Homeಕರ್ನಾಟಕಸಂಗಮೇಶ್ ಅಗೌರವ ತೋರಿಸಿಲ್ಲ, ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ- ಸಿದ್ದರಾಮಯ್ಯ

ಸಂಗಮೇಶ್ ಅಗೌರವ ತೋರಿಸಿಲ್ಲ, ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ- ಸಿದ್ದರಾಮಯ್ಯ

ಒಂದು ದೇಶ ಒಂದು ಚುನಾವಣೆ ಎಂಬುದು ಆರ್.ಎಸ್.ಎಸ್ ಅಜೆಂಡಾ. ವಾಸ್ತವದಲ್ಲಿ ಇದು ಒಂದು ದೇಶ, ಒಂದು ಚುನಾವಣೆ ಅಲ್ಲ "ಒನ್ ನೇಷನ್, ಒನ್ ಲೀಡರ್" ಆಗಿದೆ.

- Advertisement -
- Advertisement -

ವಿಧಾನಸಭೆ ಅಧಿವೇಶದಲ್ಲಿ ಶರ್ಟ್ ಬಿಚ್ಚಿ ಅಶಿಸ್ತಿನಿಂದ ವರ್ತಿಸಿದ ಆರೋಪದ ಮೇಲೆ ಒಂದು ವಾರ ಕಲಾಪದಿಂದ ಅಮಾನತಾಗಿರುವ ಶಾಸಕ ಸಂಗಮೇಶ್ ಸಮರ್ಥನೆಗೆ ಕಾಂಗ್ರೆಸ್ ನಾಯಕರ ದಂಡು ನಿಂತಿದೆ. ಸಂಗಮೇಶ್ ಪರ ಬ್ಯಾಟ್ ಬೀಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಭದ್ರಾವತಿ ಶಾಸಕರಾದ ಸಂಗಮೇಶ್ ಅವರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವಂತೆ ವರ್ತಿಸಿಲ್ಲ ಎಂದಿದ್ದಾರೆ.

ಶಾಸಕ ಸಂಗಮೇಶ್, ಶಿವಮೊಗ್ಗ ಜಿಲ್ಲೆಯಲ್ಲಿ ಆಡಳಿತ ಪಕ್ಷದವರು ನಡೆಸುತ್ತಿರುವ ಅನ್ಯಾಯ, ದಬ್ಬಾಳಿಕೆಗಳಿಂದ ನೊಂದು ಸದನದಲ್ಲಿ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ಮಾಧ್ಯಮ ಹೇಳಿಕೆ ನೀಡಿದ್ದಾರೆ.

“ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಮತ್ತು ಯಡಿಯೂರಪ್ಪ ಅವರ ಪುತ್ರ ಸಂಸದ ರಾಘವೇಂದ್ರ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಶಾಸಕ ಸಂಗಮೇಶ್ ಮತ್ತು ಅವರ ಕುಟುಂಬದವರ ವಿರುದ್ಧ ಕ್ಷುಲ್ಲಕ ಕಾರಣಕ್ಕೆ ಕೊಲೆ ಯತ್ನದ ಮೊಕದ್ದಮೆಯನ್ನು ದಾಖಲಿಸುವಂತೆ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಶರ್ಟ್ ಬಿಚ್ಚಿದ ಶಾಸಕ ಬಿ.ಕೆ ಸಂಗಮೇಶ್- ಕಲಾಪದಿಂದ ಒಂದು ವಾರ ಅಮಾನತು

ಭದ್ರಾವತಿ ಶಾಸಕ ಸಂಗಮೇಶ್‌ರನ್ನು ಒಂದು ವಾರದ ಕಾಲ ಸದನದಿಂದ ವಜಾ ಮಾಡಿರುವ ಸ್ಪೀಕರ್ ಅವರ ಆದೇಶವನ್ನು ಖಂಡಿಸಿರುವ ಸಿದ್ದರಾಮಯ್ಯ, ಸಂಗಮೇಶ್ ಅವರಿಗಾಗಲೀ, ಪ್ರತಿಪಕ್ಷದ ನಾಯಕನಾದ ನನಗಾಗಲೀ ಮಾತನಾಡಲು ಅವಕಾಶ ನೀಡದೆ ವಿಧಾನ ಸಭಾಧ್ಯಕ್ಷರು ಏಕಪಕ್ಷೀಯವಾಗಿ ಕೈಗೊಂಡಿರುವ ನಿರ್ಣಯ ಅಸಂವಿಧಾನಿಕ ಎಂದಿದ್ದಾರೆ.

ಇನ್ನು, ಸಂಗಮೇಶ್ ಅವರ ಮೇಲೆ ದಾಖಲಿಸಲಾಗಿರುವ ಸುಳ್ಳು ಮೊಕದ್ದಮೆಯನ್ನು ವಾಪಾಸು ಪಡೆದು ಸರ್ಕಾರ ಕ್ಷಮಾಪಣೆ ಕೇಳಬೇಕು ಮತ್ತು ಅವರನ್ನು ಸದನದಿಂದ ವಜಾಗೊಳಿಸಿರುವ ನಿರ್ಣಯವನ್ನು ಕೂಡ ಹಿಂಪಡೆಯಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.

