Homeಕರ್ನಾಟಕಸಂಗಮೇಶ್ ಅಗೌರವ ತೋರಿಸಿಲ್ಲ, ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ- ಸಿದ್ದರಾಮಯ್ಯ

ಸಂಗಮೇಶ್ ಅಗೌರವ ತೋರಿಸಿಲ್ಲ, ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ- ಸಿದ್ದರಾಮಯ್ಯ

ಒಂದು ದೇಶ ಒಂದು ಚುನಾವಣೆ ಎಂಬುದು ಆರ್.ಎಸ್.ಎಸ್ ಅಜೆಂಡಾ. ವಾಸ್ತವದಲ್ಲಿ ಇದು ಒಂದು ದೇಶ, ಒಂದು ಚುನಾವಣೆ ಅಲ್ಲ "ಒನ್ ನೇಷನ್, ಒನ್ ಲೀಡರ್" ಆಗಿದೆ.

- Advertisement -
- Advertisement -

ವಿಧಾನಸಭೆ ಅಧಿವೇಶದಲ್ಲಿ ಶರ್ಟ್ ಬಿಚ್ಚಿ ಅಶಿಸ್ತಿನಿಂದ ವರ್ತಿಸಿದ ಆರೋಪದ ಮೇಲೆ ಒಂದು ವಾರ ಕಲಾಪದಿಂದ ಅಮಾನತಾಗಿರುವ ಶಾಸಕ ಸಂಗಮೇಶ್ ಸಮರ್ಥನೆಗೆ ಕಾಂಗ್ರೆಸ್ ನಾಯಕರ ದಂಡು ನಿಂತಿದೆ. ಸಂಗಮೇಶ್ ಪರ ಬ್ಯಾಟ್ ಬೀಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಭದ್ರಾವತಿ ಶಾಸಕರಾದ ಸಂಗಮೇಶ್ ಅವರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವಂತೆ ವರ್ತಿಸಿಲ್ಲ ಎಂದಿದ್ದಾರೆ.

ಶಾಸಕ ಸಂಗಮೇಶ್, ಶಿವಮೊಗ್ಗ ಜಿಲ್ಲೆಯಲ್ಲಿ ಆಡಳಿತ ಪಕ್ಷದವರು ನಡೆಸುತ್ತಿರುವ ಅನ್ಯಾಯ, ದಬ್ಬಾಳಿಕೆಗಳಿಂದ ನೊಂದು ಸದನದಲ್ಲಿ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ಮಾಧ್ಯಮ ಹೇಳಿಕೆ ನೀಡಿದ್ದಾರೆ.

“ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಮತ್ತು ಯಡಿಯೂರಪ್ಪ ಅವರ ಪುತ್ರ ಸಂಸದ ರಾಘವೇಂದ್ರ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಶಾಸಕ ಸಂಗಮೇಶ್ ಮತ್ತು ಅವರ ಕುಟುಂಬದವರ ವಿರುದ್ಧ ಕ್ಷುಲ್ಲಕ ಕಾರಣಕ್ಕೆ ಕೊಲೆ ಯತ್ನದ ಮೊಕದ್ದಮೆಯನ್ನು ದಾಖಲಿಸುವಂತೆ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಶರ್ಟ್ ಬಿಚ್ಚಿದ ಶಾಸಕ ಬಿ.ಕೆ ಸಂಗಮೇಶ್- ಕಲಾಪದಿಂದ ಒಂದು ವಾರ ಅಮಾನತು

ಭದ್ರಾವತಿ ಶಾಸಕ ಸಂಗಮೇಶ್‌ರನ್ನು ಒಂದು ವಾರದ ಕಾಲ ಸದನದಿಂದ ವಜಾ ಮಾಡಿರುವ ಸ್ಪೀಕರ್ ಅವರ ಆದೇಶವನ್ನು ಖಂಡಿಸಿರುವ ಸಿದ್ದರಾಮಯ್ಯ, ಸಂಗಮೇಶ್ ಅವರಿಗಾಗಲೀ, ಪ್ರತಿಪಕ್ಷದ ನಾಯಕನಾದ ನನಗಾಗಲೀ ಮಾತನಾಡಲು ಅವಕಾಶ ನೀಡದೆ ವಿಧಾನ ಸಭಾಧ್ಯಕ್ಷರು ಏಕಪಕ್ಷೀಯವಾಗಿ ಕೈಗೊಂಡಿರುವ ನಿರ್ಣಯ ಅಸಂವಿಧಾನಿಕ ಎಂದಿದ್ದಾರೆ.

ಇನ್ನು, ಸಂಗಮೇಶ್ ಅವರ ಮೇಲೆ ದಾಖಲಿಸಲಾಗಿರುವ ಸುಳ್ಳು ಮೊಕದ್ದಮೆಯನ್ನು ವಾಪಾಸು ಪಡೆದು ಸರ್ಕಾರ ಕ್ಷಮಾಪಣೆ ಕೇಳಬೇಕು ಮತ್ತು ಅವರನ್ನು ಸದನದಿಂದ ವಜಾಗೊಳಿಸಿರುವ ನಿರ್ಣಯವನ್ನು ಕೂಡ ಹಿಂಪಡೆಯಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.

