Homeಕರ್ನಾಟಕಸಂಡೂರು: ಜಿಂದಾಲ್ ಕಂಪೆನಿಯಿಂದ ದಲಿತರ ಭೂಮಿ ಕಬಳಿಕೆ ಆರೋಪ: ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ...

ಸಂಡೂರು: ಜಿಂದಾಲ್ ಕಂಪೆನಿಯಿಂದ ದಲಿತರ ಭೂಮಿ ಕಬಳಿಕೆ ಆರೋಪ: ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ

- Advertisement -
- Advertisement -

ಸಂಡೂರು: ತಾಲೂಕಿನ ತಾರನಗರ ಗ್ರಾಮದಲ್ಲಿ ದಲಿತರಿಗೆ ಮಂಜೂರಾದ ಜಮೀನಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ತ್ಯಾಜ್ಯ ಸುರಿಯುತ್ತಿರುವ ಜಿಂದಾಲ್ ಮತ್ತು ಇತರ ಗಣಿ ಕಂಪನಿಗಳ ವಿರುದ್ಧ ದಲಿತರ ಪ್ರತಿಭಟನೆ ತೀವ್ರಗೊಂಡಿದೆ. ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಮಂಜುನಾಥ್ ಅವರ ನೇತೃತ್ವದಲ್ಲಿ ದಲಿತ ಸಮುದಾಯದ ಮುಖಂಡರು ಇಂದು (ಸೆ.8) ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಐದು ದಶಕಗಳ ಹಿಂದಿನ ಹಕ್ಕು ಕಬಳಿಕೆ

ತಾರನಗರದ ಸರ್ವೇ ನಂ. 94/ಎ ರಲ್ಲಿರುವ ಸುಮಾರು 4 ಎಕರೆಯ ಈ ಜಮೀನು 1981ರಲ್ಲಿಯೇ ಒಂದೇ ಕುಟುಂಬದ 20 ಸದಸ್ಯರನ್ನು ಹೊಂದಿರುವ ದಲಿತರಿಗೆ ಮಂಜೂರಾಗಿತ್ತು. 2018ರವರೆಗೂ ಈ ದಲಿತ ರೈತರು ಈ ಭೂಮಿಯನ್ನು ಉಳುಮೆ ಮಾಡಿಕೊಂಡು ಬಂದಿದ್ದರು. ಆದರೆ ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಗಣಿ ಕಂಪನಿಗಳು ಅಕ್ರಮವಾಗಿ ಗಣಿಗಾರಿಕೆಯ ತ್ಯಾಜ್ಯವನ್ನು ಈ ಜಮೀನಿನ ಮೇಲೆ ಸುರಿಯಲು ಪ್ರಾರಂಭಿಸಿದವು. ಈಗ 50 ಅಡಿಗೂ ಹೆಚ್ಚು ಎತ್ತರಕ್ಕೆ ತ್ಯಾಜ್ಯ ಸುರಿದಿದ್ದು, ಭೂಮಿ ಸಂಪೂರ್ಣವಾಗಿ ಹಾಳಾಗಿದೆ ಎಂದು ಮಂಜುನಾಥ್ ಅವರು ತಿಳಿಸಿದರು.

ಅಧಿಕಾರಿಗಳೇ ಶಾಮೀಲು; ದಲಿತರಿಗೆ ಅನ್ಯಾಯ

ಈ ಸಮಸ್ಯೆ ಕಳೆದ ಐದು ವರ್ಷಗಳಿಂದ ತಾರನಗರದಲ್ಲಿ ಮುಂದುವರಿದಿದೆ. ಜಮೀನು ಕಬಳಿಕೆ ಬಗ್ಗೆ ಸ್ಥಳೀಯ ಅಧಿಕಾರಿಗಳನ್ನು ಪ್ರಶ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಂಜುನಾಥ್ ಆರೋಪಿಸಿದ್ದಾರೆ. ಸ್ಥಳೀಯ ಅಧಿಕಾರಿಗಳು, ಸರ್ವೇ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಣಿ ಕಂಪನಿಗಳೊಂದಿಗೆ ಶಾಮೀಲಾಗಿರುವುದರಿಂದ ನ್ಯಾಯ ಸಿಗುತ್ತಿಲ್ಲ ಎಂದು ಅವರು ಹೇಳಿದರು.

“ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಅಧಿಕಾರಿಗಳು ಸ್ಪಂದಿಸಿಲ್ಲ. ತಹಶೀಲ್ದಾರ್ ಅವರು ಕೇವಲ ಐದು ನಿಮಿಷ ಸ್ಥಳಕ್ಕೆ ಬಂದು ದಾಖಲೆಗಳನ್ನು ಪರಿಶೀಲಿಸುವುದಾಗಿ ಹೇಳಿ ಹೋಗುತ್ತಾರೆ. ಯಾವುದೇ ಭರವಸೆಯನ್ನು ಕೊಡುವುದಿಲ್ಲ. ಗಣಿ ಇಲಾಖೆಯ ನೌಕರರು ಕಂಪನಿಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಹೋಗುತ್ತಿದ್ದಾರೆ” ಎಂದು ಮಂಜುನಾಥ್ ಅಸಹಾಯಕತೆ ವ್ಯಕ್ತಪಡಿಸಿದರು.

ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಕೆ

ಈ ಅಕ್ರಮದ ವಿರುದ್ಧ ಜಿಲ್ಲಾಧಿಕಾರಿಗಳು ತಕ್ಷಣವೇ ಕಾನೂನು ಕ್ರಮ ಕೈಗೊಳ್ಳದಿದ್ದರೆ, ತಾವು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಮಂಜುನಾಥ್ ಎಚ್ಚರಿಕೆ ನೀಡಿದರು.

