Homeಕರ್ನಾಟಕ‘ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎನ್ನುವ ಸಂಘ ಪರಿವಾರ ಕೊರಗರ ಮೇಲೆ ಲಾಠಿ ಚಾರ್ಜ್ ಆದಾಗ ಎಲ್ಲಿತ್ತು?’

‘ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎನ್ನುವ ಸಂಘ ಪರಿವಾರ ಕೊರಗರ ಮೇಲೆ ಲಾಠಿ ಚಾರ್ಜ್ ಆದಾಗ ಎಲ್ಲಿತ್ತು?’

ಕೊರಗರ ಮೇಲೆ ಲಾಠಿ ಚಾರ್ಜ್‌ ಆದಾಗ ಮೌನವಾಗಿದ್ದ ಹಿಂದುತ್ವವಾದಿ ಸಂಘಟನೆಗಳನ್ನು ಸಮುದಾಯದ ಮುಖಂಡರು ಪ್ರಶ್ನಿಸಿದ್ದಾರೆ.

- Advertisement -
- Advertisement -

“ಕೊರಗಜ್ಜನಿಗೆ ಅವಮಾನವಾಗಿದೆ ಎಂದು ಸಂಘ ಪರಿವಾರದವರು ವಿವಾದ ಸೃಷ್ಟಿಸುತ್ತಿದ್ದಾರೆ. ಆದರೆ ಕೊರಗರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ, ಸಂತ್ರಸ್ತರ ಮೇಲೆಯೇ ಪ್ರಕರಣ ದಾಖಲಿಸಿದಾಗ ಇವರು ಎಲ್ಲಿದ್ದರು?” ಎಂಬ ಪ್ರಶ್ನೆಯನ್ನು ಕೊರಗ ಮುಖಂಡರು ಕೇಳುತ್ತಿದ್ದಾರೆ.

ದಕ್ಷಿಣ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೊಲ್ನಾಡು ಗ್ರಾಮದ ಸಾಲೆತ್ತೂರು ಬಳಿಯ ಯುವತಿಯ ಮದುವೆ ನೆರೆಯ ಕಾಸರಗೋಡು ಜಿಲ್ಲೆಯ ಉಪ್ಪಳದ ಯುವಕನೊಂದಿಗೆ ಬುಧವಾರ ನಡೆದಿತ್ತು. ಮದುವೆಯ ಮುಂದುವರೆದ ಕಾರ್ಯಕ್ರಮವಾಗಿ ಮದುವೆಯಂದೇ ರಾತ್ರಿ ಮದುಮಗನ ಸ್ನೇಹಿತರಿಗೆ ವಧುವಿನ ಕಡೆಯವರು ಔತಣಕೂಟ(ತಾಳ)ವನ್ನು ಏರ್ಪಡಿಸಿದ್ದರು. ಆ ವೇಳೆ ಕೊರಗಜ್ಜನ ವೇಷ ಧರಿಸಿ ಅವಮಾನ ಮಾಡಲಾಗಿದೆ ಎಂದು ವಿವಾದ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಕೊರಗ ಮುಖಂಡರ ಹೇಳಿಕೆ ಪ್ರಾಮುಖ್ಯತೆ ಪಡೆದಿದೆ.

ಇದನ್ನೂ ಓದಿ:ಕೊರಗರ ಮೇಲೆ ಪೊಲೀಸ್ ಹಲ್ಲೆ ಪ್ರಕರಣ: ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಏಕೆ ಸುಮ್ಮನಿದ್ದಾರೆ? -ಸಿಪಿಎಂ ಪ್ರಶ್ನೆ

ಇಷ್ಟಾದ ಮೇಲೆ ಮದುಮಗ ವಿಡಿಯೊ ಮೂಲಕ ಕ್ಷಮೆಯನ್ನೂ ಯಾಚಿಸಿದ್ದಾರೆ. “ಯಾವುದೇ ಜಾತಿ, ಸಮುದಾಯಕ್ಕೆ ಅವಮಾನ ಮಾಡಬೇಕೆಂದು ಈ ರೀತಿ ಮಾಡಿಲ್ಲ. ಈ ಘಟನೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ” ಎಂದು ತಿಳಿಸಿದ್ದಾರೆ. (ಘಟನೆಯ ವರದಿ ಇಲ್ಲಿ ಓದಬಹುದು)

