Homeಮುಖಪುಟಮಹಿಳೆಯರ ಸಮಸ್ಯೆಗಳ ಕುರಿತು ಪ್ರಸ್ತಾಪ : ಕೇರಳ ನಿರ್ಮಾಪಕರ ಸಂಘದಿಂದ ಸಾಂಡ್ರಾ ಥಾಮಸ್ ಉಚ್ಚಾಟನೆ

ಮಹಿಳೆಯರ ಸಮಸ್ಯೆಗಳ ಕುರಿತು ಪ್ರಸ್ತಾಪ : ಕೇರಳ ನಿರ್ಮಾಪಕರ ಸಂಘದಿಂದ ಸಾಂಡ್ರಾ ಥಾಮಸ್ ಉಚ್ಚಾಟನೆ

- Advertisement -
- Advertisement -

ಸಿನಿಮಾ ರಂಗದಲ್ಲಿ (ವಿಶೇಷವಾಗಿ ಮಲಯಾಳಂ) ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಿದ್ದ ಮಲಯಾಳಂ ಚಿತ್ರ ನಿರ್ಮಾಪಕಿ ಸಾಂಡ್ರಾ ಥಾಮಸ್ ಅವರನ್ನು ಕೇರಳ ಚಲನಚಿತ್ರ ನಿರ್ಮಾಪಕರ ಸಂಘ (ಕೆಎಫ್‌ಪಿಎ) ದಿಂದ ಉಚ್ಚಾಟಿಸಲಾಗಿದೆ.

ಈ ಸಂಬಂಧ ಅಕ್ಟೋಬರ್ 28ರಂದು ಸಾಂಡ್ರಾ ಅವರಿಗೆ ಪತ್ರ ಬರೆದಿರುವ ಕೆಎಫ್‌ಪಿಎ, ‘ಅಶಿಸ್ತಿನ’ ಕಾರಣಕ್ಕೆ ಸಂಘದ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ ಎಂದು ಹೇಳಿದೆ. ಅಲ್ಲದೆ, ಸಂಘದ ಸದಸ್ಯರ ನಡುವೆ ಹರಿದಾಡಿದ ಮತ್ತೊಂದು ಪತ್ರದಲ್ಲಿ ಸಂಘವು, ಸಾಂಡ್ರಾ ಅವರು ಕೆಎಫ್‌ಪಿಎ ಕುರಿತು ಸಾರ್ವಜನಿಕವಾಗಿ ನೀಡುತ್ತಿರುವ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹೇಮಾ ಸಮಿತಿ ವರದಿ ನೀಡಿದ ಬಳಿಕ, ಅನೇಕ ಮಹಿಳೆಯರು ನಟರು, ನಿರ್ಮಾಪಕರು ಮತ್ತು ನಿರ್ದೇಶಕರು ಸೇರಿದಂತೆ ಘಟಾನುಘಟಿಗಳ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಮಾಡಿದ್ದಾರೆ. ಹಲವರು ದೂರು ದಾಖಲಿಸಿದ್ದಾರೆ. ಈ ಸಂಬಂಧ ಕೆಲವರ ಬಂಧನವೂ ಆಗಿದೆ.

ಸಾಂಡ್ರಾ ಅವರು ಮಹಿಳಾ ನಿರ್ಮಾಪಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿದ್ದರು. ಹೇಮಾ ಸಮಿತಿಯಲ್ಲಿ ವಿವರಿಸಲಾದ ಅಂಶಗಳ ಬಗ್ಗೆ ನಿರ್ಲಕ್ಷ್ಯ ಮತ್ತು ನೀರಸ ಭಾವನೆ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಕೆಎಫ್‌ಪಿಎಗೆ ಪತ್ರ ಬರೆದು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದರು ಎಂದು ವರದಿ ವಿವರಿಸಿದೆ.