ಒಂದು ದೇಶ ಒಂದು ಚುನಾವಣೆ ವಿಚಾರವನ್ನು ಸದನದಲ್ಲಿ ಚರ್ಚಿಸಿದ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ’ದೇಶದಲ್ಲಿ ನಡೆಯುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದವು. ಸಂವಿಧಾನಕ್ಕೆ ತಿದ್ದುಪಡಿ ತರಬೇಕಾಗಿರುವುದು ಕೂಡ ಕೇಂದ್ರ ಸರ್ಕಾರ. ಹೀಗಿರುವಾಗ ವಿಧಾನ ಮಂಡಲ ಅಧಿವೇಶನದಲ್ಲಿ ‘ಒಂದು ದೇಶ ಒಂದು ಚುನಾವಣೆ’ ಎಂಬ ವಿಚಾರವನ್ನು ಚರ್ಚಿಸುವುದರಿಂದ ಆಗುವ ಉಪಯೋಗ ಏನು?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸುಲಿಗೆ ಆರೋಪ: ವಿಜಯೇಂದ್ರ ವಿರುದ್ದ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌‌ಗೆ ನೋಟಿಸ್

ಬಿಜೆಪಿಯವರು ಕೇವಲ ಪ್ರಚಾರದ ದೃಷ್ಟಿಯಿಂದ ‘ಒಂದು ದೇಶ ಒಂದು ಚುನಾವಣೆ’ ಎಂಬ ವಿಚಾರವನ್ನು ಅಧಿವೇಶನದಲ್ಲಿ ಚರ್ಚೆಗೆ ತೆಗೆದುಕೊಂಡಿದ್ದಾರೆ. ನಿಯಮಾವಳಿಗಳ ಪ್ರಕಾರ ಈ ವಿಷಯದ ಚರ್ಚೆಗೆ ಅವಕಾಶವಿಲ್ಲ, ಹೀಗಾಗಿ ನಾವು ವಿರೋಧ ಮಾಡಿದ್ದೇವೆಯೇ ಹೊರತು ಚರ್ಚೆ ನಡೆಸಲಾಗದೆ ಅಲ್ಲ ಎಂದು ಬಿಜೆಪಿ ಆರೋಪಕ್ಕೆ ಉತ್ತರ ನೀಡಿದ್ದಾರೆ.

ಒಂದು ದೇಶ ಒಂದು ಚುನಾವಣೆ ಎಂಬುದು ಆರ್.ಎಸ್.ಎಸ್ ಅಜೆಂಡಾ. ವಾಸ್ತವದಲ್ಲಿ ಇದು ಒಂದು ದೇಶ, ಒಂದು ಚುನಾವಣೆ ಅಲ್ಲ “ಒನ್ ನೇಷನ್, ಒನ್ ಲೀಡರ್” ಆಗಿದೆ. ಇದರ ಬದಲು ರಾಜ್ಯ ಸರ್ಕಾರ ಚುನಾವಣಾ ವ್ಯವಸ್ಥೆಯಲ್ಲಿ ತರಬಹುದಾದ ಸುಧಾರಣೆಗಳ ಕುರಿತು ಚರ್ಚಿಸುವುದಾದರೆ, ನಾವು ನಮ್ಮ ಅಭಿಪ್ರಾಯ ಹಂಚಿಕೊಳ್ಳಲು ಸಿದ್ಧರಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

’ಒಂದು ದೇಶ ಒಂದು ಚುನಾವಣೆ’ ಚರ್ಚೆಗೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿ ಧರಣಿ ನಡೆಸಿದರು. ಕಾಂಗ್ರೆಸ್​ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟಿಸುತ್ತಿದ್ದಾಗ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಸದನದ ಬಾವಿಗಿಳಿದು, ಶರ್ಟ್‌ ಬಿಚ್ಚಿ ಘೋಷಣೆ ಕೂಗಿದ್ದರು.

ಶಾಸಕರ ವಿರುದ್ಧ ಪ್ರಸ್ತಾವನೆ ಮಂಡಿಸಿ, ಧ್ವನಿ ಮತದ ಮೂಲಕ ಪ್ರಸ್ತಾವನೆಗೆ ಒಪ್ಪಿಗೆ ಪಡೆದ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಮಾರ್ಚ್​ 12 ನೇ ತಾರೀಖಿನವರೆಗೆ, ಸುಮಾರು 9 ದಿನಗಳ ಕಾಲ ಶಾಸಕ ಸಂಗಮೇಶ್​​ರನ್ನ ಸದನದಿಂದ ಅಮಾನತು ಮಾಡುವ ನಿರ್ಧಾರವನ್ನು ಕೈಗೊಂಡರು.


ಇದನ್ನೂ ಓದಿ: ವಿಧಾನಸಭಾ ಅಧಿವೇಶನ | ನಾನುಗೌರಿ ಫೇಸ್‌‌ಬುಕ್ ಲೈ‌ವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...