ಈ ಘಟನೆಯನ್ನು ಕೋಮು ಧ್ರುವೀಕರಣಕ್ಕೆ ಬಳಸಲು ಯತ್ನಿಸುತ್ತಿರುವ ಸಂಬಂಧ ಕೊರಗ ಸಮುದಾಯದ ಜನರು ಸಂಘಪರಿವಾರವನ್ನು ಪ್ರಶ್ನಿಸಿದ್ದಾರೆ. ಕೊರಗಜ್ಜನಿಗೆ ಅವಮಾನವಾಗಿದೆ ಎಂದು ಹಿಂದುತ್ವವಾದಿಗಳು ವಿವಾದ ಸೃಷ್ಟಿಸುತ್ತಿರುವುದರ ಹಿಂದಿನ ಉದ್ದೇಶವೇನು ಎಂದು ಕೇಳುತ್ತಿದ್ದಾರೆ. ಕೊರಗರ ಮೇಲೆ ಇತ್ತೀಚೆಗೆ ಲಾಠಿಚಾರ್ಜ್‌ ಆದಾಗ ಇವರು ಮೌನವಾಗಿದ್ದೇಕೆ ಎನ್ನುತ್ತಿದ್ದಾರೆ.

ಇತ್ತೀಚೆಗೆ ಕೋಟಾದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಡಿಜೆ ಸೌಂಡ್ ಬಳಸಿದ್ದಕ್ಕೆ ಅಲ್ಲಿನ ಕೊರಗ ಸಮುದಾಯದ ಮೇಲೆ ಪೊಲೀಸರು ಪ್ರಹಾರ ನಡೆಸಿದ್ದರು. ಇಂತಹ ಹೀನ ಕೃತ್ಯ ಎಸಗಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಹೇಳಿದ್ದರು. ಆದರೆ ಅಚ್ಚರಿ ಎಂಬಂತೆ ಯಾವ ಕೊರಗರ ಮೇಲೆ ಹಲ್ಲೆ ನಡೆಸಲಾಗಿತ್ತೋ ಅವರ ಮೇಲೆಯೇ ಪೊಲೀಸರು ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿದ್ದು ಅನುಮಾನಗಳಿಗೆ ಎಡೆಮಾಡಿಕೊಟ್ಟಿತು.

ಪೊಲೀಸರು ಹಲ್ಲೆ ನಡೆದ ದಿನವೇ ತಮ್ಮ ಮೇಲಾದ ದಾಳಿಯ ಸುದ್ದಿಯ ಬಗ್ಗೆ ತಿಳಿಸದೇ ವಿಷಯವು ಸ್ವಲ್ಪ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮೂಲ ವಿಷಯವನ್ನು ತಿರುಚುವಂತೆ ಬಹು ತಡವಾಗಿ ಪ್ರತಿಕ್ರಿಯೆ ನೀಡಿ ಕೇಸು ದಾಖಲಿಸಲಾಗಿದೆ ಎಂಬ ಆರೋಪಗಳು ಬಂದಿವೆ. ಇಷ್ಟೆಲ್ಲ ಆದರೂ ಹಿಂದುತ್ವವಾದಿ ಸಂಘಟನೆಗಳು ಘಟನೆಯನ್ನು ಖಂಡಿಸಲಿಲ್ಲ. ಕೊರಗರ ಆರಾಧ್ಯ ದೈವದ ಹೆಸರಲ್ಲಿ ಈಗ ವಿವಾದ ಸೃಷ್ಟಿಸುತ್ತಿರುವವರು ಕೊರಗರ ಮೇಲೆ ಹಲ್ಲೆಯಾದಾಗ ಎಲ್ಲಿ ಹೋಗಿದ್ದರು ಎಂಬ ಪ್ರಶ್ನೆಯನ್ನು ಕೇಳಬೇಕಾಗುತ್ತದೆ.

ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎಂಬ ವಿವಾದ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೊರಗ ಅಭಿವೃದ್ದಿ ಸಂಘದ ಮಾಜಿ ಅಧ್ಯಕ್ಷೆಯಾಗಿರುವ ಸುಶೀಲಾ ನಾಡಾ ಅವರು, “ಕೊರಗ ವೇಷವನ್ನು ಹಾಕುವುದು ಮತ್ತು ಈ ವೇಷ ಹಾಕಿ ಸಮುದಾಯವನ್ನು ಕೀಳು ಮಟ್ಟದಲ್ಲಿ ಬಿಂಬಿಸುವುದು ಕಾನೂನಾತ್ಮಕವಾಗಿ ಅಪರಾಧವಾಗಿದೆ. ಆದರೆ, ಈ ರೀತಿಯ ಕಾನೂನು ಇದ್ದು ಕೂಡಾ ಕೊರಗ ವೇಷ ಹಾಕುವುದು ಮುಂದುವರೆಯುತ್ತಲೇ ಇದೆ. ನಿಜವಾಗಿಯೂ ಕೊರಗರ ಬಗ್ಗೆ ಕಾಳಜಿ ಇರುವವರಾದರೆ, ಮೊನ್ನೆ ಕೋಟದಲ್ಲಿ ಕೊರಗರ ಮೇಲೆ ನಡೆದ ದಾಳಿಯ ಬಗ್ಗೆ ಧ್ವನಿ ಎತ್ತುತ್ತಿದ್ದರು. ಆದರೆ ಇಂದು ಕೊರಗಜ್ಜನಿಗೆ ಅವಮಾನ ಆಗಿದೆ ಎಂದು ಗಲಾಟೆ ಮಾಡುತ್ತಿರುವವರು ಯಾರೂ ಅಂದು ಮಾತಾಡಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈಗ ವಿವಾದ ಆಗಿರುವ ಘಟನೆಯಲ್ಲಿ ಅವರು ತಮಾಷೆಯಾಗಿ ಮಾಡಿದ್ದಾರೋ ಅಥವಾ ಕೊರಗಜ್ಜನಿಗೆ ಅವಮಾನ ಮಾಡಲು ಮಾಡಿದ್ದಾರೋ ತನಿಖೆ ನಡೆಯಲಿ. ಕೊರಗಜ್ಜನ ವೇಷ ಹಾಕಿ ಮದುಮಗನಿಗೆ ಮೆರವಣಿಗೆ ಮಾಡುತ್ತಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಒಂದು ವೇಳೆ ಅವರು ಉದ್ದೇಶ ಪೂರ್ವಕವಾಗಿ ಕೊರಗಜ್ಜನ ವೇಷ ಹಾಕಿ ಅವಮಾನಿಸಿದ್ದರೆ ಅದು ತಪ್ಪು, ಹಾಗಾಗಿದ್ದರೆ ಅವರಿಗೆ ಶಿಕ್ಷೆ ಆಗಬೇಕು. ಆದರೆ ಈ ಘಟನೆಯನ್ನು ಧರ್ಮಾಧಾರಿತವಾಗಿ ನೋಡಲಾಗುತ್ತಿದೆ. ಕೊರಗಜ್ಜನ ವೇಷವನ್ನು ಹಾಕಿದ್ದಕ್ಕೆ ಬಂಧಿಸುವುದಾದರೆ, ಎಲ್ಲಾ ಕಡೆಯು ಬಂಧಿಸಬೇಕಾಗಿತ್ತಲ್ಲವೆ? ಆದರೆ ಇಲ್ಲಿ ಅದಾಗುತ್ತಿಲ್ಲ, ಇಲ್ಲಿ ಮುಸ್ಲಿಮರನ್ನು ಗುರಿ ಮಾಡಲಾಗುತ್ತಿದೆ. ಹಾಗಾಗಿಯೆ ಧರ್ಮ ನಿಂದನೆ, ದೈವ ನಿಂದನೆ ಎಂದು ಬಿಂಬಿಸಿ ದೊಡ್ಡ ಸುದ್ದಿ ಮಾಡಲಾಗುತ್ತಿದೆ. ಈಗ ನಡೆಯುತ್ತಿರುವ ಬೆಳವಣಿಗೆಯ ಮುಖ್ಯ ಉದ್ದೇಶ ಒಂದು ಧರ್ಮವನ್ನು ಗುರಿ ಮಾಡುವುದು ಬಿಟ್ಟರೆ ಬೇರೇನೂ ಅಲ್ಲ” ಎನ್ನುತ್ತಾರೆ ಸುಶೀಲಾ.

