ನ ಮೀನುಗಾರಿಕೆಯಲ್ಲಿ ಕೆಲಸಗಾರರಾಗಿ ವೃತ್ತಿ ಪ್ರಾರಂಭಿಸಿದರು.

ಶೇಖ್ ಅವರು ಸಂದೇಶಖಾಲಿಯಲ್ಲಿ ಮೀನುಗಾರಿಕೆ ಮತ್ತು ಇಟ್ಟಿಗೆ ಗೂಡುಗಳಲ್ಲಿ ಕೆಲಸಗಾರರಾಗಿ ಕೆಲಸ ಪ್ರಾರಂಭಿಸಿದ್ದು, ನಾಲ್ಕು  ಜನಒಡಹುಟ್ಟಿದವರಲ್ಲಿ ಇವರು ಹಿರಿಯರು. ಶೇಖ್ 2004ರಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಒಕ್ಕೂಟದ ನಾಯಕರಾಗಿ ರಾಜಕೀಯ ಪ್ರವೇಶಿಸಿದ್ದರು. ನಂತರ ಅವರು ಸ್ಥಳೀಯ ಸಿಪಿಐ(ಎಂ) ಘಟಕಕ್ಕೆ ಸೇರಿದರು, ಪಶ್ಚಿಮ ಬಂಗಾಳದಲ್ಲಿ ಬದಲಾಗುತ್ತಿರುವ ರಾಜಕೀಯ ಸನ್ನಿವೇಶಗಳ ಹೊರತಾಗಿಯೂ ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಂಡರು.

ಉರಿಯುವ ಭಾಷಣಗಳು ಮತ್ತು ಸಂಘಟನಾ ಕೌಶಲ್ಯಗಳಿಗೆ ಹೆಸರುವಾಸಿಯಾದ ಶೇಖ್ 2012 ರಲ್ಲಿ ತೃಣಮೂಲ ಕಾಂಗ್ರೆಸ್ ನಾಯಕತ್ವದ ಗಮನ ಸೆಳೆದರು. 42 ವರ್ಷದ ಅವರು ಆಗಿನ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್ ಮತ್ತು ಉತ್ತರ 24 ಪರಗಣಗಳ ಟಿಎಂಸಿ ಜಿಲ್ಲಾಧ್ಯಕ್ಷ ಜ್ಯೋತಿಪ್ರಿಯೊ ಮುಲ್ಲಿಕ್ ಅವರ ನೇತೃತ್ವದಲ್ಲಿ ಕೆಲಸ ಮಾಡಿದರು. ಅವರು ಶೀಘ್ರವಾಗಿ ಅಧಿಕಾರಕ್ಕೆ ಏರಿದರು, ಮಲ್ಲಿಕ್ ಅವರ ನಿಕಟ ಸಹವರ್ತಿಯಾದರು.

2018 ರಲ್ಲಿ, ಶೇಖ್ ಸರ್ಬೇರಿಯಾ ಅಗರಹಟಿ ಗ್ರಾಮ ಪಂಚಾಯತ್‌ನ ಉಪ ಮುಖ್ಯಸ್ಥರಾಗಿ ಪ್ರಾಮುಖ್ಯತೆಯನ್ನು ಪಡೆದರು. ಅವರ ಕಿರಿಯ ಸಹೋದರರೂ ಸಕ್ರಿಯ ಟಿಎಂಸಿ ಕಾರ್ಯಕರ್ತರಾಗಿದ್ದು, ಅವರು ಭೂ ವ್ಯವಹಾರ ಸೇರಿದಂತೆ ಅವರ ವ್ಯವಹಾರವನ್ನು ಸಹ ನಿರ್ವಹಿಸುತ್ತಾರೆ. ಶೇಖ್ ಅವರು ಈ ಪ್ರದೇಶದಲ್ಲಿ ಸಂಘರ್ಷ ಪರಿಹಾರ, ಕೌಟುಂಬಿಕ ವಿವಾದಗಳು ಮತ್ತು ಭೂಮಿ ಭಿನ್ನಾಭಿಪ್ರಾಯಗಳನ್ನು ಮಧ್ಯಸ್ಥಿಕೆ ವಹಿಸುವ ವ್ಯಕ್ತಿಯಾಗಿದ್ದಾರೆ.

ಸ್ಥಳೀಯ ಟಿಎಂಸಿ ನಾಯಕರ ಪ್ರಕಾರ, ಶೇಖ್ ಅವರು ಈ ಪ್ರದೇಶದಲ್ಲಿ ಗೌರವ ಮತ್ತು ಭಯವನ್ನು ಹೊಂದಿದ್ದಾರೆ. ‘ಕೆಲವು ವಿರೋಧಿಗಳಿಗೆ ಅವರು ಭಯೋತ್ಪಾದಕರಾದರೆ. ಇನ್ನೂ ಕೆಲವರಿಗೆ ಆತನ ರಾಬಿನ್ ಹುಡ್ ರೀತಿ’ ಎಂದು ಹೇಳಿದ್ದಾರೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದರೂ, ಮಕ್ಕಳ ಕಳ್ಳಸಾಗಣೆ ತಡೆಯುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. 2019 ರಲ್ಲಿ ಸರ್ಬೇರಿಯಾ ಅಗರಹಟಿ ಗ್ರಾಮ ಪಂಚಾಯಿತಿಯನ್ನು ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್’ ಮಾಡುವಲ್ಲಿ ಅವರು ಮಾಡಿದ ಪ್ರಯತ್ನಗಳಿಗೆ ಮನ್ನಣೆ ಗಳಿಸಿದ್ದಾರೆ ಎಂದು ಸುದ್ದಿಯಾಗಿದೆ.

ಜೂನ್ 2019ರಲ್ಲಿ ಸಂದೇಶಖಾಲಿ ನಂತರದ ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವಿನ ಹಿಂಸಾತ್ಮಕ ಘರ್ಷಣೆಯ ನಂತರ, ಎರಡೂ ಕಡೆಗಳಲ್ಲಿ ಸಾವು ಸಂಭವಿಸಿದ ನಂತರ, ಘಟನೆಗೆ ಸಂಬಂಧಿಸಿದಂತೆ ದಾಖಲಾದ ಕೊಲೆ ಎಫ್‌ಐಆರ್‌ನಲ್ಲಿ ಶೇಖ್ ಅವರು ಹೆಸರಿದೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಹಗರಣ: ವಿಶ್ವಾಸ ಮತಕ್ಕೂ ಮುನ್ನ ನ್ಯಾಯಾಲಯದ ಮುಂದೆ ಹಾಜರಾದ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...