Homeಮುಖಪುಟಮಹಿಳೆಯರ ಸಮಸ್ಯೆಗಳ ಕುರಿತು ಪ್ರಸ್ತಾಪ : ಕೇರಳ ನಿರ್ಮಾಪಕರ ಸಂಘದಿಂದ ಸಾಂಡ್ರಾ ಥಾಮಸ್ ಉಚ್ಚಾಟನೆ

ಮಹಿಳೆಯರ ಸಮಸ್ಯೆಗಳ ಕುರಿತು ಪ್ರಸ್ತಾಪ : ಕೇರಳ ನಿರ್ಮಾಪಕರ ಸಂಘದಿಂದ ಸಾಂಡ್ರಾ ಥಾಮಸ್ ಉಚ್ಚಾಟನೆ

- Advertisement -
- Advertisement -

ಸಿನಿಮಾ ರಂಗದಲ್ಲಿ (ವಿಶೇಷವಾಗಿ ಮಲಯಾಳಂ) ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಿದ್ದ ಮಲಯಾಳಂ ಚಿತ್ರ ನಿರ್ಮಾಪಕಿ ಸಾಂಡ್ರಾ ಥಾಮಸ್ ಅವರನ್ನು ಕೇರಳ ಚಲನಚಿತ್ರ ನಿರ್ಮಾಪಕರ ಸಂಘ (ಕೆಎಫ್‌ಪಿಎ) ದಿಂದ ಉಚ್ಚಾಟಿಸಲಾಗಿದೆ.

ಈ ಸಂಬಂಧ ಅಕ್ಟೋಬರ್ 28ರಂದು ಸಾಂಡ್ರಾ ಅವರಿಗೆ ಪತ್ರ ಬರೆದಿರುವ ಕೆಎಫ್‌ಪಿಎ, ‘ಅಶಿಸ್ತಿನ’ ಕಾರಣಕ್ಕೆ ಸಂಘದ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ ಎಂದು ಹೇಳಿದೆ. ಅಲ್ಲದೆ, ಸಂಘದ ಸದಸ್ಯರ ನಡುವೆ ಹರಿದಾಡಿದ ಮತ್ತೊಂದು ಪತ್ರದಲ್ಲಿ ಸಂಘವು, ಸಾಂಡ್ರಾ ಅವರು ಕೆಎಫ್‌ಪಿಎ ಕುರಿತು ಸಾರ್ವಜನಿಕವಾಗಿ ನೀಡುತ್ತಿರುವ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಮಲಯಾಳಂ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹೇಮಾ ಸಮಿತಿ ವರದಿ ನೀಡಿದ ಬಳಿಕ, ಅನೇಕ ಮಹಿಳೆಯರು ನಟರು, ನಿರ್ಮಾಪಕರು ಮತ್ತು ನಿರ್ದೇಶಕರು ಸೇರಿದಂತೆ ಘಟಾನುಘಟಿಗಳ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಮಾಡಿದ್ದಾರೆ. ಹಲವರು ದೂರು ದಾಖಲಿಸಿದ್ದಾರೆ. ಈ ಸಂಬಂಧ ಕೆಲವರ ಬಂಧನವೂ ಆಗಿದೆ.

ಸಾಂಡ್ರಾ ಅವರು ಮಹಿಳಾ ನಿರ್ಮಾಪಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿದ್ದರು. ಹೇಮಾ ಸಮಿತಿಯಲ್ಲಿ ವಿವರಿಸಲಾದ ಅಂಶಗಳ ಬಗ್ಗೆ ನಿರ್ಲಕ್ಷ್ಯ ಮತ್ತು ನೀರಸ ಭಾವನೆ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಕೆಎಫ್‌ಪಿಎಗೆ ಪತ್ರ ಬರೆದು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದರು ಎಂದು ವರದಿ ವಿವರಿಸಿದೆ.