ಒಂದು ದೇಶ ಒಂದು ಚುನಾವಣೆ ವಿಚಾರವನ್ನು ಸದನದಲ್ಲಿ ಚರ್ಚಿಸಿದ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ’ದೇಶದಲ್ಲಿ ನಡೆಯುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದವು. ಸಂವಿಧಾನಕ್ಕೆ ತಿದ್ದುಪಡಿ ತರಬೇಕಾಗಿರುವುದು ಕೂಡ ಕೇಂದ್ರ ಸರ್ಕಾರ. ಹೀಗಿರುವಾಗ ವಿಧಾನ ಮಂಡಲ ಅಧಿವೇಶನದಲ್ಲಿ ‘ಒಂದು ದೇಶ ಒಂದು ಚುನಾವಣೆ’ ಎಂಬ ವಿಚಾರವನ್ನು ಚರ್ಚಿಸುವುದರಿಂದ ಆಗುವ ಉಪಯೋಗ ಏನು?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸುಲಿಗೆ ಆರೋಪ: ವಿಜಯೇಂದ್ರ ವಿರುದ್ದ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌‌ಗೆ ನೋಟಿಸ್

ಬಿಜೆಪಿಯವರು ಕೇವಲ ಪ್ರಚಾರದ ದೃಷ್ಟಿಯಿಂದ ‘ಒಂದು ದೇಶ ಒಂದು ಚುನಾವಣೆ’ ಎಂಬ ವಿಚಾರವನ್ನು ಅಧಿವೇಶನದಲ್ಲಿ ಚರ್ಚೆಗೆ ತೆಗೆದುಕೊಂಡಿದ್ದಾರೆ. ನಿಯಮಾವಳಿಗಳ ಪ್ರಕಾರ ಈ ವಿಷಯದ ಚರ್ಚೆಗೆ ಅವಕಾಶವಿಲ್ಲ, ಹೀಗಾಗಿ ನಾವು ವಿರೋಧ ಮಾಡಿದ್ದೇವೆಯೇ ಹೊರತು ಚರ್ಚೆ ನಡೆಸಲಾಗದೆ ಅಲ್ಲ ಎಂದು ಬಿಜೆಪಿ ಆರೋಪಕ್ಕೆ ಉತ್ತರ ನೀಡಿದ್ದಾರೆ.

ಒಂದು ದೇಶ ಒಂದು ಚುನಾವಣೆ ಎಂಬುದು ಆರ್.ಎಸ್.ಎಸ್ ಅಜೆಂಡಾ. ವಾಸ್ತವದಲ್ಲಿ ಇದು ಒಂದು ದೇಶ, ಒಂದು ಚುನಾವಣೆ ಅಲ್ಲ “ಒನ್ ನೇಷನ್, ಒನ್ ಲೀಡರ್” ಆಗಿದೆ. ಇದರ ಬದಲು ರಾಜ್ಯ ಸರ್ಕಾರ ಚುನಾವಣಾ ವ್ಯವಸ್ಥೆಯಲ್ಲಿ ತರಬಹುದಾದ ಸುಧಾರಣೆಗಳ ಕುರಿತು ಚರ್ಚಿಸುವುದಾದರೆ, ನಾವು ನಮ್ಮ ಅಭಿಪ್ರಾಯ ಹಂಚಿಕೊಳ್ಳಲು ಸಿದ್ಧರಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

’ಒಂದು ದೇಶ ಒಂದು ಚುನಾವಣೆ’ ಚರ್ಚೆಗೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿ ಧರಣಿ ನಡೆಸಿದರು. ಕಾಂಗ್ರೆಸ್​ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟಿಸುತ್ತಿದ್ದಾಗ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಸದನದ ಬಾವಿಗಿಳಿದು, ಶರ್ಟ್‌ ಬಿಚ್ಚಿ ಘೋಷಣೆ ಕೂಗಿದ್ದರು.

ಶಾಸಕರ ವಿರುದ್ಧ ಪ್ರಸ್ತಾವನೆ ಮಂಡಿಸಿ, ಧ್ವನಿ ಮತದ ಮೂಲಕ ಪ್ರಸ್ತಾವನೆಗೆ ಒಪ್ಪಿಗೆ ಪಡೆದ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಮಾರ್ಚ್​ 12 ನೇ ತಾರೀಖಿನವರೆಗೆ, ಸುಮಾರು 9 ದಿನಗಳ ಕಾಲ ಶಾಸಕ ಸಂಗಮೇಶ್​​ರನ್ನ ಸದನದಿಂದ ಅಮಾನತು ಮಾಡುವ ನಿರ್ಧಾರವನ್ನು ಕೈಗೊಂಡರು.


ಇದನ್ನೂ ಓದಿ: ವಿಧಾನಸಭಾ ಅಧಿವೇಶನ | ನಾನುಗೌರಿ ಫೇಸ್‌‌ಬುಕ್ ಲೈ‌ವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...