Homeಕರ್ನಾಟಕಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಸಿಎಂ ಬಸವರಾಜ್‌ ಬೊಮ್ಮಾಯಿಯವರು ಈ ಹಿಂದೆ ಗೃಹಮಂತ್ರಿಯಾಗಿದ್ದಾಗ ಶರಣ್ ಪಂಪ್‌ವೆಲ್ ಮೇಲಿನ ಎಲ್ಲಾ ಕೇಸುಗಳನ್ನು ತೆಗೆಯುವುದಾಗಿ ಭರವಸೆ ನೀಡಿದ ವಿಡಿಯೋ ವಿವಾದಕ್ಕೆ ಕಾರಣವಾಗಿತ್ತು.

- Advertisement -
- Advertisement -

ಮಂಗಳೂರಿನ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್‌‌‌‌‌ ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಮರ ವಿರುದ್ದ ಬಹಿರಂಗವಾಗಿ ಹಿಂಸೆಗೆ ಕರೆ ನೀಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು ಶರಣ್ ವಿರುದ್ದ ತಕ್ಷಣವೆ ಎಫ್‌ಐಆರ್‌ ದಾಖಲಿಸಬೇಕು ಎಂದು ಮುಖ್ಯಮಂತ್ರಿ ಮತ್ತು ರಾಜ್ಯದ ಡಿಜಿಪಿಯವರನ್ನು ಒತ್ತಾಯಿಸಲಾಗಿದೆ.

ಸೋಮವಾರದಂದು ನಡೆದ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡುತ್ತಿದ್ದ ಶರಣ್ ಪಂಪ್‌ವೆಲ್, “ಮುಸ್ಲಿಂ ಸಮುದಾಯದ ನಾಯಕರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಮುಸ್ಲಿಂ ಯುವಕರಿಗೆ ಬುದ್ದಿ ಹೇಳಬೇಕು, ಲವ್‌ ಜಿಹಾದ್ ಪ್ರಕರಣ ಮುಂದುವರೆದರೆ ಬೀದಿಗಿಳಿದು ನೇರವಾಗಿ ಅವರ ವಿರುದ್ದ ಹೋರಾಟ ಮಾಡುತ್ತೇವೆ’’ ಎಂದು ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಅಲ್ಲದೆ “ಕರಾವಳಿಯಲ್ಲಿ ಶಾಂತಿಯಿರಬೇಕಾದರೆ ಮುಸ್ಲಿಂ ನಾಯಕರು ತಮ್ಮ ಯುವಕರಿಗೆ ಎಚ್ಚರಿಕೆ ಕೊಡುವಂತಹ ಕೆಲಸ ಮಾಡಬೇಕು. ಹಿಂದೂ ಯುವತಿಯರನ್ನು ಸೆಕ್ಸ್‌ ದಂಧೆ ಮತ್ತು ಡ್ರಗ್ಸ್‌ ದಂಧೆಗೆ ಬಳಸಿಕೊಳ್ಳುತ್ತಿದ್ದೀರಿ. ಇಡೀ ಮುಸ್ಲಿಂ ಸಮುದಾಯ ಭಯೋತ್ಪಾದನೆಗೆ ಬೆಂಬಲ ಕೊಡುತ್ತಿದ್ದೀರ ಎಂಬ ಸಂಶಯವಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವ!

ಅಷ್ಟೇ ಅಲ್ಲದೆ ಅದೇ ದಿನ ಮಾಧ್ಯಮಗಳಿಗೆ ನೀಡಿದ ಚುಟುಕು ಸಂದರ್ಶನಲ್ಲಿ, “ಮುಂದಿನ ದಿನಗಳಲ್ಲಿ ಹೋರಾಟವು ಆಗಬಹುದು ಅಥವಾ ಹೊಡೆದಾಟವು ಆಗಬಹುದು” ಎಂದು ಹಿಂಸಾಚಾರ ನಡೆಯುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶಗಳೆದ್ದಿದ್ದು, ಶರಣ್‌ ಪಂಪ್‌ವೆಲ್ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಆಗ್ರಹಗಳು ಕೇಳಿ ಬರುತ್ತಿದೆ. ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನವು, “ಮಾನ್ಯರೆ, ಈ ರಾಜ್ಯದ ಪ್ರಜೆಗಳಾದ ನಮಗೆ ಶಿಕ್ಷಣ, ಆಹಾರ, ಮಹಿಳೆಯರ ಸುರಕ್ಷತೆ, ಸಾರ್ವಜನಿಕ ಸಾರಿಗೆ, ಆರೋಗ್ಯ ಬೇಕು. ನಾವು ಈ ಕೋಮುವಾದಿ ರಾಜಕೀಯವನ್ನು ತಿರಸ್ಕರಿಸುತ್ತೇವೆ. ಶರಣ್ ಪಂಪ್‌ವೆಲ್ ವಿರುದ್ಧ ನೀವು ತುರ್ತಾಗಿ ಕ್ರಮ ಕೈಗೊಳ್ಳಬೇಕೆಂದು ನಾವು ಬಯಸುತ್ತೇವೆ” ಎಂದು ಮುಖ್ಯಮಂತ್ರಿ ಮತ್ತು ರಾಜ್ಯದ ಡಿಜಿಪಿಗೆ ಆಗ್ರಹಿಸಿದೆ.

