Homeಮುಖಪುಟಮಹಿಳೆಯರ ಸಮಸ್ಯೆಗಳ ಕುರಿತು ಪ್ರಸ್ತಾಪ : ಕೇರಳ ನಿರ್ಮಾಪಕರ ಸಂಘದಿಂದ ಸಾಂಡ್ರಾ ಥಾಮಸ್ ಉಚ್ಚಾಟನೆ

ಮಹಿಳೆಯರ ಸಮಸ್ಯೆಗಳ ಕುರಿತು ಪ್ರಸ್ತಾಪ : ಕೇರಳ ನಿರ್ಮಾಪಕರ ಸಂಘದಿಂದ ಸಾಂಡ್ರಾ ಥಾಮಸ್ ಉಚ್ಚಾಟನೆ

- Advertisement -
- Advertisement -

ಸಿನಿಮಾ ರಂಗದಲ್ಲಿ (ವಿಶೇಷವಾಗಿ ಮಲಯಾಳಂ) ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಿದ್ದ ಮಲಯಾಳಂ ಚಿತ್ರ ನಿರ್ಮಾಪಕಿ ಸಾಂಡ್ರಾ ಥಾಮಸ್ ಅವರನ್ನು ಕೇರಳ ಚಲನಚಿತ್ರ ನಿರ್ಮಾಪಕರ ಸಂಘ (ಕೆಎಫ್‌ಪಿಎ) ದಿಂದ ಉಚ್ಚಾಟಿಸಲಾಗಿದೆ.

ಈ ಸಂಬಂಧ ಅಕ್ಟೋಬರ್ 28ರಂದು ಸಾಂಡ್ರಾ ಅವರಿಗೆ ಪತ್ರ ಬರೆದಿರುವ ಕೆಎಫ್‌ಪಿಎ, ‘ಅಶಿಸ್ತಿನ’ ಕಾರಣಕ್ಕೆ ಸಂಘದ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ ಎಂದು ಹೇಳಿದೆ. ಅಲ್ಲದೆ, ಸಂಘದ ಸದಸ್ಯರ ನಡುವೆ ಹರಿದಾಡಿದ ಮತ್ತೊಂದು ಪತ್ರದಲ್ಲಿ ಸಂಘವು, ಸಾಂಡ್ರಾ ಅವರು ಕೆಎಫ್‌ಪಿಎ ಕುರಿತು ಸಾರ್ವಜನಿಕವಾಗಿ ನೀಡುತ್ತಿರುವ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹೇಮಾ ಸಮಿತಿ ವರದಿ ನೀಡಿದ ಬಳಿಕ, ಅನೇಕ ಮಹಿಳೆಯರು ನಟರು, ನಿರ್ಮಾಪಕರು ಮತ್ತು ನಿರ್ದೇಶಕರು ಸೇರಿದಂತೆ ಘಟಾನುಘಟಿಗಳ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಮಾಡಿದ್ದಾರೆ. ಹಲವರು ದೂರು ದಾಖಲಿಸಿದ್ದಾರೆ. ಈ ಸಂಬಂಧ ಕೆಲವರ ಬಂಧನವೂ ಆಗಿದೆ.

ಸಾಂಡ್ರಾ ಅವರು ಮಹಿಳಾ ನಿರ್ಮಾಪಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿದ್ದರು. ಹೇಮಾ ಸಮಿತಿಯಲ್ಲಿ ವಿವರಿಸಲಾದ ಅಂಶಗಳ ಬಗ್ಗೆ ನಿರ್ಲಕ್ಷ್ಯ ಮತ್ತು ನೀರಸ ಭಾವನೆ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಕೆಎಫ್‌ಪಿಎಗೆ ಪತ್ರ ಬರೆದು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದರು ಎಂದು ವರದಿ ವಿವರಿಸಿದೆ.