“ಇವರಿಗೆ ನಿಜವಾಗಿಯೂ ಕೊರಗಜ್ಜ ಮತ್ತು ಅವರ ಮಕ್ಕಳಾದ ಕೊರಗರ ಮೇಲೆ ಗೌರವ, ಕಾಳಜಿ ಇದ್ದರೆ, ಕೊರಗಜ್ಜನ ವೇಷ ಹಾಕುವಂತಹ ಎಲ್ಲವನ್ನೂ ಖಂಡಿಸಬೇಕು. ತುಳುನಾಡಿನ ಪ್ರತಿಯೊಂದು ಕೋಲದಲ್ಲಿ ಕೊರಗಜ್ಜನನ್ನು ಎಷ್ಟು ಕೆಟ್ಟದಾಗಿ ಬಿಂಬಿಸುತ್ತಾರೆ, ಅದನ್ನು ತಡೆಯಲಿ. ಇತ್ತೀಚೆಗೆ ಕೊಟಾದಲ್ಲಿ ನಡೆದ ಘಟನೆಯಲ್ಲಿ ಕೊರಗರ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಅದರ ಬಗ್ಗೆ ಇವರು ಯಾರೂ ಮಾತನಾಡುತ್ತಿಲ್ಲ. ಈಗ ನಡೆಯುತ್ತಿರುವ ಬೆಳವಣಿಗೆಯ ಮುಖ್ಯ ಉದ್ದೇಶ ಒಂದು ಧರ್ಮವನ್ನು ಗುರಿ ಮಾಡುವುದು ಬಿಟ್ಟರೆ ಬೇರೇನೂ ಇಲ್ಲ. ಕೊರಗರ ಮೇಲೆ ಹಲ್ಲೆಯಾದಾಗ ಇವರು ಮಾತನಾಡುವುದಿಲ್ಲ, ಕೊರಗರನ್ನು ಮ್ಯಾನುವಲ್ ಸ್ಕಾವೆಂಜ್‌ಗೆ ಇಳಿಸುವಾಗ ಅದರ ಬಗ್ಗೆ ಇವರು ಧ್ವನಿ ಎತ್ತುವುದಿಲ್ಲ. ಆದರೆ ಈಗ ಘಟನೆಯೊಂದನ್ನು ಬಳಸಿಕೊಂಡಿರುವ ಈ ಕೋಮುವಾದಿ ಶಕ್ತಿಗಳು ಮಾಡುತ್ತಿರುವುದು ಬೂಟಾಟಿಕೆ ಮಾತ್ರ” ಎನ್ನುತ್ತಾರೆ ಕೊರಗ ಮುಖಂಡರು.

