Homeಕರ್ನಾಟಕಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಸಿಎಂ ಬಸವರಾಜ್‌ ಬೊಮ್ಮಾಯಿಯವರು ಈ ಹಿಂದೆ ಗೃಹಮಂತ್ರಿಯಾಗಿದ್ದಾಗ ಶರಣ್ ಪಂಪ್‌ವೆಲ್ ಮೇಲಿನ ಎಲ್ಲಾ ಕೇಸುಗಳನ್ನು ತೆಗೆಯುವುದಾಗಿ ಭರವಸೆ ನೀಡಿದ ವಿಡಿಯೋ ವಿವಾದಕ್ಕೆ ಕಾರಣವಾಗಿತ್ತು.

- Advertisement -
- Advertisement -

ಮಂಗಳೂರಿನ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್‌‌‌‌‌ ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಮರ ವಿರುದ್ದ ಬಹಿರಂಗವಾಗಿ ಹಿಂಸೆಗೆ ಕರೆ ನೀಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು ಶರಣ್ ವಿರುದ್ದ ತಕ್ಷಣವೆ ಎಫ್‌ಐಆರ್‌ ದಾಖಲಿಸಬೇಕು ಎಂದು ಮುಖ್ಯಮಂತ್ರಿ ಮತ್ತು ರಾಜ್ಯದ ಡಿಜಿಪಿಯವರನ್ನು ಒತ್ತಾಯಿಸಲಾಗಿದೆ.

ಸೋಮವಾರದಂದು ನಡೆದ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡುತ್ತಿದ್ದ ಶರಣ್ ಪಂಪ್‌ವೆಲ್, “ಮುಸ್ಲಿಂ ಸಮುದಾಯದ ನಾಯಕರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಮುಸ್ಲಿಂ ಯುವಕರಿಗೆ ಬುದ್ದಿ ಹೇಳಬೇಕು, ಲವ್‌ ಜಿಹಾದ್ ಪ್ರಕರಣ ಮುಂದುವರೆದರೆ ಬೀದಿಗಿಳಿದು ನೇರವಾಗಿ ಅವರ ವಿರುದ್ದ ಹೋರಾಟ ಮಾಡುತ್ತೇವೆ’’ ಎಂದು ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಅಲ್ಲದೆ “ಕರಾವಳಿಯಲ್ಲಿ ಶಾಂತಿಯಿರಬೇಕಾದರೆ ಮುಸ್ಲಿಂ ನಾಯಕರು ತಮ್ಮ ಯುವಕರಿಗೆ ಎಚ್ಚರಿಕೆ ಕೊಡುವಂತಹ ಕೆಲಸ ಮಾಡಬೇಕು. ಹಿಂದೂ ಯುವತಿಯರನ್ನು ಸೆಕ್ಸ್‌ ದಂಧೆ ಮತ್ತು ಡ್ರಗ್ಸ್‌ ದಂಧೆಗೆ ಬಳಸಿಕೊಳ್ಳುತ್ತಿದ್ದೀರಿ. ಇಡೀ ಮುಸ್ಲಿಂ ಸಮುದಾಯ ಭಯೋತ್ಪಾದನೆಗೆ ಬೆಂಬಲ ಕೊಡುತ್ತಿದ್ದೀರ ಎಂಬ ಸಂಶಯವಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವ!

ಅಷ್ಟೇ ಅಲ್ಲದೆ ಅದೇ ದಿನ ಮಾಧ್ಯಮಗಳಿಗೆ ನೀಡಿದ ಚುಟುಕು ಸಂದರ್ಶನಲ್ಲಿ, “ಮುಂದಿನ ದಿನಗಳಲ್ಲಿ ಹೋರಾಟವು ಆಗಬಹುದು ಅಥವಾ ಹೊಡೆದಾಟವು ಆಗಬಹುದು” ಎಂದು ಹಿಂಸಾಚಾರ ನಡೆಯುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶಗಳೆದ್ದಿದ್ದು, ಶರಣ್‌ ಪಂಪ್‌ವೆಲ್ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಆಗ್ರಹಗಳು ಕೇಳಿ ಬರುತ್ತಿದೆ. ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನವು, “ಮಾನ್ಯರೆ, ಈ ರಾಜ್ಯದ ಪ್ರಜೆಗಳಾದ ನಮಗೆ ಶಿಕ್ಷಣ, ಆಹಾರ, ಮಹಿಳೆಯರ ಸುರಕ್ಷತೆ, ಸಾರ್ವಜನಿಕ ಸಾರಿಗೆ, ಆರೋಗ್ಯ ಬೇಕು. ನಾವು ಈ ಕೋಮುವಾದಿ ರಾಜಕೀಯವನ್ನು ತಿರಸ್ಕರಿಸುತ್ತೇವೆ. ಶರಣ್ ಪಂಪ್‌ವೆಲ್ ವಿರುದ್ಧ ನೀವು ತುರ್ತಾಗಿ ಕ್ರಮ ಕೈಗೊಳ್ಳಬೇಕೆಂದು ನಾವು ಬಯಸುತ್ತೇವೆ” ಎಂದು ಮುಖ್ಯಮಂತ್ರಿ ಮತ್ತು ರಾಜ್ಯದ ಡಿಜಿಪಿಗೆ ಆಗ್ರಹಿಸಿದೆ.

