Homeಕರ್ನಾಟಕಸಂಗಮೇಶ್ ಅಗೌರವ ತೋರಿಸಿಲ್ಲ, ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ- ಸಿದ್ದರಾಮಯ್ಯ

ಸಂಗಮೇಶ್ ಅಗೌರವ ತೋರಿಸಿಲ್ಲ, ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ- ಸಿದ್ದರಾಮಯ್ಯ

ಒಂದು ದೇಶ ಒಂದು ಚುನಾವಣೆ ಎಂಬುದು ಆರ್.ಎಸ್.ಎಸ್ ಅಜೆಂಡಾ. ವಾಸ್ತವದಲ್ಲಿ ಇದು ಒಂದು ದೇಶ, ಒಂದು ಚುನಾವಣೆ ಅಲ್ಲ "ಒನ್ ನೇಷನ್, ಒನ್ ಲೀಡರ್" ಆಗಿದೆ.

- Advertisement -
- Advertisement -

ವಿಧಾನಸಭೆ ಅಧಿವೇಶದಲ್ಲಿ ಶರ್ಟ್ ಬಿಚ್ಚಿ ಅಶಿಸ್ತಿನಿಂದ ವರ್ತಿಸಿದ ಆರೋಪದ ಮೇಲೆ ಒಂದು ವಾರ ಕಲಾಪದಿಂದ ಅಮಾನತಾಗಿರುವ ಶಾಸಕ ಸಂಗಮೇಶ್ ಸಮರ್ಥನೆಗೆ ಕಾಂಗ್ರೆಸ್ ನಾಯಕರ ದಂಡು ನಿಂತಿದೆ. ಸಂಗಮೇಶ್ ಪರ ಬ್ಯಾಟ್ ಬೀಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಭದ್ರಾವತಿ ಶಾಸಕರಾದ ಸಂಗಮೇಶ್ ಅವರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವಂತೆ ವರ್ತಿಸಿಲ್ಲ ಎಂದಿದ್ದಾರೆ.

ಶಾಸಕ ಸಂಗಮೇಶ್, ಶಿವಮೊಗ್ಗ ಜಿಲ್ಲೆಯಲ್ಲಿ ಆಡಳಿತ ಪಕ್ಷದವರು ನಡೆಸುತ್ತಿರುವ ಅನ್ಯಾಯ, ದಬ್ಬಾಳಿಕೆಗಳಿಂದ ನೊಂದು ಸದನದಲ್ಲಿ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ಮಾಧ್ಯಮ ಹೇಳಿಕೆ ನೀಡಿದ್ದಾರೆ.

“ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಮತ್ತು ಯಡಿಯೂರಪ್ಪ ಅವರ ಪುತ್ರ ಸಂಸದ ರಾಘವೇಂದ್ರ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಶಾಸಕ ಸಂಗಮೇಶ್ ಮತ್ತು ಅವರ ಕುಟುಂಬದವರ ವಿರುದ್ಧ ಕ್ಷುಲ್ಲಕ ಕಾರಣಕ್ಕೆ ಕೊಲೆ ಯತ್ನದ ಮೊಕದ್ದಮೆಯನ್ನು ದಾಖಲಿಸುವಂತೆ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಶರ್ಟ್ ಬಿಚ್ಚಿದ ಶಾಸಕ ಬಿ.ಕೆ ಸಂಗಮೇಶ್- ಕಲಾಪದಿಂದ ಒಂದು ವಾರ ಅಮಾನತು

ಭದ್ರಾವತಿ ಶಾಸಕ ಸಂಗಮೇಶ್‌ರನ್ನು ಒಂದು ವಾರದ ಕಾಲ ಸದನದಿಂದ ವಜಾ ಮಾಡಿರುವ ಸ್ಪೀಕರ್ ಅವರ ಆದೇಶವನ್ನು ಖಂಡಿಸಿರುವ ಸಿದ್ದರಾಮಯ್ಯ, ಸಂಗಮೇಶ್ ಅವರಿಗಾಗಲೀ, ಪ್ರತಿಪಕ್ಷದ ನಾಯಕನಾದ ನನಗಾಗಲೀ ಮಾತನಾಡಲು ಅವಕಾಶ ನೀಡದೆ ವಿಧಾನ ಸಭಾಧ್ಯಕ್ಷರು ಏಕಪಕ್ಷೀಯವಾಗಿ ಕೈಗೊಂಡಿರುವ ನಿರ್ಣಯ ಅಸಂವಿಧಾನಿಕ ಎಂದಿದ್ದಾರೆ.

ಇನ್ನು, ಸಂಗಮೇಶ್ ಅವರ ಮೇಲೆ ದಾಖಲಿಸಲಾಗಿರುವ ಸುಳ್ಳು ಮೊಕದ್ದಮೆಯನ್ನು ವಾಪಾಸು ಪಡೆದು ಸರ್ಕಾರ ಕ್ಷಮಾಪಣೆ ಕೇಳಬೇಕು ಮತ್ತು ಅವರನ್ನು ಸದನದಿಂದ ವಜಾಗೊಳಿಸಿರುವ ನಿರ್ಣಯವನ್ನು ಕೂಡ ಹಿಂಪಡೆಯಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.