ತನ್ನ ಉಚ್ಚಾಟನೆಯ ಕುರಿತು ಮಾತನಾಡಿರುವ ಸಾಂಡ್ರಾ ಅವರು, “ನನ್ನನ್ನು ಉಚ್ಚಾಟಿಸುವ ಮೂಲಕ ಹೇಮಾ ಸಮಿತಿಯ ವರದಿಯ ಬಳಿಕ ತಮ್ಮ ಮೇಲಿನ ದೌರ್ಜನ್ಯಗಳ ಕುರಿತು ಧ್ವನಿ ಎತ್ತುತ್ತಿರುವ ಮಹಿಳಾ ಕಲಾವಿದರಿಗೆ ಅವರು (ಕೆಎಫ್‌ಪಿಎ) ಎಚ್ಚರಿಕೆ ನೀಡಿರಬಹುದು. ಅವರು ಮಹಿಳೆಯರ ಧ್ವನಿಯನ್ನು ಅಡಗಿಸಲು ಬಯಸಿದ್ದಾರೆ. ನಿರ್ಮಾಪಕಿಯಾಗಿ ಬೇರೆಯವರಿಗೆ ಕೆಲಸ ನೀಡಬಲ್ಲ ನನ್ನ ಪರಿಸ್ಥಿತಿಯೇ ಈ ರೀತಿಯಾದರೆ, ಸಿನಿಮಾ ರಂಗದಲ್ಲಿ ಇತರ ಸಣ್ಣಪುಟ್ಟ ಕೆಲಸ ಮಾಡುವ ಮಹಿಳೆಯರ ಗತಿಯೇನು?” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ ಮಿನಿಟ್‌ನ ಸಂದರ್ಶನದಲ್ಲಿ ಮಾತನಾಡಿರುವ ಸಾಂಡ್ರಾ ಅವರು, “ಮಲಯಾಳಂ ಸಿನಿಮಾ ರಂಗದಲ್ಲಿ ನಟರು, ನಿರ್ಮಾಪಕರು, ನಿರ್ದೇಶಕರು ಮತ್ತು ಮಾಧ್ಯಮದವರ ‘ಕಾಕಸ್’ ಪವರ್ ಗ್ರೂಪ್ ಇದೆ. ಈ ಬಗ್ಗೆ ಹೇಮಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಪವರ್ ಗ್ರೂಪ್ ಯಾರಿಗೆ ಕೆಲಸ ಕೊಡಬೇಕು, ಯಾರಿಗೆ ಕೊಡಬಾರದು ಎಂದು ನಿರ್ಧರಿಸುತ್ತದೆ. ಇದರ ಬಗ್ಗೆ ಮಾತನಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ. ಈಗ ನನಗೆ ಅನ್ಯಾಯವಾಗಿದೆ ಪ್ರಶ್ನಿಸೋಣ ಎಂದರೆ ನಿರ್ಮಾಪಕರ ಸಂಘದಲ್ಲಿ ಪಾಶ್ (POSH)ಕಾಯ್ದೆಯ ಪ್ರಕಾರ ಆಂತರಿಕ ಪರಿಹಾರ ಸಮಿತಿಯೂ ಇಲ್ಲ” ಎಂದಿದ್ದಾರೆ.

ಸಾಂಡ್ರಾ ಮತ್ತು ಅವರ ನಿರ್ಮಾಣ ಕಂಪನಿ ಸಾಂಡ್ರಾ ಥಾಮಸ್ ಪ್ರೊಡಕ್ಷನ್ಸ್ ಅನ್ನು ನಿರ್ಮಾಪಕದ ಸಂಘದಿಂದ ಹೊರಗಿಡುವ ಮುನ್ನ ವಿವರಣೆ ಕೋರಿ ಸಾಂಡ್ರಾ ಅವರಿಗೆ ಪತ್ರ ಬರೆಯಲಾಗಿತ್ತು. ಅದಕ್ಕೆ ಅವರು ನೀಡಿರುವ ಉತ್ತರ ತೃಪ್ತಿಕರವಾಗಿಲ್ಲ ಎಂದು ನಿರ್ಮಾಪಕರ ಸಂಘ ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ : ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...