ಪರ್ಯಾಯ ಕಾನೂನು ವೇದಿಕೆಯ ಸಂಚಾಲಕರಾದ ವಿನಯ್‌ ಶ್ರೀನಿವಾಸ್ ಅವರು, “ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಕರ್ನಾಟಕದ ಡಿಜಿಪಿ ಅವರೇ, ಶರಣ್ ಪಂಪ್‌ವೆಲ್‌ ಸತ್ಯವನ್ನು ತಿರುಚುತ್ತಿದ್ದಾರೆ. ಅಲ್ಲದೆ ಮುಸ್ಲಿಮರ ವಿರುದ್ದ ಬಹಿರಂಗವಾಗಿ ಹಿಂಸೆಗೆ ಕರೆ ನೀಡುತ್ತಿದ್ದಾರೆ. ದಯವಿಟ್ಟು ಅವರ ವಿರುದ್ದ 153A, 295A, 505 (2) ಅಡಿಯಲ್ಲಿ ತಕ್ಷಣವೆ ಎಫ್ಐಆರ್ ಅನ್ನು ದಾಖಲಿಸಿರುವುದನ್ನು ಖಚಿತ ಪಡಿಸಿ” ಎಂದು ಕೇಳಿದ್ದಾರೆ.

ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ಶರಣ್ ಪಂಪ್‌ವೆಲ್ ಹಲವಾರು ಪಕ್ರರಣಗಳ ಆರೋಪಿಯಾಗಿದ್ದು, ಸದಾ ವಿವಾದಾತ್ಮಕವಾದ ಹೇಳಿಕೆಯನ್ನು ನೀಡುತ್ತಲೇ ಬಂದಿದ್ದಾರೆ. ಈಗಿನ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಯಡಿಯೂರಪ್ಪರ ಸಂಪುಟದಲ್ಲಿ ಗೃಹಮಂತ್ರಿಯಾಗಿದ್ದಾಗ ಶರಣ್ ಪಂಪ್‌ವೆಲ್ ಮೇಲಿನ ಎಲ್ಲಾ ಕೇಸುಗಳನ್ನು ತೆಗೆಯುವುದಾಗಿ ಭರವಸೆ ನೀಡಿದ್ದು ವಿಡಿಯೊದಲ್ಲಿ ದಾಖಲಾಗಿತ್ತು. ಇದು ವಿವಾದಕ್ಕೂ ಕಾರಣವಾಗಿತ್ತು.

ಇದೀಗ ಬೊಮ್ಮಾಯಿ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅಷ್ಟೇ ಅಲ್ಲದೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರದಂದು ಪ್ರಸ್ತುತ ರಾಜ್ಯದ ಗೃಹಮಂತ್ರಿಯಾಗಿರುವ ಅರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರ ವಿರುದ್ದ ಇರುವ ಪ್ರಕರಣಗಳನ್ನು ರದ್ದುಪಡಿಸುವಂತೆ ಕೇಳಿಕೊಂಡಿದ್ದಾರೆ.

ಬಿಜೆಪಿಯ ಹೊಸ ಸಂಪುಟ ರಚನೆಯಾಗುತ್ತಿದ್ದಂತೆ ಸಂಘಪರಿವಾರ ಮತ್ತು ಬಿಜೆಪಿಯ ಕಾರ್ಯಕರ್ತರ ವಿರುದ್ದದ ಪ್ರಕರಣಗಳನ್ನು ರದ್ದು ಪಡಿಸುವಂತೆ ಸಚಿವರೊಬ್ಬರೇ ಖುದ್ದಾಗಿ ಗೃಹ ಸಚಿವರಿಗೆ ಮನವಿ ಮಾಡುತ್ತಿದ್ದಾರೆ. ಇದರ ಜೊತೆಗೆ ಹಲವು ಪ್ರಕರಣಗಳ ಆರೋಪಿಯಾಗಿರುವ ಶರಣ್ ಪಂ‌ಪ್‌ವೆಲ್‌ ಬಹಿರಂಗವಾಗಿ ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ, ಇದು ಏನನ್ನು ಪ್ರತಿಬಿಂಬಿಸುತ್ತದೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...