“ಇದು ಕೇವಲ ಒಂದು ಜಮೀನಿನ ಸಮಸ್ಯೆಯಲ್ಲ, ಬದಲಿಗೆ ಬಡ ದಲಿತರ ಭೂಮಿ ಹಕ್ಕುಗಳನ್ನು ಕಬಳಿಸುವ ದೊಡ್ಡ ಭೂ ಮಾಫಿಯಾ. ದಲಿತರ ಭೂಮಿಯನ್ನು ರಕ್ಷಿಸಲು ಅಗತ್ಯವಾದ ಎಲ್ಲ ಕಾನೂನು ಹೋರಾಟಗಳನ್ನು ಮತ್ತು ಪ್ರತಿಭಟನೆಗಳನ್ನು ನಾವು ಮುಂದುವರಿಸುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದರು. ದಲಿತರ ಜಮೀನಿನಿಂದ ತ್ಯಾಜ್ಯ ತೆರವುಗೊಳಿಸಿ, ಮೂಲ ಹಕ್ಕುದಾರರಿಗೆ ಅದನ್ನು ಮರಳಿಸಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಜಮೀನಿನ ವಿವರ ಮತ್ತು ಹೋರಾಟದ ಹಿನ್ನೆಲೆ

ಸಂಡೂರು ತಾಲೂಕಿನ ತಾರನಗರ ಗ್ರಾಮದ ಸರ್ವೇ ನಂ. 94/ಎ ರಲ್ಲಿರುವ ಸುಮಾರು 4.13 ಎಕರೆ ಜಮೀನು, 1981ರಲ್ಲಿ ಹರಿಜನ ದೊಡ್ಡ ಸಕ್ರಪ್ಪ ಎಂಬುವವರಿಗೆ ಸರ್ಕಾರದಿಂದ ಮಂಜೂರಾಗಿತ್ತು. ನಂತರ 1982ರ ಫೆಬ್ರವರಿ 20ರಂದು ಸಂಡೂರು ತಹಶೀಲ್ದಾರ್ ಅವರು ಸಾಗುವಳಿ ಚೀಟಿ ನೀಡಿದ್ದರು. ಈ ಜಮೀನನ್ನು ಹರಿಜನ ದೊಡ್ಡ ಸಕ್ರಪ್ಪ ಅವರ ಕುಟುಂಬ ಸುಮಾರು ನಾಲ್ಕು ದಶಕಗಳಿಂದ ಬೇಸಾಯ ಮಾಡಿಕೊಂಡು ಬಂದಿದೆ.

ಆದರೆ, ಕಳೆದ ಐದು ವರ್ಷಗಳಿಂದ, ಮುಖ್ಯವಾಗಿ ಕೊರೊನಾ ಲಾಕ್‌ಡೌನ್ ಸಮಯದಲ್ಲಿ, ಜಿಂದಾಲ್, JSW, ಪೇಜ್ ಹೆಚ್, ತುಂಗಾ & ಭದ್ರಾ ಮೈನ್ಸ್‌ ಸೇರಿದಂತೆ ಕೆಲವು ಗಣಿ ಕಂಪನಿಗಳು ಈ ಜಮೀನಿನ ಮೇಲೆ ಅಕ್ರಮವಾಗಿ ಗಣಿಗಾರಿಕೆಯ ತ್ಯಾಜ್ಯ ಸುರಿಯುತ್ತಿವೆ. ಇದರಿಂದ ಜಮೀನು ಸಂಪೂರ್ಣವಾಗಿ ಹಾಳಾಗಿದ್ದು, ನ್ಯಾಯಕ್ಕಾಗಿ ಕುಟುಂಬಸ್ಥರು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ.

ಕಾನೂನು ಹೋರಾಟ ಮತ್ತು ಬೇಡಿಕೆಗಳು

ದಲಿತರ ಜಮೀನಿನ ಹಕ್ಕನ್ನು ರಕ್ಷಿಸಲು ಈ ಕೆಳಗಿನ ಕ್ರಮಗಳನ್ನು ತಕ್ಷಣವೇ ಕೈಗೊಳ್ಳುವಂತೆ ಮಂಜುನಾಥ್ ಅವರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ:

  • ಜಮೀನಿನಲ್ಲಿ ಅಕ್ರಮವಾಗಿ ಹಾಕಿರುವ ತ್ಯಾಜ್ಯವನ್ನು ಕೂಡಲೇ ತೆರವುಗೊಳಿಸಬೇಕು.
  • ಜಮೀನು ಕಬಳಿಸಿದ ಗಣಿ ಕಂಪನಿಗಳ ವಿರುದ್ಧ ಮತ್ತು ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.
  • ಪಿಟಿಸಿಎಲ್ (PTCL) ಕಾಯ್ದೆಯ ಕಲಂ 8ರ ಪ್ರಕಾರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು.
  • ಸಂವಿಧಾನದ ಆಶಯದಂತೆ ಬಡ ಮತ್ತು ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು.

ನ್ಯಾಯ ಸಿಗುವವರೆಗೂ ಈ ಹೋರಾಟವನ್ನು ಮುಂದುವರಿಸುವುದಾಗಿ ಮತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಮದ್ದೂರು ತಮಿಳು ಕಾಲೋನಿ ನಿವಾಸಿಗಳಿಂದ ಭೂಕಬಳಿಕೆ ವಿರೋಧಿಸಿ ಅಹೋರಾತ್ರಿ ಪ್ರತಿಭಟನೆ: ಅಧಿಕಾರಿಗಳಿಗೆ ಚಾಟಿ ಬೀಸಿದ ಜಿಲ್ಲಾಧಿಕಾರಿ ಡಾ. ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...