ತನ್ನ ಉಚ್ಚಾಟನೆಯ ಕುರಿತು ಮಾತನಾಡಿರುವ ಸಾಂಡ್ರಾ ಅವರು, “ನನ್ನನ್ನು ಉಚ್ಚಾಟಿಸುವ ಮೂಲಕ ಹೇಮಾ ಸಮಿತಿಯ ವರದಿಯ ಬಳಿಕ ತಮ್ಮ ಮೇಲಿನ ದೌರ್ಜನ್ಯಗಳ ಕುರಿತು ಧ್ವನಿ ಎತ್ತುತ್ತಿರುವ ಮಹಿಳಾ ಕಲಾವಿದರಿಗೆ ಅವರು (ಕೆಎಫ್‌ಪಿಎ) ಎಚ್ಚರಿಕೆ ನೀಡಿರಬಹುದು. ಅವರು ಮಹಿಳೆಯರ ಧ್ವನಿಯನ್ನು ಅಡಗಿಸಲು ಬಯಸಿದ್ದಾರೆ. ನಿರ್ಮಾಪಕಿಯಾಗಿ ಬೇರೆಯವರಿಗೆ ಕೆಲಸ ನೀಡಬಲ್ಲ ನನ್ನ ಪರಿಸ್ಥಿತಿಯೇ ಈ ರೀತಿಯಾದರೆ, ಸಿನಿಮಾ ರಂಗದಲ್ಲಿ ಇತರ ಸಣ್ಣಪುಟ್ಟ ಕೆಲಸ ಮಾಡುವ ಮಹಿಳೆಯರ ಗತಿಯೇನು?” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ ಮಿನಿಟ್‌ನ ಸಂದರ್ಶನದಲ್ಲಿ ಮಾತನಾಡಿರುವ ಸಾಂಡ್ರಾ ಅವರು, “ಮಲಯಾಳಂ ಸಿನಿಮಾ ರಂಗದಲ್ಲಿ ನಟರು, ನಿರ್ಮಾಪಕರು, ನಿರ್ದೇಶಕರು ಮತ್ತು ಮಾಧ್ಯಮದವರ ‘ಕಾಕಸ್’ ಪವರ್ ಗ್ರೂಪ್ ಇದೆ. ಈ ಬಗ್ಗೆ ಹೇಮಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಪವರ್ ಗ್ರೂಪ್ ಯಾರಿಗೆ ಕೆಲಸ ಕೊಡಬೇಕು, ಯಾರಿಗೆ ಕೊಡಬಾರದು ಎಂದು ನಿರ್ಧರಿಸುತ್ತದೆ. ಇದರ ಬಗ್ಗೆ ಮಾತನಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ. ಈಗ ನನಗೆ ಅನ್ಯಾಯವಾಗಿದೆ ಪ್ರಶ್ನಿಸೋಣ ಎಂದರೆ ನಿರ್ಮಾಪಕರ ಸಂಘದಲ್ಲಿ ಪಾಶ್ (POSH)ಕಾಯ್ದೆಯ ಪ್ರಕಾರ ಆಂತರಿಕ ಪರಿಹಾರ ಸಮಿತಿಯೂ ಇಲ್ಲ” ಎಂದಿದ್ದಾರೆ.

ಸಾಂಡ್ರಾ ಮತ್ತು ಅವರ ನಿರ್ಮಾಣ ಕಂಪನಿ ಸಾಂಡ್ರಾ ಥಾಮಸ್ ಪ್ರೊಡಕ್ಷನ್ಸ್ ಅನ್ನು ನಿರ್ಮಾಪಕದ ಸಂಘದಿಂದ ಹೊರಗಿಡುವ ಮುನ್ನ ವಿವರಣೆ ಕೋರಿ ಸಾಂಡ್ರಾ ಅವರಿಗೆ ಪತ್ರ ಬರೆಯಲಾಗಿತ್ತು. ಅದಕ್ಕೆ ಅವರು ನೀಡಿರುವ ಉತ್ತರ ತೃಪ್ತಿಕರವಾಗಿಲ್ಲ ಎಂದು ನಿರ್ಮಾಪಕರ ಸಂಘ ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ : ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...