ಪರ್ಯಾಯ ಕಾನೂನು ವೇದಿಕೆಯ ಸಂಚಾಲಕರಾದ ವಿನಯ್‌ ಶ್ರೀನಿವಾಸ್ ಅವರು, “ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಕರ್ನಾಟಕದ ಡಿಜಿಪಿ ಅವರೇ, ಶರಣ್ ಪಂಪ್‌ವೆಲ್‌ ಸತ್ಯವನ್ನು ತಿರುಚುತ್ತಿದ್ದಾರೆ. ಅಲ್ಲದೆ ಮುಸ್ಲಿಮರ ವಿರುದ್ದ ಬಹಿರಂಗವಾಗಿ ಹಿಂಸೆಗೆ ಕರೆ ನೀಡುತ್ತಿದ್ದಾರೆ. ದಯವಿಟ್ಟು ಅವರ ವಿರುದ್ದ 153A, 295A, 505 (2) ಅಡಿಯಲ್ಲಿ ತಕ್ಷಣವೆ ಎಫ್ಐಆರ್ ಅನ್ನು ದಾಖಲಿಸಿರುವುದನ್ನು ಖಚಿತ ಪಡಿಸಿ” ಎಂದು ಕೇಳಿದ್ದಾರೆ.

ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ಶರಣ್ ಪಂಪ್‌ವೆಲ್ ಹಲವಾರು ಪಕ್ರರಣಗಳ ಆರೋಪಿಯಾಗಿದ್ದು, ಸದಾ ವಿವಾದಾತ್ಮಕವಾದ ಹೇಳಿಕೆಯನ್ನು ನೀಡುತ್ತಲೇ ಬಂದಿದ್ದಾರೆ. ಈಗಿನ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಯಡಿಯೂರಪ್ಪರ ಸಂಪುಟದಲ್ಲಿ ಗೃಹಮಂತ್ರಿಯಾಗಿದ್ದಾಗ ಶರಣ್ ಪಂಪ್‌ವೆಲ್ ಮೇಲಿನ ಎಲ್ಲಾ ಕೇಸುಗಳನ್ನು ತೆಗೆಯುವುದಾಗಿ ಭರವಸೆ ನೀಡಿದ್ದು ವಿಡಿಯೊದಲ್ಲಿ ದಾಖಲಾಗಿತ್ತು. ಇದು ವಿವಾದಕ್ಕೂ ಕಾರಣವಾಗಿತ್ತು.

ಇದೀಗ ಬೊಮ್ಮಾಯಿ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅಷ್ಟೇ ಅಲ್ಲದೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರದಂದು ಪ್ರಸ್ತುತ ರಾಜ್ಯದ ಗೃಹಮಂತ್ರಿಯಾಗಿರುವ ಅರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರ ವಿರುದ್ದ ಇರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಕೇಳಿಕೊಂಡಿದ್ದಾರೆ.

ಬಿಜೆಪಿಯ ಹೊಸ ಸಂಪುಟ ರಚನೆಯಾಗುತ್ತಿದ್ದಂತೆ ಸಂಘಪರಿವಾರ ಮತ್ತು ಬಿಜೆಪಿಯ ಕಾರ್ಯಕರ್ತರ ವಿರುದ್ದದ ಪ್ರಕರಣಗಳನ್ನು ರದ್ದು ಪಡಿಸುವಂತೆ ಸಚಿವರೊಬ್ಬರೇ ಖುದ್ದಾಗಿ ಗೃಹ ಸಚಿವರಿಗೆ ಮನವಿ ಮಾಡುತ್ತಿದ್ದಾರೆ. ಇದರ ಜೊತೆಗೆ ಹಲವು ಪ್ರಕರಣಗಳ ಆರೋಪಿಯಾಗಿರುವ ಶರಣ್ ಪಂ‌ಪ್‌ವೆಲ್‌ ಬಹಿರಂಗವಾಗಿ ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ, ಇದು ಏನನ್ನು ಪ್ರತಿಬಿಂಬಿಸುತ್ತದೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...