Homeಕರ್ನಾಟಕಸಂಡೂರು: ಜಿಂದಾಲ್ ಕಂಪೆನಿಯಿಂದ ದಲಿತರ ಭೂಮಿ ಕಬಳಿಕೆ ಆರೋಪ: ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ...

ಸಂಡೂರು: ಜಿಂದಾಲ್ ಕಂಪೆನಿಯಿಂದ ದಲಿತರ ಭೂಮಿ ಕಬಳಿಕೆ ಆರೋಪ: ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ

- Advertisement -
- Advertisement -

ಸಂಡೂರು: ತಾಲೂಕಿನ ತಾರನಗರ ಗ್ರಾಮದಲ್ಲಿ ದಲಿತರಿಗೆ ಮಂಜೂರಾದ ಜಮೀನಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ತ್ಯಾಜ್ಯ ಸುರಿಯುತ್ತಿರುವ ಜಿಂದಾಲ್ ಮತ್ತು ಇತರ ಗಣಿ ಕಂಪನಿಗಳ ವಿರುದ್ಧ ದಲಿತರ ಪ್ರತಿಭಟನೆ ತೀವ್ರಗೊಂಡಿದೆ. ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಮಂಜುನಾಥ್ ಅವರ ನೇತೃತ್ವದಲ್ಲಿ ದಲಿತ ಸಮುದಾಯದ ಮುಖಂಡರು ಇಂದು (ಸೆ.8) ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಐದು ದಶಕಗಳ ಹಿಂದಿನ ಹಕ್ಕು ಕಬಳಿಕೆ

ತಾರನಗರದ ಸರ್ವೇ ನಂ. 94/ಎ ರಲ್ಲಿರುವ ಸುಮಾರು 4 ಎಕರೆಯ ಈ ಜಮೀನು 1981ರಲ್ಲಿಯೇ ಒಂದೇ ಕುಟುಂಬದ 20 ಸದಸ್ಯರನ್ನು ಹೊಂದಿರುವ ದಲಿತರಿಗೆ ಮಂಜೂರಾಗಿತ್ತು. 2018ರವರೆಗೂ ಈ ದಲಿತ ರೈತರು ಈ ಭೂಮಿಯನ್ನು ಉಳುಮೆ ಮಾಡಿಕೊಂಡು ಬಂದಿದ್ದರು. ಆದರೆ ಕೊರೊನಾ ಸಾಂಕ್ರಾಮಿಕದ ಲಾಕ್‌ಡೌನ್ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಗಣಿ ಕಂಪನಿಗಳು ಅಕ್ರಮವಾಗಿ ಗಣಿಗಾರಿಕೆಯ ತ್ಯಾಜ್ಯವನ್ನು ಈ ಜಮೀನಿನ ಮೇಲೆ ಸುರಿಯಲು ಪ್ರಾರಂಭಿಸಿದವು. ಈಗ 50 ಅಡಿಗೂ ಹೆಚ್ಚು ಎತ್ತರಕ್ಕೆ ತ್ಯಾಜ್ಯ ಸುರಿದಿದ್ದು, ಭೂಮಿ ಸಂಪೂರ್ಣವಾಗಿ ಹಾಳಾಗಿದೆ ಎಂದು ಮಂಜುನಾಥ್ ಅವರು ತಿಳಿಸಿದರು.

ಅಧಿಕಾರಿಗಳೇ ಶಾಮೀಲು; ದಲಿತರಿಗೆ ಅನ್ಯಾಯ

ಈ ಸಮಸ್ಯೆ ಕಳೆದ ಐದು ವರ್ಷಗಳಿಂದ ತಾರನಗರದಲ್ಲಿ ಮುಂದುವರಿದಿದೆ. ಜಮೀನು ಕಬಳಿಕೆ ಬಗ್ಗೆ ಸ್ಥಳೀಯ ಅಧಿಕಾರಿಗಳನ್ನು ಪ್ರಶ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಂಜುನಾಥ್ ಆರೋಪಿಸಿದ್ದಾರೆ. ಸ್ಥಳೀಯ ಅಧಿಕಾರಿಗಳು, ಸರ್ವೇ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಣಿ ಕಂಪನಿಗಳೊಂದಿಗೆ ಶಾಮೀಲಾಗಿರುವುದರಿಂದ ನ್ಯಾಯ ಸಿಗುತ್ತಿಲ್ಲ ಎಂದು ಅವರು ಹೇಳಿದರು.

“ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಅಧಿಕಾರಿಗಳು ಸ್ಪಂದಿಸಿಲ್ಲ. ತಹಶೀಲ್ದಾರ್ ಅವರು ಕೇವಲ ಐದು ನಿಮಿಷ ಸ್ಥಳಕ್ಕೆ ಬಂದು ದಾಖಲೆಗಳನ್ನು ಪರಿಶೀಲಿಸುವುದಾಗಿ ಹೇಳಿ ಹೋಗುತ್ತಾರೆ. ಯಾವುದೇ ಭರವಸೆಯನ್ನು ಕೊಡುವುದಿಲ್ಲ. ಗಣಿ ಇಲಾಖೆಯ ನೌಕರರು ಕಂಪನಿಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಹೋಗುತ್ತಿದ್ದಾರೆ” ಎಂದು ಮಂಜುನಾಥ್ ಅಸಹಾಯಕತೆ ವ್ಯಕ್ತಪಡಿಸಿದರು.

ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಕೆ

ಈ ಅಕ್ರಮದ ವಿರುದ್ಧ ಜಿಲ್ಲಾಧಿಕಾರಿಗಳು ತಕ್ಷಣವೇ ಕಾನೂನು ಕ್ರಮ ಕೈಗೊಳ್ಳದಿದ್ದರೆ, ತಾವು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಮಂಜುನಾಥ್ ಎಚ್ಚರಿಕೆ ನೀಡಿದರು.

“ಇದು ಕೇವಲ ಒಂದು ಜಮೀನಿನ ಸಮಸ್ಯೆಯಲ್ಲ, ಬದಲಿಗೆ ಬಡ ದಲಿತರ ಭೂಮಿ ಹಕ್ಕುಗಳನ್ನು ಕಬಳಿಸುವ ದೊಡ್ಡ ಭೂ ಮಾಫಿಯಾ. ದಲಿತರ ಭೂಮಿಯನ್ನು ರಕ್ಷಿಸಲು ಅಗತ್ಯವಾದ ಎಲ್ಲ ಕಾನೂನು ಹೋರಾಟಗಳನ್ನು ಮತ್ತು ಪ್ರತಿಭಟನೆಗಳನ್ನು ನಾವು ಮುಂದುವರಿಸುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದರು. ದಲಿತರ ಜಮೀನಿನಿಂದ ತ್ಯಾಜ್ಯ ತೆರವುಗೊಳಿಸಿ, ಮೂಲ ಹಕ್ಕುದಾರರಿಗೆ ಅದನ್ನು ಮರಳಿಸಬೇಕು ಎಂದು ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಜಮೀನಿನ ವಿವರ ಮತ್ತು ಹೋರಾಟದ ಹಿನ್ನೆಲೆ