ಕೊರಗ ಸಮುದಾಯದ ಮತ್ತೊಬ್ಬ ಮುಖಂಡ ಮತ್ತಾಡಿ ಅವರು ಮಾತನಾಡಿ, “ಘಟನೆಯ ಬಗೆಗಿನ ವಿವಾದಾತ್ಮಕ ವಿಡಿಯೊದಲ್ಲಿ ಮದುಮಗನ ವೇಷವನ್ನು ನೋಡಿದೆ. ಅದು ಕೊರಗಜ್ಜನ ವೇಷ ಎಂದು ಹೇಳಲು ಸಾಧ್ಯವಿಲ್ಲ. ಅದರಲ್ಲಿ ಮದುಮಗನ ತಲೆಗೆ ಮುಟ್ಟಾಳೆ (ಅಡಿಕೆ ಗರಿಯಿಂದ ಮಾಡಿರುವ ತಲೆಗೆ ಧರಿಸುವ ವಸ್ತು) ಹಾಕಿದ್ದರು, ಟೀಶರ್ಟ್ ಧರಿಸಿದ್ದರು ಮತ್ತು ಮುಖಕ್ಕೆ ಕಪ್ಪು ಬಣ್ಣ ಬಳಿದಿದ್ದರು. ಕಪ್ಪು ಬಣ್ಣ ಹಾಕಿದ ಕೂಡಲೇ ಅದು ಕೊರಗರನ್ನು ಅವಮಾನಿಸಿದ ಹಾಗೆ ಹಾಗಲ್ಲ. ಕಪ್ಪು ಬಣ್ಣದವರು ಕೊರಗರು ಮಾತ್ರ ಅಲ್ಲ, ಎಲ್ಲಾ ಸಮುದಾಯದಲ್ಲೂ ಇದ್ದಾರೆ” ಎಂದು ತಿಳಿಸಿದರು.

“ಅದರಲ್ಲೂ ಮದುಮಗ ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿದ್ದಾನೋ ಎಂದು ನನಗೆ ಗೊತ್ತಿಲ್ಲ. ಅವರು ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿಲ್ಲ ಎಂದೇ ನಾನು ಭಾವಿಸಿದ್ದೇನೆ. ಯಾಕೆಂದರೆ ಅವರಿಗೆ ಇದರ ಕಲ್ಪನೆ ಇದೆಯೆಂದು ನನಗೆ ಅನಿಸುತ್ತಿಲ್ಲ. ಆದರೆ ಈ ವಿವಾದ ಮಾಡುವುದರ ಹಿಂದೆ ಯಾರು ಇದ್ದಾರೆ ಮತ್ತು ಅವರು ಯಾಕಾಗಿ ಇದ್ದಾರೆ ಎಂಬುವುದನ್ನು ಕೂಡಾ ನೋಡಬೇಕಾಗಿದೆ. ಈ ರೀತಿಯ ಭಾವನಾತ್ಮಕ ವಿಷಯವನ್ನು ಕೊರಗರ ಮುಗ್ಧತೆಯನ್ನು ದುರುಪಯೋಗ ಬಳಸಿಕೊಳ್ಳದೆ ಯಾರ ಭಾವನೆಗೂ ಧಕ್ಕೆ ಬರದಂತೆ ಸಮಸ್ಯೆಯನ್ನು ಬಗೆಹರಿಸಬೇಕು. ಘಟನೆಯನ್ನು ಕೋಮು ಆಧಾರದಲ್ಲಿ ವಿಭಜಿಸಬಾರದು. ವಿಡಿಯೊವನ್ನು ನೋಡುವಾಗ ಅದರಲ್ಲಿರುವ ಭಾಷೆ ಕೊರಗಜ್ಜನನ್ನು ಅವಮಾನಿಸುವ ಹಾಗೆ ಕಾಣುತ್ತಿಲ್ಲ. ಮುಟ್ಟಾಲೆ ಧರಿಸಿದ ಕೂಡಲೇ ಅದು ಕೊರಗಜ್ಜ ಎಂದು ಹೇಳುವುದು ಕೂಡಾ ಸರಿಯಲ್ಲ. ಈ ವಿಷಯದಲ್ಲಿ ಯಾವುದೇ ರೀತಿಯಲ್ಲಿ ದ್ವೇಷ ಹುಟ್ಟದ ಹಾಗೆ, ತಪ್ಪಾಗಿದ್ದರೆ ಮನವರಿಗೆ ಮಾಡಿ, ಅವುಗಳನ್ನು ತಿದ್ದಿ ಸೌಹಾರ್ದಯುತವಾಗಿ ಬಗೆಹರಿಸಬೇಕು” ಎಂದರು.


ಇದನ್ನೂ ಓದಿರಿ: ಕೊರಗರದ್ದು ಇನ್ನೊಂದು ‘ಜೈ ಭೀಮ್‌’ ಕಥೆ ಆಗದಿರಲಿ: ಎಚ್‌.ಸಿ.ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...