Homeಕರ್ನಾಟಕಸಂಗಮೇಶ್ ಅಗೌರವ ತೋರಿಸಿಲ್ಲ, ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ- ಸಿದ್ದರಾಮಯ್ಯ

ಸಂಗಮೇಶ್ ಅಗೌರವ ತೋರಿಸಿಲ್ಲ, ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ- ಸಿದ್ದರಾಮಯ್ಯ

ಒಂದು ದೇಶ ಒಂದು ಚುನಾವಣೆ ಎಂಬುದು ಆರ್.ಎಸ್.ಎಸ್ ಅಜೆಂಡಾ. ವಾಸ್ತವದಲ್ಲಿ ಇದು ಒಂದು ದೇಶ, ಒಂದು ಚುನಾವಣೆ ಅಲ್ಲ "ಒನ್ ನೇಷನ್, ಒನ್ ಲೀಡರ್" ಆಗಿದೆ.

- Advertisement -
- Advertisement -

ವಿಧಾನಸಭೆ ಅಧಿವೇಶದಲ್ಲಿ ಶರ್ಟ್ ಬಿಚ್ಚಿ ಅಶಿಸ್ತಿನಿಂದ ವರ್ತಿಸಿದ ಆರೋಪದ ಮೇಲೆ ಒಂದು ವಾರ ಕಲಾಪದಿಂದ ಅಮಾನತಾಗಿರುವ ಶಾಸಕ ಸಂಗಮೇಶ್ ಸಮರ್ಥನೆಗೆ ಕಾಂಗ್ರೆಸ್ ನಾಯಕರ ದಂಡು ನಿಂತಿದೆ. ಸಂಗಮೇಶ್ ಪರ ಬ್ಯಾಟ್ ಬೀಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಭದ್ರಾವತಿ ಶಾಸಕರಾದ ಸಂಗಮೇಶ್ ಅವರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವಂತೆ ವರ್ತಿಸಿಲ್ಲ ಎಂದಿದ್ದಾರೆ.

ಶಾಸಕ ಸಂಗಮೇಶ್, ಶಿವಮೊಗ್ಗ ಜಿಲ್ಲೆಯಲ್ಲಿ ಆಡಳಿತ ಪಕ್ಷದವರು ನಡೆಸುತ್ತಿರುವ ಅನ್ಯಾಯ, ದಬ್ಬಾಳಿಕೆಗಳಿಂದ ನೊಂದು ಸದನದಲ್ಲಿ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ಮಾಧ್ಯಮ ಹೇಳಿಕೆ ನೀಡಿದ್ದಾರೆ.

“ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಮತ್ತು ಯಡಿಯೂರಪ್ಪ ಅವರ ಪುತ್ರ ಸಂಸದ ರಾಘವೇಂದ್ರ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಶಾಸಕ ಸಂಗಮೇಶ್ ಮತ್ತು ಅವರ ಕುಟುಂಬದವರ ವಿರುದ್ಧ ಕ್ಷುಲ್ಲಕ ಕಾರಣಕ್ಕೆ ಕೊಲೆ ಯತ್ನದ ಮೊಕದ್ದಮೆಯನ್ನು ದಾಖಲಿಸುವಂತೆ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಶರ್ಟ್ ಬಿಚ್ಚಿದ ಶಾಸಕ ಬಿ.ಕೆ ಸಂಗಮೇಶ್- ಕಲಾಪದಿಂದ ಒಂದು ವಾರ ಅಮಾನತು

ಭದ್ರಾವತಿ ಶಾಸಕ ಸಂಗಮೇಶ್‌ರನ್ನು ಒಂದು ವಾರದ ಕಾಲ ಸದನದಿಂದ ವಜಾ ಮಾಡಿರುವ ಸ್ಪೀಕರ್ ಅವರ ಆದೇಶವನ್ನು ಖಂಡಿಸಿರುವ ಸಿದ್ದರಾಮಯ್ಯ, ಸಂಗಮೇಶ್ ಅವರಿಗಾಗಲೀ, ಪ್ರತಿಪಕ್ಷದ ನಾಯಕನಾದ ನನಗಾಗಲೀ ಮಾತನಾಡಲು ಅವಕಾಶ ನೀಡದೆ ವಿಧಾನ ಸಭಾಧ್ಯಕ್ಷರು ಏಕಪಕ್ಷೀಯವಾಗಿ ಕೈಗೊಂಡಿರುವ ನಿರ್ಣಯ ಅಸಂವಿಧಾನಿಕ ಎಂದಿದ್ದಾರೆ.

ಇನ್ನು, ಸಂಗಮೇಶ್ ಅವರ ಮೇಲೆ ದಾಖಲಿಸಲಾಗಿರುವ ಸುಳ್ಳು ಮೊಕದ್ದಮೆಯನ್ನು ವಾಪಾಸು ಪಡೆದು ಸರ್ಕಾರ ಕ್ಷಮಾಪಣೆ ಕೇಳಬೇಕು ಮತ್ತು ಅವರನ್ನು ಸದನದಿಂದ ವಜಾಗೊಳಿಸಿರುವ ನಿರ್ಣಯವನ್ನು ಕೂಡ ಹಿಂಪಡೆಯಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.