ಒಂದು ದೇಶ ಒಂದು ಚುನಾವಣೆ ವಿಚಾರವನ್ನು ಸದನದಲ್ಲಿ ಚರ್ಚಿಸಿದ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ’ದೇಶದಲ್ಲಿ ನಡೆಯುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದವು. ಸಂವಿಧಾನಕ್ಕೆ ತಿದ್ದುಪಡಿ ತರಬೇಕಾಗಿರುವುದು ಕೂಡ ಕೇಂದ್ರ ಸರ್ಕಾರ. ಹೀಗಿರುವಾಗ ವಿಧಾನ ಮಂಡಲ ಅಧಿವೇಶನದಲ್ಲಿ ‘ಒಂದು ದೇಶ ಒಂದು ಚುನಾವಣೆ’ ಎಂಬ ವಿಚಾರವನ್ನು ಚರ್ಚಿಸುವುದರಿಂದ ಆಗುವ ಉಪಯೋಗ ಏನು?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸುಲಿಗೆ ಆರೋಪ: ವಿಜಯೇಂದ್ರ ವಿರುದ್ದ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌‌ಗೆ ನೋಟಿಸ್

ಬಿಜೆಪಿಯವರು ಕೇವಲ ಪ್ರಚಾರದ ದೃಷ್ಟಿಯಿಂದ ‘ಒಂದು ದೇಶ ಒಂದು ಚುನಾವಣೆ’ ಎಂಬ ವಿಚಾರವನ್ನು ಅಧಿವೇಶನದಲ್ಲಿ ಚರ್ಚೆಗೆ ತೆಗೆದುಕೊಂಡಿದ್ದಾರೆ. ನಿಯಮಾವಳಿಗಳ ಪ್ರಕಾರ ಈ ವಿಷಯದ ಚರ್ಚೆಗೆ ಅವಕಾಶವಿಲ್ಲ, ಹೀಗಾಗಿ ನಾವು ವಿರೋಧ ಮಾಡಿದ್ದೇವೆಯೇ ಹೊರತು ಚರ್ಚೆ ನಡೆಸಲಾಗದೆ ಅಲ್ಲ ಎಂದು ಬಿಜೆಪಿ ಆರೋಪಕ್ಕೆ ಉತ್ತರ ನೀಡಿದ್ದಾರೆ.

ಒಂದು ದೇಶ ಒಂದು ಚುನಾವಣೆ ಎಂಬುದು ಆರ್.ಎಸ್.ಎಸ್ ಅಜೆಂಡಾ. ವಾಸ್ತವದಲ್ಲಿ ಇದು ಒಂದು ದೇಶ, ಒಂದು ಚುನಾವಣೆ ಅಲ್ಲ “ಒನ್ ನೇಷನ್, ಒನ್ ಲೀಡರ್” ಆಗಿದೆ. ಇದರ ಬದಲು ರಾಜ್ಯ ಸರ್ಕಾರ ಚುನಾವಣಾ ವ್ಯವಸ್ಥೆಯಲ್ಲಿ ತರಬಹುದಾದ ಸುಧಾರಣೆಗಳ ಕುರಿತು ಚರ್ಚಿಸುವುದಾದರೆ, ನಾವು ನಮ್ಮ ಅಭಿಪ್ರಾಯ ಹಂಚಿಕೊಳ್ಳಲು ಸಿದ್ಧರಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

’ಒಂದು ದೇಶ ಒಂದು ಚುನಾವಣೆ’ ಚರ್ಚೆಗೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿ ಧರಣಿ ನಡೆಸಿದರು. ಕಾಂಗ್ರೆಸ್​ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟಿಸುತ್ತಿದ್ದಾಗ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಸದನದ ಬಾವಿಗಿಳಿದು, ಶರ್ಟ್‌ ಬಿಚ್ಚಿ ಘೋಷಣೆ ಕೂಗಿದ್ದರು.

ಶಾಸಕರ ವಿರುದ್ಧ ಪ್ರಸ್ತಾವನೆ ಮಂಡಿಸಿ, ಧ್ವನಿ ಮತದ ಮೂಲಕ ಪ್ರಸ್ತಾವನೆಗೆ ಒಪ್ಪಿಗೆ ಪಡೆದ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಮಾರ್ಚ್​ 12 ನೇ ತಾರೀಖಿನವರೆಗೆ, ಸುಮಾರು 9 ದಿನಗಳ ಕಾಲ ಶಾಸಕ ಸಂಗಮೇಶ್​​ರನ್ನ ಸದನದಿಂದ ಅಮಾನತು ಮಾಡುವ ನಿರ್ಧಾರವನ್ನು ಕೈಗೊಂಡರು.


ಇದನ್ನೂ ಓದಿ: ವಿಧಾನಸಭಾ ಅಧಿವೇಶನ | ನಾನುಗೌರಿ ಫೇಸ್‌‌ಬುಕ್ ಲೈ‌ವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...