ಸಂಡೂರು ತಾಲೂಕಿನ ತಾರನಗರ ಗ್ರಾಮದ ಸರ್ವೇ ನಂ. 94/ಎ ರಲ್ಲಿರುವ ಸುಮಾರು 4.13 ಎಕರೆ ಜಮೀನು, 1981ರಲ್ಲಿ ಹರಿಜನ ದೊಡ್ಡ ಸಕ್ರಪ್ಪ ಎಂಬುವವರಿಗೆ ಸರ್ಕಾರದಿಂದ ಮಂಜೂರಾಗಿತ್ತು. ನಂತರ 1982ರ ಫೆಬ್ರವರಿ 20ರಂದು ಸಂಡೂರು ತಹಶೀಲ್ದಾರ್ ಅವರು ಸಾಗುವಳಿ ಚೀಟಿ ನೀಡಿದ್ದರು. ಈ ಜಮೀನನ್ನು ಹರಿಜನ ದೊಡ್ಡ ಸಕ್ರಪ್ಪ ಅವರ ಕುಟುಂಬ ಸುಮಾರು ನಾಲ್ಕು ದಶಕಗಳಿಂದ ಬೇಸಾಯ ಮಾಡಿಕೊಂಡು ಬಂದಿದೆ.

ಆದರೆ, ಕಳೆದ ಐದು ವರ್ಷಗಳಿಂದ, ಮುಖ್ಯವಾಗಿ ಕೊರೊನಾ ಲಾಕ್‌ಡೌನ್ ಸಮಯದಲ್ಲಿ, ಜಿಂದಾಲ್, JSW, ಪೇಜ್ ಹೆಚ್, ತುಂಗಾ & ಭದ್ರಾ ಮೈನ್ಸ್‌ ಸೇರಿದಂತೆ ಕೆಲವು ಗಣಿ ಕಂಪನಿಗಳು ಈ ಜಮೀನಿನ ಮೇಲೆ ಅಕ್ರಮವಾಗಿ ಗಣಿಗಾರಿಕೆಯ ತ್ಯಾಜ್ಯ ಸುರಿಯುತ್ತಿವೆ. ಇದರಿಂದ ಜಮೀನು ಸಂಪೂರ್ಣವಾಗಿ ಹಾಳಾಗಿದ್ದು, ನ್ಯಾಯಕ್ಕಾಗಿ ಕುಟುಂಬಸ್ಥರು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ.

ಕಾನೂನು ಹೋರಾಟ ಮತ್ತು ಬೇಡಿಕೆಗಳು

ದಲಿತರ ಜಮೀನಿನ ಹಕ್ಕನ್ನು ರಕ್ಷಿಸಲು ಈ ಕೆಳಗಿನ ಕ್ರಮಗಳನ್ನು ತಕ್ಷಣವೇ ಕೈಗೊಳ್ಳುವಂತೆ ಮಂಜುನಾಥ್ ಅವರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ:

  • ಜಮೀನಿನಲ್ಲಿ ಅಕ್ರಮವಾಗಿ ಹಾಕಿರುವ ತ್ಯಾಜ್ಯವನ್ನು ಕೂಡಲೇ ತೆರವುಗೊಳಿಸಬೇಕು.
  • ಜಮೀನು ಕಬಳಿಸಿದ ಗಣಿ ಕಂಪನಿಗಳ ವಿರುದ್ಧ ಮತ್ತು ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.
  • ಪಿಟಿಸಿಎಲ್ (PTCL) ಕಾಯ್ದೆಯ ಕಲಂ 8ರ ಪ್ರಕಾರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ 1989ರ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು.
  • ಸಂವಿಧಾನದ ಆಶಯದಂತೆ ಬಡ ಮತ್ತು ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು.

ನ್ಯಾಯ ಸಿಗುವವರೆಗೂ ಈ ಹೋರಾಟವನ್ನು ಮುಂದುವರಿಸುವುದಾಗಿ ಮತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಮದ್ದೂರು ತಮಿಳು ಕಾಲೋನಿ ನಿವಾಸಿಗಳಿಂದ ಭೂಕಬಳಿಕೆ ವಿರೋಧಿಸಿ ಅಹೋರಾತ್ರಿ ಪ್ರತಿಭಟನೆ: ಅಧಿಕಾರಿಗಳಿಗೆ ಚಾಟಿ ಬೀಸಿದ ಜಿಲ್ಲಾಧಿಕಾರಿ ಡಾ. ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...