ಒಂದು ದೇಶ ಒಂದು ಚುನಾವಣೆ ವಿಚಾರವನ್ನು ಸದನದಲ್ಲಿ ಚರ್ಚಿಸಿದ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ’ದೇಶದಲ್ಲಿ ನಡೆಯುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದವು. ಸಂವಿಧಾನಕ್ಕೆ ತಿದ್ದುಪಡಿ ತರಬೇಕಾಗಿರುವುದು ಕೂಡ ಕೇಂದ್ರ ಸರ್ಕಾರ. ಹೀಗಿರುವಾಗ ವಿಧಾನ ಮಂಡಲ ಅಧಿವೇಶನದಲ್ಲಿ ‘ಒಂದು ದೇಶ ಒಂದು ಚುನಾವಣೆ’ ಎಂಬ ವಿಚಾರವನ್ನು ಚರ್ಚಿಸುವುದರಿಂದ ಆಗುವ ಉಪಯೋಗ ಏನು?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸುಲಿಗೆ ಆರೋಪ: ವಿಜಯೇಂದ್ರ ವಿರುದ್ದ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌‌ಗೆ ನೋಟಿಸ್

ಬಿಜೆಪಿಯವರು ಕೇವಲ ಪ್ರಚಾರದ ದೃಷ್ಟಿಯಿಂದ ‘ಒಂದು ದೇಶ ಒಂದು ಚುನಾವಣೆ’ ಎಂಬ ವಿಚಾರವನ್ನು ಅಧಿವೇಶನದಲ್ಲಿ ಚರ್ಚೆಗೆ ತೆಗೆದುಕೊಂಡಿದ್ದಾರೆ. ನಿಯಮಾವಳಿಗಳ ಪ್ರಕಾರ ಈ ವಿಷಯದ ಚರ್ಚೆಗೆ ಅವಕಾಶವಿಲ್ಲ, ಹೀಗಾಗಿ ನಾವು ವಿರೋಧ ಮಾಡಿದ್ದೇವೆಯೇ ಹೊರತು ಚರ್ಚೆ ನಡೆಸಲಾಗದೆ ಅಲ್ಲ ಎಂದು ಬಿಜೆಪಿ ಆರೋಪಕ್ಕೆ ಉತ್ತರ ನೀಡಿದ್ದಾರೆ.

ಒಂದು ದೇಶ ಒಂದು ಚುನಾವಣೆ ಎಂಬುದು ಆರ್.ಎಸ್.ಎಸ್ ಅಜೆಂಡಾ. ವಾಸ್ತವದಲ್ಲಿ ಇದು ಒಂದು ದೇಶ, ಒಂದು ಚುನಾವಣೆ ಅಲ್ಲ “ಒನ್ ನೇಷನ್, ಒನ್ ಲೀಡರ್” ಆಗಿದೆ. ಇದರ ಬದಲು ರಾಜ್ಯ ಸರ್ಕಾರ ಚುನಾವಣಾ ವ್ಯವಸ್ಥೆಯಲ್ಲಿ ತರಬಹುದಾದ ಸುಧಾರಣೆಗಳ ಕುರಿತು ಚರ್ಚಿಸುವುದಾದರೆ, ನಾವು ನಮ್ಮ ಅಭಿಪ್ರಾಯ ಹಂಚಿಕೊಳ್ಳಲು ಸಿದ್ಧರಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

’ಒಂದು ದೇಶ ಒಂದು ಚುನಾವಣೆ’ ಚರ್ಚೆಗೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿ ಧರಣಿ ನಡೆಸಿದರು. ಕಾಂಗ್ರೆಸ್​ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟಿಸುತ್ತಿದ್ದಾಗ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಸದನದ ಬಾವಿಗಿಳಿದು, ಶರ್ಟ್‌ ಬಿಚ್ಚಿ ಘೋಷಣೆ ಕೂಗಿದ್ದರು.

ಶಾಸಕರ ವಿರುದ್ಧ ಪ್ರಸ್ತಾವನೆ ಮಂಡಿಸಿ, ಧ್ವನಿ ಮತದ ಮೂಲಕ ಪ್ರಸ್ತಾವನೆಗೆ ಒಪ್ಪಿಗೆ ಪಡೆದ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಮಾರ್ಚ್​ 12 ನೇ ತಾರೀಖಿನವರೆಗೆ, ಸುಮಾರು 9 ದಿನಗಳ ಕಾಲ ಶಾಸಕ ಸಂಗಮೇಶ್​​ರನ್ನ ಸದನದಿಂದ ಅಮಾನತು ಮಾಡುವ ನಿರ್ಧಾರವನ್ನು ಕೈಗೊಂಡರು.


ಇದನ್ನೂ ಓದಿ: ವಿಧಾನಸಭಾ ಅಧಿವೇಶನ | ನಾನುಗೌರಿ ಫೇಸ್‌‌ಬುಕ್ ಲೈ‌ವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...