ತನ್ನ ಉಚ್ಚಾಟನೆಯ ಕುರಿತು ಮಾತನಾಡಿರುವ ಸಾಂಡ್ರಾ ಅವರು, “ನನ್ನನ್ನು ಉಚ್ಚಾಟಿಸುವ ಮೂಲಕ ಹೇಮಾ ಸಮಿತಿಯ ವರದಿಯ ಬಳಿಕ ತಮ್ಮ ಮೇಲಿನ ದೌರ್ಜನ್ಯಗಳ ಕುರಿತು ಧ್ವನಿ ಎತ್ತುತ್ತಿರುವ ಮಹಿಳಾ ಕಲಾವಿದರಿಗೆ ಅವರು (ಕೆಎಫ್‌ಪಿಎ) ಎಚ್ಚರಿಕೆ ನೀಡಿರಬಹುದು. ಅವರು ಮಹಿಳೆಯರ ಧ್ವನಿಯನ್ನು ಅಡಗಿಸಲು ಬಯಸಿದ್ದಾರೆ. ನಿರ್ಮಾಪಕಿಯಾಗಿ ಬೇರೆಯವರಿಗೆ ಕೆಲಸ ನೀಡಬಲ್ಲ ನನ್ನ ಪರಿಸ್ಥಿತಿಯೇ ಈ ರೀತಿಯಾದರೆ, ಸಿನಿಮಾ ರಂಗದಲ್ಲಿ ಇತರ ಸಣ್ಣಪುಟ್ಟ ಕೆಲಸ ಮಾಡುವ ಮಹಿಳೆಯರ ಗತಿಯೇನು?” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ ಮಿನಿಟ್‌ನ ಸಂದರ್ಶನದಲ್ಲಿ ಮಾತನಾಡಿರುವ ಸಾಂಡ್ರಾ ಅವರು, “ಮಲಯಾಳಂ ಸಿನಿಮಾ ರಂಗದಲ್ಲಿ ನಟರು, ನಿರ್ಮಾಪಕರು, ನಿರ್ದೇಶಕರು ಮತ್ತು ಮಾಧ್ಯಮದವರ ‘ಕಾಕಸ್’ ಪವರ್ ಗ್ರೂಪ್ ಇದೆ. ಈ ಬಗ್ಗೆ ಹೇಮಾ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಪವರ್ ಗ್ರೂಪ್ ಯಾರಿಗೆ ಕೆಲಸ ಕೊಡಬೇಕು, ಯಾರಿಗೆ ಕೊಡಬಾರದು ಎಂದು ನಿರ್ಧರಿಸುತ್ತದೆ. ಇದರ ಬಗ್ಗೆ ಮಾತನಾಡಿದರೆ ಪರಿಣಾಮ ಎದುರಿಸಬೇಕಾಗುತ್ತದೆ. ಈಗ ನನಗೆ ಅನ್ಯಾಯವಾಗಿದೆ ಪ್ರಶ್ನಿಸೋಣ ಎಂದರೆ ನಿರ್ಮಾಪಕರ ಸಂಘದಲ್ಲಿ ಪಾಶ್ (POSH)ಕಾಯ್ದೆಯ ಪ್ರಕಾರ ಆಂತರಿಕ ಪರಿಹಾರ ಸಮಿತಿಯೂ ಇಲ್ಲ” ಎಂದಿದ್ದಾರೆ.

ಸಾಂಡ್ರಾ ಮತ್ತು ಅವರ ನಿರ್ಮಾಣ ಕಂಪನಿ ಸಾಂಡ್ರಾ ಥಾಮಸ್ ಪ್ರೊಡಕ್ಷನ್ಸ್ ಅನ್ನು ನಿರ್ಮಾಪಕದ ಸಂಘದಿಂದ ಹೊರಗಿಡುವ ಮುನ್ನ ವಿವರಣೆ ಕೋರಿ ಸಾಂಡ್ರಾ ಅವರಿಗೆ ಪತ್ರ ಬರೆಯಲಾಗಿತ್ತು. ಅದಕ್ಕೆ ಅವರು ನೀಡಿರುವ ಉತ್ತರ ತೃಪ್ತಿಕರವಾಗಿಲ್ಲ ಎಂದು ನಿರ್ಮಾಪಕರ ಸಂಘ ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ : ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...